Homeಅಂಕಣಗಳುಧಾರವಾಡ: ನಕಲಿ ಗೋವಿಗೆ ಧಾಡಸಿ ‘ಬಸವ’ನ ಠಕ್ಕರ್!

ಧಾರವಾಡ: ನಕಲಿ ಗೋವಿಗೆ ಧಾಡಸಿ ‘ಬಸವ’ನ ಠಕ್ಕರ್!

- Advertisement -
- Advertisement -

ಪಿ.ಕೆ.ಮಲ್ಲನಗೌಡ |

ನೋಡಲು ಗೋವಿನಂತಿರುವ ಧಾರವಾಡ ಸಂಸದ ಪ್ರಹ್ಲಾದ್ ಜೋಷಿಯವರಿಗೆ ಎದುರಾಗಿ ಧಾಡಸಿ ‘ಬಸವ’ ವಿನಯ ಕುಲಕರ್ಣಿ ಠಕ್ಕರ್ ಕೊಡುತ್ತಿದ್ದಾರೆ. ‘ಹಿಂದುತ್ವ’ದ ಪ್ರತಿಪಾದಕ ಜೋಷಿ ಕೆಲಸ ಮಾಡಿದ್ದಕ್ಕಿಂತ ಪ್ರಚಾರಕ್ಕೆ ಹಾತೊರೆದದ್ದೇ ಹೆಚ್ಚು. ಮೂರು ಸಲ ಸಂಸದರಾದೂ ಈಗಲೂ ಅವರು ಮೋದಿ ಮುಖವಾಡದಲ್ಲಿ ಮತ ಬೇಡುತ್ತಿದ್ದಾರೆ. ಈಗ ಯಾವ ಅಧಿಕಾರವೂ ಇಲ್ಲದ ವಿನಯ ಕುಲಕರ್ಣಿ ಈ ಸಲ ಗೆಲ್ಲಲು ಎಲ್ಲ ಮಾರ್ಗಗಳಲ್ಲೂ ಪ್ರಯ್ನಿಸುತ್ತಿದ್ದಾರೆ.

joshi

ಮೂರು ಸಲ ಸಂಸದರಾಗಿರುವ ಜೋಷಿ ಬಗ್ಗೆ ಜನಕ್ಕೆ ಭ್ರಮನಿರಸವಾಗಿದೆ. ಬಿಜೆಪಿಯ ಸ್ಥಳಿಯ ನಾಯಕರನ್ನು ತುಳಿದ ಆರೋಪವನ್ನು ಎದುರಿಸುತ್ತಿರುವ ಜೋಷಿಗೆ ಈ ಸಲ ಪಕ್ಷದೊಳಗೇ ಸಾಕಷ್ಟು ವಿರೋಧವಿದೆ. ರಂಗಾ ಬದ್ದಿ, ದತ್ತಾ ಡೋರ್ಲೆ, ರಾಜೇಂದ್ರ ಗೋಖಲೆ, ಮಹೇಶ ತೆಂಗಿನಕಾಯಿ-ಇವರೆಲ್ಲ ಜೋಷಿಯ ಸ್ವಾರ್ಥಕ್ಕೆ ತಮ್ಮ ರಾಜಕೀಯ ಜೀವನದಲ್ಲಿ ಹಿನ್ನಡೆ ಅನುಭವಿಸಿದವರು.
ತಮ್ಮ ಸೋಲಿಗೆ ಜೋಷಿಯೇ ಕಾರಣವೆಂದು ಅತೃಪ್ತಿ ವ್ಯಕ್ತಪಡಿಸುತ್ತಲೇ ಬಂದಿರುವ ಬಿಜೆಪಿ ಮಾಜಿ ಶಾಸಕ ಚಿಕ್ಕನಗೌಡರ್ ಜೋಷಿ ಸೋಲಲೆಂದೇ ಬಯಸಿದ್ದಾರೆ. ಚಿಕ್ಕನಗೌಡರ್ ಮಗಳು ನಿನ್ನೆಯಷ್ಟೇ ಜೋಷಿ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿಗೆ ಈ ಸಲ ಲಿಂಗಾಯತ/ವೀರಶೈವ ಸಮುದಾಯ ದೊಡ್ಡ ಏಟು ನೀಡಲಿದೆ. ಬಿಜೆಪಿಗೆ ಇಲ್ಲ ಸಾಕಷ್ಟು ಕೇಡರ್ಸ್ ಇದ್ದರೂ ಜೋಷಿಗೆ ಜನರನ್ನು ಎದುರಿಸುವುದು ಕಷ್ಟವಾಗುತ್ತಿದೆ.
ಇನ್ನೊಂದು ಕಡೆ ಕಾಂಗ್ರೆಸ್‍ನ ವಿನಯ ಕುಲಕರ್ಣಿ ಬಿರುಸಾದ ಪ್ರಚಾರದಲ್ಲಿ ತೊಡಗಿ ಎಲ್ಲ ಸಮುದಾಯಗಳನ್ನು ತಲುಪುತ್ತಿದ್ದಾರೆ.

vinay

ವಿನಯಗೆ ಇಲ್ಲಿ ಅಭಿಮಾನಿ ಪಡೆಯೂ ಇದ್ದು, ಅದು ಅಗ್ರೆಸಿವ್ ಕೂಡ ಆಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಈ ಸಲ ಕಾಂಗ್ರೆಸ್‍ನಲ್ಲಿ ಒಗ್ಗಟ್ಟು ಕಂಡು ಬಂದಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಐ.ಜಿ. ಸನದಿ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಕಲಘಟಗಿಯಿಂದ ಸೋತಿದ್ದ ಸಂತೋಷ ಲಾಡ್ ವಿನಯ್ ಪರವಾಗಿ ಬೃಹತ್ ರ್ಯಾಲಿ ಮಾಡಿದ್ದಾರೆ. ಇಲ್ಲಿ ಜೆಡಿಎಸ್‍ಗೂ ಒಂದು ಮಟ್ಟದ ನೆಲೆಯಿದೆ. ಜೆಡಿಎಸ್‍ನ ಬಸವರಾಜ ಹೊರಟ್ಟಿ, ಕೋನರಡ್ಡಿ ಮತ್ತು ಹಲವು ಕಾರ್ಪೋರೇಟರುಗಳು ವಿನಯ ಪರ ಕೆಲಸ ಮಾಡುತ್ತಿದ್ದಾರೆ.
ಈ ಸಲ ಇತರ ಸಮುದಾಯಗಳ ಜೊತೆಗೆ ಲಿಂಗಾಯತ ಸಮೂಹ ವಿನಯ ಕುಲಕರ್ಣಿ ಪರ ನಿಂತಂತೆ ಕಾಣುತ್ತಿದೆ. ಹೀಗಾಗಿ ಜೋಷಿಗೆ ಇದು ಅತಿ ಕಷ್ಟದ ಚುನಾವಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...