Homeಮುಖಪುಟ’ಸ್ಪಂದಿಸದ ಅಧಿಕಾರಿಗಳ ತಲೆಗೆ ಕೋಲಿನಿಂದ ಹೊಡೆಯಿರಿ’: ಕೇಂದ್ರ ಸಚಿವ ಗಿರಿರಾಜ್ ಸಿಂಗ್

’ಸ್ಪಂದಿಸದ ಅಧಿಕಾರಿಗಳ ತಲೆಗೆ ಕೋಲಿನಿಂದ ಹೊಡೆಯಿರಿ’: ಕೇಂದ್ರ ಸಚಿವ ಗಿರಿರಾಜ್ ಸಿಂಗ್

’ಗಿರಿರಾಜ್ ಸಿಂಗ್ ಹೇಳಿಕೆಯನ್ನು ನಾವು ಸಾಂಕೇತಿಕವಾಗಿ ತೆಗೆದುಕೊಳ್ಳಬೇಕು, ಅಕ್ಷರಶಃ ಅಲ್ಲ’ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬಿಹಾರದ ತಮ್ಮ ಬೆಗುಸರಾಯ್ ಲೋಕಸಭಾ ಕ್ಷೇತ್ರದ ಜನರಿಗೆ, ’ನಿಮ್ಮ ಅಹವಾಲುಗಳಿಗೆ ಸ್ಪಂದಿಸದ ಅಧಿಕಾರಿಗಳನ್ನು ಬಿದಿರಿನ ಕೋಲುಗಳಿಂದ ಹೊಡೆಯಿರಿ’ ಎಂದು  ಸಲಹೆ ನೀಡಿದ್ದಾರೆ.

ಬೆಗುಸಾರಾಯ್‌ನಲ್ಲಿ ಕೃಷಿ ಸಂಸ್ಥೆ ಆಯೋಜಿಸಿದ್ದ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಚಿವರು ಈ ಹೇಳಿಕೆ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದ್ದು, ಎಎನ್‌ಐ ಈ ಕುರಿತ ವಿಡಿಯೊವನ್ನು ಟ್ವೀಟ್ ಮಾಡಿದೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಗಳನ್ನು ಹೊಂದಿರುವ ಸಚಿವರು, ’ಸಾಮಾನ್ಯ ನಾಗರಿಕರು ಆಗಾಗ್ಗೆ ನನಗೆ ದೂರುಗಳನ್ನು ನೀಡುತ್ತಾರೆ. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ದೂರುಗಳಿಗೆ ಸ್ವಲ್ಪವೂ ಗಮನ ಹರಿಸುತ್ತಿಲ್ಲ ಎಂದು ಜನಸಾಮಾನ್ಯರು ಆರೋಪಿಸುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

“ನಾನು ಜನರಿಗೆ  ಹೇಳುತ್ತೇನೆ, ಇಂತಹ ಸಣ್ಣ ವಿಷಯಗಳಿಗಾಗಿ ನೀವು ನನ್ನ ಬಳಿಗೆ ಏಕೆ ಬರುತ್ತೀರಿ? ಸಂಸದರು, ಶಾಸಕರು, ಗ್ರಾಮದ ಮುಖ್ಯಸ್ಥರು,  ಡಿಸಿಗಳು, ಉಪ ಡಿಸಿಗಳು, ಬಿಡಿಒಗಳ ಬಳಿಗೆ ಹೋಇ, ಇವರೆಲ್ಲರೂ ಜನರ ಸೇವೆ ಮಾಡುವ ಜವಾಬ್ದಾರಿಯಲ್ಲಿದ್ದಾರೆ. ಅವರು ನಿಮ್ಮ ಮಾತನ್ನು ಕೇಳದಿದ್ದರೆ, ಎರಡೂ ಕೈಗಳಿಂದ ಬಿದಿರಿನ ಕೋಲನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಬಲವಾದ ಏಟು ನೀಡಿ’ ಎಂದು ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

“ಅದು ಸಹ ಕೆಲಸ ಮಾಡದಿದ್ದರೆ, ಈ ಗಿರಿರಾಜ್ ಸಿಂಗ್ ನಿಮ್ಮ ಜೊತೆ ಬರುತ್ತಾನೆ” ಎಂದು ಅವರು ಹೇಳಿದ್ದಾರೆ. ಇದಕ್ಕೆ ಕಾರ್ಯಕ್ರಮದಲ್ಲಿದ್ದ ಜನರು ಚಪ್ಪಾಳೆ ಹೊಡೆದು ಸಂಭ್ರಮಿಸಿದ್ದಾರೆ. ವೇದಿಕೆಯಲ್ಲಿದ್ದ  ಗಣ್ಯರು ತಮ್ಮ ಆಸನಗಳಲ್ಲಿ ಕುಳಿತು ಸುಮ್ಮನೇ ಗಿರಿರಾಜ್ ಸಿಂಗ್ ಮಾತುಗಳನ್ನು ಕೇಳುತ್ತಿದ್ದರು.

ಘಟನೆಗೆ ಪ್ರತಿಕ್ರಿಯಿಸಿರುವ ಬಿಹಾರ ಬಿಜೆಪಿ ಮುಖಂಡರೊಬ್ಬರು, “ಗಿರಿರಾಜ್ ಸಿಂಗ್ ಅವರು ಸಾರ್ವಜನಿಕ ಕೋಪಕ್ಕೆ ಸ್ಪಂದಿಸಬೇಕಾದ ಸಾಮೂಹಿಕ ನಾಯಕರಾಗಿದ್ದಾರೆ. ಅವರ ಹೇಳಿಕೆಯನ್ನು ನಾವು ಸಾಂಕೇತಿಕವಾಗಿ ತೆಗೆದುಕೊಳ್ಳಬೇಕು, ಅಕ್ಷರಶಃ ಅಲ್ಲ” ಎಂದು ಹೇಳಿದ್ದಾರೆ.

ಇಂತಹ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಗಿರಿರಾಜ್ ಸಿಂಗ್ ಹೆಸರು ಹಲವು ಬಾರಿ ಬಂದಿದ್ದು, ಈ ಹಿಂದೆ ಅವರು ಹಲವು ಸಲ ಕೋಮು ಪ್ರಚೋದನೆಯ ಹೇಳಿಕೆಗಳನ್ನು ನೀಡಿ ವಿವಾದ ಸೃಷ್ಟಿಸಿದ್ದರು.


ಇದನ್ನೂ ಓದಿ: ತಮ್ಮ ವಿರುದ್ಧ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್‌ಗೆ ಹೋಗಿದ್ದೇಕೆ?: ಸಚಿವ ಸುಧಾಕರ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...