Homeಮುಖಪುಟಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

- Advertisement -
- Advertisement -

ಡ್ರೈವಿಂಗ್‌ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಕೆಲವು ಸೇವೆಗಳನ್ನು ಈಗ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪಡೆಯಬಹುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.

ಇದರರ್ಥ ಇಂದಿನಿಂದ ಪ್ರಾದೇಶಿಕ ಸಾರಿಗೆ ಕಚೇರಿ ಅಥವಾ ಆರ್‌ಟಿಒಗೆ ಭೇಟಿ ನೀಡದೆ ಆಧಾರ್‌ ದೃಢೀಕರಣವನ್ನು ಬಳಸಿಕೊಂಡು, ಸ್ವಯಂಪ್ರೇರಣೆಯಿಂದ ಅಥವಾ ಯಾರಾದರೂ ತಮ್ಮ ಲೈಸನ್ಸ್‌ಅನ್ನು ನವೀಕರಿಸಬಹುದಾಗಿದ್ದು, ಡ್ಯೂಪ್ಲಿಕೆಟ್‌‌ ಆರ್ಸಿ ಮತ್ತು ಅಂತಹುದೇ ಸೇವೆಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ಯಾರನ್ನೂ ಸಂಪರ್ಕಿಸದೆ ಗೊಂದಲ ಮುಕ್ತ ಸೇವೆಗಳನ್ನು ಪಡೆಯುವುದು ಇದರ ಉದ್ದೇಶವಾಗಿದ್ದು, ಈ ಮೂಲಕ ಸಚಿವಾಲಯವು ಸುಮಾರು 18 ಸೇವೆಗಳನ್ನು ನೀಡುತ್ತದೆ.

ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಎಲ್ಲ ಅನುಮೋದನೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವಾಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಆನ್‌ಲೈನ್ ಸೇವೆಗಳನ್ನು ಬಳಸಲು ಬಯಸುವ ಜನರು ಆಧಾರ್ ದೃಢೀಕರಣಕ್ಕೆ ಒಳಗಾಗಬೇಕಾಗುತ್ತದೆ.

ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಪ್ರಕಟಿಸಿರುವ ಸಚಿವಾಲಯವು, “ಇದು ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ಸೇವೆಗಳನ್ನು ಗೊಂದಲ ಮುಕ್ತ, ಯಾರನ್ನೂ ಸಂಪರ್ಕಿಸದೆ ಸೇವೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಆರ್‌ಟಿಒ ಕಚೇರಿಯಲ್ಲಿನ ಓಡಾಟವನ್ನು ಸಹ ಕಡಿಮೆ ಮಾಡುತ್ತದೆ. ಆರ್‌ಟಿಒ ಕಚೇರಿಗಳ ದಕ್ಷತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಫೇಸ್‌ಬುಕ್ ಬ್ಯಾನ್! ಟೆಕ್ ದೈತ್ಯನ ಅಹಂಗೆ ಬಿದ್ದ ಪೆಟ್ಟು: ಎಸ್ ಕುಮಾರ್

ಆನ್‌ಲೈನ್ ಸೇವೆಗಳು ಮಾರ್ಚ್ 3, 2021 ರಿಂದ ಜಾರಿಗೆ ಬಂದಿದ್ದು, ಆಧಾರ್ ದೃಡೀಕರಣಕ್ಕೆ ಒಳಪಟ್ಟ ನಂತರ ಜನರು ಪಡೆಯಬಹುದಾದ ಎಲ್ಲಾ 18 ಆನ್‌ಲೈನ್‌‌ ಸೇವೆಗಳು ಈ ಕೆಳಗಿನಂತಿವೆ.

  1. ಕಲಿಕಾ ಪರವಾನಗಿ (ಎಲ್‌ಎಲ್‌ಆರ್‌)
  2. ಚಾಲನೆಯ ಸಾಮರ್ಥ್ಯದ ಪರೀಕ್ಷೆ ಅಗತ್ಯವಿಲ್ಲದವರ ಡ್ರೈವಿಂಗ್ ಲೈಸನ್ಸ್ ನವೀಕರಣ.
  3. ಡ್ಯೂಪ್ಲಿಕೆಟ್ ಡ್ರೈವಿಂಗ್ ಲೈಸನ್ಸ್.
  4. ಡ್ರೈವಿಂಗ್ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆ.
  5. ಅಂತರರಾಷ್ಟ್ರೀಯ ಡ್ರೈವಿಂಗ್‌ ಲೈಸನ್ಸ್ ನೀಡುವಿಕೆ.
  6. ಲೈಸನ್ಸ್‌ಗೆ ಇತರ ವರ್ಗದ ವಾಹನವನ್ನು ಸೇರಿಸುವುದು.
  7. ಮೋಟಾರು ವಾಹನದ ತಾತ್ಕಾಲಿಕ ನೋಂದಣಿಗೆ ಅರ್ಜಿ.
  8. ಸಂಪೂರ್ಣವಾಗಿ ಬಾಡಿಗಳನ್ನು ಕಟ್ಟಿರುವ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  9. ನೋಂದಣಿಯ ಡ್ಯೂಪ್ಲಿಕೆಟ್ ಪ್ರಮಾಣಪತ್ರ ವಿತರಣೆಗಾಗಿ ಅರ್ಜಿ.
  10. ನೋಂದಣಿ ಪ್ರಮಾಣಪತ್ರಕ್ಕಾಗಿ ಎನ್ಒಸಿ ಒದಗಿಸಲು ಅರ್ಜಿ.
  11. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ನೋಟಿಸ್‌.
  12. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ಅರ್ಜಿ.
  13. ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆಯ ಮಾಹಿತಿ.
  14. ಮಾನ್ಯತೆ ಪಡೆದ ಚಾಲಕ ತರಬೇತಿ ಕೇಂದ್ರದಿಂದ ಚಾಲಕ ತರಬೇತಿಗಾಗಿ ನೋಂದಣಿಗೆ ಅರ್ಜಿ.
  15. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  16. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ಮೊದಲ ನೋಂದಣಿ ಗುರುತು ನಿಯೋಜನೆಗಾಗಿ ಅರ್ಜಿ.
  17. ಬಾಡಿಗೆ-ಖರೀದಿ ಒಪ್ಪಂದದ ಅನುಮೋದನೆ.
  18. ಬಾಡಿಗೆ-ಖರೀದಿ ಒಪ್ಪಂದದ ಮುಕ್ತಾಯ.

ಇದನ್ನೂ ಓದಿ: ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...