Homeಅಂತರಾಷ್ಟ್ರೀಯಮಾ.8 ರಂದು ಬ್ರಿಟನ್ ಸಂಸತ್ತಿನಲ್ಲಿ ಕೃಷಿ ಕಾಯ್ದೆ & ರೈತ ಹೋರಾಟದ ಚರ್ಚೆ!

ಮಾ.8 ರಂದು ಬ್ರಿಟನ್ ಸಂಸತ್ತಿನಲ್ಲಿ ಕೃಷಿ ಕಾಯ್ದೆ & ರೈತ ಹೋರಾಟದ ಚರ್ಚೆ!

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ 100 ದಿನ ದಾಟಿ ಮುಂದುವರೆದಿದ್ದರೂ, ಕೇಂದ್ರ ಸರ್ಕಾರ ಮತ್ತೆ ಮಾತುಕತೆಗೆ ಸಿದ್ಧವಾಗಿಲ್ಲ. ಇದೇ ಸಂದರ್ಭದಲ್ಲಿ ಬ್ರಿಟಿಷ್ ಸಂಸತ್ತು ಮಾರ್ಚ್ 8 ರಂದು ರೈತರ ಪ್ರತಿಭಟನೆ ಕುರಿತು ಚರ್ಚೆ ನಡೆಸಲು ಸಜ್ಜಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಮೋದಿಯವರು ಕೃಷಿ ಕಾನೂನುಗಳ ವಿರುದ್ಧ ಮತ್ತು ರೈತ ಹೋರಾಟದ ಪರ ವಿದೇಶದಲ್ಲಿ ನಡೆಯುವ ಯಾವುದೇ ಪ್ರತಿಭಟನೆಗಳು ಮತ್ತು ರ‍್ಯಾಲಿಗಳಿಗೆ ಕಾಂಗ್ರೆಸ್ ಪಕ್ಷದ ನೇತೃತ್ವದ ‘ರಾಷ್ಟ್ರ ವಿರೋಧಿ’ ಕೃತ್ಯ ಎಂದು ಕರೆಯುತ್ತಿದ್ದಾರೆ. ಜನವರಿ 5 ರಂದು, ಯುಕೆ ಯ 100 ಕ್ಕೂ ಹೆಚ್ಚು ಸಂಸದರು ಭಾರತದಲ್ಲಿ ರೈತರ ಪ್ರತಿಭಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಪತ್ರವೊಂದನ್ನು ಕಳುಹಿಸಿ, ಅವರ ನಿಲುವನ್ನು ತಿಳಿಸಲು ಕೋರಿದ್ದರು.
ಅಂದಿನಿಂದ, ಪ್ರತಿಭಟನಾಕಾರರ ಸುರಕ್ಷತೆ ಮತ್ತು ಪತ್ರಿಕಾ ಸ್ವಾತಂತ್ರ‍್ಯವನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರವನ್ನು ಒತ್ತಾಯಿಸುವ ಇ-ಅರ್ಜಿಯ ಮೂಲಕ ಈ ವಿಷಯದ ಬಗ್ಗೆ ಚರ್ಚೆಯನ್ನು ನಡೆಸುವ ಕ್ರಮವನ್ನು ಒತ್ತಾಯಿಸಿದ್ದಾರೆ. ಇದಕ್ಕೆ 115,676 ಕ್ಕೂ ಹೆಚ್ಚು ಜನರು ಸಹಿ ಹಾಕಿದ್ದಾರೆ.

ಟ್ರಾಕ್ಟರ್ ಮೆರವಣಿಗೆಗೆ ನಾಲ್ಕು ದಿನಗಳ ಮೊದಲು ಜನವರಿ 22 ರಂದು ರೈತ ಸಂಘಗಳು ಮತ್ತು ಕೇಂದ್ರದ ನಡುವೆ ಕೊನೆಯ ಸುತ್ತಿನ ಮಾತುಕತೆ ನಡೆಯಿತು, ಜನವರಿ 26 ರಂದು ದೆಹಲಿಯ ಕೆಂಪು ಕೋಟೆಯಲ್ಲಿ ಉಂಟಾದ ಗೊಂದಲ ಮತ್ತು ಹಿಂಸಾಚಾರದ ನಂತರ ಕೇಂದ್ರ ಮಾತುಕತೆಯಿಮದ ದೂರ ಉಳಿದಿದೆ.

ದಿ ವೈರ್‌ನ ಪ್ರಶ್ನೆಗಳಿಗೆ ಉತ್ತರಿಸಿದ ಸ್ಲೊಗ್‌ನ ಬ್ರಿಟಿಷ್ ಲೇಬರ್ ಸಂಸದ ತನ್ಮಂಜೀತ್ ಸಿಂಗ್ ಧೇಸಿ, ನಮ್ಮ ಶಾಸಕಾಂಗವು ಸ್ಥಳೀಯ ಮತ್ತು ರಾಷ್ಟ್ರೀಯ ವಿಷಯಗಳ ಬಗ್ಗೆ ಹೆಚ್ಚಿನ ಸಮಯವನ್ನು ಕಳೆಯುತ್ತದೆ. ಆದರೆ ಅದೇ ಹೊತ್ತಿಗೆ ವಿಶ್ವದ ಇತರ ಕಡೆಯ ಸಮಸ್ಯೆಗಳನ್ನು ಚಚಿಸುತ್ತದೆ. “ಇದು ನಮ್ಮ ಪ್ರಜಾಪ್ರಭುತ್ವವನ್ನು ಶ್ರೀಮಂತಗೊಳಿಸುತ್ತದೆ ಮತ್ತು ಸಂಸದರ ಸಾಮರ್ಥ್ಯಗಳನ್ನು ಬಲಪಡಿಸುತ್ತದೆ, ಇಂತಹ ಚರ್ಚೆಗಳು ನಮ್ಮ ಸಾಮೂಹಿಕ ರಾಷ್ಟ್ರೀಯ ಚಿಂತನೆಯನ್ನು ಸೂಚಿಸುತ್ತವೆ ಮತ್ತು ಜಾಗತಿಕವಾಗಿ ನಮ್ಮ ಸ್ನೇಹಿತರು ಮತ್ತು ಮಿತ್ರರಾಷ್ಟ್ರಗಳಿಗೆ ರಚನಾತ್ಮಕ ಟೀಕೆಗಳನ್ನು ಒದಗಿಸಲು ಸಹಕಾರಿಯಾಗುತ್ತವೆ ” ಎಂದು ಹೇಳಿದ್ದಾರೆ.

ರೈತರ ಪರವಾಗಿ ಪ್ರತಿಭಟನೆಗಳು ಮತ್ತು ರ‍್ಯಾಲಿಗಳನ್ನು ‘ಭಾರತವನ್ನು ಕೆಣಕುವ ಪಿತೂರಿ’ ಎಂಬ ಭಾರತೀಯ ಸರ್ಕಾರದ ಆರೋಪದ ಕುರಿತು ಉತ್ತರಿಸಿದ ಧೇಸಿ, “ಇದು ಖಂಡಿತವಾಗಿಯೂ ತಪ್ಪು. ಸರ್ಕಾರದ ನೀತಿಗಳ ಬಗ್ಗೆ ಕಳವಳ ವ್ಯಕ್ತಪಡಿಸುವುದು ರಾಷ್ಟ್ರ ವಿರೋಧಿ ಅಥವಾ ಭಾರತ ವಿರೋಧಿ ಅಲ್ಲ. ಅದು ಯಾರೇ ಆಗಿರಬಹುದು. ಯುಕೆಯಲ್ಲಿ, ನಮ್ಮ ಸರ್ಕಾರ ಮತ್ತು ವಿದೇಶಿ ಸರ್ಕಾರಗಳ ಕ್ರಮಗಳನ್ನು ನಾವು ನಿರಂತರವಾಗಿ ಪರಿಶೀಲಿಸುತ್ತೇವೆ; ನಿಜಕ್ಕೂ ಇದು ಆರೋಗ್ಯಕರ ಪ್ರಜಾಪ್ರಭುತ್ವದ ಸಂಕೇತವಾಗಿದೆ.’ ಎಂದರು.

ಜಲಂಧರ್‌ನ ರಾಯ್‌ಪುರ ಗ್ರಾಮದ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಖಂಡರಾಗಿರುವ ಪರಮಜಿತ್ ಸಿಂಗ್ ರಾಯ್ಪುರ್, (ತನ್ಮಂಜೀತ್ ಸಿಂಗ್ ಅವರ ತಂದೆಯ ಚಿಕ್ಕಪ್ಪ) ಈ ಬೆಳವಣಿಗೆಯು ರೈತರಿಗೆ ದೊಡ್ಡ ಸಾಧನೆಯಾಗಿದೆ ಎಂದು ಹೇಳಿದರು. “ಮೋದಿ ಸರ್ಕಾರವು ರೈತರ ಮಾತುಗಳನ್ನು ಕೇಳಲು ಸಹ ಸಿದ್ಧರಿಲ್ಲದಿದ್ದರೂ, ಯುಕೆ ಸಂಸತ್ತು ಈ ವಿಷಯದ ಬಗ್ಗೆ ಚರ್ಚೆಯನ್ನು ನಡೆಸುತ್ತಿದೆ. ಪ್ರತಿಭಟನೆ ಪ್ರಾರಂಭವಾದಾಗಿನಿಂದ ಯುಕೆ ಸಂಸತ್ತಿನಲ್ಲಿ ರೈತರ ಪ್ರತಿಭಟನೆಯ ವಿಷಯವನ್ನು ತನ್ಮಂಜಿತ್ ಸಿಂಗ್ ಮತ್ತು ಇತರ ಯುಕೆ ಸಂಸದರು ಗಟ್ಟಿಯಾಗಿ ಎತ್ತಿದ್ದಾರೆ ಎಂದು ನಾವು ಹೆಮ್ಮೆಪಡುತ್ತೇವೆ’ ಎಂದಿದ್ದಾರೆ.

ಮಾರ್ಚ್ 8 ರಂದು ಔಪಚಾರಿಕ ಚರ್ಚೆ ನಡೆಸುವ ಮೂಲಕ ರೈತರ ಆಂದೋಲನಕ್ಕೆ ಉತ್ತೇಜನ ಸಿಗುತ್ತದೆ ಮತ್ತು ಮೋದಿ ಸರ್ಕಾರ ಖಂಡಿತವಾಗಿಯೂ ಒತ್ತಡಕ್ಕೆ ಒಳಗಾಗುತ್ತದೆ ಎಂದು ಪರಮಜಿತ್ ಹೇಳಿದ್ದಾರೆ. “ಅವರು ಈ ಅಸ್ತವ್ಯಸ್ತತೆಯನ್ನು ಕೊನೆಗೊಳಿಸಬೇಕು ಮತ್ತು ರೈತರ ಮಾತನ್ನು ಕೇಳಬೇಕು ಎಂದು ನಾವು ಮೋದಿ ಸರ್ಕಾರಕ್ಕೆ ಮನವಿ ಮಾಡುತ್ತೇವೆ” ಎಂದು ಅವರು ಹೇಳಿದರು.

ಇದೇ ರೀತಿಯ ಭಾವನೆಗಳನ್ನು ಪ್ರತಿಧ್ವನಿಸುತ್ತಾ, ಕ್ರಾಂತಿಕಾರಿ ಕಿಸಾನ್ ಯೂನಿಯನ್ ಅಧ್ಯಕ್ಷ ಡಾ. ದರ್ಶನ್ ಪಾಲ್, ಇದು ಹೆಮ್ಮೆಯ ಮತ್ತು ನಾಚಿಕೆಗೇಡಿನ ಸಂಗತಿಯಾಗಿದೆ. ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಭಾರತ ಸರ್ಕಾರ ಗಮನಿಸದಿದ್ದರೂ, ಬ್ರಿಟಿಷ್ ಸಂಸತ್ತು ಈ ಬಗ್ಗೆ ಚರ್ಚೆ ನಡೆಸುತ್ತಿದೆ… ಒಂದು ಕಡೆ ನಾಚಿಕೆ, ಮತ್ತೊಂದು ಕಡೆ ಹೆಮ್ಮೆಯ ವಿಷಯ’ ಎಂದಿದ್ದಾರೆ.

“ಮೋದಿ ಸರ್ಕಾರದ ಅಸೂಕ್ಷ್ಮತೆ, ಅಜ್ಞಾನ ಮತ್ತು ಅಹಂಕಾರದಿಂದಾಗಿ ವಿಶ್ವದಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವಾಗ ಯುಕೆ ಸರ್ಕಾರ ಚರ್ಚೆಯನ್ನು ನಡೆಸುತ್ತಿದೆ. ಇಲ್ಲಿಯವರೆಗೆ ನಡೆದ ಪ್ರತಿಭಟನೆಯಲ್ಲಿ 270 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ರೈತರ ಮೂಲಭೂತ ಮಾನವ ಹಕ್ಕುಗಳನ್ನು ಹಾಳುಮಾಡಲಾಯಿತು, ಮೂಲಭೂತ ಸೌಲಭ್ಯಗಳನ್ನು ನಿಲ್ಲಿಸಲಾಯಿತು. ರೈತರ ಸಮಸ್ಯೆ ಕೇಳುವ ಬದಲು ಸರ್ಕಾರ ಅವುಗಳನ್ನು ಕಡೆಗಣಿಸಿತು. ಯುಕೆ ಸಂಸತ್ತಿನ ಉಪಕ್ರಮವನ್ನು ನಾವು ಸ್ವಾಗತಿಸುತ್ತೇವೆ, ಏಕೆಂದರೆ ನಮ್ಮ ಏಕೈಕ ಕಾಳಜಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದು” ಎಂದು ದರ್ಶನ್ ಪಾಲ್ ಹೇಳಿದ್ದಾರೆ.

ವಿಶೇಷವೆಂದರೆ, ಹಲವಾರು ಯುಕೆ ಸಂಸದರು ಸೋಷಿಯಲ್ ಮೀಡಿಯಾದಲ್ಲಿ, ವಿಶೇಷವಾಗಿ ಟ್ವಿಟರ್‌ನಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನಿರಂತರ ಅಭಿಯಾನವನ್ನು ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಯನ್ನು ಬೆಂಬಲಿಸಿದ ದಿಶಾ ರವಿ, ನೊದೀಪ್ ಕೌರ್ ಅವರ ಬಂಧನ ಮತ್ತು ಪತ್ರಿಕಾ ಸ್ವಾತಂತ್ರ‍್ಯದ ಮೇಲಿನ ದಾಳಿಯ ವಿರುದ್ಧ ಲೀಸೆಸ್ಟರ್ ಈಸ್ಟ್ ನ ಸಂಸದ ಕ್ಲೌಡಿಯಾ ವೆಬ್ಬೆ ಧ್ವನಿ ಎತ್ತಿದ್ದರು. ಅವರ ವಿರುದ್ದ ಟ್ವಿಟ್ಟರ್‌ನಲ್ಲಿ ಲೈಂಗಿಕ ದೌರ್ಜನ್ಯದ ಬೆದರಿಕೆ ಮತ್ತು ಜನಾಂಗೀಯ ನಿಂದನೆ ಕಾಣಿಸಿಕೊಂಡಿದ್ದವು.

ಫೆಬ್ರವರಿ 8 ರಂದು ಯುಕೆ ಪಿಎಂ ಬೋರಿಸ್ ಜಾನ್ಸನ್‌ಗೆ ಬರೆದ ಪತ್ರದಲ್ಲಿ, ಕ್ಲೌಡಿಯಾ ವೆಬ್ಬೆ ಹೀಗೆ ಬರೆದಿದ್ದಾರೆ: “ಪ್ರತಿಭಟನಾಕಾರರ ವಿರುದ್ಧ ದೌರ್ಜನ್ಯ ಮತ್ತು ಹಿಂಸಾಚಾರದ ಬಗ್ಗೆ ಭಾರತೀಯ ಸರ್ಕಾರದಲ್ಲಿನ ನಿಮ್ಮ ಸಹವರ್ತಿಗಳೊಂದಿಗೆ ಕಳವಳ ವ್ಯಕ್ತಪಡಿಸಬೇಕು ಮತ್ತು ರೈತರ ಕಳವಳಗಳನ್ನು ಆಲಿಸಲು ಮತ್ತು ತೊಡಗಿಸಿಕೊಳ್ಳಲು ಅವರನ್ನು ಪ್ರೋತ್ಸಾಹಿಸಿ. ಭಾರತದಲ್ಲಿ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಬಳಸಬಹುದಾದ ನೀರಿನ ಫಿರಂಗಿಗಳು, ಅಶ್ರುವಾಯು ಮತ್ತು ದಂಡಗಳು ಸೇರಿದಂತೆ ಶಸ್ತ್ರಾಸ್ತ್ರಗಳ ಮಾರಾಟವನ್ನು ತಕ್ಷಣವೇ ನಿಲ್ಲಿಸುವಂತೆ ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ”

ಇದಕ್ಕೂ ಮೊದಲು 2020 ರ ಡಿಸೆಂಬರ್‌ನಲ್ಲಿ 36 ಬ್ರಿಟಿಷ್ ಸಂಸದರು ಯುಕೆ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಬ್ ಅವರಿಗೆ ಪತ್ರ ಬರೆದು ಭಾರತೀಯ ಸರ್ಕಾರದೊಂದಿಗೆ ರೈತರ ಪ್ರತಿಭಟನೆಯ ವಿಷಯವನ್ನು ಚರ್ಚಿಸಬೇಕೆಂದು ಒತ್ತಾಯಿಸಿದ್ದರು.


ಇದನ್ನೂ ಓದಿ: ರೈತ ಹೋರಾಟಕ್ಕೆ 100 ದಿನ: ಹೆದ್ದಾರಿ ತಡೆ, ಬಿಜೆಪಿ ಬಹಿಷ್ಕರಿಸಲು ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿದೇಶೀಯರಿಗೆ ಅರ್ಥ ಆಗುತ್ತಿರುವ ನಮ್ಮ ರೈತರ ಕಶ್ಟ, ಸ್ವದೇಶೀಯರಿಗೆ ಅರ್ಥ ಆಗುತ್ತಿಲ್ಲ, ಇದು ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...