Homeಮುಖಪುಟಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

- Advertisement -
- Advertisement -

ಡ್ರೈವಿಂಗ್‌ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಕೆಲವು ಸೇವೆಗಳನ್ನು ಈಗ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪಡೆಯಬಹುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.

ಇದರರ್ಥ ಇಂದಿನಿಂದ ಪ್ರಾದೇಶಿಕ ಸಾರಿಗೆ ಕಚೇರಿ ಅಥವಾ ಆರ್‌ಟಿಒಗೆ ಭೇಟಿ ನೀಡದೆ ಆಧಾರ್‌ ದೃಢೀಕರಣವನ್ನು ಬಳಸಿಕೊಂಡು, ಸ್ವಯಂಪ್ರೇರಣೆಯಿಂದ ಅಥವಾ ಯಾರಾದರೂ ತಮ್ಮ ಲೈಸನ್ಸ್‌ಅನ್ನು ನವೀಕರಿಸಬಹುದಾಗಿದ್ದು, ಡ್ಯೂಪ್ಲಿಕೆಟ್‌‌ ಆರ್ಸಿ ಮತ್ತು ಅಂತಹುದೇ ಸೇವೆಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ಯಾರನ್ನೂ ಸಂಪರ್ಕಿಸದೆ ಗೊಂದಲ ಮುಕ್ತ ಸೇವೆಗಳನ್ನು ಪಡೆಯುವುದು ಇದರ ಉದ್ದೇಶವಾಗಿದ್ದು, ಈ ಮೂಲಕ ಸಚಿವಾಲಯವು ಸುಮಾರು 18 ಸೇವೆಗಳನ್ನು ನೀಡುತ್ತದೆ.

ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಎಲ್ಲ ಅನುಮೋದನೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವಾಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಆನ್‌ಲೈನ್ ಸೇವೆಗಳನ್ನು ಬಳಸಲು ಬಯಸುವ ಜನರು ಆಧಾರ್ ದೃಢೀಕರಣಕ್ಕೆ ಒಳಗಾಗಬೇಕಾಗುತ್ತದೆ.

ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಪ್ರಕಟಿಸಿರುವ ಸಚಿವಾಲಯವು, “ಇದು ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ಸೇವೆಗಳನ್ನು ಗೊಂದಲ ಮುಕ್ತ, ಯಾರನ್ನೂ ಸಂಪರ್ಕಿಸದೆ ಸೇವೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಆರ್‌ಟಿಒ ಕಚೇರಿಯಲ್ಲಿನ ಓಡಾಟವನ್ನು ಸಹ ಕಡಿಮೆ ಮಾಡುತ್ತದೆ. ಆರ್‌ಟಿಒ ಕಚೇರಿಗಳ ದಕ್ಷತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಫೇಸ್‌ಬುಕ್ ಬ್ಯಾನ್! ಟೆಕ್ ದೈತ್ಯನ ಅಹಂಗೆ ಬಿದ್ದ ಪೆಟ್ಟು: ಎಸ್ ಕುಮಾರ್

ಆನ್‌ಲೈನ್ ಸೇವೆಗಳು ಮಾರ್ಚ್ 3, 2021 ರಿಂದ ಜಾರಿಗೆ ಬಂದಿದ್ದು, ಆಧಾರ್ ದೃಡೀಕರಣಕ್ಕೆ ಒಳಪಟ್ಟ ನಂತರ ಜನರು ಪಡೆಯಬಹುದಾದ ಎಲ್ಲಾ 18 ಆನ್‌ಲೈನ್‌‌ ಸೇವೆಗಳು ಈ ಕೆಳಗಿನಂತಿವೆ.

  1. ಕಲಿಕಾ ಪರವಾನಗಿ (ಎಲ್‌ಎಲ್‌ಆರ್‌)
  2. ಚಾಲನೆಯ ಸಾಮರ್ಥ್ಯದ ಪರೀಕ್ಷೆ ಅಗತ್ಯವಿಲ್ಲದವರ ಡ್ರೈವಿಂಗ್ ಲೈಸನ್ಸ್ ನವೀಕರಣ.
  3. ಡ್ಯೂಪ್ಲಿಕೆಟ್ ಡ್ರೈವಿಂಗ್ ಲೈಸನ್ಸ್.
  4. ಡ್ರೈವಿಂಗ್ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆ.
  5. ಅಂತರರಾಷ್ಟ್ರೀಯ ಡ್ರೈವಿಂಗ್‌ ಲೈಸನ್ಸ್ ನೀಡುವಿಕೆ.
  6. ಲೈಸನ್ಸ್‌ಗೆ ಇತರ ವರ್ಗದ ವಾಹನವನ್ನು ಸೇರಿಸುವುದು.
  7. ಮೋಟಾರು ವಾಹನದ ತಾತ್ಕಾಲಿಕ ನೋಂದಣಿಗೆ ಅರ್ಜಿ.
  8. ಸಂಪೂರ್ಣವಾಗಿ ಬಾಡಿಗಳನ್ನು ಕಟ್ಟಿರುವ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  9. ನೋಂದಣಿಯ ಡ್ಯೂಪ್ಲಿಕೆಟ್ ಪ್ರಮಾಣಪತ್ರ ವಿತರಣೆಗಾಗಿ ಅರ್ಜಿ.
  10. ನೋಂದಣಿ ಪ್ರಮಾಣಪತ್ರಕ್ಕಾಗಿ ಎನ್ಒಸಿ ಒದಗಿಸಲು ಅರ್ಜಿ.
  11. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ನೋಟಿಸ್‌.
  12. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ಅರ್ಜಿ.
  13. ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆಯ ಮಾಹಿತಿ.
  14. ಮಾನ್ಯತೆ ಪಡೆದ ಚಾಲಕ ತರಬೇತಿ ಕೇಂದ್ರದಿಂದ ಚಾಲಕ ತರಬೇತಿಗಾಗಿ ನೋಂದಣಿಗೆ ಅರ್ಜಿ.
  15. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  16. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ಮೊದಲ ನೋಂದಣಿ ಗುರುತು ನಿಯೋಜನೆಗಾಗಿ ಅರ್ಜಿ.
  17. ಬಾಡಿಗೆ-ಖರೀದಿ ಒಪ್ಪಂದದ ಅನುಮೋದನೆ.
  18. ಬಾಡಿಗೆ-ಖರೀದಿ ಒಪ್ಪಂದದ ಮುಕ್ತಾಯ.

ಇದನ್ನೂ ಓದಿ: ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...