Homeಮುಖಪುಟಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ...

ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ: ಯೋಗೇಂದ್ರ ಯಾದವ್

- Advertisement -
- Advertisement -

ನಿನ್ನೆ ಬಳ್ಳಾರಿಯ ಎಪಿಎಂಸಿಗೆ ಭೇಟಿ ನೀಡಿದ್ದೇವು. ಮೆಕ್ಕೆ ಜೋಳಕ್ಕೆ ಒಂದು ಕ್ವಿಂಟಾಲ್‌ಗೆ ಎಂಎಸ್‌ಪಿ 1850 ರೂ ಇದೆ. ಆದರೆ ಬಳ್ಳಾರಿಯಲ್ಲಿ ಕೇವಲ 1459 ರೂ ನೀಡಲಾಗುತ್ತಿದೆ. ಅಂದರೆ ಪ್ರತಿ ಕ್ವಿಂಟಾಲ್‌ಗೆ ರೈತರಿಂದ 400 ರೂ ಲೂಟಿ ಹೊಡೆಯಲಾಗುತ್ತಿದೆ. ಜೋಳಕ್ಕೆ ಕ್ವಿಂಟಲ್‌ಗೆ 2600 ರೂ ಇದೆ. ಆದರೆ ಬಳ್ಳಾರಿಯಲ್ಲಿ 1728 ರೂ ನೀಡಲಾಗುತ್ತಿದೆ. ಕ್ವಿಂಟಾಲ್‌ಗೆ 900 ರೂ ಕಡಿಮೆ ನೀಡಲಾಗುತ್ತಿದೆ. ಇದು ನಾವು ಕೇವಲ ಕನಿಷ್ಟ ಬೆಂಬಲ ಬೆಲೆಯ ಬಗ್ಗೆ ಮಾತನಾಡುತ್ತಿದ್ದೇವೆ ಹೊರತು ಗರಿಷ್ಟ ಬೆಂಬಲ ಬೆಲೆಯ ಬಗ್ಗೆ ಅಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ 7 ಜನರ ಸಮನ್ವಯ ಸಮಿತಿಯ ಭಾಗವಾದ ನಾನು ಇಂದು ಇಂದು ಕರ್ನಾಟಕಕ್ಕೆ ಬಂದಿದ್ದೇನೆ. ಐತಿಹಾಸಿಕ ರೈತ ಹೋರಾಟವು ಸೆಂಚುರಿ ದಿನಗಳನ್ನು ಪೂರೈಸಿದೆ. ಇದರಿಂದ ನಮಗೆ ಸಂತೋಷವಾಗಿಲ್ಲ. ಏಕೆಂದರೆ ನಾವು ನೂರು ದಿನಗಳನ್ನು ಪೂರೈಸಲು ಹೋರಾಟ ನಡೆಸುತ್ತಿಲ್ಲ. ಬದಲಿಗೆ ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಡುತ್ತಿದ್ದೇವೆ” ಎಂದರು.

ಕಡಲೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 5100ರೂ ಇದೆ. ಆದರೆ ಕೇವಲ 4182 ರೂ ನೀಡುತ್ತಿದ್ದಾರೆ. ತೊಗರಿ ಬೆಳೆಗೆ ಕ್ವಿಂಟಾಲ್‌ಗೆ ಎಂಎಸ್‌ಪಿ 6000 ರೂ ಇದೆ. ಆದರೆ ಕೇವಲ 4943 ರೂ ನೀಡಲಾಗುತ್ತಿದೆ. ಇದು ಕೇವಲ ಒಂದು ಮಾರ್ಕೆಟ್‌ನ ಒಂದು ದಿನದ ಸ್ಯಾಂಪಲ್ ಅಷ್ಟೇ ನಾವು ಹೇಳುತ್ತಿರುವುದು. ಪ್ರಧಾನಿ ಮಂತ್ರಿ ಎಂಎಸ್‌ಪಿ ಇತ್ತು, ಇದೆ, ಇರಲಿದೆ ಎನ್ನುತ್ತಾರೆ. ನಾವು ಹೇಳುತ್ತೇವೆ ಎಂಎಸ್‌ಪಿ ಕಾಗದದಲ್ಲಿ ಇತ್ತು, ಕಾಗದಲ್ಲಿ ಇದೆ ಮತ್ತು ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನೂರು ದಿನಗಳಲ್ಲಿ ಕೇಂದ್ರ ಸರ್ಕಾರವು ರೈತರೊಂದಿಗೆ ಕಠಿಣವಾಗಿ ವರ್ತಿಸಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದೆ. ರೈತರ ವಿರುದ್ಧ ಪ್ರೊಪಗಂಡಾ ಯುದ್ದ ನಡೆಸಿದೆ. ಇದು ಸರ್ಕಾರದ ಉದ್ದಟತವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ರೈತರ ವಿರುದ್ಧ ಸುಳ್ಳು ಹೇಳಿದ ನೂರು ದಿನಗಳಾಗಿವೆ. ಇದು ಸರ್ಕಾರದ ಅಹಂಕಾರದ ಮತ್ತು ರೈತರ ಸಂಕಲ್ಪದ ನೂರು ದಿನಗಳಾಗಿವೆ ಎಂದರು.

ಈ ಐತಿಹಾಸಿಕ ಹೋರಾಟವನ್ನು ಆರಂಭದಲ್ಲಿ ಇದು ಕೇವಲ ಪಂಜಾಬ್ ರೈತರ ಹೋರಾಟ ಎಂದರು. ನಂತರ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟ ಎಂದರು. ಆನಂತರ ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರಖಂಡ ಮತ್ತು ಉತ್ತರ ಪ್ರದೇಶದ ರೈತರ ಹೋರಾಟ ಎಂದರು. ಶೀಘ್ರದಲ್ಲಿಯೇ ಅವರು ಇದು ಕೇವಲ ಭಾರತದ ರೈತರ ಹೋರಾಟ ಎನ್ನುವ ಕಾಲ ಬರಲಿದೆ. ಈ ರೈತ ಹೋರಾಟ ಇಡೀ ದೇಶಕ್ಕೆ ಹರಡುತ್ತಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು.

ಸರ್ಕಾರ ಈ ಹೋರಾಟವನ್ನು ಕೊಲ್ಲಲು, ದಮನಿಸಲು ಯತ್ನಿಸುತ್ತಿದೆ. ಆದರೆ ಹೋರಾಟ ಮಾತ್ರ ದೊಡ್ಡದಾಗುತ್ತ ದೇಶಾದ್ಯಂತ ಹರಡುತ್ತಿದೆ. ಜನವರಿ 26ರ ನಂತರವಂತೂ ಈ ಹೋರಾಟವನ್ನು ಕೊನೆಗೊಳಿಸಲು ಸರ್ಕಾರ ಇನ್ನಿಲ್ಲದ ಯತ್ನ ಮಾಡಿತು. ದೆಹಲಿಯ ಗಡಿಗಳಲ್ಲಿ ರೈತರ ಸಂಖ್ಯೆ ಕರಗುತ್ತಿದೆ ಎಂದು ಮಾಧ್ಯಮಗಳು ತೋರಿಸುತ್ತಿವೆ. ಆದರೆ ಪಂಜಾಬ್‌ನ ಬರ್ನಾಲದಲ್ಲಿ, ಹರಿಯಾಣ ಖಂಡೇಲಾದಲ್ಲಿ, ರಾಜಸ್ಥಾನದ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿರುವುದನ್ನು ಅವು ಹೇಳುತ್ತಿಲ್ಲ. ಕರ್ನಾಟಕದಲ್ಲಿಯೂ ಮಹಾಪಂಚಾಯತ್ ನಡೆಸಲು ತಯಾರಿ ನಡೆದಿದೆ. ಕೇಂದ್ರ ಸಚಿವರೇ ಅವರ ಸ್ವಗ್ರಾಮಗಳಿಗೆ ಹೋಗಲು ಹೆದರುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿಯನ್ನು ಬಹಿಷ್ಕರಿಸಲಾಗುತ್ತಿದೆ. ಮದುವೆ ಸಮಾರಂಭಗಳಿಗೆ ಅವರನ್ನು ಆಹ್ವಾನಿಸುತ್ತಿಲ್ಲ. ಒಟ್ಟಾರೆಯಾಗಿ ಈ ಹೋರಾಟ ದೇಶಾದ್ಯಂತ ಹಬ್ಬುತ್ತಿದೆ ಎಂದರು.

ಪ್ರಧಾನ ಮಂತ್ರಿಗಳು ಎಂಎಸ್‌ಪಿ ಇತ್ತು, ಈಗಲೂ ಇದೆ ಮತ್ತು ಮುಂದೆಯು ಇರಲಿದೆ ಎಂದು ಹೇಳಿದ್ದಾರೆ. ಅದು ಎಲ್ಲಿದೆ ತೋರಿಸಿ, ಅದರ ವಿಳಾಸ ಕೊಡಿ ಎಂದು ನಾವು ಕೇಳುತ್ತಿದ್ದೇವೆ. ಹಾಗಾಗಿ ರೈತರಿಗೆ ಎಂಎಸ್‌ಪಿ ಕೊಡಿಸಿ ಎಂಬ ರಾಷ್ಟ್ರೀಯ ಆಂದೋಲನವನ್ನು ಕರ್ನಾಟಕದಿಂದ ಆರಂಭಿಸುತ್ತಿದ್ದೇವೆ ಎಂದು ಯೋಗೇಂದ್ರ ಯಾದವ್ ಹೇಳಿದರು.

ಕರ್ನಾಟಕ ರೈತ ಹೋರಾಟದ ಹೆಮ್ಮೆಯ ಸಂಕೇತವಾಗಿದೆ. ಇಲ್ಲಿ ಕಾಗೋಡು ಸತ್ಯಾಗ್ರಹ ನಡೆದಿದೆ. ಶಾಂತವೇರಿ ಗೋಪಾಲಗೌಡರು, ಪ್ರೊ ನಂಜುಂಡಸ್ವಾಮಿಯವರು ಬೃಹತ್ ರೈತ ಚಳವಳಿ ಕಟ್ಟಿದ್ದಾರೆ. 2020ರ ಸೆಪ್ಟಂಬರ್ 21 ರಂದೇ ಕರ್ನಾಟಕದಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿಗಳ ವಿರುದ್ಧ ಹೋರಾಟ ನಡೆದಿದೆ. ಹಾಗಾಗಿ ಕರ್ನಾಟಕದ ಕಲಬುರ್ಗಿ, ಬಳ್ಳಾರಿಯಿಂದ ನಮ್ಮ ಎಂಎಸ್‌ಪಿ ದಿಲಾವೋ ಆಂದೋಲನ ಆರಂಭಿಸಿದ್ದೇವೆ ಎಂದರು.

72% ಕರ್ನಾಟಕದ ಬೆಲೆಗಳು ಕರ್ನಾಟಕದಲ್ಲಿ ಎಂಎಸ್‌ಪಿಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಇದು ರೈತರ ಬಗೆಗಿನ ಕ್ರೂರ ಜೋಕ್ ಆಗಿದೆ. ಇದರಿಂದ ಕರ್ನಾಟಕ ಎಲ್ಲಾ ರೈತರಿಗೆ ಪ್ರತಿವರ್ಷ 3190 ಕೋಟಿ ರೂಗಳು ನಷ್ಟವಾಗುತ್ತಿದೆ. ಸ್ವಾಮಿನಾಥನ್‌ರವರ ಎಂಎಸ್‌ಪಿ ಲೆಕ್ಕಾಚಾರಲ್ಲಿ ಪ್ರತಿ ವರ್ಷ 2339 ಕೋಟಿ ರೂಗಳನ್ನು ರೈತರಿಂದ ಕಿತ್ತುಕೊಳ್ಳಲಾಗುತ್ತಿದೆ. ಕಿಸಾನ್ ಸಮ್ಮಾನ್ ಮೂಲಕ ಹಣ ಕೊಡುತ್ತಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇನ್ನೊಂದು ಕೈಯಲ್ಲಿ ಇಷ್ಟು ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಯೋಗೇಂದ್ರ ಯಾದವ್ ಕಿಡಿಕಾರಿದರು.

ಅಷ್ಟೊಂದು ಎಂಎಸ್‌ಪಿ ಕೊಡಲಾಗುತ್ತದೆಯೇ ಎಂದು ಹಲವರು ಕೇಳುತ್ತಾರೆ. ಖಂಡಿತವಾಗಿಯೂ ಕೊಡಲು ಸಾಧ್ಯ. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು ಅಷ್ಟೇ. ಅದಕ್ಕಾಗಿ ಕರ್ನಾಟಕದಲ್ಲಿ 10,000 ಕೋಟಿ ರೂಗಳು ಸಾಕು. ಎಲ್ಲರಿಗೂ ಎಂಎಸ್‌ಪಿ ನೀಡಬಹುದು ಎಂದರು.

ಹೋರಾಟಗಾರರಾದ ಡಾ.ವಾಸು ಎಚ್‌.ವಿ ಮಾತನಾಡಿ “ಕೇವಲ ಒಂದು ವರ್ಷದಲ್ಲಿ ಕರ್ನಾಟಕದಲ್ಲಿ 13 ಬೆಳೆಗಳಿಗೆ ಸಂಬಂಧಿಸಿದಂತೆ 20,000 ಕೋಟಿ ರೂ ನಷ್ಟವಾಗಿದೆ. ಇದರರ್ಥ ಕಳೆದ 20 ವರ್ಷದಲ್ಲಿ ಕರ್ನಾಟಕದ ರೈತರಿಗಾಗಿರುವ ನಷ್ಟ 4 ಲಕ್ಷ ಕೋಟಿ ರೂ. 2016 ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಶೇ‍ಷ ವರದಿ ಸಲ್ಲಿಸಿದೆ. ಅದರ ಪ್ರಕಾರ 2001 ರಿಂದ ಇಲ್ಲಿಯವರೆಗೆ ಬರ ಮತ್ತು ನೆರೆಯ ಕಾರಣಕ್ಕೆ ಆದ ನಷ್ಟ 4 ಲಕ್ಷ ಕೋಟಿ ರೂಗಳಾಗಿದೆ. ಅಂದರೆ ಬೆಳೆ ನಷ್ಟವೂ 4 ಲಕ್ಷ ಕೋಟಿ ರೂ ಮತ್ತು ಬರನಷ್ಟವು 4 ಲಕ್ಷ ಕೋಟಿ ರೂ ಆಗಿದೆ. ಇದನ್ನು ಕರ್ನಾಟಕದ ಗ್ರಾಮೀಣ ಭಾಗ 8 ಲಕ್ಷ ಕೋಟಿ ಸಬ್ಸಿಡಿ ಹಣವನ್ನು ಕೊಟ್ಟಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ರೈತರಿಗೆ ಸಬ್ಸಿಡಿ ಎಂದು ಹೇಳಲಾಗುತ್ತಿರುವುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ. ಅದಕ್ಕಾಗಿಯೇ ಈ ಹಿಂದೆ ಪ್ರೊ.ನಂಜುಂಡಸ್ವಾಮಿಯವರು ‘ರೈತ ಸಾಲಗಾರನಲ್ಲ, ಸರ್ಕಾರವೇ ಬಾಕಿದಾರ’ ಎಂಬ ಘೋಷಣೆ ನೀಡಿದ್ದರು” ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯ ವಿಡಿಯೋ ನೋಡಿ

ಪತ್ರಿಕಾಗೋಷ್ಠಿಯಲ್ಲಿ ಪಂಜಾಬಿನ ಹೋರಾಟಗಾರ ಸತ್ನಾಮ್ ಸಿಂಗ್, ಹರಿಯಾಣದ ದೀಪಕ್ ಲಂಬ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಪ್ರಕಾಶ್ ಕಮ್ಮರಡಿ, ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಚಾಮರಸಮಾಲೀ ಪಾಟೀಲ್, ಸಾಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, ಆರ್‌ಕೆಎಸ್‌ ಸಂಘಟನೆಯ ಶಿವಪ್ರಕಾಶ್ ಹಾಜರಿದ್ದರು.


ಇದನ್ನೂ ಓದಿ; ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...