Homeಕರ್ನಾಟಕಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

’ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’

- Advertisement -
- Advertisement -

’ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಇಂಧನ ಬೆಲೆಗಳು ಗಗನಕ್ಕೇರಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಯುವಜನತೆ ಬೀದಿಗಿಳುದು ಹೋರಾಟ ನಡೆಸುತ್ತಿದ್ದಾರೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಬೊಟ್ಟು ಮಾಡಿ ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ಟ್ವೀಟ್‌ಗಳಲ್ಲಿ ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದು ಕೇಂದ್ರ ಸರ್ಕಾರದ ಹುನ್ನಾರ ಎಂದಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ’ ಎಂದು ಜೆಡಿಎಸ್ ಮುಖಂಡ ಆರೋಪಿಸಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯಗಳು GST ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದಿದ್ದಾರೆ.

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

’ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ ಎಂದಿದ್ದಾರೆ. ಜೊತೆಗೆ ’ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕ ನೀಡಿದ್ದಾರೆ.

ತೈಲ ಬೆಲೆ ಹೆಚ್ಚಳಕ್ಕೆ ಹಿಂದಿನ ಸರ್ಕಾರ ಕಾರಣ ಎಂದು ಸಮಸ್ಯೆಯನ್ನು ಹಿಂದಿನ ಸರ್ಕಾರದ ಮೇಲೆ ಹೊರೆಸಲು ಹೊರಟಿದ್ದ ಕೇಂದ್ರ ಸರ್ಕಾರ ದೇಶದಲ್ಲಿ ಪ್ರತಿಭಟನೆಯನ್ನು ಎದುರಿಸುತ್ತಿದೆ. ಬೆಲೆ ಏರಿಕೆಯಲ್ಲಿ ಬಸವಳಿದಿರುವ ಜನಸಾಮಾನ್ಯರು ಸರ್ಕಾರಗಳಿಗೆ ಪ್ರತಿಭಟನೆಯ ಬಿಸಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಬಗ್ಗೆ ಹಲವಾರು ಪ್ರತಿಭಟನೆ ನಡೆಸಿದೆ. ಜನಧ್ವನಿ ಜಾಥಾ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...