Homeಚಳವಳಿಮಾ.10ಕ್ಕೆ ಹರಿಯಾಣದಲ್ಲಿ ವಿಶ್ವಾಸಮತ ಯಾಚನೆ: ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ರೈತ ಹೋರಾಟದ ಕರೆ

ಮಾ.10ಕ್ಕೆ ಹರಿಯಾಣದಲ್ಲಿ ವಿಶ್ವಾಸಮತ ಯಾಚನೆ: ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ರೈತ ಹೋರಾಟದ ಕರೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಹೋರಾಟ ಈಗ ಸರ್ಕಾರದ ವಿರುದ್ಧದ ಹೋರಾಟವಾಗಿ ಬದಲಾಗಿದೆ. ರೈತರ ಮಾತು ಕೇಳದ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ರೈತರು ನಿರ್ಧರಿಸಿದ್ದಾರೆ.  ಹರಿಯಾಣ ಸರ್ಕಾರ ಮಾರ್ಚ್ 10ಕ್ಕೆ ವಿಶ್ವಾಸಮತ ಯಾಚನೆ ಮಾಡಲಿದ್ದು, ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸುವುದಾಗಿ ಘೋಷಿಸಿರುವ ರೈತ ಮುಖಂಡರು, ಮಾರ್ಚ್ 13 ರಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಆರಂಭಿಸಲಿದ್ದಾರೆ. ಸ್ಥಳೀಯ ರೈತರೊಂದಿಗೆ ಮಾತನಾಡಿ, ಕೃಷಿ ಕಾನೂನುಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಮಾರ್ಚ್ 10 ರಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌, ವಿಶ್ವಾಸಮತ ಯಾಚಿಸಲಿದ್ದಾರೆ. ಅಂದು ರಾಜ್ಯದ ಬಿಜೆಪಿ-ಜೆಜೆಪಿ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ತಮ್ಮ ಸ್ಥಳೀಯ ಶಾಸಕರ ಮೇಲೆ ಒತ್ತಡ ಹೇರುವಂತೆ ಎಸ್‌ಕೆಎಂ ರೈತರಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್‌‌

ಬಿಜೆಪಿ- ಜೆಜೆಪಿ ನೇತೃತ್ವದ ಮೈತ್ರಿ ಸರ್ಕಾರವನ್ನು ಒತ್ತಡಕ್ಕೆ ಸಿಲುಕಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರವನ್ನು ಒತ್ತಡಕ್ಕೆ ಸಿಲುಕಿಸಬೇಕು ಎಂಬುದು ಸಂಯುಕ್ತ ಕಿಸಾನ್ ಮೋರ್ಚಾದ ಆಲೋಚನೆಯಾಗಿದೆ. ಹರಿಯಾಣದ ಹಲವು ಶಾಸಕರು ರೈತ ಹೋರಾಟಕ್ಕೆ ಮುಕ್ತ ಬೆಂಬಲ ನೀಡಿದ್ದಾರೆ.

“ರೈತರ ಚಳವಳಿಯ ಈ ನಿರ್ಣಾಯಕ ಹಂತದಲ್ಲಿ ರೈತರೊಂದಿಗೆ ನಿಲ್ಲದವರಿಗೆ ಭವಿಷ್ಯದಲ್ಲಿ ಜನರು ಪಾಠ ಕಲಿಸುತ್ತಾರೆ ಎಂದು ಹರಿಯಾಣದ ಶಾಸಕರಿಗೆ ತಿಳಿಸಿ” ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ಹರಿಯಾಣದ ರೈತರಿಗೆ ತಿಳಿಸಿದೆ.

90 ಸದಸ್ಯರ ವಿಧಾನಸಭೆಯಲ್ಲಿ 50 ಶಾಸಕರೊಂದಿಗೆ ಬಿಜೆಪಿ-ಜನ್‌ನಾಯಕ್ ಜನತಾ ಪಕ್ಷ (ಜೆಜೆಪಿ) ಮೈತ್ರಿಕೂಟದಲ್ಲಿ ಬಹುಮತವಿದೆ. ಆದರೆ ರೈತ ಹೋರಾಟ ಬೆಂಬಲಿಸಿ ಸ್ವತಂತ್ರ ಶಾಸಕರು ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದರು. ಹಾಗಾಗಿ ಕಳೆದ ವಾರ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನದಂದು ಹರಿಯಾಣದ ವಿರೋಧ ಪಕ್ಷವಾದ ಕಾಂಗ್ರೆಸ್, ಮನೋಹರ್ ಲಾಲ್ ಖಟ್ಟರ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತ್ತು.

ಬಿಜೆಪಿಯಲ್ಲಿ 40 ಶಾಸಕರು ಇದ್ದರೆ, ಜೆಜೆಪಿಯಲ್ಲಿ 10 ಶಾಸಕರು ಇದ್ದಾರೆ. ಉಳಿದ 38 ಜನರಲ್ಲಿ ಕಾಂಗ್ರೆಸ್‌ನಲ್ಲಿ 30 ಶಾಸಕರು, ಹರಿಯಾಣ ಲೋಖಿತ್ ಪಕ್ಷಕ್ಕೆ ಒಬ್ಬ ಶಾಸಕರು ಇದ್ದರೆ ಏಳು ಮಂದಿ ಸ್ವತಂತ್ರ ಶಾಸಕರು ಇದ್ದಾರೆ. ಈ ಒಕ್ಕೂಟವು ಏಳು ಸ್ವತಂತ್ರರಲ್ಲಿ ಐವರು ಮತ್ತು ಸದನದಲ್ಲಿ ಹರಿಯಾಣ ಲೋಖಿತ್ ಪಕ್ಷದ ಬೆಂಬಲವನ್ನು ಹೊಂದಿದೆ. ಸರಳ ಬಹುಮತಕ್ಕೆ 45 ಸದಸ್ಯರ ಅಗತ್ಯವಿದೆ.


ಇದನ್ನೂ ಓದಿ: ನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...