Homeಚಳವಳಿಮಾ.10ಕ್ಕೆ ಹರಿಯಾಣದಲ್ಲಿ ವಿಶ್ವಾಸಮತ ಯಾಚನೆ: ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ರೈತ ಹೋರಾಟದ ಕರೆ

ಮಾ.10ಕ್ಕೆ ಹರಿಯಾಣದಲ್ಲಿ ವಿಶ್ವಾಸಮತ ಯಾಚನೆ: ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ರೈತ ಹೋರಾಟದ ಕರೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಹೋರಾಟ ಈಗ ಸರ್ಕಾರದ ವಿರುದ್ಧದ ಹೋರಾಟವಾಗಿ ಬದಲಾಗಿದೆ. ರೈತರ ಮಾತು ಕೇಳದ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ರೈತರು ನಿರ್ಧರಿಸಿದ್ದಾರೆ.  ಹರಿಯಾಣ ಸರ್ಕಾರ ಮಾರ್ಚ್ 10ಕ್ಕೆ ವಿಶ್ವಾಸಮತ ಯಾಚನೆ ಮಾಡಲಿದ್ದು, ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸುವುದಾಗಿ ಘೋಷಿಸಿರುವ ರೈತ ಮುಖಂಡರು, ಮಾರ್ಚ್ 13 ರಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಆರಂಭಿಸಲಿದ್ದಾರೆ. ಸ್ಥಳೀಯ ರೈತರೊಂದಿಗೆ ಮಾತನಾಡಿ, ಕೃಷಿ ಕಾನೂನುಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಮಾರ್ಚ್ 10 ರಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌, ವಿಶ್ವಾಸಮತ ಯಾಚಿಸಲಿದ್ದಾರೆ. ಅಂದು ರಾಜ್ಯದ ಬಿಜೆಪಿ-ಜೆಜೆಪಿ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ತಮ್ಮ ಸ್ಥಳೀಯ ಶಾಸಕರ ಮೇಲೆ ಒತ್ತಡ ಹೇರುವಂತೆ ಎಸ್‌ಕೆಎಂ ರೈತರಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್‌‌

ಬಿಜೆಪಿ- ಜೆಜೆಪಿ ನೇತೃತ್ವದ ಮೈತ್ರಿ ಸರ್ಕಾರವನ್ನು ಒತ್ತಡಕ್ಕೆ ಸಿಲುಕಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರವನ್ನು ಒತ್ತಡಕ್ಕೆ ಸಿಲುಕಿಸಬೇಕು ಎಂಬುದು ಸಂಯುಕ್ತ ಕಿಸಾನ್ ಮೋರ್ಚಾದ ಆಲೋಚನೆಯಾಗಿದೆ. ಹರಿಯಾಣದ ಹಲವು ಶಾಸಕರು ರೈತ ಹೋರಾಟಕ್ಕೆ ಮುಕ್ತ ಬೆಂಬಲ ನೀಡಿದ್ದಾರೆ.

“ರೈತರ ಚಳವಳಿಯ ಈ ನಿರ್ಣಾಯಕ ಹಂತದಲ್ಲಿ ರೈತರೊಂದಿಗೆ ನಿಲ್ಲದವರಿಗೆ ಭವಿಷ್ಯದಲ್ಲಿ ಜನರು ಪಾಠ ಕಲಿಸುತ್ತಾರೆ ಎಂದು ಹರಿಯಾಣದ ಶಾಸಕರಿಗೆ ತಿಳಿಸಿ” ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ಹರಿಯಾಣದ ರೈತರಿಗೆ ತಿಳಿಸಿದೆ.

90 ಸದಸ್ಯರ ವಿಧಾನಸಭೆಯಲ್ಲಿ 50 ಶಾಸಕರೊಂದಿಗೆ ಬಿಜೆಪಿ-ಜನ್‌ನಾಯಕ್ ಜನತಾ ಪಕ್ಷ (ಜೆಜೆಪಿ) ಮೈತ್ರಿಕೂಟದಲ್ಲಿ ಬಹುಮತವಿದೆ. ಆದರೆ ರೈತ ಹೋರಾಟ ಬೆಂಬಲಿಸಿ ಸ್ವತಂತ್ರ ಶಾಸಕರು ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದರು. ಹಾಗಾಗಿ ಕಳೆದ ವಾರ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನದಂದು ಹರಿಯಾಣದ ವಿರೋಧ ಪಕ್ಷವಾದ ಕಾಂಗ್ರೆಸ್, ಮನೋಹರ್ ಲಾಲ್ ಖಟ್ಟರ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತ್ತು.

ಬಿಜೆಪಿಯಲ್ಲಿ 40 ಶಾಸಕರು ಇದ್ದರೆ, ಜೆಜೆಪಿಯಲ್ಲಿ 10 ಶಾಸಕರು ಇದ್ದಾರೆ. ಉಳಿದ 38 ಜನರಲ್ಲಿ ಕಾಂಗ್ರೆಸ್‌ನಲ್ಲಿ 30 ಶಾಸಕರು, ಹರಿಯಾಣ ಲೋಖಿತ್ ಪಕ್ಷಕ್ಕೆ ಒಬ್ಬ ಶಾಸಕರು ಇದ್ದರೆ ಏಳು ಮಂದಿ ಸ್ವತಂತ್ರ ಶಾಸಕರು ಇದ್ದಾರೆ. ಈ ಒಕ್ಕೂಟವು ಏಳು ಸ್ವತಂತ್ರರಲ್ಲಿ ಐವರು ಮತ್ತು ಸದನದಲ್ಲಿ ಹರಿಯಾಣ ಲೋಖಿತ್ ಪಕ್ಷದ ಬೆಂಬಲವನ್ನು ಹೊಂದಿದೆ. ಸರಳ ಬಹುಮತಕ್ಕೆ 45 ಸದಸ್ಯರ ಅಗತ್ಯವಿದೆ.


ಇದನ್ನೂ ಓದಿ: ನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...