Homeಮುಖಪುಟ’ಸ್ಪಂದಿಸದ ಅಧಿಕಾರಿಗಳ ತಲೆಗೆ ಕೋಲಿನಿಂದ ಹೊಡೆಯಿರಿ’: ಕೇಂದ್ರ ಸಚಿವ ಗಿರಿರಾಜ್ ಸಿಂಗ್

’ಸ್ಪಂದಿಸದ ಅಧಿಕಾರಿಗಳ ತಲೆಗೆ ಕೋಲಿನಿಂದ ಹೊಡೆಯಿರಿ’: ಕೇಂದ್ರ ಸಚಿವ ಗಿರಿರಾಜ್ ಸಿಂಗ್

’ಗಿರಿರಾಜ್ ಸಿಂಗ್ ಹೇಳಿಕೆಯನ್ನು ನಾವು ಸಾಂಕೇತಿಕವಾಗಿ ತೆಗೆದುಕೊಳ್ಳಬೇಕು, ಅಕ್ಷರಶಃ ಅಲ್ಲ’ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬಿಹಾರದ ತಮ್ಮ ಬೆಗುಸರಾಯ್ ಲೋಕಸಭಾ ಕ್ಷೇತ್ರದ ಜನರಿಗೆ, ’ನಿಮ್ಮ ಅಹವಾಲುಗಳಿಗೆ ಸ್ಪಂದಿಸದ ಅಧಿಕಾರಿಗಳನ್ನು ಬಿದಿರಿನ ಕೋಲುಗಳಿಂದ ಹೊಡೆಯಿರಿ’ ಎಂದು  ಸಲಹೆ ನೀಡಿದ್ದಾರೆ.

ಬೆಗುಸಾರಾಯ್‌ನಲ್ಲಿ ಕೃಷಿ ಸಂಸ್ಥೆ ಆಯೋಜಿಸಿದ್ದ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಚಿವರು ಈ ಹೇಳಿಕೆ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದ್ದು, ಎಎನ್‌ಐ ಈ ಕುರಿತ ವಿಡಿಯೊವನ್ನು ಟ್ವೀಟ್ ಮಾಡಿದೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಗಳನ್ನು ಹೊಂದಿರುವ ಸಚಿವರು, ’ಸಾಮಾನ್ಯ ನಾಗರಿಕರು ಆಗಾಗ್ಗೆ ನನಗೆ ದೂರುಗಳನ್ನು ನೀಡುತ್ತಾರೆ. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ದೂರುಗಳಿಗೆ ಸ್ವಲ್ಪವೂ ಗಮನ ಹರಿಸುತ್ತಿಲ್ಲ ಎಂದು ಜನಸಾಮಾನ್ಯರು ಆರೋಪಿಸುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

“ನಾನು ಜನರಿಗೆ  ಹೇಳುತ್ತೇನೆ, ಇಂತಹ ಸಣ್ಣ ವಿಷಯಗಳಿಗಾಗಿ ನೀವು ನನ್ನ ಬಳಿಗೆ ಏಕೆ ಬರುತ್ತೀರಿ? ಸಂಸದರು, ಶಾಸಕರು, ಗ್ರಾಮದ ಮುಖ್ಯಸ್ಥರು,  ಡಿಸಿಗಳು, ಉಪ ಡಿಸಿಗಳು, ಬಿಡಿಒಗಳ ಬಳಿಗೆ ಹೋಇ, ಇವರೆಲ್ಲರೂ ಜನರ ಸೇವೆ ಮಾಡುವ ಜವಾಬ್ದಾರಿಯಲ್ಲಿದ್ದಾರೆ. ಅವರು ನಿಮ್ಮ ಮಾತನ್ನು ಕೇಳದಿದ್ದರೆ, ಎರಡೂ ಕೈಗಳಿಂದ ಬಿದಿರಿನ ಕೋಲನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಬಲವಾದ ಏಟು ನೀಡಿ’ ಎಂದು ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

“ಅದು ಸಹ ಕೆಲಸ ಮಾಡದಿದ್ದರೆ, ಈ ಗಿರಿರಾಜ್ ಸಿಂಗ್ ನಿಮ್ಮ ಜೊತೆ ಬರುತ್ತಾನೆ” ಎಂದು ಅವರು ಹೇಳಿದ್ದಾರೆ. ಇದಕ್ಕೆ ಕಾರ್ಯಕ್ರಮದಲ್ಲಿದ್ದ ಜನರು ಚಪ್ಪಾಳೆ ಹೊಡೆದು ಸಂಭ್ರಮಿಸಿದ್ದಾರೆ. ವೇದಿಕೆಯಲ್ಲಿದ್ದ  ಗಣ್ಯರು ತಮ್ಮ ಆಸನಗಳಲ್ಲಿ ಕುಳಿತು ಸುಮ್ಮನೇ ಗಿರಿರಾಜ್ ಸಿಂಗ್ ಮಾತುಗಳನ್ನು ಕೇಳುತ್ತಿದ್ದರು.

ಘಟನೆಗೆ ಪ್ರತಿಕ್ರಿಯಿಸಿರುವ ಬಿಹಾರ ಬಿಜೆಪಿ ಮುಖಂಡರೊಬ್ಬರು, “ಗಿರಿರಾಜ್ ಸಿಂಗ್ ಅವರು ಸಾರ್ವಜನಿಕ ಕೋಪಕ್ಕೆ ಸ್ಪಂದಿಸಬೇಕಾದ ಸಾಮೂಹಿಕ ನಾಯಕರಾಗಿದ್ದಾರೆ. ಅವರ ಹೇಳಿಕೆಯನ್ನು ನಾವು ಸಾಂಕೇತಿಕವಾಗಿ ತೆಗೆದುಕೊಳ್ಳಬೇಕು, ಅಕ್ಷರಶಃ ಅಲ್ಲ” ಎಂದು ಹೇಳಿದ್ದಾರೆ.

ಇಂತಹ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಗಿರಿರಾಜ್ ಸಿಂಗ್ ಹೆಸರು ಹಲವು ಬಾರಿ ಬಂದಿದ್ದು, ಈ ಹಿಂದೆ ಅವರು ಹಲವು ಸಲ ಕೋಮು ಪ್ರಚೋದನೆಯ ಹೇಳಿಕೆಗಳನ್ನು ನೀಡಿ ವಿವಾದ ಸೃಷ್ಟಿಸಿದ್ದರು.


ಇದನ್ನೂ ಓದಿ: ತಮ್ಮ ವಿರುದ್ಧ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್‌ಗೆ ಹೋಗಿದ್ದೇಕೆ?: ಸಚಿವ ಸುಧಾಕರ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...