Homeಮುಖಪುಟಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

ಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

'ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ'

- Advertisement -
- Advertisement -

ವಿದೇಶಿ ಕರೆನ್ಸಿ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ, ಅವರ ಕ್ಯಾಬಿನೆಟ್ ಸಹೋದ್ಯೋಗಿ ಮತ್ತು ವಿಧಾನಸಭೆ ಸ್ಪೀಕರ್ ಅವರ ಹೆಸರನ್ನು ಉಲ್ಲೇಖಿಸಿ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಕಸ್ಟಮ್ಸ್ ಇಲಾಖೆಯ ಕ್ರಮಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.

ಕೇಂದ್ರ ಏಜೆನ್ಸಿ ಕೇರಳದಲ್ಲಿ ಬಿಜೆಪಿ ಪರ ಚುನಾವಣೆ ಪ್ರಚಾರ ಕೈಗೆತ್ತಿಕೊಂಡಿದೆ ಎಂದು ವ್ಯಂಗ್ಯ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ  ಉಲ್ಲೇಖಿಸಿದೆ.

ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರು ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕಸ್ಟಮ್ಸ್ ಇಲಾಖೆ, ಗುರುವಾರ ವಿಜಯನ್ ಮತ್ತು ವಿಧಾನಸಭಾ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರ ಅನುಮತಿಯಂತೆ ವಿದೇಶಿ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಅಫಿಡವಿಟ್ ಸಲ್ಲಿಸಿದೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಸ್ವಪ್ನಾಗೆ ವಿಶೇಷ ರಕ್ಷಣೆ ನೀಡುವಂತೆ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಇಲಾಖೆ ಅಫಿಡವಿಟ್ ಸಲ್ಲಿಸಿದೆ. ಹೈಕೋರ್ಟಿನಲ್ಲಿ ಕಸ್ಟಮ್ಸ್ ಅಫಿಡವಿಟ್ ಪ್ರತಿಭಟಿಸಿ ಎಲ್‌ಡಿಎಫ್ ಕಾರ್ಯಕರ್ತರು ಶನಿವಾರ ತಿರುವನಂತಪುರಂ, ಕೊಚ್ಚಿ ಮತ್ತು ಕೋ ಕೊಝಿಕೋಡ್‌ನಲ್ಲಿರುವ ಕಸ್ಟಮ್ಸ್ ಕಚೇರಿಗಳಿಗೆ ಮೆರವಣಿಗೆ ನಡೆಸಿದರು.

ಚುನಾವಣೆಯ ಸಮಯದಲ್ಲಿ ಕಸ್ಟಮ್ಸ್ ಇಲಾಖೆ ರಾಜಕೀಯ ಕಾರ್ಯಗಳನ್ನು ಪ್ರಾರಂಭಿಸಿದೆ ಎಂದು ವಿಜಯನ್ ಹೇಳಿದ್ದಾರೆ. “ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ನಾವು ಅದನ್ನು ಎದುರಿಸುತ್ತೇವೆ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ” ಎಂದಿದ್ದಾರೆ.

’ಬಿಜೆಪಿ ಮತ್ತು ಅವರ ರಾಗಗಳಿಗೆ ನೃತ್ಯ ಮಾಡುವ ಏಜೆನ್ಸಿಗಳಿಗೆ ನಾನು ಹೇಳುತ್ತೇನೆ, ನೀವು ವ್ಯವಹರಿಸಲು ಒಗ್ಗಿಕೊಂಡಿರುವ ಜನರಲ್ಲ ನಾವು. ನಾವೇ ಬೇರೆ. ನೀವು ಏನು ಮಾಡಿದರೂ, ಈ ನೆಲ ನಮ್ಮನ್ನು ದೂಷಿಸುವುದಿಲ್ಲ. ನಮ್ಮ ಜೀವನವು ತೆರೆದ ಪುಸ್ತಕಗಳು, ಮತ್ತು ನೀವು ಅದನ್ನು ಶೀಘ್ರದಲ್ಲೇ ಅರಿತುಕೊಳ್ಳುವಿರಿ’ ಎಂದಿದ್ದಾರೆ.

ಇದನ್ನೂ  ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಫಿಡವಿಟ್ ಅನ್ನು ಉಲ್ಲೇಖಿಸಿರುವ ವಿಜಯನ್, ’ಕಸ್ಟಮ್ಸ್ ಆಯುಕ್ತರು ನವೆಂಬರ್‌ನಲ್ಲಿ ಆರೋಪಿ (ಸ್ವಪ್ನಾ ಸುರೇಶ್) ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯಲ್ಲಿನ ಕೆಲವು ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ಅವರು ಕ್ರಿಮಿನಲ್ ಇತರೆ ಅರ್ಜಿಯಲ್ಲಿ ಹೇಳಿಕೆ ನೀಡಿದ್ದು, ಇದರಲ್ಲಿ ಸ್ವಪ್ನಾ ಮತ್ತು ಕಸ್ಟಮ್ಸ್ ತಡೆಗಟ್ಟುವ ಅಧೀಕ್ಷಕರು ಪ್ರತಿಕ್ರಿಯಿಸಿದ್ದಾರೆ. ಅರ್ಜಿಯಲ್ಲಿ ಪ್ರತಿವಾದಿಯಲ್ಲದ ಆಯುಕ್ತರು ನ್ಯಾಯಾಲಯದ ಮುಂದೆ ಹೇಳಿಕೆ ನೀಡುತ್ತಿರುವುದು ಅಭೂತಪೂರ್ವವಾಗಿದೆ’ ಎಂದು ಪ್ರಶ್ನೆ ಮಾಡಿದ್ದಾರೆ.

2020 ರ ಜುಲೈನಿಂದ ಸ್ವಪ್ನಾ ವಿವಿಧ ಕೇಂದ್ರದ ತನಿಖಾ ಸಂಸ್ಥೆಗಳ ವಶದಲ್ಲಿದ್ದರು ಎಂದು ಹೇಳಿರುವ ವಿಜಯನ್ , ” ಹೀಗಿದ್ದರೂ ಆಕೆ ಕೇವಲ ಕಸ್ಟಮ್ಸ್ ಮುಂದೆ ಇಂತಹ ಮಹಾನ್ ಹೇಳಿಕೆಯನ್ನು ನೀಡಿದ್ದಾರೆ, ಕಸ್ಟಮ್ಸ್ ಮತ್ತು ಆಕೆಯ ಹೇಳಿಕೆಯ ಹಿಂದೆ ಕೆಲಸ ಮಾಡಿದವರು ಉತ್ತರಗಳನ್ನು ನೀಡಬೇಕು. ಸಿಆರ್‌ಪಿಸಿ 164 ರ ಹೇಳಿಕೆಯನ್ನು ಬಹಿರಂಗಪಡಿಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕಸ್ಟಮ್ಸ್ ಆಯುಕ್ತರು ಸ್ಪೀಕರ್ ಮತ್ತು ಕ್ಯಾಬಿನೆಟ್ ಸದಸ್ಯರನ್ನು ಕೆಣಕಲು ಸಾಹಸ ಮಾಡಿದ್ದಾರೆ. ಇದು ಕೇಂದ್ರದಲ್ಲಿನ ಪಕ್ಷದ ಸಂಕುಚಿತ ಹಿತಾಸಕ್ತಿಯನ್ನು ರಕ್ಷಿಸುವ ಪ್ರಯತ್ನವಾಗಿದೆ’ ಎಂದು ವಿಜಯನ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ತನಿಖಾ ಸಂಸ್ಥೆಗಳು ತಮ್ಮ ದೊರೆಗಳನ್ನು ಮೆಚ್ಚಿಸಲು ಕಾನೂನುಬಾಹಿರ ಮಾರ್ಗಗಳನ್ನು ಬಳಸುತ್ತಿವೆ ಎಂದು ಅವರು ಹೇಳಿದ್ದಾರೆ. ಎನ್‌ಐಎ ತನಿಖೆಯಲ್ಲಿ ಅಂತಹ ಯಾವುದೇ ಆರೋಪಗಳು ಬಂದಿಲ್ಲ ಎಂದು ಕೇರಳ ಸಿಎಂ ಹೇಳಿದ್ದಾರೆ.

“ರಾಜಕೀಯ ಉದ್ದೇಶಗಳಿಗಾಗಿ ತನಿಖಾ ಸಂಸ್ಥೆಗಳನ್ನು ಹೇಗೆ ಬಳಸಬೇಕೆಂದು ನೋಡುತ್ತಿದ್ದಾರೆ. ತನಿಖಾ ಸಂಸ್ಥೆಗಳ ಅಸಹಾಯಕತೆಯನ್ನು ನಾವು ಅರ್ಥಮಾಡಿಕೊಳ್ಳಬಹುದು. ಯಾವುದೇ ತನಿಖಾ ಸಂಸ್ಥೆ ಮುಂದೆ ಈ ರೀತಿ ವರ್ತಿಸಬಾರದು. ಈ ಸಂದರ್ಭದಲ್ಲಿ, ಏಜೆನ್ಸಿ ಸರಿಯಾದ ದಿಕ್ಕಿನಲ್ಲಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ. ತಮ್ಮ ಯಜಮಾನರ ನಿರ್ದೇಶನದಂತೆ ಕೆಲಸ ಮಾಡಲು ಅವರನ್ನು ಒತ್ತಾಯಿಸಲಾಗುತ್ತಿದೆ’ ಎಂದಿದ್ದಾರೆ.

ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಈ ಬಗ್ಗೆ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ ವಿಜಯನ್, ಅವರು ಎಲ್‌ಡಿಎಫ್ ಅನ್ನು ನಾಶಮಾಡಲು ಬಯಸಿದ್ದಾರೆ. ಆದರೆ ನೀವು ನಾಶಪಡಿಸುವಂತಹ ಯಾವುದನ್ನೂ ನಾವು ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ, ಸರ್ಕಾರವು ಮಾಡಬೇಕಾದ ಕೆಲಸಗಳನ್ನು ಮಾತ್ರ ನಾವು ಮಾಡಿದ್ದೇವೆ. ಎಲ್‌ಡಿಎಫ್ ಅದರ ಅಭಿವೃದ್ಧಿ ಚಟುವಟಿಕೆಗಳೊಂದಿಗೆ ಮುಂದುವರಿಯುತ್ತದೆ. ಈ ರಾಜ್ಯದ ಜನರನ್ನು ಬೆದರಿಸುತ್ತಿವೆ ಎಂಬುದನ್ನು ಬಿಜೆಪಿ ಮತ್ತು ಕಾಂಗ್ರೆಸ್ ಅರಿತುಕೊಳ್ಳಬೇಕು’ ಎಂದು ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...