Homeಮುಖಪುಟಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

ಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

'ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ'

- Advertisement -
- Advertisement -

ವಿದೇಶಿ ಕರೆನ್ಸಿ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ, ಅವರ ಕ್ಯಾಬಿನೆಟ್ ಸಹೋದ್ಯೋಗಿ ಮತ್ತು ವಿಧಾನಸಭೆ ಸ್ಪೀಕರ್ ಅವರ ಹೆಸರನ್ನು ಉಲ್ಲೇಖಿಸಿ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಕಸ್ಟಮ್ಸ್ ಇಲಾಖೆಯ ಕ್ರಮಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.

ಕೇಂದ್ರ ಏಜೆನ್ಸಿ ಕೇರಳದಲ್ಲಿ ಬಿಜೆಪಿ ಪರ ಚುನಾವಣೆ ಪ್ರಚಾರ ಕೈಗೆತ್ತಿಕೊಂಡಿದೆ ಎಂದು ವ್ಯಂಗ್ಯ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ  ಉಲ್ಲೇಖಿಸಿದೆ.

ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರು ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕಸ್ಟಮ್ಸ್ ಇಲಾಖೆ, ಗುರುವಾರ ವಿಜಯನ್ ಮತ್ತು ವಿಧಾನಸಭಾ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರ ಅನುಮತಿಯಂತೆ ವಿದೇಶಿ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಅಫಿಡವಿಟ್ ಸಲ್ಲಿಸಿದೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಸ್ವಪ್ನಾಗೆ ವಿಶೇಷ ರಕ್ಷಣೆ ನೀಡುವಂತೆ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಇಲಾಖೆ ಅಫಿಡವಿಟ್ ಸಲ್ಲಿಸಿದೆ. ಹೈಕೋರ್ಟಿನಲ್ಲಿ ಕಸ್ಟಮ್ಸ್ ಅಫಿಡವಿಟ್ ಪ್ರತಿಭಟಿಸಿ ಎಲ್‌ಡಿಎಫ್ ಕಾರ್ಯಕರ್ತರು ಶನಿವಾರ ತಿರುವನಂತಪುರಂ, ಕೊಚ್ಚಿ ಮತ್ತು ಕೋ ಕೊಝಿಕೋಡ್‌ನಲ್ಲಿರುವ ಕಸ್ಟಮ್ಸ್ ಕಚೇರಿಗಳಿಗೆ ಮೆರವಣಿಗೆ ನಡೆಸಿದರು.

ಚುನಾವಣೆಯ ಸಮಯದಲ್ಲಿ ಕಸ್ಟಮ್ಸ್ ಇಲಾಖೆ ರಾಜಕೀಯ ಕಾರ್ಯಗಳನ್ನು ಪ್ರಾರಂಭಿಸಿದೆ ಎಂದು ವಿಜಯನ್ ಹೇಳಿದ್ದಾರೆ. “ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ನಾವು ಅದನ್ನು ಎದುರಿಸುತ್ತೇವೆ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ” ಎಂದಿದ್ದಾರೆ.

’ಬಿಜೆಪಿ ಮತ್ತು ಅವರ ರಾಗಗಳಿಗೆ ನೃತ್ಯ ಮಾಡುವ ಏಜೆನ್ಸಿಗಳಿಗೆ ನಾನು ಹೇಳುತ್ತೇನೆ, ನೀವು ವ್ಯವಹರಿಸಲು ಒಗ್ಗಿಕೊಂಡಿರುವ ಜನರಲ್ಲ ನಾವು. ನಾವೇ ಬೇರೆ. ನೀವು ಏನು ಮಾಡಿದರೂ, ಈ ನೆಲ ನಮ್ಮನ್ನು ದೂಷಿಸುವುದಿಲ್ಲ. ನಮ್ಮ ಜೀವನವು ತೆರೆದ ಪುಸ್ತಕಗಳು, ಮತ್ತು ನೀವು ಅದನ್ನು ಶೀಘ್ರದಲ್ಲೇ ಅರಿತುಕೊಳ್ಳುವಿರಿ’ ಎಂದಿದ್ದಾರೆ.

ಇದನ್ನೂ  ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಫಿಡವಿಟ್ ಅನ್ನು ಉಲ್ಲೇಖಿಸಿರುವ ವಿಜಯನ್, ’ಕಸ್ಟಮ್ಸ್ ಆಯುಕ್ತರು ನವೆಂಬರ್‌ನಲ್ಲಿ ಆರೋಪಿ (ಸ್ವಪ್ನಾ ಸುರೇಶ್) ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯಲ್ಲಿನ ಕೆಲವು ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ಅವರು ಕ್ರಿಮಿನಲ್ ಇತರೆ ಅರ್ಜಿಯಲ್ಲಿ ಹೇಳಿಕೆ ನೀಡಿದ್ದು, ಇದರಲ್ಲಿ ಸ್ವಪ್ನಾ ಮತ್ತು ಕಸ್ಟಮ್ಸ್ ತಡೆಗಟ್ಟುವ ಅಧೀಕ್ಷಕರು ಪ್ರತಿಕ್ರಿಯಿಸಿದ್ದಾರೆ. ಅರ್ಜಿಯಲ್ಲಿ ಪ್ರತಿವಾದಿಯಲ್ಲದ ಆಯುಕ್ತರು ನ್ಯಾಯಾಲಯದ ಮುಂದೆ ಹೇಳಿಕೆ ನೀಡುತ್ತಿರುವುದು ಅಭೂತಪೂರ್ವವಾಗಿದೆ’ ಎಂದು ಪ್ರಶ್ನೆ ಮಾಡಿದ್ದಾರೆ.

2020 ರ ಜುಲೈನಿಂದ ಸ್ವಪ್ನಾ ವಿವಿಧ ಕೇಂದ್ರದ ತನಿಖಾ ಸಂಸ್ಥೆಗಳ ವಶದಲ್ಲಿದ್ದರು ಎಂದು ಹೇಳಿರುವ ವಿಜಯನ್ , ” ಹೀಗಿದ್ದರೂ ಆಕೆ ಕೇವಲ ಕಸ್ಟಮ್ಸ್ ಮುಂದೆ ಇಂತಹ ಮಹಾನ್ ಹೇಳಿಕೆಯನ್ನು ನೀಡಿದ್ದಾರೆ, ಕಸ್ಟಮ್ಸ್ ಮತ್ತು ಆಕೆಯ ಹೇಳಿಕೆಯ ಹಿಂದೆ ಕೆಲಸ ಮಾಡಿದವರು ಉತ್ತರಗಳನ್ನು ನೀಡಬೇಕು. ಸಿಆರ್‌ಪಿಸಿ 164 ರ ಹೇಳಿಕೆಯನ್ನು ಬಹಿರಂಗಪಡಿಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕಸ್ಟಮ್ಸ್ ಆಯುಕ್ತರು ಸ್ಪೀಕರ್ ಮತ್ತು ಕ್ಯಾಬಿನೆಟ್ ಸದಸ್ಯರನ್ನು ಕೆಣಕಲು ಸಾಹಸ ಮಾಡಿದ್ದಾರೆ. ಇದು ಕೇಂದ್ರದಲ್ಲಿನ ಪಕ್ಷದ ಸಂಕುಚಿತ ಹಿತಾಸಕ್ತಿಯನ್ನು ರಕ್ಷಿಸುವ ಪ್ರಯತ್ನವಾಗಿದೆ’ ಎಂದು ವಿಜಯನ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ತನಿಖಾ ಸಂಸ್ಥೆಗಳು ತಮ್ಮ ದೊರೆಗಳನ್ನು ಮೆಚ್ಚಿಸಲು ಕಾನೂನುಬಾಹಿರ ಮಾರ್ಗಗಳನ್ನು ಬಳಸುತ್ತಿವೆ ಎಂದು ಅವರು ಹೇಳಿದ್ದಾರೆ. ಎನ್‌ಐಎ ತನಿಖೆಯಲ್ಲಿ ಅಂತಹ ಯಾವುದೇ ಆರೋಪಗಳು ಬಂದಿಲ್ಲ ಎಂದು ಕೇರಳ ಸಿಎಂ ಹೇಳಿದ್ದಾರೆ.

“ರಾಜಕೀಯ ಉದ್ದೇಶಗಳಿಗಾಗಿ ತನಿಖಾ ಸಂಸ್ಥೆಗಳನ್ನು ಹೇಗೆ ಬಳಸಬೇಕೆಂದು ನೋಡುತ್ತಿದ್ದಾರೆ. ತನಿಖಾ ಸಂಸ್ಥೆಗಳ ಅಸಹಾಯಕತೆಯನ್ನು ನಾವು ಅರ್ಥಮಾಡಿಕೊಳ್ಳಬಹುದು. ಯಾವುದೇ ತನಿಖಾ ಸಂಸ್ಥೆ ಮುಂದೆ ಈ ರೀತಿ ವರ್ತಿಸಬಾರದು. ಈ ಸಂದರ್ಭದಲ್ಲಿ, ಏಜೆನ್ಸಿ ಸರಿಯಾದ ದಿಕ್ಕಿನಲ್ಲಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ. ತಮ್ಮ ಯಜಮಾನರ ನಿರ್ದೇಶನದಂತೆ ಕೆಲಸ ಮಾಡಲು ಅವರನ್ನು ಒತ್ತಾಯಿಸಲಾಗುತ್ತಿದೆ’ ಎಂದಿದ್ದಾರೆ.

ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಈ ಬಗ್ಗೆ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ ವಿಜಯನ್, ಅವರು ಎಲ್‌ಡಿಎಫ್ ಅನ್ನು ನಾಶಮಾಡಲು ಬಯಸಿದ್ದಾರೆ. ಆದರೆ ನೀವು ನಾಶಪಡಿಸುವಂತಹ ಯಾವುದನ್ನೂ ನಾವು ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ, ಸರ್ಕಾರವು ಮಾಡಬೇಕಾದ ಕೆಲಸಗಳನ್ನು ಮಾತ್ರ ನಾವು ಮಾಡಿದ್ದೇವೆ. ಎಲ್‌ಡಿಎಫ್ ಅದರ ಅಭಿವೃದ್ಧಿ ಚಟುವಟಿಕೆಗಳೊಂದಿಗೆ ಮುಂದುವರಿಯುತ್ತದೆ. ಈ ರಾಜ್ಯದ ಜನರನ್ನು ಬೆದರಿಸುತ್ತಿವೆ ಎಂಬುದನ್ನು ಬಿಜೆಪಿ ಮತ್ತು ಕಾಂಗ್ರೆಸ್ ಅರಿತುಕೊಳ್ಳಬೇಕು’ ಎಂದು ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...