Homeಮುಖಪುಟ‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

- Advertisement -
- Advertisement -

ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ರ‍್ಯಾಲಿಗಳ ಥೀಮ್ ಸಾಂಗ್ “ಖೇಲಾ ಹೋಬೆ” (ಗೇಮ್ ಆನ್-ಆಟ ಶುರು) ಕುರಿತು ಇಂದು ಕೋಲ್ಕತ್ತಾದಲ್ಲಿ ನಡೆದ ಮೆಗಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಖೇಲ್ ಖತಂ’ ಎಂದು ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಇಂದು ನಡೆದ ಗ್ಯಾಸ್ ದರ ಏರಿಕೆ ವಿರುದ್ಧದ ಬೃಹತ್ ರ‍್ಯಾಲಿಯಲ್ಲಿ ಮಮತಾ ಬ್ಯಾನರ್ಜಿ, ‘ಉಜ್ವಲಾ-ಜುಮ್ಲಾ’ ಎಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಆಡಳಿತವನ್ನು “ಭ್ರಷ್ಟಾಚಾರ ಮತ್ತು ಲೂಟಿ-ತಂತ್ರ ” ಎಂದು ಟೀಕಿಸಿದ ಪಿಎಂ ಮೋದಿ, “ಏನೂ ಮರೆಮಾಡಲಾಗಿಲ್ಲ. ಬಂಗಾಳಕ್ಕೆ ಎಲ್ಲವೂ ತಿಳಿದಿದೆ. ಆದರೆ ಈ ಖೇಲ್ (ಆಟ) ಮುಂದುವರಿಯುವುದಿಲ್ಲ. ಖೇಲ್ ಖತಮ್ ಹೋನಾ ಚಾಹಿಯೇ (ಈ ಆಟ ನಿಲ್ಲಲೇಬೇಕು) ಎಂದರು.

ಆಗ ಪ್ರಧಾನಿ ಬಂಗಾಳ ಮುಖ್ಯಮಂತ್ರಿಗೆ ನೇರ ಸವಾಲು ಎಸೆದರು. “ದೀದಿ, ಇದನ್ನು ಕೇಳಿ, ಟಿಎಂಸಿಯ ಆಟ ಮುಗಿದಿದೆ. ಆಟ ಮುಗಿಯುತ್ತದೆ, ಅಭಿವೃದ್ಧಿ ಪ್ರಾರಂಭವಾಗುತ್ತದೆ’ ಎಂದರು.
ಇಂದು ನಡೆದ ರ‍್ಯಾಲಿಯಲ್ಲಿ ಬಾಲಿವುಡ್ ಮಾಜಿ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರಿದರು.

“ಖೇಲಾ ಹೋಬೆ” ಎಂಬ ರ‍್ಯಾಪ್ ಹಾಡು ತೃಣಮೂಲದ ಪ್ರಚಾರ ಗೀತೆಯಾಗಿ ಮಾರ್ಪಟ್ಟಿದೆ. ‘ಖೇಲಾ ಹೋಬೆ’ ಎಂಬ ಘೋಷಣೆಯೂ ಟಿಎಂಸಿ ರ‍್ಯಾಲಿಗಳಲ್ಲಿ ಸಾಮಾನ್ಯವಾಗಿದೆ.
ಈ ಹಾಡನ್ನು ತೃಣಮೂಲ ನಾಯಕ ದೇಬಾಂಗ್ಶು ಭಟ್ಟಾಚಾರ್ಯ ರಚಿಸಿದ್ದಾರೆ ಎನ್ನಲಾಗಿದೆ. ಮಮತಾ ಬ್ಯಾನರ್ಜಿ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿಯವರಿಗೆ ಸವಾಲು ಹಾಕುತ್ತಿರುವುದರಿಂದ ಅವರ ಹೆಚ್ಚಿನ ರ‍್ಯಾಲಿಗಳಲ್ಲಿ ‘ಖೇಲಾ ಹೋಬೆ’ ಘೋಷಣೆಯನ್ನು ಬಳಸುತ್ತಿದ್ದಾರೆ.

ಶುಕ್ರವಾರ, ಮಮತಾ ಬ್ಯಾನರ್ಜಿ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಲು ನಡೆದ ಪತ್ರಿಕಾಗೋಷ್ಠಿಯಲ್ಲಿ “ಖೇಲಾ ಹೋಬೆ, ದೇಖಾ ಹೋಬೆ, ಜೆಟಾ ಹೋಬೆ … (ಆಟ ಶುರು, ನಾವು ನೋಡುತ್ತೇವೆ, ನಾವು ಗೆಲ್ಲುತ್ತೇವೆ).” ಎಂದು ಹೇಳಿದ್ದರು.

ಇಂದು ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಮಮತಾ ನೇತೃತ್ವದಲ್ಲಿ ಸಿಲಿಗುರಿಯಲ್ಲಿ ನಡೆದ ಬೃಹತ್ ಪಾದಯಾತ್ರೆ ಮತ್ತು ಸಭೆಯಲ್ಲಿ ಪಾಲ್ಗೊಂಡ ಮಮತಾ ಬ್ಯಾನರ್ಜಿ, ಚುನಾವಣೆಗೂ ಮೊದಲು ಉಜ್ವಲಾ, ನಂತರ ಎಲ್ಲವು ಜುಮ್ಲಾ’ ಎಂದು ಕೇಂದ್ರದ ಗ್ಯಾಸ್ ಯೋಜನೆ ಉಜ್ವಲಾವನ್ನು ಟೀಕಿಸಿದರು. ಉಚಿತ ಅಕ್ಕಿ ಇದೆ, ಬೇಯಿಸಲು ಗ್ಯಾಸ್ ಇಲ್ಲ ಎಂದು ಅವರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...