Homeಮುಖಪುಟಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ...

ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

- Advertisement -
- Advertisement -

ನಿನ್ನೆ ಬಳ್ಳಾರಿಯ ಎಪಿಎಂಸಿಗೆ ಭೇಟಿ ನೀಡಿದ್ದೇವು. ಮೆಕ್ಕೆ ಜೋಳಕ್ಕೆ ಒಂದು ಕ್ವಿಂಟಾಲ್‌ಗೆ ಎಂಎಸ್‌ಪಿ 1850 ರೂ ಇದೆ. ಆದರೆ ಬಳ್ಳಾರಿಯಲ್ಲಿ ಕೇವಲ 1459 ರೂ ನೀಡಲಾಗುತ್ತಿದೆ. ಅಂದರೆ ಪ್ರತಿ ಕ್ವಿಂಟಾಲ್‌ಗೆ ರೈತರಿಂದ 400 ರೂ ಲೂಟಿ ಹೊಡೆಯಲಾಗುತ್ತಿದೆ. ಜೋಳಕ್ಕೆ ಕ್ವಿಂಟಲ್‌ಗೆ 2600 ರೂ ಇದೆ. ಆದರೆ ಬಳ್ಳಾರಿಯಲ್ಲಿ 1728 ರೂ ನೀಡಲಾಗುತ್ತಿದೆ. ಕ್ವಿಂಟಾಲ್‌ಗೆ 900 ರೂ ಕಡಿಮೆ ನೀಡಲಾಗುತ್ತಿದೆ. ಇದು ನಾವು ಕೇವಲ ಕನಿಷ್ಟ ಬೆಂಬಲ ಬೆಲೆಯ ಬಗ್ಗೆ ಮಾತನಾಡುತ್ತಿದ್ದೇವೆ ಹೊರತು ಗರಿಷ್ಟ ಬೆಂಬಲ ಬೆಲೆಯ ಬಗ್ಗೆ ಅಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ 7 ಜನರ ಸಮನ್ವಯ ಸಮಿತಿಯ ಭಾಗವಾದ ನಾನು ಇಂದು ಇಂದು ಕರ್ನಾಟಕಕ್ಕೆ ಬಂದಿದ್ದೇನೆ. ಐತಿಹಾಸಿಕ ರೈತ ಹೋರಾಟವು ಸೆಂಚುರಿ ದಿನಗಳನ್ನು ಪೂರೈಸಿದೆ. ಇದರಿಂದ ನಮಗೆ ಸಂತೋಷವಾಗಿಲ್ಲ. ಏಕೆಂದರೆ ನಾವು ನೂರು ದಿನಗಳನ್ನು ಪೂರೈಸಲು ಹೋರಾಟ ನಡೆಸುತ್ತಿಲ್ಲ. ಬದಲಿಗೆ ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಡುತ್ತಿದ್ದೇವೆ” ಎಂದರು.

ಕಡಲೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 5100ರೂ ಇದೆ. ಆದರೆ ಕೇವಲ 4182 ರೂ ನೀಡುತ್ತಿದ್ದಾರೆ. ತೊಗರಿ ಬೆಳೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 6000 ರೂ ಇದೆ. ಆದರೆ ಕೇವಲ 4943 ರೂ ನೀಡಲಾಗುತ್ತಿದೆ. ಇದು ಕೇವಲ ಒಂದು ಮಾರ್ಕೆಟ್‌ನ ಒಂದು ದಿನದ ಸ್ಯಾಂಪಲ್ ಅಷ್ಟೇ ನಾವು ಹೇಳುತ್ತಿರುವುದು. ಪ್ರಧಾನಿ ಮಂತ್ರಿ ಎಂಎಸ್‌ಪಿ ಇತ್ತು, ಇದೆ, ಇರಲಿದೆ ಎನ್ನುತ್ತಾರೆ. ನಾವು ಹೇಳುತ್ತೇವೆ ಎಂಎಸ್‌ಪಿ ಕಾಗದದಲ್ಲಿ ಇತ್ತು, ಕಾಗದಲ್ಲಿ ಇದೆ ಮತ್ತು ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನೂರು ದಿನಗಳಲ್ಲಿ ಕೇಂದ್ರ ಸರ್ಕಾರವು ರೈತರೊಂದಿಗೆ ಕಠಿಣವಾಗಿ ವರ್ತಿಸಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದೆ. ರೈತರ ವಿರುದ್ಧ ಪ್ರೊಪಗಂಡಾ ಯುದ್ದ ನಡೆಸಿದೆ. ಇದು ಸರ್ಕಾರದ ಉದ್ದಟತವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ರೈತರ ವಿರುದ್ಧ ಸುಳ್ಳು ಹೇಳಿದ ನೂರು ದಿನಗಳಾಗಿವೆ. ಇದು ಸರ್ಕಾರದ ಅಹಂಕಾರದ ಮತ್ತು ರೈತರ ಸಂಕಲ್ಪದ ನೂರು ದಿನಗಳಾಗಿವೆ ಎಂದರು.

ಈ ಐತಿಹಾಸಿಕ ಹೋರಾಟವನ್ನು ಆರಂಭದಲ್ಲಿ ಇದು ಕೇವಲ ಪಂಜಾಬ್ ರೈತರ ಹೋರಾಟ ಎಂದರು. ನಂತರ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟ ಎಂದರು. ಆನಂತರ ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರಖಂಡ ಮತ್ತು ಉತ್ತರ ಪ್ರದೇಶದ ರೈತರ ಹೋರಾಟ ಎಂದರು. ಶೀಘ್ರದಲ್ಲಿಯೇ ಅವರು ಇದು ಕೇವಲ ಭಾರತದ ರೈತರ ಹೋರಾಟ ಎನ್ನುವ ಕಾಲ ಬರಲಿದೆ. ಈ ರೈತ ಹೋರಾಟ ಇಡೀ ದೇಶಕ್ಕೆ ಹರಡುತ್ತಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು.

ಸರ್ಕಾರ ಈ ಹೋರಾಟವನ್ನು ಕೊಲ್ಲಲು, ದಮನಿಸಲು ಯತ್ನಿಸುತ್ತಿದೆ. ಆದರೆ ಹೋರಾಟ ಮಾತ್ರ ದೊಡ್ಡದಾಗುತ್ತ ದೇಶಾದ್ಯಂತ ಹರಡುತ್ತಿದೆ. ಜನವರಿ 26ರ ನಂತರವಂತೂ ಈ ಹೋರಾಟವನ್ನು ಕೊನೆಗೊಳಿಸಲು ಸರ್ಕಾರ ಇನ್ನಿಲ್ಲದ ಯತ್ನ ಮಾಡಿತು. ದೆಹಲಿಯ ಗಡಿಗಳಲ್ಲಿ ರೈತರ ಸಂಖ್ಯೆ ಕರಗುತ್ತಿದೆ ಎಂದು ಮಾಧ್ಯಮಗಳು ತೋರಿಸುತ್ತಿವೆ. ಆದರೆ ಪಂಜಾಬ್‌ನ ಬರ್ನಾಲದಲ್ಲಿ, ಹರಿಯಾಣ ಖಂಡೇಲಾದಲ್ಲಿ, ರಾಜಸ್ಥಾನದ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿರುವುದನ್ನು ಅವು ಹೇಳುತ್ತಿಲ್ಲ. ಕರ್ನಾಟಕದಲ್ಲಿಯೂ ಮಹಾಪಂಚಾಯತ್ ನಡೆಸಲು ತಯಾರಿ ನಡೆದಿದೆ. ಕೇಂದ್ರ ಸಚಿವರೇ ಅವರ ಸ್ವಗ್ರಾಮಗಳಿಗೆ ಹೋಗಲು ಹೆದರುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿಯನ್ನು ಬಹಿಷ್ಕರಿಸಲಾಗುತ್ತಿದೆ. ಮದುವೆ ಸಮಾರಂಭಗಳಿಗೆ ಅವರನ್ನು ಆಹ್ವಾನಿಸುತ್ತಿಲ್ಲ. ಒಟ್ಟಾರೆಯಾಗಿ ಈ ಹೋರಾಟ ದೇಶಾದ್ಯಂತ ಹಬ್ಬುತ್ತಿದೆ ಎಂದರು.

ಪ್ರಧಾನ ಮಂತ್ರಿಗಳು ಎಂಎಸ್‌ಪಿ ಇತ್ತು, ಈಗಲೂ ಇದೆ ಮತ್ತು ಮುಂದೆಯು ಇರಲಿದೆ ಎಂದು ಹೇಳಿದ್ದಾರೆ. ಅದು ಎಲ್ಲಿದೆ ತೋರಿಸಿ, ಅದರ ವಿಳಾಸ ಕೊಡಿ ಎಂದು ನಾವು ಕೇಳುತ್ತಿದ್ದೇವೆ. ಹಾಗಾಗಿ ರೈತರಿಗೆ ಎಂಎಸ್‌ಪಿ ಕೊಡಿಸಿ ಎಂಬ ರಾಷ್ಟ್ರೀಯ ಆಂದೋಲನವನ್ನು ಕರ್ನಾಟಕದಿಂದ ಆರಂಭಿಸುತ್ತಿದ್ದೇವೆ ಎಂದು ಯೋಗೇಂದ್ರ ಯಾದವ್ ಹೇಳಿದರು.

ಕರ್ನಾಟಕ ರೈತ ಹೋರಾಟದ ಹೆಮ್ಮೆಯ ಸಂಕೇತವಾಗಿದೆ. ಇಲ್ಲಿ ಕಾಗೋಡು ಸತ್ಯಾಗ್ರಹ ನಡೆದಿದೆ. ಶಾಂತವೇರಿ ಗೋಪಾಲಗೌಡರು, ಪ್ರೊ ನಂಜುಂಡಸ್ವಾಮಿಯವರು ಬೃಹತ್ ರೈತ ಚಳವಳಿ ಕಟ್ಟಿದ್ದಾರೆ. 2020ರ ಸೆಪ್ಟಂಬರ್ 21 ರಂದೇ ಕರ್ನಾಟಕದಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿಗಳ ವಿರುದ್ಧ ಹೋರಾಟ ನಡೆದಿದೆ. ಹಾಗಾಗಿ ಕರ್ನಾಟಕದ ಕಲಬುರ್ಗಿ, ಬಳ್ಳಾರಿಯಿಂದ ನಮ್ಮ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಿದ್ದೇವೆ ಎಂದರು.

72% ಕರ್ನಾಟಕದ ಬೆಲೆಗಳು ಕರ್ನಾಟಕದಲ್ಲಿ ಎಂಎಸ್‌ಪಿಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಇದು ರೈತರ ಬಗೆಗಿನ ಕ್ರೂರ ಜೋಕ್ ಆಗಿದೆ. ಇದರಿಂದ ಕರ್ನಾಟಕ ಎಲ್ಲಾ ರೈತರಿಗೆ ಪ್ರತಿವರ್ಷ 3190 ಕೋಟಿ ರೂಗಳು ನಷ್ಟವಾಗುತ್ತಿದೆ. ಸ್ವಾಮಿನಾಥನ್‌ರವರ ಎಂಎಸ್‌ಪಿ ಲೆಕ್ಕಾಚಾರಲ್ಲಿ ಪ್ರತಿ ವರ್ಷ 2339 ಕೋಟಿ ರೂಗಳನ್ನು ರೈತರಿಂದ ಕಿತ್ತುಕೊಳ್ಳಲಾಗುತ್ತಿದೆ. ಕಿಸಾನ್ ಸಮ್ಮಾನ್ ಮೂಲಕ ಹಣ ಕೊಡುತ್ತಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇನ್ನೊಂದು ಕೈಯಲ್ಲಿ ಇಷ್ಟು ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಯೋಗೇಂದ್ರ ಯಾದವ್ ಕಿಡಿಕಾರಿದರು.

ಅಷ್ಟೊಂದು ಎಂಎಸ್‌ಪಿ ಕೊಡಲಾಗುತ್ತದೆಯೇ ಎಂದು ಹಲವರು ಕೇಳುತ್ತಾರೆ. ಖಂಡಿತವಾಗಿಯೂ ಕೊಡಲು ಸಾಧ್ಯ. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು ಅಷ್ಟೇ. ಅದಕ್ಕಾಗಿ ಕರ್ನಾಟಕದಲ್ಲಿ 10,000 ಕೋಟಿ ರೂಗಳು ಸಾಕು. ಎಲ್ಲರಿಗೂ ಎಂಎಸ್‌ಪಿ ನೀಡಬಹುದು ಎಂದರು.

ಹೋರಾಟಗಾರರಾದ ಡಾ.ವಾಸು ಎಚ್‌.ವಿ ಮಾತನಾಡಿ “ಕೇವಲ ಒಂದು ವರ್ಷದಲ್ಲಿ ಕರ್ನಾಟಕದಲ್ಲಿ 13 ಬೆಳೆಗಳಿಗೆ ಸಂಬಂಧಿಸಿದಂತೆ 20,000 ಕೋಟಿ ರೂ ನಷ್ಟವಾಗಿದೆ. ಇದರರ್ಥ ಕಳೆದ 20 ವರ್ಷದಲ್ಲಿ ಕರ್ನಾಟಕದ ರೈತರಿಗಾಗಿರುವ ನಷ್ಟ 4 ಲಕ್ಷ ಕೋಟಿ ರೂ. 2016 ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಶೇ‍ಷ ವರದಿ ಸಲ್ಲಿಸಿದೆ. ಅದರ ಪ್ರಕಾರ 2001 ರಿಂದ ಇಲ್ಲಿಯವರೆಗೆ ಬರ ಮತ್ತು ನೆರೆಯ ಕಾರಣಕ್ಕೆ ಆದ ನಷ್ಟ 4 ಲಕ್ಷ ಕೋಟಿ ರೂಗಳಾಗಿದೆ. ಅಂದರೆ ಬೆಳೆ ನಷ್ಟವೂ 4 ಲಕ್ಷ ಕೋಟಿ ರೂ ಮತ್ತು ಬರನಷ್ಟವು 4 ಲಕ್ಷ ಕೋಟಿ ರೂ ಆಗಿದೆ. ಇದನ್ನು ಕರ್ನಾಟಕದ ಗ್ರಾಮೀಣ ಭಾಗ 8 ಲಕ್ಷ ಕೋಟಿ ಸಬ್ಸಿಡಿ ಹಣವನ್ನು ಕೊಟ್ಟಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ರೈತರಿಗೆ ಸಬ್ಸಿಡಿ ಎಂದು ಹೇಳಲಾಗುತ್ತಿರುವುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ. ಅದಕ್ಕಾಗಿಯೇ ಈ ಹಿಂದೆ ಪ್ರೊ.ನಂಜುಂಡಸ್ವಾಮಿಯವರು ‘ರೈತ ಸಾಲಗಾರನಲ್ಲ, ಸರ್ಕಾರವೇ ಬಾಕಿದಾರ’ ಎಂಬ ಘೋಷಣೆ ನೀಡಿದ್ದರು” ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯ ವಿಡಿಯೋ ನೋಡಿ

ಪತ್ರಿಕಾಗೋಷ್ಠಿಯಲ್ಲಿ ಪಂಜಾಬಿನ ಹೋರಾಟಗಾರ ಸತ್ನಾಮ್ ಸಿಂಗ್, ಹರಿಯಾಣದ ದೀಪಕ್ ಲಂಬ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಪ್ರಕಾಶ್ ಕಮ್ಮರಡಿ, ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಚಾಮರಸಮಾಲೀ ಪಾಟೀಲ್, ಸಾಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, ಆರ್‌ಕೆಎಸ್‌ ಸಂಘಟನೆಯ ಶಿವಪ್ರಕಾಶ್ ಹಾಜರಿದ್ದರು.


ಇದನ್ನೂ ಓದಿ; ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...