Homeಮುಖಪುಟಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

ಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

'ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ'

- Advertisement -
- Advertisement -

ವಿದೇಶಿ ಕರೆನ್ಸಿ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ, ಅವರ ಕ್ಯಾಬಿನೆಟ್ ಸಹೋದ್ಯೋಗಿ ಮತ್ತು ವಿಧಾನಸಭೆ ಸ್ಪೀಕರ್ ಅವರ ಹೆಸರನ್ನು ಉಲ್ಲೇಖಿಸಿ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಕಸ್ಟಮ್ಸ್ ಇಲಾಖೆಯ ಕ್ರಮಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.

ಕೇಂದ್ರ ಏಜೆನ್ಸಿ ಕೇರಳದಲ್ಲಿ ಬಿಜೆಪಿ ಪರ ಚುನಾವಣೆ ಪ್ರಚಾರ ಕೈಗೆತ್ತಿಕೊಂಡಿದೆ ಎಂದು ವ್ಯಂಗ್ಯ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ  ಉಲ್ಲೇಖಿಸಿದೆ.

ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರು ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕಸ್ಟಮ್ಸ್ ಇಲಾಖೆ, ಗುರುವಾರ ವಿಜಯನ್ ಮತ್ತು ವಿಧಾನಸಭಾ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರ ಅನುಮತಿಯಂತೆ ವಿದೇಶಿ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಅಫಿಡವಿಟ್ ಸಲ್ಲಿಸಿದೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಸ್ವಪ್ನಾಗೆ ವಿಶೇಷ ರಕ್ಷಣೆ ನೀಡುವಂತೆ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಇಲಾಖೆ ಅಫಿಡವಿಟ್ ಸಲ್ಲಿಸಿದೆ. ಹೈಕೋರ್ಟಿನಲ್ಲಿ ಕಸ್ಟಮ್ಸ್ ಅಫಿಡವಿಟ್ ಪ್ರತಿಭಟಿಸಿ ಎಲ್‌ಡಿಎಫ್ ಕಾರ್ಯಕರ್ತರು ಶನಿವಾರ ತಿರುವನಂತಪುರಂ, ಕೊಚ್ಚಿ ಮತ್ತು ಕೋ ಕೊಝಿಕೋಡ್‌ನಲ್ಲಿರುವ ಕಸ್ಟಮ್ಸ್ ಕಚೇರಿಗಳಿಗೆ ಮೆರವಣಿಗೆ ನಡೆಸಿದರು.

ಚುನಾವಣೆಯ ಸಮಯದಲ್ಲಿ ಕಸ್ಟಮ್ಸ್ ಇಲಾಖೆ ರಾಜಕೀಯ ಕಾರ್ಯಗಳನ್ನು ಪ್ರಾರಂಭಿಸಿದೆ ಎಂದು ವಿಜಯನ್ ಹೇಳಿದ್ದಾರೆ. “ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ನಾವು ಅದನ್ನು ಎದುರಿಸುತ್ತೇವೆ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ” ಎಂದಿದ್ದಾರೆ.

’ಬಿಜೆಪಿ ಮತ್ತು ಅವರ ರಾಗಗಳಿಗೆ ನೃತ್ಯ ಮಾಡುವ ಏಜೆನ್ಸಿಗಳಿಗೆ ನಾನು ಹೇಳುತ್ತೇನೆ, ನೀವು ವ್ಯವಹರಿಸಲು ಒಗ್ಗಿಕೊಂಡಿರುವ ಜನರಲ್ಲ ನಾವು. ನಾವೇ ಬೇರೆ. ನೀವು ಏನು ಮಾಡಿದರೂ, ಈ ನೆಲ ನಮ್ಮನ್ನು ದೂಷಿಸುವುದಿಲ್ಲ. ನಮ್ಮ ಜೀವನವು ತೆರೆದ ಪುಸ್ತಕಗಳು, ಮತ್ತು ನೀವು ಅದನ್ನು ಶೀಘ್ರದಲ್ಲೇ ಅರಿತುಕೊಳ್ಳುವಿರಿ’ ಎಂದಿದ್ದಾರೆ.

ಇದನ್ನೂ  ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಫಿಡವಿಟ್ ಅನ್ನು ಉಲ್ಲೇಖಿಸಿರುವ ವಿಜಯನ್, ’ಕಸ್ಟಮ್ಸ್ ಆಯುಕ್ತರು ನವೆಂಬರ್‌ನಲ್ಲಿ ಆರೋಪಿ (ಸ್ವಪ್ನಾ ಸುರೇಶ್) ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯಲ್ಲಿನ ಕೆಲವು ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ಅವರು ಕ್ರಿಮಿನಲ್ ಇತರೆ ಅರ್ಜಿಯಲ್ಲಿ ಹೇಳಿಕೆ ನೀಡಿದ್ದು, ಇದರಲ್ಲಿ ಸ್ವಪ್ನಾ ಮತ್ತು ಕಸ್ಟಮ್ಸ್ ತಡೆಗಟ್ಟುವ ಅಧೀಕ್ಷಕರು ಪ್ರತಿಕ್ರಿಯಿಸಿದ್ದಾರೆ. ಅರ್ಜಿಯಲ್ಲಿ ಪ್ರತಿವಾದಿಯಲ್ಲದ ಆಯುಕ್ತರು ನ್ಯಾಯಾಲಯದ ಮುಂದೆ ಹೇಳಿಕೆ ನೀಡುತ್ತಿರುವುದು ಅಭೂತಪೂರ್ವವಾಗಿದೆ’ ಎಂದು ಪ್ರಶ್ನೆ ಮಾಡಿದ್ದಾರೆ.

2020 ರ ಜುಲೈನಿಂದ ಸ್ವಪ್ನಾ ವಿವಿಧ ಕೇಂದ್ರದ ತನಿಖಾ ಸಂಸ್ಥೆಗಳ ವಶದಲ್ಲಿದ್ದರು ಎಂದು ಹೇಳಿರುವ ವಿಜಯನ್ , ” ಹೀಗಿದ್ದರೂ ಆಕೆ ಕೇವಲ ಕಸ್ಟಮ್ಸ್ ಮುಂದೆ ಇಂತಹ ಮಹಾನ್ ಹೇಳಿಕೆಯನ್ನು ನೀಡಿದ್ದಾರೆ, ಕಸ್ಟಮ್ಸ್ ಮತ್ತು ಆಕೆಯ ಹೇಳಿಕೆಯ ಹಿಂದೆ ಕೆಲಸ ಮಾಡಿದವರು ಉತ್ತರಗಳನ್ನು ನೀಡಬೇಕು. ಸಿಆರ್‌ಪಿಸಿ 164 ರ ಹೇಳಿಕೆಯನ್ನು ಬಹಿರಂಗಪಡಿಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕಸ್ಟಮ್ಸ್ ಆಯುಕ್ತರು ಸ್ಪೀಕರ್ ಮತ್ತು ಕ್ಯಾಬಿನೆಟ್ ಸದಸ್ಯರನ್ನು ಕೆಣಕಲು ಸಾಹಸ ಮಾಡಿದ್ದಾರೆ. ಇದು ಕೇಂದ್ರದಲ್ಲಿನ ಪಕ್ಷದ ಸಂಕುಚಿತ ಹಿತಾಸಕ್ತಿಯನ್ನು ರಕ್ಷಿಸುವ ಪ್ರಯತ್ನವಾಗಿದೆ’ ಎಂದು ವಿಜಯನ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ತನಿಖಾ ಸಂಸ್ಥೆಗಳು ತಮ್ಮ ದೊರೆಗಳನ್ನು ಮೆಚ್ಚಿಸಲು ಕಾನೂನುಬಾಹಿರ ಮಾರ್ಗಗಳನ್ನು ಬಳಸುತ್ತಿವೆ ಎಂದು ಅವರು ಹೇಳಿದ್ದಾರೆ. ಎನ್‌ಐಎ ತನಿಖೆಯಲ್ಲಿ ಅಂತಹ ಯಾವುದೇ ಆರೋಪಗಳು ಬಂದಿಲ್ಲ ಎಂದು ಕೇರಳ ಸಿಎಂ ಹೇಳಿದ್ದಾರೆ.

“ರಾಜಕೀಯ ಉದ್ದೇಶಗಳಿಗಾಗಿ ತನಿಖಾ ಸಂಸ್ಥೆಗಳನ್ನು ಹೇಗೆ ಬಳಸಬೇಕೆಂದು ನೋಡುತ್ತಿದ್ದಾರೆ. ತನಿಖಾ ಸಂಸ್ಥೆಗಳ ಅಸಹಾಯಕತೆಯನ್ನು ನಾವು ಅರ್ಥಮಾಡಿಕೊಳ್ಳಬಹುದು. ಯಾವುದೇ ತನಿಖಾ ಸಂಸ್ಥೆ ಮುಂದೆ ಈ ರೀತಿ ವರ್ತಿಸಬಾರದು. ಈ ಸಂದರ್ಭದಲ್ಲಿ, ಏಜೆನ್ಸಿ ಸರಿಯಾದ ದಿಕ್ಕಿನಲ್ಲಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ. ತಮ್ಮ ಯಜಮಾನರ ನಿರ್ದೇಶನದಂತೆ ಕೆಲಸ ಮಾಡಲು ಅವರನ್ನು ಒತ್ತಾಯಿಸಲಾಗುತ್ತಿದೆ’ ಎಂದಿದ್ದಾರೆ.

ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಈ ಬಗ್ಗೆ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ ವಿಜಯನ್, ಅವರು ಎಲ್‌ಡಿಎಫ್ ಅನ್ನು ನಾಶಮಾಡಲು ಬಯಸಿದ್ದಾರೆ. ಆದರೆ ನೀವು ನಾಶಪಡಿಸುವಂತಹ ಯಾವುದನ್ನೂ ನಾವು ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ, ಸರ್ಕಾರವು ಮಾಡಬೇಕಾದ ಕೆಲಸಗಳನ್ನು ಮಾತ್ರ ನಾವು ಮಾಡಿದ್ದೇವೆ. ಎಲ್‌ಡಿಎಫ್ ಅದರ ಅಭಿವೃದ್ಧಿ ಚಟುವಟಿಕೆಗಳೊಂದಿಗೆ ಮುಂದುವರಿಯುತ್ತದೆ. ಈ ರಾಜ್ಯದ ಜನರನ್ನು ಬೆದರಿಸುತ್ತಿವೆ ಎಂಬುದನ್ನು ಬಿಜೆಪಿ ಮತ್ತು ಕಾಂಗ್ರೆಸ್ ಅರಿತುಕೊಳ್ಳಬೇಕು’ ಎಂದು ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...