Homeಮುಖಪುಟಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

- Advertisement -
- Advertisement -

ಮುಂಬರುವ ಎರಡು ತಿಂಗಳಲ್ಲಿ ಹರಡಿರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪೂರ್ಣ ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಕಟಿಸಿದ್ದಾರೆ. 294 ಸ್ಥಾನಗಳಲ್ಲಿ ಟಿಎಂಸಿ 291 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮೂರು ಸ್ಥಾನಗಳನ್ನು ಮೈತ್ರಿ ಪಾಲುದಾರ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಗೆ ಬಿಟ್ಟಿದೆ.

ಬ್ಯಾನರ್ಜಿ ನಂದಿಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈ ಬಾರಿ ಭಬಾನಿಪುರ ಸ್ಥಾನವನ್ನು ಪಕ್ಷದ ಮುಖಂಡ ಶೋಭಂದೇಬ್ ಚಟ್ಟೋಪಾಧ್ಯಾಯ ಅವರಿಗೆ ಬಿಟ್ಟು ಕೊಟ್ಟಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯಲ್ಲಿ, ಮಹಿಳಾ ಅಭ್ಯರ್ಥಿಗಳ ಮೇಲೆ ವಿಶೇಷ ಗಮನಹರಿಸಿ ಸಮಾಜದ ಎಲ್ಲಾ ವರ್ಗಗಳ ನಡುವೆ ಸಮತೋಲನವನ್ನು ಕಂಡುಕೊಳ್ಳಲು ಬ್ಯಾನರ್ಜಿ ಪ್ರಯತ್ನಿಸಿದ್ದಾರೆ. ಈ ಪಟ್ಟಿಯಲ್ಲಿ 50 ಮಹಿಳಾ ಅಭ್ಯರ್ಥಿಗಳು (ಒಟ್ಟು ಅಭ್ಯರ್ಥಿಗಳಲ್ಲಿ 17%), 79 ಎಸ್‌ಸಿ ಅಭ್ಯರ್ಥಿಗಳು (27%), 42 ಮುಸ್ಲಿಂ ಅಭ್ಯರ್ಥಿಗಳು (14%) ಮತ್ತು 17 ಎಸ್‌ಟಿ ಅಭ್ಯರ್ಥಿಗಳು (5%) ಸೇರಿದ್ದಾರೆ. ಈ ಪಟ್ಟಿಯಲ್ಲಿ ನಟರು, ಗಾಯಕರು, ವೈದ್ಯರು, ಕ್ರೀಡಾ ವ್ಯಕ್ತಿಗಳು, ಬರಹಗಾರರು, ಮಾಜಿ ಐಪಿಎಸ್ ಅಧಿಕಾರಿಗಳು ಮತ್ತು ಪ್ರಭಾವಿ ಮುಖಂಡರು ಸೇರಿದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟ ನಾಯಕರನ್ನು ಹೊರಗಿಡಲಾಗಿದೆ.

160 ಸ್ಥಾನಗಳಲ್ಲಿ ಹೊಸ ಅಭ್ಯರ್ಥಿಗಳಿದ್ದರೆ, ಪಟ್ಟಿಯಲ್ಲಿ 114 ಹೊಸ ಮುಖಗಳಿವೆ. ಅದೇ ಸಮಯದಲ್ಲಿ, ಐವರು ಮಂತ್ರಿಗಳು (ಅಮಿತ್ ಮಿತ್ರ, ಬಚು ಹನ್ಸ್ಡಾ, ರತ್ನ ಘೋಷ್ ಕಾರ್, ರೆಝಾಕ್ ಮೊಲ್ಲಾ ಮತ್ತು ಪೂರ್ಣೇಂದು ಬೋಸ್) ಸೇರಿದಂತೆ 28 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ.

ಅಭ್ಯರ್ಥಿಗಳ ಪಟ್ಟಿಯ ಪ್ರಮುಖಾಂಶಗಳು

ಮಹಿಳೆಯರ ಮೇಲೆ ಕೇಂದ್ರೀಕರಣ:

ಪಕ್ಷದ ಚುನಾವಣಾ ಘೋಷಣೆಯಾದ ‘ಬಾಂಗ್ಲಾ ನಿಜರ್ ಮೆಯೆಕೆ ಚಾಯ್’ (ಬಂಗಾಳ ತನ್ನ ಸ್ವಂತ ಮಗಳನ್ನು ಬಯಸಿದೆ) ಅನುಸರಿಸಿ ಟಿಎಂಸಿ ಈ ಬಾರಿ 50 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ವಿಧಾನಸಭಾ ಚುನಾವಣೆಗಿಂತ ಐದು ಹೆಚ್ಚು. ಬಿಜೆಪಿಯನ್ನು ಎದುರಿಸಲು ಪಕ್ಷವು ಮಹಿಳಾ ಮತದಾರರನ್ನು ತಲುಪಲು ಪ್ರಯತ್ನಿಸುತ್ತಿದೆ ಎಂಬುದು ಈ ಕ್ರಮದಿಂದ ಸ್ಪಷ್ಟವಾಗಿದೆ. ಟಿಎಂಸಿ ಮಾಜಿ ಮುಖಂಡ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಖಾನ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅದೇ ಸಮಯದಲ್ಲಿ, ಮಾಜಿ ರಾಜ್ಯ ಸಚಿವರಾದ ಬಿಜೆಪಿ ಮುಖಂಡ ಸೋವನ್ ಚಟರ್ಜಿಯವರ ಪತ್ನಿ ರತ್ನ ಚಟರ್ಜಿಗೆ ಸೋವನ್ ಅವರ ಕ್ಷೇತ್ರದ ಬೆಹಲಾ ಪುರ್ಬಾದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ಎಸ್‌ಸಿ / ಎಸ್‌ಟಿ ಸಮುದಾಯಗಳಿಗೆ ಒತ್ತು:

ಈ ಬಾರಿ ಟಿಎಂಸಿ ಅಭೂತಪೂರ್ವ 79 ಎಸ್‌ಸಿ ಅಭ್ಯರ್ಥಿಗಳು ಮತ್ತು 17 ಎಸ್‌ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ಚುನಾವಣೆಯಲ್ಲಿ 68 ಎಸ್‌ಸಿ ಮತ್ತು 16 ಎಸ್‌ಟಿ ಅಭ್ಯರ್ಥಿಗಳನ್ನು ಗಮನಿಸಿದಾಗ ಇದು ಗಮನಾರ್ಹ ಏರಿಕೆ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಸಿಗೆ 68 ಕ್ಷೇತ್ರಗಳು ಮತ್ತು ಎಸ್‌ಟಿಗಳಿಗೆ 16 ಕ್ಷೇತ್ರಗಳನ್ನು ಕಾಯ್ದಿರಿಸಲಾಗಿದೆ. ಈ ಕ್ರಮವು ಬಾಂಗ್ಲಾದೇಶದಲ್ಲಿ ತನ್ನ ಮೂಲವನ್ನು ಗುರುತಿಸುವ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿಷ್ಠೆಯನ್ನು ಬದಲಾಯಿಸಿದ ನಿರಾಶ್ರಿತರ ಸಮುದಾಯವಾದ ಮಾಟುವಾಸ್ ಸೇರಿದಂತೆ ಎಸ್‌ಸಿ / ಎಸ್‌ಟಿ ಸಮುದಾಯಗಳನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. ಈ ಸಮುದಾಯಗಳ ಸದಸ್ಯರಿಗೆ ಹೆಚ್ಚಿನ ಟಿಕೆಟ್ ನೀಡುವ ಮೂಲಕ, ಮಮತಾ ಬ್ಯಾನರ್ಜಿ ತಮ್ಮ ಪಕ್ಷವನ್ನು ಒಳಗೊಂಡಿದ್ದಾರೆ ಎಂಬ ಸಂದೇಶವನ್ನು ಆ ಸಮುದಾಯಗಳಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ.

ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಕಳಚುವ ಯತ್ನ:

ಟಿಎಂಸಿ ಈ ಬಾರಿ ಕಡಿಮೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2016 ರಲ್ಲಿ, ಪಕ್ಷವು 57 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು, ಆದರೆ ಈ ಬಾರಿ ಅದು 42 ಕ್ಕೆ ಇಳಿದಿದೆ. ಪಕ್ಷದ ಒಳಗಿನವರ ಪ್ರಕಾರ, ಇದು ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಅನ್ನು ಕಳಚುವ ಪ್ರಯತ್ನವಾಗಿದೆ, ವಿರೋಧ ಪಕ್ಷಗಳು ಈ ಟ್ಯಾಗ್ ಬಳಸಿ ಅಪಾದನೆ ಮಾಡುತ್ತ ಬಂದಿದ್ದವು. ಮತ್ತೊಂದೆಡೆ, ಹೆಚ್ಚಿನ ಶೇಕಡಾವಾರು ಹಿಂದಿ ಮಾತನಾಡುವ ಮತದಾರರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಪ್ರತಿಪಕ್ಷಗಳ ಪರವಾಗಿ ಹಿಂದೂ ಮತಗಳ ಧ್ರುವೀಕರಣವನ್ನು ನಿಲ್ಲಿಸಲು ಇದು ಸಹಾಯ ಮಾಡುತ್ತದೆ.

ಆಡಳಿತ ವಿರೋಧವನ್ನು ಎದುರಿಸುವುದು:

ಕುತೂಹಲಕಾರಿಯಾಗಿ, ಟಿಎಂಸಿಯು ಚುನಾವಣೆಯಲ್ಲಿ ಸ್ಪರ್ಧಿಸಲು 114 ಹೊಸ ಮುಖಗಳನ್ನು ಹೊಂದಿದೆ. ಇದಲ್ಲದೆ, 160 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ. ಇದು ಆಡಳಿತ ವಿರೋಧಿ ಅಲೆಯ ಭಯದಿಂದ ತೆಗೆದುಕೊಂಡ ಕ್ರಮವಾಗಿದ್ದು, ಮತದಾರರಿಗೆ ಉತ್ತಮ ಅಭ್ಯರ್ಥಿಗಳನ್ನು ನೀಡಲು ಕಾರಣವಾಗಿದೆ. 2006 ರಲ್ಲಿ, ಹಿಂದಿನ ಎಡಪಂಥೀಯ ಸರ್ಕಾರವು ತನ್ನ ಅಭ್ಯರ್ಥಿಗಳನ್ನು 150 ಸ್ಥಾನಗಳಲ್ಲಿ ಬದಲಾಯಿಸಿತ್ತು, ಇದು ರಾಜ್ಯದ 230 ಸ್ಥಾನಗಳನ್ನು ಗೆಲ್ಲಲು ಎಡಪಂಥಿಯ ಕೂಟಕ್ಕೆ ಸಹಾಯ ಮಾಡಿತ್ತು. ಈಗ ಟಿಎಂಸಿ ಹಳೆಯ ಮತ್ತು ಹೊಸ ನಾಯಕರ ನಡುವೆ ಸಮತೋಲನ ಹೊಂದಲು ಯುವ ಮುಖಗಳನ್ನು ಪಕ್ಷಕ್ಕೆ ತರಲು ಒತ್ತು ನೀಡಿದೆ..

ಸೆಲೆಬ್ರಿಟಿಗಳನ್ನು ಅವಲಂಬಿಸಿ:

2011 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮಮತಾ ಬ್ಯಾನರ್ಜಿ ಯಾವಾಗಲೂ ಬಂಗಾಳಿ ಚಲನಚಿತ್ರೋದ್ಯಮದ ಸದಸ್ಯರಿಗೆ ಟಿಕೆಟ್ ನೀಡಿದ್ದಾರೆ. ಹಿಂದಿನ ಹೆಚ್ಚಿನ ಸಂದರ್ಭಗಳಲ್ಲಿ, ಟಿಎಂಸಿಗೆ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಸ್ಟಾರ್‌ಗಳು ಸಹಾಯ ಮಾಡಿದ್ದಾರೆ. ನಟರಾದ ದೇವ್, ಮೂನ್ ಮೂನ್ ಸೇನ್, ದಿವಂಗತ ನಟ ತಪಸ್ ಪಾಲ್, ಶತಾಬ್ದಿ ರಾಯ್, ಮಿಮಿ ಚಕ್ರವರ್ತಿ, ನುಸ್ರತ್ ಜಹಾನ್, ದೇಬಶ್ರೀ ರಾಯ್ ಮತ್ತು ಇತರರು ಟಿಎಂಸಿ ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಜಯ ಗಳಿಸಿದ್ದರು. ಈ ಬಾರಿ ಕೂಡ ಪಕ್ಷವು ನಟರಾದ ಸೋಹಮ್ ಚಕ್ರವರ್ತಿ, ಸಯಾಂತಿಕಾ ಬ್ಯಾನರ್ಜಿ, ಸಯಾನಿ ಘೋಷ್, ಜೂನ್ ಮಾಲಿಯಾ, ಕೌಶಾನಿ ಬ್ಯಾನರ್ಜಿ, ಕಾಂಚನ್ ಮಲ್ಲಿಕ್, ನಿರ್ದೇಶಕ ರಾಜ್ ಚಕ್ರವರ್ತಿ ಮತ್ತು ಗಾಯಕಿ ಅದಿತಿ ಮುನ್ಶಿ ಅವರನ್ನು ಇದೇ ರೀತಿಯ ಫಲಿತಾಂಶವನ್ನು ನೀಡಲು ಕಣಕ್ಕಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...