Homeಮುಖಪುಟತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

- Advertisement -
- Advertisement -

ತಮಿಳುನಾಡಿನಲ್ಲಿ ಡಿಎಂಕೆ ಪಕ್ಷವು ಫೆಬ್ರವರಿ ಅಂತ್ಯದಲ್ಲಿ ತನ್ನ ಚುನಾವಣಾ ಪ್ರಚಾರವನ್ನು ಹರ್ಷಚಿತ್ತದಿಂದ ಆರಂಭಿಸಿತು. ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳು, ವಿದುತಲೈ ಚಿರುಥೈಗಲ್ ಕಚ್ಚಿ (ವಿಸಿಕೆ) ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಗಳೊಂದಿಗಿನ ಮೈತ್ರಿ ಅಖಂಡವಾಗಿತ್ತು. ಅವರು ಎಐಎಡಿಎಂಕೆ ಮತ್ತು ಅದರ ಮಿತ್ರ ಭಾರತೀಯ ಭಾರತೀಯ ಪಕ್ಷ ವಿರುದ್ಧ ಒಂದೇ ಧ್ವನಿಯಲ್ಲಿ ಮಾತನಾಡಿದರು.

ಆದರೆ ಸೀಟು ಹಂಚಿಕೆ ಮಾತುಕತೆ ಶುರುವಾಗಿ ಐದು ದಿನಗಳ ನಂತರ, ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿವೆ. ಎಲ್ಲವೂ ಸರಿಯಾಗಿಲ್ಲ, ಮತ್ತು ಡಿಎಂಕೆ ಚುನಾವಣಾ ಪ್ರಚಾರ ವ್ಯವಸ್ಥಾಪಕ ಮತ್ತು ರಾಜಕೀಯ ಪ್ರಚಾರ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರೀಗ ಘರ್ಷಣೆಗೆ ಕಾರಣರಾಗಿದ್ದಾರೆ ಎಂದು ಡಿಎಂಕೆಯ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್‌ಗೆ ವರದಿ ಮಾಡಿದೆ

ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಲ್ಲಿ ಕನಿಷ್ಠ 180 ಸ್ಥಾನಗಳಿಂದ ಸ್ಪರ್ಧಿಸಲು ಡಿಎಂಕೆ ಬಯಸಿದೆ. ಉಳಿದ 54 ಸ್ಥಾನಗಳನ್ನು ತಮ್ಮ ಮೈತ್ರಿ ಪಾಲುದಾರರಿಗೆ ಬಿಡಲು ಸಿದ್ಧವಿದೆ. 30 ಸ್ಥಾನಗಳನ್ನು ಕಾಂಗ್ರೆಸ್ ಕೇಳಿದ್ದರೆ, ವಿಸಿಕೆ, ಸಿಪಿಐ, ಸಿಪಿಐ (ಎಂ) ಮತ್ತು ಐಯುಎಂಎಲ್, ಎಲ್ಲರೂ ತಲಾ 10 ಸ್ಥಾನಗಳನ್ನು ಕೇಳಿದ್ದರು. ಡಿಎಂಕೆ ಬಿಟ್ಟು ಕೊಡಲಿರುವ 54 ಸೀಟುಗಳಲ್ಲಿ ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವುದು ಸಾಧ್ಯವಿಲ್ಲ. ಈಗಾಗಲೇ, ವಿಸಿಕೆ ಮತ್ತು ಸಿಪಿಐ ತಲಾ ಆರು ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿವೆ. ಸಿಪಿಐ (ಎಂ) ಐದು ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಮತ್ತು ಕಾಂಗ್ರೆಸ್‌ಗೆ ಕೇವಲ 18 ಅಥವಾ ಸ್ಥಾನಗಳ ಆಫರ್ ನೀಡಲಾಗಿದೆ. ಐಯುಎಂಎಲ್ ನಾಲ್ಕು ಸ್ಥಾನಗಳನ್ನು ಪಡೆಯಬಹುದು.

ಡಿಎಂಕೆಯ ಈ ಕಠಿಣ ಸಮಾಲೋಚನೆ ಮತ್ತು 180ರಲ್ಲಿ ಸ್ಪರ್ಧಿಸುವ ನಿರ್ಧಾರಕ್ಕೆ ಪ್ರಶಾಂತ್ ಕಿಶೋರ್ ತಂಡದ ಸಲಹೆಗಳೇ ಕಾರಣ ಎನ್ನಲಾಗಿದೆ. ಪ್ರಶಾಂತ್ ತಂಡ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ.

180 ಸ್ಥಾನಗಳಿಗೆ ಪಟ್ಟು ಏಕೆ?

ಮೂಲಗಳ ಪ್ರಕಾರ, ಕನಿಷ್ಠ 180 ಸ್ಥಾನಗಳಲ್ಲಿ ಸ್ಪರ್ಧಿಸುವ ಡಿಎಂಕೆ ನಿರ್ಧಾರಕ್ಕೆ ಕಾರಣ: ಕಡಿಮೆ ಸೀಟುಗಳನ್ನು ಗೆದ್ದರೆ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ನಡೆಸಬಹುದಾದ ಆಪರೇಷನ್ ಕಮಲದ ಭೀತಿ ಎನ್ನಲಾಗಿದೆ. ಮೈತ್ರಿ ಪಕ್ಷದ ಯಾರಾದರೂ ಬಿಜೆಪಿಯೆಡೆಗೆ ವಾಲಿದರೆ ಕಷ್ಟ ಎಂಬುದನ್ನು ಪ್ರಶಾಂತ್ ಕಿಶೋರ್ ಡಿಎಂಕೆಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಅಸೆಂಬ್ಲಿಯಲ್ಲಿ ಬಹುಮತ ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಡಿಎಂಕೆ ಹೊರಹೊಮ್ಮುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶವನ್ನು ಡಿಎಂಕೆ ಪ್ರಚಾರ ತಂತ್ರಜ್ಞ ಹೊಂದಿದ್ದಾರೆ.. ಆದರೆ ಮೈತ್ರಿಕೂಟದ ಒಟ್ಟು ಶಕ್ತಿಯನ್ನು ಏಕೆ ಅವಲಂಬಿಸಬಾರದು? ಎಂಬ ಪ್ರಶ್ನೆ ಏಳುತ್ತದೆ.

“ಮೈತ್ರಿಕೂಟದ ಭಾಗವಾಗಿರುವ ಶಾಸಕರನ್ನು ಬೇಟೆಯಾಡಲು ಬಿಜೆಪಿ ಪ್ರಯತ್ನಿಸುತ್ತದೆ ಎಂದು ಡಿಎಂಕೆ ಆತಂಕ ವ್ಯಕ್ತಪಡಿಸಿದೆ. ಇದನ್ನು ತಡೆಗಟ್ಟಲು, ಡಿಎಂಕೆ ಸ್ವಂತವಾಗಿ ಬಹುಮತವನ್ನು ಗಳಿಸಿದ ಪಕ್ಷವಾಗಿ ಹೊರಹೊಮ್ಮಲು ಬಯಸಿದೆ” ಎಂದು ಡಿಎಂಕೆ ಮೈತ್ರಿ ಮಾತುಕತೆಗಳ ಬಗ್ಗೆ ತಿಳಿದಿರುವ ತಮಿಳುನಾಡಿನ ರಾಜಕೀಯ ಮುಖಂಡರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. ಡಿಎಂಕೆ ಆರಾಮದಾಯಕವಾಗಿ ಬಹುಮತ ಪಡೆಯಲಿದೆ ಎಂದು ಅವರು ಹೇಳಿದರು.

ಇತರ ರಾಜ್ಯಗಳಲ್ಲಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹಾರುತ್ತಲೇ ಇದ್ದಾರೆ. ಹೀಗಾಗಿ ಕಾಂಗ್ರೆಸ್ ಅನ್ನು ಅವಲಂಬಿಸಬೇಡಿ ಎಂದು ಪ್ರಶಾಂತ್ ಕಿಶೋರ್ ಡಿಎಂಕೆಗೆ ಸಲಹೆ ನೀಡಿದ್ದಾರೆ ಎಂದು ಡಿಎಂಕೆ ಹತ್ತಿರದ ಮೂಲವೊಂದು ತಿಳಿಸಿದೆ.

“ಕಾಂಗ್ರೆಸ್‌ನ ಪ್ರಮಾಣವು ಹೆಚ್ಚಾದರೆ ಮತ್ತು ಡಿಎಂಕೆ ಮೈತ್ರಿಕೂಟ 140 ಸ್ಥಾನಗಳ ಹತ್ತಿರದಲ್ಲಿದ್ದರೆ, ಕಾಂಗ್ರೆಸ್ ಸೇರಿ ಮಿತ್ರಪಕ್ಷಗಳ ಹಲವರು ಪಕ್ಷಾಂತರಗೊಂಡರೆ, ಸರ್ಕಾರ ರಚಿಸುವುದು ಕಷ್ಟವಾಗುತ್ತದೆ. ಎಂಬ ಲೆಕ್ಕಾಚಾರ ಈಗ ಡಿಎಂಕೆಯಲ್ಲಿ ನಡೆಯುತ್ತಿದೆ.

2014 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದಾಗಿನಿಂದ, ಕಾಂಗ್ರೆಸ್ ಸ್ಥಿರವಾದ ಪಕ್ಷಾಂತರಗಳನ್ನು ಕಂಡಿದೆ ಮತ್ತು ಅದರ ಉನ್ನತ ನಾಯಕರೂ ಕೂಡ ಉತ್ತಮ ರಾಜಕೀಯ ಭವಿಷ್ಯದ ಹುಡುಕಾಟದಲ್ಲಿ ಬಿಜೆಪಿಗೆ ತೆರಳಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಕಾಂಗ್ರೆಸ್ 2017 ರಲ್ಲಿ ಗೋವಾ ಮತ್ತು ಮಣಿಪುರದಲ್ಲಿ ಮತ್ತು 2020 ರಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಪಕ್ಷಾಂತರಗಳನ್ನು ಕಂಡಿದೆ. ಕಾಂಗ್ರೆಸ್ ಜೊತೆ ಸಡಿಲು ನಿಲುವು ಅನುಸರಿಸಿ ರಿಸ್ಕ್ ತೆಗೆದುಕೊಳ್ಳದಂತೆ ಪ್ರಶಾಂತ್ ರಾಜಕೀಯ ಕಾರ್ಯತಂತ್ರ ತಂಡವು ಪಕ್ಷದ ನಾಯಕತ್ವವನ್ನು ಕೇಳಿದೆ.

ಡಿಎಂಕೆ ತನ್ನದೇ ಆದ ಕನಿಷ್ಠ 150 ಸ್ಥಾನಗಳನ್ನು ಗೆಲ್ಲಲು ಕನಿಷ್ಠ 180 ಸ್ಥಾನಗಳಲ್ಲಿ ಸ್ಪರ್ಧಿಸಬೇಕು ಎಂದು ನಂಬಿದೆ.

ಕಾಂಗ್ರೆಸ್ ಕಳಪೆ ಸಾಧನೆ

ಡಿಎಂಕೆ ಕಠಿಣ ನಿಲುವು ತಾಳಲು, 2016 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಳಪೆ ಸಾಧನೆಯೂ ಕಾರಣವಾಗಿದೆ. ಪಕ್ಷವು 40 ಸ್ಥಾನಗಳಲ್ಲಿ ಸ್ಪರ್ಧಿಸಿ, ಕೇವಲ ಎಂಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಡಿಎಂಕೆ 89 ಗೆದ್ದಿದೆ. ರಾಜ್ಯದಲ್ಲಿ ಎರಡನೇ ಬಾರಿಗೆ ಸರ್ಕಾರ ರಚಿಸಿದ ಎಐಎಡಿಎಂಕೆ 134 ಸ್ಥಾನಗಳನ್ನು ಗೆದ್ದಿತ್ತು.

ಎಬಿಪಿ ಸಿ-ವೋಟರ್ ಸಮೀಕ್ಷೆಯು ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿ ಗೆಲ್ಲುತ್ತದೆ ಎಂದು ಅಂದಾಜಿಸಿದ ನಂತರ, ಪಕ್ಷವು ದುರ್ಬಲ ಮಿತ್ರಪಕ್ಷವನ್ನು ಅವಲಂಬಿಸಲು ಬಯಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. “ರಾಹುಲ್ ಗಾಂಧಿಯವರ ಇತ್ತೀಚಿನ ಭೇಟಿಯು ಕಾಂಗ್ರೆಸ್ ಅಭಿಯಾನವನ್ನು ಹೆಚ್ಚಿಸಿದೆ” ಎಂಬುದು ಡಿಎಂಕೆಯನ್ನು ಮೆಚ್ಚಿಸಿದಂತೆ ಕಾಣುತ್ತಿಲ್ಲ. ‘ಯಾವುದೇ ಡಿಎಂಕೆ ನಾಯಕರು ಈ ಅಭಿಯಾನಗಳಿಗೆ ಹಾಜರಾಗಿಲ್ಲ” ಎಂದು ರಾಜ್ಯ ಕಾಂಗ್ರೆಸ್ ಮೂಲವೊಂದು ತಿಳಿಸಿದೆ. ಕಾಂಗ್ರೆಸ್ ಪಕ್ಷವು 2019 ರ ಲೋಕಸಭಾ ಚುನಾವಣೆಯಲ್ಲಿ ಎಂಟು ಸ್ಥಾನಗಳನ್ನು ಗೆದ್ದಿದೆ.

ಕಿಶೋರ್ ಪ್ರಚಾರ ತಂತ್ರ ತಂಡವು, ಮೈತ್ರಿಕೂಟವನ್ನು ಪ್ರಬಲ ಪಕ್ಷವು (ಅಂದರೆ ಡಿಎಂಕೆ) ನಿಗದಿಪಡಿಸಿದ ಷರತ್ತುಗಳ ಮೇಲೆ ರೂಪಿಸಬೇಕು ಎಂದು ಸೂಚಿಸಿದೆ.

“ಬಿಜೆಪಿಯನ್ನು ವಿರೋಧಿಸುವ ನಾವೆಲ್ಲರೂ ಒಂದೇ ಶಕ್ತಿಯ ಭಾಗವಾಗಿದ್ದೇವೆ ಎಂಬುದನ್ನು ಡಿಎಂಕೆ ಮರೆತಿದೆ” ಎಂದು ಸ್ಥಾನ ಹಂಚಿಕೆ ಮಾತುಕತೆಗೆ ಹಾಜರಾದ ನಾಯಕರೊಬ್ಬರು ಹೇಳಿದರು. ಡಿಎಂಕೆ ಅತಿಯಾದ ಆತ್ಮವಿಶ್ವಾಸ ಹೊಂದಿದ್ದರೆ, ಅದು ಮೈತ್ರಿಕೂಟದ ಆಂತರಿಕ ಚಲನಶೀಲತೆಗೆ ಹಾನಿಯಾಗಬಹುದು, ಈ ಮಧ್ಯೆ ಕಾಂಗ್ರೆಸ್ ನಾಯಕತ್ವವು “ಮಾತುಕತೆಯಲ್ಲಿ ಅವಮಾನ” ಎಂದು ಭಾವಿಸಿದೆ ಎಂದು ಆ ನಾಯಕ ಹೇಳಿದರು.

ತೋರಿಕೆಯಲ್ಲಿ ಬಿಗಿಯಾಗಿ ಕಾಣುತ್ತಿರುವ ಡಿಎಂಕೆ ತನ್ನ ಶಾಸಕ ಅಭ್ಯರ್ಥಿಗಳ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದೆ ಎಂದು ಅದು ನಂಬಿದೆ. “ಪಕ್ಷವು ತನ್ನ ಶಾಸಕರಾರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಖಚಿತವಾಗಿ ನಂಬಿದೆ. ಡಿಎಂಕೆ ನಾಯಕರು ಯಾರಾದರೂ ಬಿಜೆಪಿಯನ್ನು ಬೆಂಬಲಿಸಿದರೆ ರಾಜಕೀಯದಲ್ಲಿ ಬದುಕಲು ಸಾಧ್ಯವಿಲ್ಲ ಎಂದು ದ್ರಾವಿಡ ಪಕ್ಷ ಭಾವಿಸುತ್ತದೆ ”ಎಂದು ಡಿಎಂಕೆಗೆ ಹತ್ತಿರವಾದ ಮೂಲವೊಂದು ತಿಳಿಸಿದೆ.

ಅಂತಹ ಯಾವುದೇ ಪಕ್ಷಾಂತರಗಳ ಸಂಭವನೀಯತೆಯನ್ನು ಕಡಿಮೆ ಮಾಡಲು ಉತ್ತಮ ಸ್ಥಾನ ಗಳಿಕೆ ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ. “ನಾವು ಉತ್ತಮ ಸಂಖ್ಯೆಗಳನ್ನು ಪಡೆದರೆ, ಸರ್ಕಾರದ ಭವಿಷ್ಯವು ಸುರಕ್ಷಿತವಾಗಿರುತ್ತದೆ. ಉತ್ತಮ ಬಹುಮತವು ಯಾವುದೇ ಪಕ್ಷವನ್ನು ಉಳಿಸುತ್ತದೆ” ಎಂದು ಮೂಲ ಲೆಕ್ಕಾಚಾರ ಮಾಡಿದೆ.

ಮಾತುಕತೆ ಎರಡು ದಿನಗಳಲ್ಲಿ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. “ಕಾಂಗ್ರೆಸ್ ಈಗ ಕನಿಷ್ಠ 20 ಸ್ಥಾನಗಳನ್ನು ಕೇಳುತ್ತಿದೆ. ಇದು ಕಳೆದ ಚುನಾವಣೆಯಲ್ಲಿ ಸಿಕ್ಕಿದ್ದಕ್ಕಿಂತ 20 ಸ್ಥಾನಗಳು ಕಡಿಮೆ ಮತ್ತು ಈ ಚುನಾವಣೆಗೆ ಅದು ಕೇಳಿದ್ದಕ್ಕಿಂತ 10 ಕಡಿಮೆ ಇದೆ ” ಎಂದು ಸೀಟು ಹಂಚಿಕೆ ಮಾತುಕತೆ ತಿಳಿದ ರಾಜಕೀಯ ನಾಯಕ ಹೇಳಿದರು.

ಕಾಂಗ್ರೆಸ್ ಸಂಕಟವು ತನ್ನ ರಾಷ್ಟ್ರೀಯ ಎದುರಾಳಿ ಬಿಜೆಪಿಗಿಂತ ಕಠಿಣವಾಗಿದೆ. ಬಿಜೆಪಿ ಈಗಾಗಲೇ ಎಐಎಡಿಎಂಕೆ ಮೈತ್ರಿಕೂಟದಲ್ಲಿ 20 ಸ್ಥಾನಗಳನ್ನು ಪಡೆದುಕೊಂಡಿದೆ. ಅದರ ಪಾಲಿಗೆ ಅದೇ ದೊಡ್ಡದು. ಚುನಾವಣೆಯ ನಂತರ ಡಿಎಂಕೆ ಎತ್ತರವಾಗಿ ನಿಲ್ಲುತ್ತದೆಯೇ? ಅದರ ಕಠಿಣ ಚೌಕಾಶಿ ಸಮರ್ಥನೀಯವೆಂದು ತೋರುತ್ತದೆಯೇ? ಅಥವಾ ಮಿತ್ರಪಕ್ಷಗಳು ‘ನಾವು ನಿಮಗೆ ಮೊದಲೇ ಹೇಳಿದ್ದೇವು’ ಎಂದು ಹೇಳಲು ಅವಕಾಶ ಸಿಗಲಿದೆಯೇ? ಎಲ್ಲದಕ್ಕೂ ಮೇ 02ರವರೆಗೆ ಕಾಯಬೇಕಿದೆ.

ಕೃಪೆ: ದಿ ಕ್ವಿಂಟ್

ಅನುವಾದ: ಮಲ್ಲನಗೌಡರ್ ಪಿ.ಕೆ


ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘಿಸಿದ ಅಮಿತ್ ಶಾ ವಿರುದ್ಧ ಕ್ರಮವೇಕಿಲ್ಲ: ನೆಟ್ಟಿಗರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...