Homeಮುಖಪುಟಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

ಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

'ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ'

- Advertisement -
- Advertisement -

ವಿದೇಶಿ ಕರೆನ್ಸಿ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ, ಅವರ ಕ್ಯಾಬಿನೆಟ್ ಸಹೋದ್ಯೋಗಿ ಮತ್ತು ವಿಧಾನಸಭೆ ಸ್ಪೀಕರ್ ಅವರ ಹೆಸರನ್ನು ಉಲ್ಲೇಖಿಸಿ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಕಸ್ಟಮ್ಸ್ ಇಲಾಖೆಯ ಕ್ರಮಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.

ಕೇಂದ್ರ ಏಜೆನ್ಸಿ ಕೇರಳದಲ್ಲಿ ಬಿಜೆಪಿ ಪರ ಚುನಾವಣೆ ಪ್ರಚಾರ ಕೈಗೆತ್ತಿಕೊಂಡಿದೆ ಎಂದು ವ್ಯಂಗ್ಯ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ  ಉಲ್ಲೇಖಿಸಿದೆ.

ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರು ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕಸ್ಟಮ್ಸ್ ಇಲಾಖೆ, ಗುರುವಾರ ವಿಜಯನ್ ಮತ್ತು ವಿಧಾನಸಭಾ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರ ಅನುಮತಿಯಂತೆ ವಿದೇಶಿ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಅಫಿಡವಿಟ್ ಸಲ್ಲಿಸಿದೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಸ್ವಪ್ನಾಗೆ ವಿಶೇಷ ರಕ್ಷಣೆ ನೀಡುವಂತೆ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಇಲಾಖೆ ಅಫಿಡವಿಟ್ ಸಲ್ಲಿಸಿದೆ. ಹೈಕೋರ್ಟಿನಲ್ಲಿ ಕಸ್ಟಮ್ಸ್ ಅಫಿಡವಿಟ್ ಪ್ರತಿಭಟಿಸಿ ಎಲ್‌ಡಿಎಫ್ ಕಾರ್ಯಕರ್ತರು ಶನಿವಾರ ತಿರುವನಂತಪುರಂ, ಕೊಚ್ಚಿ ಮತ್ತು ಕೋ ಕೊಝಿಕೋಡ್‌ನಲ್ಲಿರುವ ಕಸ್ಟಮ್ಸ್ ಕಚೇರಿಗಳಿಗೆ ಮೆರವಣಿಗೆ ನಡೆಸಿದರು.

ಚುನಾವಣೆಯ ಸಮಯದಲ್ಲಿ ಕಸ್ಟಮ್ಸ್ ಇಲಾಖೆ ರಾಜಕೀಯ ಕಾರ್ಯಗಳನ್ನು ಪ್ರಾರಂಭಿಸಿದೆ ಎಂದು ವಿಜಯನ್ ಹೇಳಿದ್ದಾರೆ. “ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ನಾವು ಅದನ್ನು ಎದುರಿಸುತ್ತೇವೆ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ” ಎಂದಿದ್ದಾರೆ.

’ಬಿಜೆಪಿ ಮತ್ತು ಅವರ ರಾಗಗಳಿಗೆ ನೃತ್ಯ ಮಾಡುವ ಏಜೆನ್ಸಿಗಳಿಗೆ ನಾನು ಹೇಳುತ್ತೇನೆ, ನೀವು ವ್ಯವಹರಿಸಲು ಒಗ್ಗಿಕೊಂಡಿರುವ ಜನರಲ್ಲ ನಾವು. ನಾವೇ ಬೇರೆ. ನೀವು ಏನು ಮಾಡಿದರೂ, ಈ ನೆಲ ನಮ್ಮನ್ನು ದೂಷಿಸುವುದಿಲ್ಲ. ನಮ್ಮ ಜೀವನವು ತೆರೆದ ಪುಸ್ತಕಗಳು, ಮತ್ತು ನೀವು ಅದನ್ನು ಶೀಘ್ರದಲ್ಲೇ ಅರಿತುಕೊಳ್ಳುವಿರಿ’ ಎಂದಿದ್ದಾರೆ.

ಇದನ್ನೂ  ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಫಿಡವಿಟ್ ಅನ್ನು ಉಲ್ಲೇಖಿಸಿರುವ ವಿಜಯನ್, ’ಕಸ್ಟಮ್ಸ್ ಆಯುಕ್ತರು ನವೆಂಬರ್‌ನಲ್ಲಿ ಆರೋಪಿ (ಸ್ವಪ್ನಾ ಸುರೇಶ್) ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯಲ್ಲಿನ ಕೆಲವು ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ಅವರು ಕ್ರಿಮಿನಲ್ ಇತರೆ ಅರ್ಜಿಯಲ್ಲಿ ಹೇಳಿಕೆ ನೀಡಿದ್ದು, ಇದರಲ್ಲಿ ಸ್ವಪ್ನಾ ಮತ್ತು ಕಸ್ಟಮ್ಸ್ ತಡೆಗಟ್ಟುವ ಅಧೀಕ್ಷಕರು ಪ್ರತಿಕ್ರಿಯಿಸಿದ್ದಾರೆ. ಅರ್ಜಿಯಲ್ಲಿ ಪ್ರತಿವಾದಿಯಲ್ಲದ ಆಯುಕ್ತರು ನ್ಯಾಯಾಲಯದ ಮುಂದೆ ಹೇಳಿಕೆ ನೀಡುತ್ತಿರುವುದು ಅಭೂತಪೂರ್ವವಾಗಿದೆ’ ಎಂದು ಪ್ರಶ್ನೆ ಮಾಡಿದ್ದಾರೆ.

2020 ರ ಜುಲೈನಿಂದ ಸ್ವಪ್ನಾ ವಿವಿಧ ಕೇಂದ್ರದ ತನಿಖಾ ಸಂಸ್ಥೆಗಳ ವಶದಲ್ಲಿದ್ದರು ಎಂದು ಹೇಳಿರುವ ವಿಜಯನ್ , ” ಹೀಗಿದ್ದರೂ ಆಕೆ ಕೇವಲ ಕಸ್ಟಮ್ಸ್ ಮುಂದೆ ಇಂತಹ ಮಹಾನ್ ಹೇಳಿಕೆಯನ್ನು ನೀಡಿದ್ದಾರೆ, ಕಸ್ಟಮ್ಸ್ ಮತ್ತು ಆಕೆಯ ಹೇಳಿಕೆಯ ಹಿಂದೆ ಕೆಲಸ ಮಾಡಿದವರು ಉತ್ತರಗಳನ್ನು ನೀಡಬೇಕು. ಸಿಆರ್‌ಪಿಸಿ 164 ರ ಹೇಳಿಕೆಯನ್ನು ಬಹಿರಂಗಪಡಿಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕಸ್ಟಮ್ಸ್ ಆಯುಕ್ತರು ಸ್ಪೀಕರ್ ಮತ್ತು ಕ್ಯಾಬಿನೆಟ್ ಸದಸ್ಯರನ್ನು ಕೆಣಕಲು ಸಾಹಸ ಮಾಡಿದ್ದಾರೆ. ಇದು ಕೇಂದ್ರದಲ್ಲಿನ ಪಕ್ಷದ ಸಂಕುಚಿತ ಹಿತಾಸಕ್ತಿಯನ್ನು ರಕ್ಷಿಸುವ ಪ್ರಯತ್ನವಾಗಿದೆ’ ಎಂದು ವಿಜಯನ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ತನಿಖಾ ಸಂಸ್ಥೆಗಳು ತಮ್ಮ ದೊರೆಗಳನ್ನು ಮೆಚ್ಚಿಸಲು ಕಾನೂನುಬಾಹಿರ ಮಾರ್ಗಗಳನ್ನು ಬಳಸುತ್ತಿವೆ ಎಂದು ಅವರು ಹೇಳಿದ್ದಾರೆ. ಎನ್‌ಐಎ ತನಿಖೆಯಲ್ಲಿ ಅಂತಹ ಯಾವುದೇ ಆರೋಪಗಳು ಬಂದಿಲ್ಲ ಎಂದು ಕೇರಳ ಸಿಎಂ ಹೇಳಿದ್ದಾರೆ.

“ರಾಜಕೀಯ ಉದ್ದೇಶಗಳಿಗಾಗಿ ತನಿಖಾ ಸಂಸ್ಥೆಗಳನ್ನು ಹೇಗೆ ಬಳಸಬೇಕೆಂದು ನೋಡುತ್ತಿದ್ದಾರೆ. ತನಿಖಾ ಸಂಸ್ಥೆಗಳ ಅಸಹಾಯಕತೆಯನ್ನು ನಾವು ಅರ್ಥಮಾಡಿಕೊಳ್ಳಬಹುದು. ಯಾವುದೇ ತನಿಖಾ ಸಂಸ್ಥೆ ಮುಂದೆ ಈ ರೀತಿ ವರ್ತಿಸಬಾರದು. ಈ ಸಂದರ್ಭದಲ್ಲಿ, ಏಜೆನ್ಸಿ ಸರಿಯಾದ ದಿಕ್ಕಿನಲ್ಲಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ. ತಮ್ಮ ಯಜಮಾನರ ನಿರ್ದೇಶನದಂತೆ ಕೆಲಸ ಮಾಡಲು ಅವರನ್ನು ಒತ್ತಾಯಿಸಲಾಗುತ್ತಿದೆ’ ಎಂದಿದ್ದಾರೆ.

ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಈ ಬಗ್ಗೆ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ ವಿಜಯನ್, ಅವರು ಎಲ್‌ಡಿಎಫ್ ಅನ್ನು ನಾಶಮಾಡಲು ಬಯಸಿದ್ದಾರೆ. ಆದರೆ ನೀವು ನಾಶಪಡಿಸುವಂತಹ ಯಾವುದನ್ನೂ ನಾವು ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ, ಸರ್ಕಾರವು ಮಾಡಬೇಕಾದ ಕೆಲಸಗಳನ್ನು ಮಾತ್ರ ನಾವು ಮಾಡಿದ್ದೇವೆ. ಎಲ್‌ಡಿಎಫ್ ಅದರ ಅಭಿವೃದ್ಧಿ ಚಟುವಟಿಕೆಗಳೊಂದಿಗೆ ಮುಂದುವರಿಯುತ್ತದೆ. ಈ ರಾಜ್ಯದ ಜನರನ್ನು ಬೆದರಿಸುತ್ತಿವೆ ಎಂಬುದನ್ನು ಬಿಜೆಪಿ ಮತ್ತು ಕಾಂಗ್ರೆಸ್ ಅರಿತುಕೊಳ್ಳಬೇಕು’ ಎಂದು ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...