Homeಮುಖಪುಟಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

- Advertisement -
- Advertisement -

ಡ್ರೈವಿಂಗ್‌ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಕೆಲವು ಸೇವೆಗಳನ್ನು ಈಗ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪಡೆಯಬಹುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.

ಇದರರ್ಥ ಇಂದಿನಿಂದ ಪ್ರಾದೇಶಿಕ ಸಾರಿಗೆ ಕಚೇರಿ ಅಥವಾ ಆರ್‌ಟಿಒಗೆ ಭೇಟಿ ನೀಡದೆ ಆಧಾರ್‌ ದೃಢೀಕರಣವನ್ನು ಬಳಸಿಕೊಂಡು, ಸ್ವಯಂಪ್ರೇರಣೆಯಿಂದ ಅಥವಾ ಯಾರಾದರೂ ತಮ್ಮ ಲೈಸನ್ಸ್‌ಅನ್ನು ನವೀಕರಿಸಬಹುದಾಗಿದ್ದು, ಡ್ಯೂಪ್ಲಿಕೆಟ್‌‌ ಆರ್ಸಿ ಮತ್ತು ಅಂತಹುದೇ ಸೇವೆಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ಯಾರನ್ನೂ ಸಂಪರ್ಕಿಸದೆ ಗೊಂದಲ ಮುಕ್ತ ಸೇವೆಗಳನ್ನು ಪಡೆಯುವುದು ಇದರ ಉದ್ದೇಶವಾಗಿದ್ದು, ಈ ಮೂಲಕ ಸಚಿವಾಲಯವು ಸುಮಾರು 18 ಸೇವೆಗಳನ್ನು ನೀಡುತ್ತದೆ.

ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಎಲ್ಲ ಅನುಮೋದನೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವಾಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಆನ್‌ಲೈನ್ ಸೇವೆಗಳನ್ನು ಬಳಸಲು ಬಯಸುವ ಜನರು ಆಧಾರ್ ದೃಢೀಕರಣಕ್ಕೆ ಒಳಗಾಗಬೇಕಾಗುತ್ತದೆ.

ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಪ್ರಕಟಿಸಿರುವ ಸಚಿವಾಲಯವು, “ಇದು ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ಸೇವೆಗಳನ್ನು ಗೊಂದಲ ಮುಕ್ತ, ಯಾರನ್ನೂ ಸಂಪರ್ಕಿಸದೆ ಸೇವೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಆರ್‌ಟಿಒ ಕಚೇರಿಯಲ್ಲಿನ ಓಡಾಟವನ್ನು ಸಹ ಕಡಿಮೆ ಮಾಡುತ್ತದೆ. ಆರ್‌ಟಿಒ ಕಚೇರಿಗಳ ದಕ್ಷತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಫೇಸ್‌ಬುಕ್ ಬ್ಯಾನ್! ಟೆಕ್ ದೈತ್ಯನ ಅಹಂಗೆ ಬಿದ್ದ ಪೆಟ್ಟು: ಎಸ್ ಕುಮಾರ್

ಆನ್‌ಲೈನ್ ಸೇವೆಗಳು ಮಾರ್ಚ್ 3, 2021 ರಿಂದ ಜಾರಿಗೆ ಬಂದಿದ್ದು, ಆಧಾರ್ ದೃಡೀಕರಣಕ್ಕೆ ಒಳಪಟ್ಟ ನಂತರ ಜನರು ಪಡೆಯಬಹುದಾದ ಎಲ್ಲಾ 18 ಆನ್‌ಲೈನ್‌‌ ಸೇವೆಗಳು ಈ ಕೆಳಗಿನಂತಿವೆ.

  1. ಕಲಿಕಾ ಪರವಾನಗಿ (ಎಲ್‌ಎಲ್‌ಆರ್‌)
  2. ಚಾಲನೆಯ ಸಾಮರ್ಥ್ಯದ ಪರೀಕ್ಷೆ ಅಗತ್ಯವಿಲ್ಲದವರ ಡ್ರೈವಿಂಗ್ ಲೈಸನ್ಸ್ ನವೀಕರಣ.
  3. ಡ್ಯೂಪ್ಲಿಕೆಟ್ ಡ್ರೈವಿಂಗ್ ಲೈಸನ್ಸ್.
  4. ಡ್ರೈವಿಂಗ್ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆ.
  5. ಅಂತರರಾಷ್ಟ್ರೀಯ ಡ್ರೈವಿಂಗ್‌ ಲೈಸನ್ಸ್ ನೀಡುವಿಕೆ.
  6. ಲೈಸನ್ಸ್‌ಗೆ ಇತರ ವರ್ಗದ ವಾಹನವನ್ನು ಸೇರಿಸುವುದು.
  7. ಮೋಟಾರು ವಾಹನದ ತಾತ್ಕಾಲಿಕ ನೋಂದಣಿಗೆ ಅರ್ಜಿ.
  8. ಸಂಪೂರ್ಣವಾಗಿ ಬಾಡಿಗಳನ್ನು ಕಟ್ಟಿರುವ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  9. ನೋಂದಣಿಯ ಡ್ಯೂಪ್ಲಿಕೆಟ್ ಪ್ರಮಾಣಪತ್ರ ವಿತರಣೆಗಾಗಿ ಅರ್ಜಿ.
  10. ನೋಂದಣಿ ಪ್ರಮಾಣಪತ್ರಕ್ಕಾಗಿ ಎನ್ಒಸಿ ಒದಗಿಸಲು ಅರ್ಜಿ.
  11. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ನೋಟಿಸ್‌.
  12. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ಅರ್ಜಿ.
  13. ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆಯ ಮಾಹಿತಿ.
  14. ಮಾನ್ಯತೆ ಪಡೆದ ಚಾಲಕ ತರಬೇತಿ ಕೇಂದ್ರದಿಂದ ಚಾಲಕ ತರಬೇತಿಗಾಗಿ ನೋಂದಣಿಗೆ ಅರ್ಜಿ.
  15. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  16. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ಮೊದಲ ನೋಂದಣಿ ಗುರುತು ನಿಯೋಜನೆಗಾಗಿ ಅರ್ಜಿ.
  17. ಬಾಡಿಗೆ-ಖರೀದಿ ಒಪ್ಪಂದದ ಅನುಮೋದನೆ.
  18. ಬಾಡಿಗೆ-ಖರೀದಿ ಒಪ್ಪಂದದ ಮುಕ್ತಾಯ.

ಇದನ್ನೂ ಓದಿ: ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...