Homeಮುಖಪುಟ25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

- Advertisement -
- Advertisement -

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತು ಶಾಗೆ ದೊಡ್ಡ ಬ್ರೇಕ್ ನೀಡಿದ ಉತ್ತರಪ್ರದೇಶ ಈ ಸಲ ಉಲ್ಟಾ ಹೊಡೆಯುವ ಲಕ್ಷಣಗಳಿವೆ. 2014ರ ಚುನಾವಣೆ ಫಲಿತಾಂಶ ಮತ್ತು ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉತ್ತರಪ್ರದೇಶದಲ್ಲಿ ಒಂದು ಸಮಾಲೋಚನೆ ನಡೆಯುತ್ತದೆ. ಅದು ಕೇವಲ 25 ನಿಮಿಷಗಳದ್ದು ಆದರೂ ಅದು 25 ವರ್ಷಗಳ ದ್ವೇಷಕ್ಕೆ ಒಂದು ಕೊನೆ ಹಾಡುತ್ತದೆ. ಅದು ಎಸ್‍ಪಿ ಮತ್ತು ಬಿಎಸ್‍ಪಿ ನಡುವಿನ ಮಾತುಕತೆ… ಅದಿವತ್ತೂ ಮೋದಿ-ಶಾಗಳ ಹುಚ್ಚಾಟಕ್ಕೆ ಕಢಿವಾಣ ಹಾಕುವ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದೆ…

ಎರಡನೇ ಹಂತದ ಚುನಾವಣೆ ಮುಗಿದ ಈ ಹೊತ್ತಿನಲ್ಲಿ ಮತ್ತೆ ನಾಲ್ಕೈದು ತಿಂಗಳಿನ ಹಿಂದಿನ ರಾಜಕೀಯ ವಾತಾವರಣವನ್ನು ನೆನಪಲ್ಲಿ ಇಟ್ಟುಕೊಂಡು, ಅದನ್ನು ಒಂದು ಉಪ-ಆಧಾರವಾಗಿ ಇಟ್ಟುಕೊಂಡು ಚುನಾವಣಾ ವಿಶ್ಲೇಷಣೆ ಮಾಡಲೇಬೇಕಾದ ಪರಿಸ್ಥಿತಿ ಚುನಾವಣಾ ಪಂಡಿತರುಗಳಿಗೆ ಈಗ ಉದ್ಭವಿಸಿದೆ. ಅಂದರೆ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತಿಸಘಡಗಳಲ್ಲಿ ಬಿಜೆಪಿಯ ಅದರಲ್ಲೂ ಮೋದಿ-ಶಾಗಳ ಸೋಲಿನ ನಂತರ ಹಲವು ಹರಸಾಹಸ ಮಾಡಿದರೂ ಈಗ ಮತ್ತೆ ಬಿಜೆಪಿಗೆ ಅಂದುಕೊಂಡಂತೆ ಆಗುತ್ತಿಲ್ಲ.

ಸದ್ಯ ಉತ್ತರಪ್ರದೇಶದ ವಿಷಯಕ್ಕೆ ಬರೋಣ. ಅಲ್ಲಿ ಏರ್ಪಟ್ಟ ಮೈತ್ರಿಯೊಂದು ಬಿಜೆಪಿಯ ಓಟಕ್ಕೆ ಮೊದಲ ತಡೆ ಹಾಕಿದೆ. ಅದು ಆರಂಭದಲ್ಲಿ ಮಹಾಘಟಬಂಧನವಾಗಿತ್ತು, ಈಗ ಅದರಲ್ಲಿ ಕಾಂಗ್ರೆಸ್ ಇಲ್ಲದೇ ಅದು ಕೇವಲ ಘಟಬಂಧನವಾಗಿದೆ. ಆದರೆ ಈ ಎಸ್ಪಿ-ಬಿಎಸ್‍ಪಿ-ಆರ್‍ಎಲ್‍ಡಿ ಮೈತ್ರಿ ಬಿಜೆಪಿಯಿಂದ 40-50 ಸ್ಥಾನಗಳನ್ನು ಕಿತ್ತುಕೊಳ್ಳುವ ಸಾಧ್ಯತೆ ಇದ್ದೇ ಇದೆ.

ಗೆಸ್ಟ್‍ಹೌಸ್ ಪ್ರಕರಣದಿಂದ ಘಟಬಂಧನದ ಕತೆ
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಇತಿಹಾಸದಲ್ಲಿ ಅವು ಪರಸ್ಪರ ಎದುರಾಳಿಯಾಗಿದ್ದೇ ಹೆಚ್ಚಾದರೂ, ಆಗಾಗ ಅವುಗಳ ನಡುವೆ ಒಲವು ಚಿಗುರಿದ್ದೂ ಉಂಟು. ಸುಮಾರು 25 ವರ್ಷಗಳ ಹಿಂದೆ ಮುಲಾಯಂ ನೇತೃತ್ವದ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಯ ಸರ್ಕಾರ ಬಿದ್ದಾಗ ಎಸ್ಪಿ ಕಾರ್ಯಕರ್ತರು ಮಾಯಾವತಿಯವರನ್ನು ಗೆಸ್ಟ್‍ಹೌಸ್ ಒಂದರಲ್ಲಿ ಲಾಕ್ ಮಾಡಿ ಸತಾಯಿಸಿದ್ದರು. ಅಂದಿನಿಂದ ಎಸ್ಪಿ ಮತ್ತು ಬಿಎಸ್ಪಿ ನಡುವೆ ಒಂದು ದೊಡ್ಡ ಕಂದಕ ನಿರ್ಮಾಣವಾಗಿತ್ತು.

ಅದಾದ 26 ವರ್ಷಗಳ ನಂತರ, ಮೋದಿ-ಶಾ ಉತ್ತರಪ್ರದೇಶದಲ್ಲಿ 80ರಲ್ಲಿ 71 ಸೀಟು (ಅಪ್ನಾದಳ್ 2 ಸೇರಿದರೆ 73) ಗೆದ್ದಾಗ ಈ ಎರಡೂ ಪಕ್ಷಗಳೂ ತತ್ತರಿಸಿದ್ದವು. ಮುಂದೆ ಕೆಲ ವರ್ಷಗಳ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಪಡೆಯಿತು. ಅಷ್ಟೊತ್ತಿಗೆ ತಂದೆಯಿಂದ ಬೇರೆಯಾಗಿ ಗುರ್ತಿಸಿಕೊಂಡಿದ್ದ ನಿಕಟಪೂರ್ವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಎಚ್ಚೆತ್ತುಕೊಂಡರು.
ಅದರ ಫಲವೇ ಅವರು, ಬಿಎಸ್ಪಿಯ ಮಾಯಾವತಿಯವರೊಂದಿಗೆ 25 ನಿಮಿಷಗಳ ಒಂದು ಮುಕ್ತ ಸಮಾಲೋಚನೆ, ಸಂಧಾನವನ್ನು ನಡೆಸಿದರು. ಇಡೀ ಮಾತುಕತೆಯ ಉದ್ದೇಶ ಬಿಜೆಪಿ, ಮುಖ್ಯವಾಗಿ, ಮೋದಿ-ಶಾಗಳನ್ನು ಅಧಿಕಾರದಿಂದ ದೂರ ಇಡುವುದಾಗಿತ್ತು.
ಸಭೆಯ ನಂತರ ಅಖಿಲೇಶ್ ಹೇಳಿದ್ದು ಒಂದೇ ಮಾತು: ‘ಎಸ್ಪಿ ಕಾರ್ಯಕರ್ತರು ಮಾಯಾವತಿಯನ್ನು ಅವಮಾನಿಸಿದರೆ ಅದು ನನ್ನನ್ನೇ ಅವಮಾನಿಸಿದಂತೆ….’

ಆಗ ಆರ್‍ಎಲ್‍ಡಿ ಮತ್ತು ಕಾಂಗ್ರೆಸ್ ಈ ಮೈತ್ರಿ ಜೊತೆ ಸೇರಿಕೊಂಡವು. ನಂತರ ಈ ಮಹಾಘಟಬಂಧನವು 3 ಲೋಕಸಭಾ ಉಪ ಚುನಾವಣೆಗಳನ್ನು ಭಾರಿ ಅಂತರದಿಂದ ಗೆದ್ದಿತು. ಆ ಮೂಲಕ ಬಿಜೆಪಿ ವಿರೋಧಿ ಮತಗಳು ಸೇರಿದರೆ ಮೋದಿ-ಶಾ ಆಟ ಝೀರೊ ಎಂಬುದನ್ನು ಸಾಬೀತು ಮಾಡಲಾಗಿತು. ಇದು ಕರ್ನಾಟಕದ ರಾಜಕಾರಣದ ಮೇಲೂ ಪ್ರಭಾವ ಬೀರಿದ ಪರಿಣಾಮವಾಗಿಯೇ ಇಲ್ಲಿ ಮೈತ್ರಿ ಸರ್ಕಾರ ರಚನೆಗೊಂಡಿತು. ಇಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆಯ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿತು.
ಈಗ ಬಿಜೆಪಿಯ ಅಂದಾಜಿತ ನಾಗಾಲೋಟಕ್ಕೆ ಉತ್ತರಪ್ರದೇಶವೇ ಮೊದಲ ಬ್ರೇಕ್ ಹಾಕುತ್ತಿದೆ. ಕರ್ನಾಟಕದಲ್ಲೂ ಬಿಜೆಪಿಗೆ ಬ್ರೇಕ್ ಬೀಳದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...