Homeಮುಖಪುಟಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

ಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ನಡೆಸಿದ ಮಹಾ ನೇಮಕಾತಿ ಚಾಲನೆಯಲ್ಲಿ ಸಂಭವಿಸಿದ ಬಹು ಕೋಟಿ ಹಗರಣದ ಬಗ್ಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಕುರಿತು ತನಿಖೆ ಮಾಡಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಲೋಚಿಸುತ್ತಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 25 ರಂದು, ದಿ ವೈರ್, 2019 ರಲ್ಲಿ ನಡೆದ ಸರ್ಕರಿ ನೇಮಕಾತಿಯಲ್ಲಿ ಮಹಾ ಅಕ್ರಮ ನಡೆದಿದೆ ಎಂದು ತನಿಖಾ ವರದಿ ಮಾಡಿತ್ತು. 11 ವಿಭಾಗಗಳಲ್ಲಿ ವರ್ಗ ’ಸಿ’ ಮತ್ತು ವರ್ಗ ’ಡಿ’ ಹುದ್ದೆಗಳನ್ನು ಭರ್ತಿ ಮಾಡಬೇಕಾಗುವ ಅಕ್ರಮ ನೇಮಕಾತಿ ಮಾಡಿಕೊಳ್ಳಲಾಗಿತ್ತು.

ನಿನ್ನೆ ಮಾರ್ಚ್ 5 ರಂದು ಮಹಾರಾಷ್ಟ್ರ ರಾಜ್ಯ ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ದಿ ವೈರ್‌ನ ವೀಕ್ಷಣೆಯಂತೆಯೇ, ಪಟೋಲೆ ಕೂಡ ಹಗರಣದ ವ್ಯಾಪ್ತಿಯನ್ನು ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯ ಹಗರಣದೊಂದಿಗೆ ಹೋಲಿಸಿದ್ದಾರೆ. ಇದನ್ನು ಸಾಮಾನ್ಯವಾಗಿ ವ್ಯಾಪಮ್ ಹಗರಣ ಎಂದು ಕರೆಯಲಾಗುತ್ತದೆ. ಈ ಮೆಗಾಭರ್ತಿ ಘೋಟಾಲಾ (ಮೆಗಾ ನೇಮಕಾತಿ ಹಗರಣ) ಮಧ್ಯಪ್ರದೇಶದಲ್ಲಿ ಪತ್ತೆಯಾದ ವ್ಯಾಪಂ ಹಗರಣಕ್ಕಿಂತ ದೊಡ್ಡದಾಗಿದೆ. ಮಹಾಪರಿಷ್ಠರ ಹೆಸರಿನಲ್ಲಿ, ಹಿಂದಿನ ಸರ್ಕಾರವು ಹಲವಾರು ಸಾವಿರ ಆಕಾಂಕ್ಷಿಗಳ ಜೀವನ ಮತ್ತು ಕನಸುಗಳನ್ನು ಹಾಳು ಮಾಡಿದೆ ಎಂದು ಪಟೋಲೆ ಸದನದಲ್ಲಿ ಹೇಳಿದರು.

2017 ಮತ್ತು 2019 ರ ನಡುವೆ ರಾಜ್ಯದ 25 ಇಲಾಖೆಗಳಲ್ಲಿ 30,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ 35.5 ಲಕ್ಷ ಆಕಾಂಕ್ಷಿಗಳ ಭವಿಷ್ಯವನ್ನು ಮಹಾಪರೀಕ್ಷಾ ಪೋರ್ಟಲ್ ನಿರ್ಧರಿಸಬೇಕಿತ್ತು. ವ್ಯಾಪಂ ಹಗರಣದಂತೆ, ಮಹಾರಾಷ್ಟ್ರದಲ್ಲೂ ಸಾವಿರಾರು ಅಭ್ಯರ್ಥಿಗಳು ನೇಮಕಾತಿ ಅಕ್ರಮವನ್ನು ಆರೋಪಿಸಿದ್ದರು. ಮಹಾ-ಐಟಿ ಇಲಾಖೆಯು ಖಾಸಗಿ ಕಂಪನಿಗಳಾದ ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಜೊತೆ ಒಪ್ಪಂದ ಮಾಡಿಕೊಂಡು ಅಕ್ರಮ ಎಸಗಿತ್ತು ಎಂದು ಆರೋಪ ಮಾಡಲಾಗಿತ್ತು.

ವೈರ್‌ನ ವರದಿಯು 2019 ರಲ್ಲಿ ವಿವಿಧ ಇಲಾಖೆಗಳಲ್ಲಿ ’ಸಿ’ ಮತ್ತು ಕ್ಲಾಸ್ ’ಡಿ’ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿದ ವ್ಯವಸ್ಥಿತ ಜಾಲವನ್ನು ಬಹಿರಂಗಪಡಿಸಿತ್ತು. ಪರೀಕ್ಷೆಗಳನ್ನು ಮಹಾರಾಷ್ಟ್ರ ಪೋರ್ಟಲ್ ನಿರ್ವಹಿಸಿದ್ದು, ಇದನ್ನು ಮಹಾರಾಷ್ಟ್ರ ಮಾಹಿತಿ ತಂತ್ರಜ್ಞಾನ ನಿಗಮ ನಿರ್ವಹಿಸಿತ್ತು.

ಇದನ್ನೂ ಓದಿ: ‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

ಕಳೆದ ವರ್ಷ ಮೇ ತಿಂಗಳಲ್ಲಿ ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಹುಲ್ ದ್ವಿವೇದಿ ತಮ್ಮ ಜಿಲ್ಲೆಯಲ್ಲಿ ನಡೆಸಿದ ಪರೀಕ್ಷೆಗಳಲ್ಲಿನ ವ್ಯತ್ಯಾಸಗಳನ್ನು ಬಹಿರಂಗಪಡಿಸುವ 12 ಪುಟಗಳ ಭೀಕರ ವರದಿಯನ್ನು ಬರೆದಿದ್ದರು. ಅಹ್ಮದ್‌ನಗರ ಜಿಲ್ಲೆಯಲ್ಲಿ ಕನಿಷ್ಟ 14 ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಸಂಶಯಾಸ್ಪದರು ಎಂದು ಕಂಡುಬಂದಿದೆ. ಹಲವಾರು ನಕಲಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ದ್ವಿವೇದಿ ಕಂಡುಹಿಡಿದಿದ್ದರು.

ಆಳಕ್ಕೆ ಇಳಿದು ನೋಡಿದಾಗ, ದಿ ವೈರ್‌ನ ತನಿಖೆಯು ವಂಚನೆಯನ್ನು ಅಹ್ಮದ್‌ನಗರಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಆದರೆ ಇದು ವ್ಯಾಪಕ ಹಗರಣವಾಗಿದೆ, ಈ ರಾಜ್ಯ ನೇಮಕಾತಿ ಪರೀಕ್ಷೆಗಳನ್ನು ನಡೆಸಿದ ಎಲ್ಲಾ 34 ಜಿಲ್ಲೆಗಳಲ್ಲೂ ಅಕ್ರಮ ನಡೆದಿದೆ. ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ಹಿಡಿದು, ಭಾವಚಿತ್ರಗಳು ಮತ್ತು ಸಹಿಗಳಲ್ಲಿ ಹೊಂದಾಣಿಕೆಯಾಗದ ನೂರಾರು ಪ್ರಕರಣಗಳು ಬಯಲಿಗೆ ಬಂದಿದ್ದವು. ಪರೀಕ್ಷಾ ಹಾಲ್‌ಗೆ ಪ್ರವೇಶಿಸುವಾಗ ನೂರಾರು ಅಭ್ಯರ್ಥಿಗಳು ಪತ್ತೇದಾರಿ ಕ್ಯಾಮೆರಾಗಳು ಮತ್ತು ಮೈಕ್ರೊಫೋನ್‌ಗಳನ್ನು ತೆಗೆದುಕೊಂಡು ಹೋಗಿದ್ದರು. ಎಂದು ವೈರ್ ಒತ್ತೆ ಹಚ್ಚಿತ್ತು.

ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಎಂಬ ಎರಡು ಕಂಪನಿಗಳ ಗೋಲ್‌ಮಾಲ್ ಈಗ ಮತ್ತೆ ಸದಸನದಲ್ಲಿ ಚರ್ಚೆಗೆ ಬಂದಿದೆ. ಜೊತೆಗೆ ಮಹಾ-ಐಟಿ ಇಲಾಖೆಯ ಮಾಜಿ ನಾಮಿನಿ ನಿರ್ದೇಶಕ ಕೌಸ್ತುಬ್ ಧಾವ್ಸೆ ಪಾತ್ರ ಕೂಡ ಚರ್ಚೆಗೆ ಬಂದಿದೆ. ಫಡ್ನವೀಸ್ ಅವರ ನಿಕಟವರ್ತಿಯಾಗಿದ್ದ ಧಾವ್ಸೆ ಅವರು ವಿಶೇಷ ಕರ್ತವ್ಯದ ಅಧಿಕಾರಿ (ಒಎಸ್ಡಿ) ಆಗಿದ್ದರು ಮತ್ತು ರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡ ಕೂಡಲೇ ಕಳೆದ ಡಿಸೆಂಬರ್‌ನಲ್ಲಿ ಮಹಾ-ಐಟಿ ನಿರ್ದೇಶಕರಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾದ ನಟ ದರ್ಶನ್

ಧಾವ್ಸೆಗೆ ಜಂಟಿ ಕಾರ್ಯದರ್ಶಿ ಸ್ಥಾನಮಾನ ನೀಡಲಾಗಿತ್ತು (ಅವರು ಮುಖ್ಯಮಂತ್ರಿಗೆ ವಿಶೇಷ ಕರ್ತವ್ಯದಲ್ಲಿದ್ದ ಅಧಿಕಾರಿಯಾಗಿದ್ದರು ಮತ್ತು ಈಗ ಪ್ರತಿಪಕ್ಷದ ನಾಯಕರಾಗಿರುವ ಫಡ್ನವೀಸ್ ಅವರ ಮುಖ್ಯ ನೀತಿ ಸಲಹೆಗಾರರಾಗಿದ್ದಾರೆ) ಮತ್ತು ಅವರಿಗೆ ಪಕ್ಷದ ವಾರ್‌ ರೂಮ್ ಉಸ್ತುವಾರಿ ವಹಿಸಲಾಗಿತ್ತು.

ದಿ ವೈರ್‌ನ ವರದಿಯನ್ನು ಅನುಸರಿಸಿ, ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ತಮ್ಮ ಕಚೇರಿ ಕುರಿತ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವುದಾಗಿ ಘೋಷಿಸಿದ್ದರು. ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಶಾಸಕ ರೋಹಿತ್ ಪವಾರ್ ಕೂಡ ತಕ್ಷಣ ಕ್ರಮ ಕೈಗೊಳ್ಳಲು ಕೋರಿದ್ದರು. ಆದರೆ ಅಂತಿಮವಾಗಿ ಯಾವುದೇ ಕ್ರಮವನ್ನು ಪ್ರಾರಂಭಿಸಲಿಲ್ಲ.

ಮಾರ್ಚ್ 5 ರಂದು, ಮಾಧ್ಯಮಗಳಲ್ಲಿ ಇದೇ ರೀತಿಯ ವರದಿಗಳನ್ನು ಅನುಸರಿಸಿ, ಈ ವಿಷಯವು ಮತ್ತೆ ಗಮನಕ್ಕೆ ಬಂದಿದೆ. ಈ ಪರೀಕ್ಷೆಗಳು ಸಾಮಾನ್ಯ ಆಡಳಿತ ಸಚಿವಾಲಯ (ಜಿಎಡಿ) ನಿರ್ವಹಿಸುವ ಆಡಳಿತ ಸೇವೆಗಳ ಒಂದು ಭಾಗವಾಗಿದೆ. ಇತರ ಖಾತೆಗಳ ಜೊತೆಗೆ, ಫಡ್ನವೀಸ್ ಜಿಎಡಿಯನ್ನು ನಿಭಾಯಿಸಿದ್ದರು ಮತ್ತು ರಾಜ್ಯದಲ್ಲಿ ಮಹಾಭರ್ತಿ (ಮೆಗಾ ನೇಮಕಾತಿ) ಅಭಿಯಾನವನ್ನು ನೇರವಾಗಿ ಮೇಲ್ವಿಚಾರಣೆ ಮಾಡಿದ್ದರು. ಈಗ ಈ ಬಂಡವಾಳವು ಈಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಇದೆ. ಈಗ ಹಗರಣದ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...