Homeಮುಖಪುಟಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

- Advertisement -
- Advertisement -

ಮುಂಬರುವ ಎರಡು ತಿಂಗಳಲ್ಲಿ ಹರಡಿರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪೂರ್ಣ ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಕಟಿಸಿದ್ದಾರೆ. 294 ಸ್ಥಾನಗಳಲ್ಲಿ ಟಿಎಂಸಿ 291 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮೂರು ಸ್ಥಾನಗಳನ್ನು ಮೈತ್ರಿ ಪಾಲುದಾರ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಗೆ ಬಿಟ್ಟಿದೆ.

ಬ್ಯಾನರ್ಜಿ ನಂದಿಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈ ಬಾರಿ ಭಬಾನಿಪುರ ಸ್ಥಾನವನ್ನು ಪಕ್ಷದ ಮುಖಂಡ ಶೋಭಂದೇಬ್ ಚಟ್ಟೋಪಾಧ್ಯಾಯ ಅವರಿಗೆ ಬಿಟ್ಟು ಕೊಟ್ಟಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯಲ್ಲಿ, ಮಹಿಳಾ ಅಭ್ಯರ್ಥಿಗಳ ಮೇಲೆ ವಿಶೇಷ ಗಮನಹರಿಸಿ ಸಮಾಜದ ಎಲ್ಲಾ ವರ್ಗಗಳ ನಡುವೆ ಸಮತೋಲನವನ್ನು ಕಂಡುಕೊಳ್ಳಲು ಬ್ಯಾನರ್ಜಿ ಪ್ರಯತ್ನಿಸಿದ್ದಾರೆ. ಈ ಪಟ್ಟಿಯಲ್ಲಿ 50 ಮಹಿಳಾ ಅಭ್ಯರ್ಥಿಗಳು (ಒಟ್ಟು ಅಭ್ಯರ್ಥಿಗಳಲ್ಲಿ 17%), 79 ಎಸ್‌ಸಿ ಅಭ್ಯರ್ಥಿಗಳು (27%), 42 ಮುಸ್ಲಿಂ ಅಭ್ಯರ್ಥಿಗಳು (14%) ಮತ್ತು 17 ಎಸ್‌ಟಿ ಅಭ್ಯರ್ಥಿಗಳು (5%) ಸೇರಿದ್ದಾರೆ. ಈ ಪಟ್ಟಿಯಲ್ಲಿ ನಟರು, ಗಾಯಕರು, ವೈದ್ಯರು, ಕ್ರೀಡಾ ವ್ಯಕ್ತಿಗಳು, ಬರಹಗಾರರು, ಮಾಜಿ ಐಪಿಎಸ್ ಅಧಿಕಾರಿಗಳು ಮತ್ತು ಪ್ರಭಾವಿ ಮುಖಂಡರು ಸೇರಿದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟ ನಾಯಕರನ್ನು ಹೊರಗಿಡಲಾಗಿದೆ.

160 ಸ್ಥಾನಗಳಲ್ಲಿ ಹೊಸ ಅಭ್ಯರ್ಥಿಗಳಿದ್ದರೆ, ಪಟ್ಟಿಯಲ್ಲಿ 114 ಹೊಸ ಮುಖಗಳಿವೆ. ಅದೇ ಸಮಯದಲ್ಲಿ, ಐವರು ಮಂತ್ರಿಗಳು (ಅಮಿತ್ ಮಿತ್ರ, ಬಚು ಹನ್ಸ್ಡಾ, ರತ್ನ ಘೋಷ್ ಕಾರ್, ರೆಝಾಕ್ ಮೊಲ್ಲಾ ಮತ್ತು ಪೂರ್ಣೇಂದು ಬೋಸ್) ಸೇರಿದಂತೆ 28 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ.

ಅಭ್ಯರ್ಥಿಗಳ ಪಟ್ಟಿಯ ಪ್ರಮುಖಾಂಶಗಳು

ಮಹಿಳೆಯರ ಮೇಲೆ ಕೇಂದ್ರೀಕರಣ:

ಪಕ್ಷದ ಚುನಾವಣಾ ಘೋಷಣೆಯಾದ ‘ಬಾಂಗ್ಲಾ ನಿಜರ್ ಮೆಯೆಕೆ ಚಾಯ್’ (ಬಂಗಾಳ ತನ್ನ ಸ್ವಂತ ಮಗಳನ್ನು ಬಯಸಿದೆ) ಅನುಸರಿಸಿ ಟಿಎಂಸಿ ಈ ಬಾರಿ 50 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ವಿಧಾನಸಭಾ ಚುನಾವಣೆಗಿಂತ ಐದು ಹೆಚ್ಚು. ಬಿಜೆಪಿಯನ್ನು ಎದುರಿಸಲು ಪಕ್ಷವು ಮಹಿಳಾ ಮತದಾರರನ್ನು ತಲುಪಲು ಪ್ರಯತ್ನಿಸುತ್ತಿದೆ ಎಂಬುದು ಈ ಕ್ರಮದಿಂದ ಸ್ಪಷ್ಟವಾಗಿದೆ. ಟಿಎಂಸಿ ಮಾಜಿ ಮುಖಂಡ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಖಾನ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅದೇ ಸಮಯದಲ್ಲಿ, ಮಾಜಿ ರಾಜ್ಯ ಸಚಿವರಾದ ಬಿಜೆಪಿ ಮುಖಂಡ ಸೋವನ್ ಚಟರ್ಜಿಯವರ ಪತ್ನಿ ರತ್ನ ಚಟರ್ಜಿಗೆ ಸೋವನ್ ಅವರ ಕ್ಷೇತ್ರದ ಬೆಹಲಾ ಪುರ್ಬಾದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ಎಸ್‌ಸಿ / ಎಸ್‌ಟಿ ಸಮುದಾಯಗಳಿಗೆ ಒತ್ತು:

ಈ ಬಾರಿ ಟಿಎಂಸಿ ಅಭೂತಪೂರ್ವ 79 ಎಸ್‌ಸಿ ಅಭ್ಯರ್ಥಿಗಳು ಮತ್ತು 17 ಎಸ್‌ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ಚುನಾವಣೆಯಲ್ಲಿ 68 ಎಸ್‌ಸಿ ಮತ್ತು 16 ಎಸ್‌ಟಿ ಅಭ್ಯರ್ಥಿಗಳನ್ನು ಗಮನಿಸಿದಾಗ ಇದು ಗಮನಾರ್ಹ ಏರಿಕೆ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಸಿಗೆ 68 ಕ್ಷೇತ್ರಗಳು ಮತ್ತು ಎಸ್‌ಟಿಗಳಿಗೆ 16 ಕ್ಷೇತ್ರಗಳನ್ನು ಕಾಯ್ದಿರಿಸಲಾಗಿದೆ. ಈ ಕ್ರಮವು ಬಾಂಗ್ಲಾದೇಶದಲ್ಲಿ ತನ್ನ ಮೂಲವನ್ನು ಗುರುತಿಸುವ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿಷ್ಠೆಯನ್ನು ಬದಲಾಯಿಸಿದ ನಿರಾಶ್ರಿತರ ಸಮುದಾಯವಾದ ಮಾಟುವಾಸ್ ಸೇರಿದಂತೆ ಎಸ್‌ಸಿ / ಎಸ್‌ಟಿ ಸಮುದಾಯಗಳನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. ಈ ಸಮುದಾಯಗಳ ಸದಸ್ಯರಿಗೆ ಹೆಚ್ಚಿನ ಟಿಕೆಟ್ ನೀಡುವ ಮೂಲಕ, ಮಮತಾ ಬ್ಯಾನರ್ಜಿ ತಮ್ಮ ಪಕ್ಷವನ್ನು ಒಳಗೊಂಡಿದ್ದಾರೆ ಎಂಬ ಸಂದೇಶವನ್ನು ಆ ಸಮುದಾಯಗಳಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ.

ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಕಳಚುವ ಯತ್ನ:

ಟಿಎಂಸಿ ಈ ಬಾರಿ ಕಡಿಮೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2016 ರಲ್ಲಿ, ಪಕ್ಷವು 57 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು, ಆದರೆ ಈ ಬಾರಿ ಅದು 42 ಕ್ಕೆ ಇಳಿದಿದೆ. ಪಕ್ಷದ ಒಳಗಿನವರ ಪ್ರಕಾರ, ಇದು ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಅನ್ನು ಕಳಚುವ ಪ್ರಯತ್ನವಾಗಿದೆ, ವಿರೋಧ ಪಕ್ಷಗಳು ಈ ಟ್ಯಾಗ್ ಬಳಸಿ ಅಪಾದನೆ ಮಾಡುತ್ತ ಬಂದಿದ್ದವು. ಮತ್ತೊಂದೆಡೆ, ಹೆಚ್ಚಿನ ಶೇಕಡಾವಾರು ಹಿಂದಿ ಮಾತನಾಡುವ ಮತದಾರರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಪ್ರತಿಪಕ್ಷಗಳ ಪರವಾಗಿ ಹಿಂದೂ ಮತಗಳ ಧ್ರುವೀಕರಣವನ್ನು ನಿಲ್ಲಿಸಲು ಇದು ಸಹಾಯ ಮಾಡುತ್ತದೆ.

ಆಡಳಿತ ವಿರೋಧವನ್ನು ಎದುರಿಸುವುದು:

ಕುತೂಹಲಕಾರಿಯಾಗಿ, ಟಿಎಂಸಿಯು ಚುನಾವಣೆಯಲ್ಲಿ ಸ್ಪರ್ಧಿಸಲು 114 ಹೊಸ ಮುಖಗಳನ್ನು ಹೊಂದಿದೆ. ಇದಲ್ಲದೆ, 160 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ. ಇದು ಆಡಳಿತ ವಿರೋಧಿ ಅಲೆಯ ಭಯದಿಂದ ತೆಗೆದುಕೊಂಡ ಕ್ರಮವಾಗಿದ್ದು, ಮತದಾರರಿಗೆ ಉತ್ತಮ ಅಭ್ಯರ್ಥಿಗಳನ್ನು ನೀಡಲು ಕಾರಣವಾಗಿದೆ. 2006 ರಲ್ಲಿ, ಹಿಂದಿನ ಎಡಪಂಥೀಯ ಸರ್ಕಾರವು ತನ್ನ ಅಭ್ಯರ್ಥಿಗಳನ್ನು 150 ಸ್ಥಾನಗಳಲ್ಲಿ ಬದಲಾಯಿಸಿತ್ತು, ಇದು ರಾಜ್ಯದ 230 ಸ್ಥಾನಗಳನ್ನು ಗೆಲ್ಲಲು ಎಡಪಂಥಿಯ ಕೂಟಕ್ಕೆ ಸಹಾಯ ಮಾಡಿತ್ತು. ಈಗ ಟಿಎಂಸಿ ಹಳೆಯ ಮತ್ತು ಹೊಸ ನಾಯಕರ ನಡುವೆ ಸಮತೋಲನ ಹೊಂದಲು ಯುವ ಮುಖಗಳನ್ನು ಪಕ್ಷಕ್ಕೆ ತರಲು ಒತ್ತು ನೀಡಿದೆ..

ಸೆಲೆಬ್ರಿಟಿಗಳನ್ನು ಅವಲಂಬಿಸಿ:

2011 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮಮತಾ ಬ್ಯಾನರ್ಜಿ ಯಾವಾಗಲೂ ಬಂಗಾಳಿ ಚಲನಚಿತ್ರೋದ್ಯಮದ ಸದಸ್ಯರಿಗೆ ಟಿಕೆಟ್ ನೀಡಿದ್ದಾರೆ. ಹಿಂದಿನ ಹೆಚ್ಚಿನ ಸಂದರ್ಭಗಳಲ್ಲಿ, ಟಿಎಂಸಿಗೆ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಸ್ಟಾರ್‌ಗಳು ಸಹಾಯ ಮಾಡಿದ್ದಾರೆ. ನಟರಾದ ದೇವ್, ಮೂನ್ ಮೂನ್ ಸೇನ್, ದಿವಂಗತ ನಟ ತಪಸ್ ಪಾಲ್, ಶತಾಬ್ದಿ ರಾಯ್, ಮಿಮಿ ಚಕ್ರವರ್ತಿ, ನುಸ್ರತ್ ಜಹಾನ್, ದೇಬಶ್ರೀ ರಾಯ್ ಮತ್ತು ಇತರರು ಟಿಎಂಸಿ ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಜಯ ಗಳಿಸಿದ್ದರು. ಈ ಬಾರಿ ಕೂಡ ಪಕ್ಷವು ನಟರಾದ ಸೋಹಮ್ ಚಕ್ರವರ್ತಿ, ಸಯಾಂತಿಕಾ ಬ್ಯಾನರ್ಜಿ, ಸಯಾನಿ ಘೋಷ್, ಜೂನ್ ಮಾಲಿಯಾ, ಕೌಶಾನಿ ಬ್ಯಾನರ್ಜಿ, ಕಾಂಚನ್ ಮಲ್ಲಿಕ್, ನಿರ್ದೇಶಕ ರಾಜ್ ಚಕ್ರವರ್ತಿ ಮತ್ತು ಗಾಯಕಿ ಅದಿತಿ ಮುನ್ಶಿ ಅವರನ್ನು ಇದೇ ರೀತಿಯ ಫಲಿತಾಂಶವನ್ನು ನೀಡಲು ಕಣಕ್ಕಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...