Homeಮುಖಪುಟತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ಉದಯನಿಧಿಗೆ ಟಿಕೆಟ್ ಬಗ್ಗೆ ಪಕ್ಷದಿಂದ ಯಾವುದೇ ಅಧಿಕೃತ ಘೋಷಣೆಗಳು ಬಂದಿಲ್ಲ. ಆದರೆ ಪ್ರತಿಪಕ್ಷಗಳು ಉದಯನಿಧಿ ವಿರುದ್ಧ ಈಗಾಗಲೇ ಹಲವು ಯೋಜನೆಗಳನ್ನು ಮಾಡಿಕೊಂಡಿವೆ.

- Advertisement -
- Advertisement -

ಪಂಚರಾಜ್ಯ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗೆ ಪಕ್ಷಗಳು ಬಿರುಸಿನ ತಯಾರಿ ನಡೆಸಿವೆ. ತಮಿಳುನಾಡಿನ ಡಿಎಂಕೆ ಯುವ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದರ ನಡುವೆಯೇ ಟಿಕೆಟ್‌ಗಾಗಿ ಸಂದರ್ಶನ ಕೂಡ ಎದುರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ, ಚೆಪಾಕ್-ತಿರುವಳ್ಳಿಕೇಣಿ ಕ್ಷೇತ್ರದಿಂದ ಸ್ಪರ್ಧಿಸಲು ಉದಯನಿಧಿ ತಮ್ಮ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಊಹಪೋಹಗಳ ನಂತರ ಅವರ ಸುತ್ತ ವಿವಿಧ ಟೀಕೆಗಳು ಮತ್ತು ಪ್ರಶ್ನೆಗಳು ಎದ್ದಿವೆ. ಪ್ರತಿಪಕ್ಷಗಳು ಡಿಎಂಕೆ ವಿರುದ್ಧ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದು, ಇದು ಉತ್ತರಾಧಿಕಾರ ರಾಜಕೀಯ ಮತ್ತು ಕುಟುಂಬ ರಾಜಕಾರಣವನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿದೆ. ಇದನ್ನು ಕೊನೆಗೊಳಿಸಲು, ಉದಯನಿಧಿ ಸ್ಟಾಲಿನ್ ಈ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವರದಿಯಾಗಿತ್ತು.

ಆದರೆ, ಶನಿವಾರ ತಮಿಳುನಾಡಿನ ಚೆನ್ನೈನಲ್ಲಿರುವ ಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಉದಯನಿಧಿ ಸ್ಟಾಲಿನ್, ಡಿಎಂಕೆ ಚುನಾವಣಾ ಸಮಿತಿಯ ಎದುರು ಹಾಜರಾಗಿ ಸಂದರ್ಶನ ನೀಡಿದ್ದಾರೆ. ಡಿಎಂಕೆ ಪಕ್ಷದ ಟಿಕೆಟ್ ಪಡೆದುಕೊಳ್ಳುವ ಆಕಾಂಕ್ಷಿಗಳು ಡಿಎಂಕೆ ಚುನಾವಣಾ ಸಮಿತಿಯ ಎದುರು ಹಾಜರಾಗಿ ಸಂದರ್ಶನ ನೀಡುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

ಪ್ರಮುಖ ಡಿಎಂಕೆ ಚುನಾವಣಾ ಅಧಿಕಾರಿಗಳು ಉದಯನಿಧಿ ಸ್ಪರ್ಧೆ 100% ನಿರ್ಧಾರವಾಗಿಲ್ಲ ಎಂದು ಹೇಳಿದ್ದಾರೆ. ಆದರೆ ರಾಜಕೀಯ ರಂಗದಲ್ಲಿ ಏನು ಬೇಕಾದರೂ ಆಗುವುದರಿಂದ, ಡಿಎಂಕೆ ಯುವ ಕಾರ್ಯದರ್ಶಿ ವಿರುದ್ಧ ಪ್ರತಿಪಕ್ಷಗಳು ಅವರನ್ನು ಸೋಲಿಸಲು ಅಗತ್ಯವಾದ ಎಲ್ಲ ಕೆಲಸಗಳಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.

ದಿವಂಗತ ಕರುಣಾನಿಧಿಯವರ ಮೊಮ್ಮಗ ಸ್ಪರ್ಧಿಸಲು ಯೋಜಿಸಿದ್ದಾರೆ ಎನ್ನಲಾದ ಚೆಪಾಕ್-ತಿರುವಳ್ಳಿಕೆಣಿ ಕ್ಷೇತ್ರದಲ್ಲಿ, ಡಿಎಂಕೆಯ ಪ್ರಮುಖ ಪ್ರತಿಸ್ಪರ್ಧಿ ಪಕ್ಷ ಎಐಎಡಿಎಂಕೆ-ಬಿಜೆಪಿ ಮೈತ್ರಿಯ ಅಭ್ಯರ್ಥಿ ನಟಿ ಖುಷ್ಬೂ ಅವರನ್ನು ಕಣಕ್ಕಿಳಿಸಲು ಯೋಜಿಸುತ್ತಿದೆ.

ಸಂದರ್ಶನದಲ್ಲಿ ಭಾಗಿಯಾಗಿರುವ ಕುರಿತು ಪ್ರತಿಪಕ್ಷಗಳು ಎತ್ತಿರುವ ಪ್ರಶ್ನೆಗೆ, “ಪಕ್ಷದ ಅನೇಕ ಕಾರ್ಯಕರ್ತರು ಸಂದರ್ಶನದಲ್ಲಿ ಪಕ್ಷದ ನಾಯಕರನ್ನು ವೈಯಕ್ತಿಕವಾಗಿ ಭೇಟಿಯಾಗಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ತಂದೆ-ಮಗನ ಸಂಬಂಧ ಏನೇ ಇರಲಿ, ಪಕ್ಷದ ಕಾರ್ಯಕರ್ತರಾಗಿ ಉದಯನಿಧಿ ಸ್ಟಾಲಿನ್ ಸಂದರ್ಶನಕ್ಕೆ ಹಾಜರಾಗಬೇಕಾಗಿತ್ತು. ಆ ಭಾವನೆಯಿಂದ ಉದಯನಿಧಿ ಅವರು ಸಂದರ್ಶನದಲ್ಲಿ ಭಾಗವಹಿಸಿದರು” ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಪಕ್ಷದಲ್ಲಿ ಈವರೆಗೆ ಕರುಣಾನಿಧಿ ಮೊಮ್ಮಗನಿಗೆ ಟಿಕೆಟ್ ನೀಡುವ ಬಗ್ಗೆ ನಿರ್ಧಾರವಾಗಿಲ್ಲ. ಪಕ್ಷದಿಂದ ಯಾವುದೇ ಅಧಿಕೃತ ಘೋಷಣೆಗಳು ಬಂದಿಲ್ಲ. ಆದರೆ ಪ್ರತಿಪಕ್ಷಗಳು ಉದಯನಿಧಿ ವಿರುದ್ಧ ಈಗಾಗಲೇ ಹಲವು ಯೋಜನೆಗಳನ್ನು ಮಾಡಿಕೊಂಡಿವೆ.


ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...