Homeಮುಖಪುಟ25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

- Advertisement -
- Advertisement -

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತು ಶಾಗೆ ದೊಡ್ಡ ಬ್ರೇಕ್ ನೀಡಿದ ಉತ್ತರಪ್ರದೇಶ ಈ ಸಲ ಉಲ್ಟಾ ಹೊಡೆಯುವ ಲಕ್ಷಣಗಳಿವೆ. 2014ರ ಚುನಾವಣೆ ಫಲಿತಾಂಶ ಮತ್ತು ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉತ್ತರಪ್ರದೇಶದಲ್ಲಿ ಒಂದು ಸಮಾಲೋಚನೆ ನಡೆಯುತ್ತದೆ. ಅದು ಕೇವಲ 25 ನಿಮಿಷಗಳದ್ದು ಆದರೂ ಅದು 25 ವರ್ಷಗಳ ದ್ವೇಷಕ್ಕೆ ಒಂದು ಕೊನೆ ಹಾಡುತ್ತದೆ. ಅದು ಎಸ್‍ಪಿ ಮತ್ತು ಬಿಎಸ್‍ಪಿ ನಡುವಿನ ಮಾತುಕತೆ… ಅದಿವತ್ತೂ ಮೋದಿ-ಶಾಗಳ ಹುಚ್ಚಾಟಕ್ಕೆ ಕಢಿವಾಣ ಹಾಕುವ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದೆ…

ಎರಡನೇ ಹಂತದ ಚುನಾವಣೆ ಮುಗಿದ ಈ ಹೊತ್ತಿನಲ್ಲಿ ಮತ್ತೆ ನಾಲ್ಕೈದು ತಿಂಗಳಿನ ಹಿಂದಿನ ರಾಜಕೀಯ ವಾತಾವರಣವನ್ನು ನೆನಪಲ್ಲಿ ಇಟ್ಟುಕೊಂಡು, ಅದನ್ನು ಒಂದು ಉಪ-ಆಧಾರವಾಗಿ ಇಟ್ಟುಕೊಂಡು ಚುನಾವಣಾ ವಿಶ್ಲೇಷಣೆ ಮಾಡಲೇಬೇಕಾದ ಪರಿಸ್ಥಿತಿ ಚುನಾವಣಾ ಪಂಡಿತರುಗಳಿಗೆ ಈಗ ಉದ್ಭವಿಸಿದೆ. ಅಂದರೆ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತಿಸಘಡಗಳಲ್ಲಿ ಬಿಜೆಪಿಯ ಅದರಲ್ಲೂ ಮೋದಿ-ಶಾಗಳ ಸೋಲಿನ ನಂತರ ಹಲವು ಹರಸಾಹಸ ಮಾಡಿದರೂ ಈಗ ಮತ್ತೆ ಬಿಜೆಪಿಗೆ ಅಂದುಕೊಂಡಂತೆ ಆಗುತ್ತಿಲ್ಲ.

ಸದ್ಯ ಉತ್ತರಪ್ರದೇಶದ ವಿಷಯಕ್ಕೆ ಬರೋಣ. ಅಲ್ಲಿ ಏರ್ಪಟ್ಟ ಮೈತ್ರಿಯೊಂದು ಬಿಜೆಪಿಯ ಓಟಕ್ಕೆ ಮೊದಲ ತಡೆ ಹಾಕಿದೆ. ಅದು ಆರಂಭದಲ್ಲಿ ಮಹಾಘಟಬಂಧನವಾಗಿತ್ತು, ಈಗ ಅದರಲ್ಲಿ ಕಾಂಗ್ರೆಸ್ ಇಲ್ಲದೇ ಅದು ಕೇವಲ ಘಟಬಂಧನವಾಗಿದೆ. ಆದರೆ ಈ ಎಸ್ಪಿ-ಬಿಎಸ್‍ಪಿ-ಆರ್‍ಎಲ್‍ಡಿ ಮೈತ್ರಿ ಬಿಜೆಪಿಯಿಂದ 40-50 ಸ್ಥಾನಗಳನ್ನು ಕಿತ್ತುಕೊಳ್ಳುವ ಸಾಧ್ಯತೆ ಇದ್ದೇ ಇದೆ.

ಗೆಸ್ಟ್‍ಹೌಸ್ ಪ್ರಕರಣದಿಂದ ಘಟಬಂಧನದ ಕತೆ
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಇತಿಹಾಸದಲ್ಲಿ ಅವು ಪರಸ್ಪರ ಎದುರಾಳಿಯಾಗಿದ್ದೇ ಹೆಚ್ಚಾದರೂ, ಆಗಾಗ ಅವುಗಳ ನಡುವೆ ಒಲವು ಚಿಗುರಿದ್ದೂ ಉಂಟು. ಸುಮಾರು 25 ವರ್ಷಗಳ ಹಿಂದೆ ಮುಲಾಯಂ ನೇತೃತ್ವದ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಯ ಸರ್ಕಾರ ಬಿದ್ದಾಗ ಎಸ್ಪಿ ಕಾರ್ಯಕರ್ತರು ಮಾಯಾವತಿಯವರನ್ನು ಗೆಸ್ಟ್‍ಹೌಸ್ ಒಂದರಲ್ಲಿ ಲಾಕ್ ಮಾಡಿ ಸತಾಯಿಸಿದ್ದರು. ಅಂದಿನಿಂದ ಎಸ್ಪಿ ಮತ್ತು ಬಿಎಸ್ಪಿ ನಡುವೆ ಒಂದು ದೊಡ್ಡ ಕಂದಕ ನಿರ್ಮಾಣವಾಗಿತ್ತು.

ಅದಾದ 26 ವರ್ಷಗಳ ನಂತರ, ಮೋದಿ-ಶಾ ಉತ್ತರಪ್ರದೇಶದಲ್ಲಿ 80ರಲ್ಲಿ 71 ಸೀಟು (ಅಪ್ನಾದಳ್ 2 ಸೇರಿದರೆ 73) ಗೆದ್ದಾಗ ಈ ಎರಡೂ ಪಕ್ಷಗಳೂ ತತ್ತರಿಸಿದ್ದವು. ಮುಂದೆ ಕೆಲ ವರ್ಷಗಳ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಪಡೆಯಿತು. ಅಷ್ಟೊತ್ತಿಗೆ ತಂದೆಯಿಂದ ಬೇರೆಯಾಗಿ ಗುರ್ತಿಸಿಕೊಂಡಿದ್ದ ನಿಕಟಪೂರ್ವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಎಚ್ಚೆತ್ತುಕೊಂಡರು.
ಅದರ ಫಲವೇ ಅವರು, ಬಿಎಸ್ಪಿಯ ಮಾಯಾವತಿಯವರೊಂದಿಗೆ 25 ನಿಮಿಷಗಳ ಒಂದು ಮುಕ್ತ ಸಮಾಲೋಚನೆ, ಸಂಧಾನವನ್ನು ನಡೆಸಿದರು. ಇಡೀ ಮಾತುಕತೆಯ ಉದ್ದೇಶ ಬಿಜೆಪಿ, ಮುಖ್ಯವಾಗಿ, ಮೋದಿ-ಶಾಗಳನ್ನು ಅಧಿಕಾರದಿಂದ ದೂರ ಇಡುವುದಾಗಿತ್ತು.
ಸಭೆಯ ನಂತರ ಅಖಿಲೇಶ್ ಹೇಳಿದ್ದು ಒಂದೇ ಮಾತು: ‘ಎಸ್ಪಿ ಕಾರ್ಯಕರ್ತರು ಮಾಯಾವತಿಯನ್ನು ಅವಮಾನಿಸಿದರೆ ಅದು ನನ್ನನ್ನೇ ಅವಮಾನಿಸಿದಂತೆ….’

ಆಗ ಆರ್‍ಎಲ್‍ಡಿ ಮತ್ತು ಕಾಂಗ್ರೆಸ್ ಈ ಮೈತ್ರಿ ಜೊತೆ ಸೇರಿಕೊಂಡವು. ನಂತರ ಈ ಮಹಾಘಟಬಂಧನವು 3 ಲೋಕಸಭಾ ಉಪ ಚುನಾವಣೆಗಳನ್ನು ಭಾರಿ ಅಂತರದಿಂದ ಗೆದ್ದಿತು. ಆ ಮೂಲಕ ಬಿಜೆಪಿ ವಿರೋಧಿ ಮತಗಳು ಸೇರಿದರೆ ಮೋದಿ-ಶಾ ಆಟ ಝೀರೊ ಎಂಬುದನ್ನು ಸಾಬೀತು ಮಾಡಲಾಗಿತು. ಇದು ಕರ್ನಾಟಕದ ರಾಜಕಾರಣದ ಮೇಲೂ ಪ್ರಭಾವ ಬೀರಿದ ಪರಿಣಾಮವಾಗಿಯೇ ಇಲ್ಲಿ ಮೈತ್ರಿ ಸರ್ಕಾರ ರಚನೆಗೊಂಡಿತು. ಇಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆಯ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿತು.
ಈಗ ಬಿಜೆಪಿಯ ಅಂದಾಜಿತ ನಾಗಾಲೋಟಕ್ಕೆ ಉತ್ತರಪ್ರದೇಶವೇ ಮೊದಲ ಬ್ರೇಕ್ ಹಾಕುತ್ತಿದೆ. ಕರ್ನಾಟಕದಲ್ಲೂ ಬಿಜೆಪಿಗೆ ಬ್ರೇಕ್ ಬೀಳದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...