Homeಮುಖಪುಟ25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

- Advertisement -
- Advertisement -

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತು ಶಾಗೆ ದೊಡ್ಡ ಬ್ರೇಕ್ ನೀಡಿದ ಉತ್ತರಪ್ರದೇಶ ಈ ಸಲ ಉಲ್ಟಾ ಹೊಡೆಯುವ ಲಕ್ಷಣಗಳಿವೆ. 2014ರ ಚುನಾವಣೆ ಫಲಿತಾಂಶ ಮತ್ತು ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉತ್ತರಪ್ರದೇಶದಲ್ಲಿ ಒಂದು ಸಮಾಲೋಚನೆ ನಡೆಯುತ್ತದೆ. ಅದು ಕೇವಲ 25 ನಿಮಿಷಗಳದ್ದು ಆದರೂ ಅದು 25 ವರ್ಷಗಳ ದ್ವೇಷಕ್ಕೆ ಒಂದು ಕೊನೆ ಹಾಡುತ್ತದೆ. ಅದು ಎಸ್‍ಪಿ ಮತ್ತು ಬಿಎಸ್‍ಪಿ ನಡುವಿನ ಮಾತುಕತೆ… ಅದಿವತ್ತೂ ಮೋದಿ-ಶಾಗಳ ಹುಚ್ಚಾಟಕ್ಕೆ ಕಢಿವಾಣ ಹಾಕುವ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದೆ…

ಎರಡನೇ ಹಂತದ ಚುನಾವಣೆ ಮುಗಿದ ಈ ಹೊತ್ತಿನಲ್ಲಿ ಮತ್ತೆ ನಾಲ್ಕೈದು ತಿಂಗಳಿನ ಹಿಂದಿನ ರಾಜಕೀಯ ವಾತಾವರಣವನ್ನು ನೆನಪಲ್ಲಿ ಇಟ್ಟುಕೊಂಡು, ಅದನ್ನು ಒಂದು ಉಪ-ಆಧಾರವಾಗಿ ಇಟ್ಟುಕೊಂಡು ಚುನಾವಣಾ ವಿಶ್ಲೇಷಣೆ ಮಾಡಲೇಬೇಕಾದ ಪರಿಸ್ಥಿತಿ ಚುನಾವಣಾ ಪಂಡಿತರುಗಳಿಗೆ ಈಗ ಉದ್ಭವಿಸಿದೆ. ಅಂದರೆ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತಿಸಘಡಗಳಲ್ಲಿ ಬಿಜೆಪಿಯ ಅದರಲ್ಲೂ ಮೋದಿ-ಶಾಗಳ ಸೋಲಿನ ನಂತರ ಹಲವು ಹರಸಾಹಸ ಮಾಡಿದರೂ ಈಗ ಮತ್ತೆ ಬಿಜೆಪಿಗೆ ಅಂದುಕೊಂಡಂತೆ ಆಗುತ್ತಿಲ್ಲ.

ಸದ್ಯ ಉತ್ತರಪ್ರದೇಶದ ವಿಷಯಕ್ಕೆ ಬರೋಣ. ಅಲ್ಲಿ ಏರ್ಪಟ್ಟ ಮೈತ್ರಿಯೊಂದು ಬಿಜೆಪಿಯ ಓಟಕ್ಕೆ ಮೊದಲ ತಡೆ ಹಾಕಿದೆ. ಅದು ಆರಂಭದಲ್ಲಿ ಮಹಾಘಟಬಂಧನವಾಗಿತ್ತು, ಈಗ ಅದರಲ್ಲಿ ಕಾಂಗ್ರೆಸ್ ಇಲ್ಲದೇ ಅದು ಕೇವಲ ಘಟಬಂಧನವಾಗಿದೆ. ಆದರೆ ಈ ಎಸ್ಪಿ-ಬಿಎಸ್‍ಪಿ-ಆರ್‍ಎಲ್‍ಡಿ ಮೈತ್ರಿ ಬಿಜೆಪಿಯಿಂದ 40-50 ಸ್ಥಾನಗಳನ್ನು ಕಿತ್ತುಕೊಳ್ಳುವ ಸಾಧ್ಯತೆ ಇದ್ದೇ ಇದೆ.

ಗೆಸ್ಟ್‍ಹೌಸ್ ಪ್ರಕರಣದಿಂದ ಘಟಬಂಧನದ ಕತೆ
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಇತಿಹಾಸದಲ್ಲಿ ಅವು ಪರಸ್ಪರ ಎದುರಾಳಿಯಾಗಿದ್ದೇ ಹೆಚ್ಚಾದರೂ, ಆಗಾಗ ಅವುಗಳ ನಡುವೆ ಒಲವು ಚಿಗುರಿದ್ದೂ ಉಂಟು. ಸುಮಾರು 25 ವರ್ಷಗಳ ಹಿಂದೆ ಮುಲಾಯಂ ನೇತೃತ್ವದ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಯ ಸರ್ಕಾರ ಬಿದ್ದಾಗ ಎಸ್ಪಿ ಕಾರ್ಯಕರ್ತರು ಮಾಯಾವತಿಯವರನ್ನು ಗೆಸ್ಟ್‍ಹೌಸ್ ಒಂದರಲ್ಲಿ ಲಾಕ್ ಮಾಡಿ ಸತಾಯಿಸಿದ್ದರು. ಅಂದಿನಿಂದ ಎಸ್ಪಿ ಮತ್ತು ಬಿಎಸ್ಪಿ ನಡುವೆ ಒಂದು ದೊಡ್ಡ ಕಂದಕ ನಿರ್ಮಾಣವಾಗಿತ್ತು.

ಅದಾದ 26 ವರ್ಷಗಳ ನಂತರ, ಮೋದಿ-ಶಾ ಉತ್ತರಪ್ರದೇಶದಲ್ಲಿ 80ರಲ್ಲಿ 71 ಸೀಟು (ಅಪ್ನಾದಳ್ 2 ಸೇರಿದರೆ 73) ಗೆದ್ದಾಗ ಈ ಎರಡೂ ಪಕ್ಷಗಳೂ ತತ್ತರಿಸಿದ್ದವು. ಮುಂದೆ ಕೆಲ ವರ್ಷಗಳ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಪಡೆಯಿತು. ಅಷ್ಟೊತ್ತಿಗೆ ತಂದೆಯಿಂದ ಬೇರೆಯಾಗಿ ಗುರ್ತಿಸಿಕೊಂಡಿದ್ದ ನಿಕಟಪೂರ್ವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಎಚ್ಚೆತ್ತುಕೊಂಡರು.
ಅದರ ಫಲವೇ ಅವರು, ಬಿಎಸ್ಪಿಯ ಮಾಯಾವತಿಯವರೊಂದಿಗೆ 25 ನಿಮಿಷಗಳ ಒಂದು ಮುಕ್ತ ಸಮಾಲೋಚನೆ, ಸಂಧಾನವನ್ನು ನಡೆಸಿದರು. ಇಡೀ ಮಾತುಕತೆಯ ಉದ್ದೇಶ ಬಿಜೆಪಿ, ಮುಖ್ಯವಾಗಿ, ಮೋದಿ-ಶಾಗಳನ್ನು ಅಧಿಕಾರದಿಂದ ದೂರ ಇಡುವುದಾಗಿತ್ತು.
ಸಭೆಯ ನಂತರ ಅಖಿಲೇಶ್ ಹೇಳಿದ್ದು ಒಂದೇ ಮಾತು: ‘ಎಸ್ಪಿ ಕಾರ್ಯಕರ್ತರು ಮಾಯಾವತಿಯನ್ನು ಅವಮಾನಿಸಿದರೆ ಅದು ನನ್ನನ್ನೇ ಅವಮಾನಿಸಿದಂತೆ….’

ಆಗ ಆರ್‍ಎಲ್‍ಡಿ ಮತ್ತು ಕಾಂಗ್ರೆಸ್ ಈ ಮೈತ್ರಿ ಜೊತೆ ಸೇರಿಕೊಂಡವು. ನಂತರ ಈ ಮಹಾಘಟಬಂಧನವು 3 ಲೋಕಸಭಾ ಉಪ ಚುನಾವಣೆಗಳನ್ನು ಭಾರಿ ಅಂತರದಿಂದ ಗೆದ್ದಿತು. ಆ ಮೂಲಕ ಬಿಜೆಪಿ ವಿರೋಧಿ ಮತಗಳು ಸೇರಿದರೆ ಮೋದಿ-ಶಾ ಆಟ ಝೀರೊ ಎಂಬುದನ್ನು ಸಾಬೀತು ಮಾಡಲಾಗಿತು. ಇದು ಕರ್ನಾಟಕದ ರಾಜಕಾರಣದ ಮೇಲೂ ಪ್ರಭಾವ ಬೀರಿದ ಪರಿಣಾಮವಾಗಿಯೇ ಇಲ್ಲಿ ಮೈತ್ರಿ ಸರ್ಕಾರ ರಚನೆಗೊಂಡಿತು. ಇಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆಯ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿತು.
ಈಗ ಬಿಜೆಪಿಯ ಅಂದಾಜಿತ ನಾಗಾಲೋಟಕ್ಕೆ ಉತ್ತರಪ್ರದೇಶವೇ ಮೊದಲ ಬ್ರೇಕ್ ಹಾಕುತ್ತಿದೆ. ಕರ್ನಾಟಕದಲ್ಲೂ ಬಿಜೆಪಿಗೆ ಬ್ರೇಕ್ ಬೀಳದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...