Homeಚಳವಳಿಚಳುವಳಿ ಮುಗಿದಿಲ್ಲ, ಇನ್ನೂ ತೀವ್ರಗೊಳ್ಳುತ್ತದೆ - ರೈತ ಮುಖಂಡರು

ಚಳುವಳಿ ಮುಗಿದಿಲ್ಲ, ಇನ್ನೂ ತೀವ್ರಗೊಳ್ಳುತ್ತದೆ – ರೈತ ಮುಖಂಡರು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಆಂದೋಲನವು ಶನಿವಾರ ತನ್ನ ನೂರನೇ ದಿನಕ್ಕೆ ಕಾಲಿಡುತ್ತಿದೆ. ಈ ಹಿನ್ನಲೆಯಲ್ಲಿ ರೈತ ಸಂಘಗಳ ಮುಖಂಡರು ತಮ್ಮ ಚಳುವಳಿ ಮುಗಿದಿಲ್ಲ, ಇದು ಇನ್ನೂ ತೀವ್ರಗೊಳ್ಳುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ರೈತ ಆಂದೋಲನವು ಏಕತೆಯ ಸಂದೇಶವನ್ನು ರವಾನಿಸಿದ್ದು, ರಾಜಕೀಯವಾಗಿ ಮರಳಿ ರೈತರತ್ತ ನೋಡುವಂತೆ ಮಾಡಿದೆ ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಮೂರು ತಿಂಗಳಿನಿಂದ, ಸಿಂಗು, ಟಿಕ್ರಿ ಮತ್ತು ಗಾಜಿಪುರದ ಗಡಿಗಳು, ದೇಶದ ವಿವಿಧ ಭಾಗಗಳ, ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರಪ್ರದೇಶದ ಸಾವಿರಾರು ರೈತರು ಆಕ್ರಮಿಸಿಕೊಂಡಿರುವ ಪಟ್ಟಣಗಳಾಗಿ ಮಾರ್ಪಟ್ಟಿವೆ.

ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಕೇಶ್ ಟಿಕಾಯತ್‌ ಪ್ರತಿಭಟನೆ ಅಗತ್ಯವಿರುವವರೆಗೂ ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

“ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ. ಸರ್ಕಾರವು ನಮ್ಮ ಮಾತುಗಳನ್ನು ಆಲಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಇಲ್ಲಿಂದ ಹೋಗುವುದಿಲ್ಲ” ಎಂದು ಚಳವಳಿಯ ಮುಂಚೂಣಿಯಲ್ಲಿರುವ ನಾಯಕರಾದ ಟಿಕಾಯತ್‌ ತಿಳಿಸಿದ್ದಾರೆ.

ಸರ್ಕಾರ ಮತ್ತು ರೈತ ಸಂಘಗಳ ನಡುವೆ ಹಲವಾರು ಸುತ್ತಿನ ಮಾತುಕತೆಗಳ ಹೊರತಾಗಿಯೂ, ಒಮ್ಮತಕ್ಕೆ ಬರಲು ವಿಫಲರಾಗಿದ್ದಾರೆ. ಇದುವರೆಗೂ ಒಟ್ಟು ಹನ್ನೊಂಡು ಸುತ್ತಿನ ಮಾತುಕತೆಗಳು ನಡೆದಿವೆ.

ಸೆಪ್ಟೆಂಬರ್‌ನಲ್ಲಿ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳನ್ನು ಕೃಷಿ ಕ್ಷೇತ್ರದ ಪ್ರಮುಖ ಸುಧಾರಣೆಗಳೆಂದು ಕೇಂದ್ರವು ಹೇಳುತ್ತಿದ್ದು, ಅದು ಮಧ್ಯವರ್ತಿಗಳನ್ನು ತೆಗೆದುಹಾಕುತ್ತದೆ ಮತ್ತು ರೈತರು ತಮ್ಮ ಉತ್ಪನ್ನಗಳನ್ನು ದೇಶದಲ್ಲಿ ಎಲ್ಲಿ ಬೇಕಾದರೂ ಮಾರಾಟ ಮಾಡಲು ಅನುವು ಮಾಡಿಕೊಡುತ್ತದೆ ಎಂದು ಪ್ರತಿಪಾದಿಸಿದೆ.

ಈ ಹೊಸ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಕಿತ್ತು ಹಾಕುತ್ತದೆ ಮತ್ತು “ಮಂಡಿ” (ಸಗಟು ಮಾರುಕಟ್ಟೆ) ವ್ಯವಸ್ಥೆ ಇಲ್ಲವಾಗಲು ದಾರಿ ಮಾಡಿಕೊಟ್ಟಂತಾಗುತ್ತವೆ ಎಂಬ ಆತಂಕವನ್ನು ಪ್ರತಿಭಟನಾ ನಿರತ ರೈತರು ವ್ಯಕ್ತಪಡಿಸಿದ್ದಾರೆ.

ರೈತ ಮುಖಂಡರ ಪ್ರಕಾರ, ಶನಿವಾರ ತನ್ನ 100 ನೇ ದಿನವನ್ನು ಪೂರ್ಣಗೊಳಿಸಲಿರುವ ಆಂದೋಲನವು ಪ್ರತಿಭಟನೆಯ ತಕ್ಷಣದ ವ್ಯಾಪ್ತಿಯನ್ನು ಮೀರಿ ಹೆಚ್ಚಿನದನ್ನು ಸಾಧಿಸಿದ್ದು, ಇದು ರೈತರಲ್ಲಿ ರಾಷ್ಟ್ರವ್ಯಾಪಿ ಐಕ್ಯತೆಯನ್ನು ಹುಟ್ಟುಹಾಕಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ಸುತ್ತುವರಿಯಲು ನೋಡಿದರು, ಈಗ ರೈತರೇ ಸರ್ಕಾರವನ್ನು ಸುತ್ತುವರೆದಿದ್ದಾರೆ: ಡಾ. ಅಮಿತ್ ಬಾಧುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...