Homeಕರ್ನಾಟಕಕನ್ನಡದ ಹಿರಿಯ ಕವಿ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ (84) ನಿಧನ

ಕನ್ನಡದ ಹಿರಿಯ ಕವಿ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ (84) ನಿಧನ

- Advertisement -
- Advertisement -

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ಕವಿ ಡಾ. ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ಟ (84) ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.

ಬೆಂಗಳೂರಿನ ಬನಶಂಕರಿಯ ಅವರ ಮನೆಯಲ್ಲಿ ಬೆಳಿಗ್ಗೆ 10.30 ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 11 ಗಂಟೆಗೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಲಕ್ಷ್ಮೀನಾಯಾಯಣ ಅವರು, ಕನ್ನಡ ಸಾಹಿತ್ಯ ಲೋಕದಲ್ಲಿ, ‘ಎನ್ನೆಸ್ಸೆಲ್’ ಎಂದೇ ಜನಪ್ರಿಯರಾಗಿದ್ದಾರೆ. ಅವರು ’ಭಾವಗೀತೆ ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ, ಮುಂತಾದ ಹಲವರು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದಾರೆ. ಅವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಕೂಡಾ ಕೃತಿರಚನೆ ಮಾಡಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಫೆ. 26 ರಿಂದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

1936 ಅಕ್ಟೋಬರ್‌ 29 ರಂದು ಶಿವಮೊಗ್ಗೆಯಲ್ಲಿ ಹುಟ್ಟಿದ ಅವರು, ಶಿವಮೊಗ್ಗದಲ್ಲಿ ಇಂಟರ್ ಮೀಡಿಯೆಟ್ ಮುಗಿಸಿ, ಕನ್ನಡ ಎಂ.ಎ. ಆನರ್ಸ್ ಪದವಿ ಮೈಸೂರಿನ ಮಹಾರಾಜ ಕಾಲೇಜ್‌ನಲ್ಲಿ ಗಳಿಸಿದರು. 1965 ರಲ್ಲಿ ಬೆಂಗಳೂರು ವಿಶ್ವವಿಧ್ಯಾಲಯವನ್ನು ಸೇರಿ, ಅಧ್ಯಾಪಕ, ರೀಡರ್, ಪ್ರಾಧ್ಯಾಪಕ, ನಿರ್ದೇಶಕ ಮತ್ತು 1990 ರಲ್ಲಿ ಆರ್ಟ್ ಫ್ಯಾಕಲ್ಟಿ ಡೀನ್ ಆದರು. ಮೈಸೂರು ವಿಶ್ವವಿದ್ಯಾನಿಲಯದ ಪಿಎಚ್ಡಿ ಪದವಿಗೆ ’ಆಧುನಿಕ ಕನ್ನಡ ಕಾವ್ಯ’ ಕುರಿತು ಪ್ರಬಂಧ ಸಾದರಪಡಿಸಿದರು.

ಜಗನ್ನಾಥ ವಿಜಯ, ಮುದ್ರಾಮಂಜೂಷ ಕಾವ್ಯಗಳನ್ನು ರಚಿಸಿದ್ದಾರೆ. ಅವರ ಕಾರ್ಯವನ್ನು ಗುರುತಿಸಿ, ’ಎನ್.ಸಿ.ಆರ್.ಟಿ’ ಸಂಸ್ಥೆಯಿಂದ ಶಿಶು ಸಾಹಿತ್ಯಕ್ಕಾಗಿ ’ಬಾಲಸಾಹಿತ್ಯ ಪುರಸ್ಕಾರ’ ಲಭಿಸಿದೆ. ‘ಯೇಟ್ಸ್’, ’ಶೇಕ್ಸ್ ಪಿಯರ್’, ’ಎಲಿಯಟ್’ ಕವಿಗಳ ತಮ್ಮ ಕೃತಿಗಳಿಗಾಗಿ ಮೂರುಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. 1990 ರಲ್ಲಿ ತಮ್ಮ ಸಮಗ್ರ ಸಾಹಿತ್ಯಕ್ಕೆ ’ಶಿವರಾಮಕಾರಂತ ಪ್ರಶಸ್ತಿ’ಯನ್ನು ಪಡೆದಿದ್ದಾರೆ. ’ರಾಜ್ಯೋತ್ಸವ ಪ್ರಶಸ್ತಿ’, ’ಮಾಸ್ತಿಪ್ರಶಸ್ತಿ’, ವರ್ಧಮಾನ ಪ್ರಶಸ್ತಿ’ಗಳಂತ ಹಲವು ಪ್ರಶಸ್ತಿಗಳು ಅವರಿಗೆ ಸಂದಿದೆ.

ಇದನ್ನೂ ಓದಿ: ‘ಸಣ್ಣ ಪಿಕಾ-ಒಂದುವರೆ ರುಪಾಯಿ’ – ಅಧೀರ್ ಬಿಸ್ವಾಸ್ ಅವರ ನಿರಾಶ್ರಿತ ಆತ್ಮಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...