Homeಮುಖಪುಟ‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

- Advertisement -
- Advertisement -

‘ಅಪಾದಿತ’ ಪ್ಯಾರಿಸ್ ಬಂಗಲೆ ಕೀಗಳು, 5 ಕೋಟಿ ರೂ. ರಶೀದಿ, ಮತ್ತು “2013 ರ ದಾಳಿಯ ನೆನಪು” – ಇವುಗಳು- ಆದಾಯ ತೆರಿಗೆ (ಐಟಿ) ಇಲಾಖೆಯ ತಾಪ್ಸಿ ಪನ್ನುಗೆ ಸಂಬಂಧಿಸಿದ ಆಸ್ತಿಗಳ ಮೇಲಿನ ದಾಳಿಯ ಸಮಯದಲ್ಲಿ ಕಂಡುಬಂದಿವೆ ಎಂದು ತಾಪ್ಸಿ ಇಂದು ಮೂರು ಟ್ವೀಟ್‌ಗಳಲ್ಲಿ ಹೇಳಿದ್ದಾರೆ . ಕೊನೆಯ ಟ್ವೀಟ್‌ನ ಅಂತ್ಯದಲ್ಲಿ, ‘ನಾಟ್ ಸೋ ಸಾಸ್ತಿ ಎನಿಮೋರ್’’ (ಇನ್ಮುಂದೆ ಕೈಗೆಟಕುವಂತಿಲ್ಲ) ಎಂದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತೆರಿಗೆ ವಂಚನೆ ಆರೋಪದ ಮೇಲೆ ಬುಧವಾರ ನಡೆದ ಐಟಿ ದಾಳಿಗಳ ಮೂರು ದಿನಗಳ ನಂತರ ಅವರ ಪೋಸ್ಟ್ಗಳು ಕಾಣಿಸಿಕೊಂಡಿವೆ. ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಅವರನ್ನೂ ಐ-ಟಿ ಇಲಾಖೆ ಆಕ್ರಮಿಸಿತ್ತು. ಇಬ್ಬರನ್ನೂ ಪುಣೆಯಲ್ಲಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈ ಮತ್ತು ಪುಣೆಯ 30 ಸ್ಥಳಗಳಲ್ಲಿ ಹುಡುಕಾಟಗಳು ನಡೆದವು.
ತಾಪ್ಸಿ ಇಂದು ಪೋಸ್ಟ್ ಮಾಡಿದ ಮೊದಲ ಟ್ವೀಟ್‌ನಲ್ಲಿ, “ಮೂರು ದಿನಗಳ ತೀವ್ರವಾದ ಹುಡುಕಾಟ. ಮೂರು ವಿಷಯಗಳಲ್ಲಿ… ಮುಖ್ಯವಾಗಿ: ಪ್ಯಾರಿಸ್‌ನಲ್ಲಿ ನಾನು ಸ್ಪಷ್ಟವಾಗಿ ಹೊಂದಿರುವ ‘ಆಪಾದಿತ’ ಬಂಗಲೆಯ ಕೀಲಿಗಳು. ಏಕೆಂದರೆ ಬೇಸಿಗೆ ರಜಾದಿನಗಳು ಹತ್ತಿರದಲ್ಲಿವೆ.

ಅವರು ಅದನ್ನು ಇನ್ನೂ ಎರಡು ಟ್ವೀಟ್‌ಗಳೊಂದಿಗೆ ಅನುಸರಿಸಿದರು. 5 ಕೋಟಿ ರೂ. ರಸೀದಿಯ ಕುರಿತು ಆರೋಪಿಸಿದ್ದಾರೆ, ಈ ಮೊದಲು ಈ ಹಣವನ್ನು ನನಗೆ ನಿರಾಕರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅನುರಾಗ್ ಕಶ್ಯಪ್ ಮತ್ತು ತಾಪ್ಸೀ ಪನ್ನು ಅವರು ಸರ್ಕಾರದ ಬಗ್ಗೆ ಬಹಿರಂಗವಾಗಿ ಟೀಕಿಸುತ್ತ ಬಂದಿದ್ದಾರೆ. ಕೇಂದ್ರ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಧ್ವನಿ ಎತ್ತಿದ್ದಾರೆ. ಇತ್ತೀಚೆಗೆ, ತಾಪ್ಸಿ ಅವರು ಪಾಪ್ ತಾರೆ ರಿಹಾನ್ನಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿ, ಸರ್ಕಾರದ ಬಗ್ಗೆ ಸೆಲೆಬ್ರಿಟಿಗಳ ಒಗ್ಗಟ್ಟಿನ ಪ್ರದರ್ಶನವನ್ನು ಟೀಕಿಸಿದ್ದರು. ಕೇವಲ ಒಂದು ಟ್ವೀಟ್‌ನಿಂದಾಗಿ ನಿಮ್ಮ ಸಾರ್ವಭೌಮತೆಗೆ ಧಕ್ಕೆ ಬರುವುದಾದರೆ ನಿಮ್ಮ ಮೌಲ್ಯ ವ್ಯವಸ್ಥೆಯಲ್ಲೇ ಏನೋ ದೋಷವಿದೆ ಎಂದು ಬಿಸಿ ಮುಟ್ಟಿಸಿದ್ದರು.

ಪನ್ನು ಮತ್ತು ಕಶ್ಯಪ್ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲಿನ ದಾಳಿ ಹಲವಾರು ರಾಜಕೀಯ ವಲಯಗಳಲ್ಲಿ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಉಂಟುಮಾಡಿತು. ಉದಾಹರಣೆಗೆ, ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಈ ಕ್ರಮವನ್ನು “ಅವರ ಧ್ವನಿಯನ್ನು ನಿಗ್ರಹಿಸುವ ಪ್ರಯತ್ನ” ಎಂದು ಕರೆದರು. ಆರ್‌ಜೆಡಿಯ ತೇಜಸ್ವಿ ಯಾದವ್, “ಈಗ ನಾಜಿ ಸರ್ಕಾರವು ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಮತ್ತು ಕಲಾವಿದರನ್ನು ಬೆನ್ನಟ್ಟುತ್ತಿದೆ, ತಪ್ಪನ್ನು ತಪ್ಪು ಎಂದು ಕರೆಯದಂತೆ ಬೆದರಿಕೆ ಹಾಕುತ್ತಿದೆ’ ಎಂದಿದ್ದರು.


ಇದನ್ನೂ ಓದಿ: ‘ನಾಝಿ ಆಡಳಿತ ಬೇಟೆಯಾಡುತ್ತಿದೆ’ – ಕೇಂದ್ರದ ವಿರುದ್ದ ತೇಜಸ್ವಿ ಯಾದವ್‌ ತೀವ್ರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...