Homeಚಳವಳಿಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

"ಮಾರ್ಚ್ 13 ರಂದು ಪಶ್ಚಿಮ ಬಂಗಾಳದಲ್ಲಿ ಮಹಾಪಂಚಾಯತ್ ಇದೆ. ಅಲ್ಲಿ ರೈತರನ್ನು ಭೇಟಿ ಮಾಡಿ ರೈತ ಚಳವಳಿ ಮತ್ತು ಎಂಎಸ್ಪಿ ಬಗ್ಗೆ ಮಾತನಾಡುತ್ತೇನೆ’..

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದ್ದು, ರೈತರು ಕೂಡ ಅಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸಲು ನಿರ್ಧರಿಸಿದ್ದಾರೆ.

ಭಾನುವಾರ ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ರ್‍ಯಾಲಿ ನಡೆಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್ ಯೂನಿಯನ್ ಟಿಕಾಯತ್ ಬಣದ ಮುಖಂಡ ರಾಕೇಶ್ ಟಿಕಾಯತ್, ಇಂದು ಸರ್ಕಾರ ಕೊಲ್ಕಾತ್ತಾಗೆ ತೆರಳಿದೆ. ನಾವು ಮಾರ್ಚ್ 13 ರಂದು ಪಶ್ಚಿಮ ಬಂಗಾಳಕ್ಕೆ ತೆರಳಿ ರೈತರೊಂದಿಗೆ ಸಂವಾದ ನಡೆಸುತ್ತೇವೆ ಎಂದು ಘೋಷಿಸಿದ್ದಾರೆ.

ಒಕ್ಕೂಟ ಸರ್ಕಾರ ರೈತರ ಮಾತುಗಳನ್ನು ಕೇಳುತ್ತಿಲ್ಲ. ಹೀಗಾಗಿ ಮುಂಬರುವ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸಲು ರೈತ ಮುಖಂಡರು ನಿರ್ಧರಿಸಿದ್ದರು. ರೈತರ ಮಾತನ್ನು ಕೇಳದ ಸರ್ಕಾರಕ್ಕೆ ಮತ ನೀಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ನೀಡಿ ಎಂದು ಕೇಳುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಡಿಎಂಕೆ-ಕಾಂಗ್ರೆಸ್ ಸೀಟು ಹಂಚಿಕೆ: ಕೊನೆಗೂ 25 ಸೀಟು ಪಡೆದ ಕಾಂಗ್ರೆಸ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕೆಸರೆರಚಾಟ ಉತ್ತುಂಗದಲ್ಲಿದೆ. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಪ್ರಚಾರದಲ್ಲಿ ನಿರತವಾಗಿವೆ. ಈಗ ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತ ಮುಖಂಡರು ಇದೆ ಭಾಗವಾಗಿ ಚುನಾವಣೆಗೆ ಹೊಸ ಕಳೆ ತಂದಿದ್ದಾರೆ.

“ಸರ್ಕಾರವು ಇತ್ತೀಚಿನ ದಿನಗಳಲ್ಲಿ ಪಶ್ಚಿಮ ಬಂಗಾಳಕ್ಕೆ ಹೆಚ್ಚು ಹೋಗುತ್ತಿದೆ. ನಾವು ಅಲ್ಲಿಯೇ ಸರ್ಕಾರವನ್ನು ಭೇಟಿಯಾಗುತ್ತೇವೆ. ಎಂಎಸ್‌ಪಿ ಸರಿಯಾಗಿ ನೀಡಲಾಗುತ್ತಿದೆಯೇ ಅಥವಾ ಇಲ್ಲವೇ, ಅವರಿಗೆ ಏನು ಸಮಸ್ಯೆ ಇದೆ ಎಂಬೆಲ್ಲಾ ವಿಚಾರಗಳ ಬಗ್ಗೆ, ಎಂಎಸ್‌ಪಿ ಬಗ್ಗೆ ತಿಳಿಯಲು ನಾವು ರೈತರೊಂದಿಗೆ ಮಾತನಾಡಲು ಮಾರ್ಚ್ 13 ರಂದು ಬಂಗಾಳಕ್ಕೆ ಹೋಗುತ್ತಿದ್ದೇವೆ’ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

“ಮಾರ್ಚ್ 13 ರಂದು ಪಶ್ಚಿಮ ಬಂಗಾಳದಲ್ಲಿ ಮಹಾಪಂಚಾಯತ್ ಇದೆ. ಅಲ್ಲಿ ರೈತರನ್ನು ಭೇಟಿ ಮಾಡಿ ರೈತ ಚಳವಳಿ ಮತ್ತು ಎಂಎಸ್ಪಿ ಬಗ್ಗೆ ಮಾತನಾಡುತ್ತೇನೆ. ನಾಳೆ ಎಲ್ಲಾ ಪ್ರತಿಭಟನಾ ಗಡಿಗಳಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ನಾಳೆ ಮಹಿಳೆಯರು ಸಂಪೂರ್ಣ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ. ರೈತ ವೇದಿಕೆಗಳು ಮಹಿಳೆಯರದ್ದಾಗಲಿವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್ ಟಿಕಾಯತ್ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...