Homeಕರ್ನಾಟಕಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

- Advertisement -
- Advertisement -

| ಪಿ.ಕೆ.ಮಲ್ಲನಗೌಡರ್ |

ಇಲ್ಲಿ ವಿಜಯವಾಣಿ ಮತ್ತು ದಿಗ್ವಿಜಯದ ಮಾಲೀಕ ವಿಜಯ ಸಂಕೇಶ್ವರರು ಬಿಜೆಪಿ ಪಕ್ಷಕ್ಕೆ ಸೇರಿದವರು ಮತ್ತು ಪತ್ರಿಕೆಯೂ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುತ್ತಿದೆ ಎಂಬುದರಲ್ಲಿ ಯಾರಿಗೂ ಸಂದೇಹವಿರಲಿಲ್ಲ. ಆದರೆ ಈಗ ಕಳೆದ ಚುನಾವಣೆ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತೇಲಿ ಬಂದಿದ್ದ ಸುಳ್ಳು ಸುದ್ದಿಯೊಂದನ್ನು ‘ಪ್ರಿಂಟ್’ ಮಾಡುವ ಮೂಲಕ ಸಂಕೇಶ್ವರ್ ತಾವು ಯಾವ ಮಟ್ಟಕ್ಕೆ ಇಳಿಯಬಲ್ಲವರು ಎಂಬುದನ್ನು ಅವರ ಓದುಗರು/ವೀಕ್ಷಕರಿಗೂ ತೋರಿಸಿಯೇ ಬಿಟ್ಟಿದ್ದಾರೆ! ಈ ಹೊತ್ತಲ್ಲೇ ವಿಜಯವಾಣಿಗೆ ಮೋದಿ ಸಂದರ್ಶನ ನೀಡಿದ್ದಾರೆ, ನಿನ್ನೆ (ಏ 18) ಬಾಗಲಕೋಟೆಯಲ್ಲಿ ಮೋದಿ ಲಿಂಗಾಯತ ವಿಷಯವನ್ನು ಎತ್ತಿಕೊಂಡಿದ್ದಾರೆ! ಅಂದರೆ ಎಲ್ಲವೂ ಒಂದು ಯೋಜಿತ ಹುನ್ನಾರದ ಭಾಗವಾಗಿ ನಡೆದಿದೆ. ಈ ಸಾರಿ ಅದು ಶುರುವಾಗಿದ್ದು ವಿಜಯವಾಣಿಯಲ್ಲಿ ಪ್ರಕಟವಾದ ಸುಳ್ಳು ಸುದ್ದಿಯಿಂದ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸಾಕಷ್ಟು ಮುನ್ನಲೆಗೆ ಬಂದಿತ್ತು. ಪ್ರತ್ಯೇಕ ಲಿಂಗಾಯತ/ವೀರಶೈವ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ ಸಂಘ ಪರಿವಾರ, ಈ ಕುರಿತಂತೆ ಹಲವು ಸುಳ್ ಸುದ್ದಿಗಳನ್ನೂ ಹರಡಿತ್ತು.

ಆ ಸಂದರ್ಭದಲ್ಲಿ, ಅಂದಿನ ಜಲಸಂಪನ್ಮೂಲ ಮತ್ತು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲರ ಸಂಸ್ಥೆಯ ಲೆಟರ್‍ಹೆಡ್ ಮತ್ತು ಅವರ ಫೋರ್ಜರಿ ಸಹಿಯಿದ್ದ ಪತ್ರವೊಂದನ್ನು ಕುಖ್ಯಾತ ಫೇಕ್ ಕಂಪನಿ ಪೋಸ್ಟ್‍ಕಾರ್ಡ್ ಸೃಷ್ಟಿಸಿತ್ತು. ಕ್ರಿಶ್ಚಿಯನ್ ಮಿಷಿನರಿಗಳ ಸಹಾಯ ಪಡೆದು, ಲಿಂಗಾಯತ ಧರ್ಮವನ್ನು ಒಡೆಯಲು ಉದ್ದೇಶಿಸಿದ ಎಂ.ಬಿ.ಪಾಟೀಲರು ಈ ಬಗ್ಗೆ ಸೋನಿಯಾ ಗಾಂಧಿ ಜೊತೆ ಪತ್ರ ವ್ಯಹಾರ ಮಾಡಿದ್ದಾರೆ ಎಂದು ತೋರಿಸಲಾಗಿತ್ತು. ಆಗಲೇ ಎಂ.ಬಿ.ಪಾಟೀಲ ಇದನ್ನು ನಿರಾಕರಿಸಿದ್ದರು. ಆದರೆ ಈ ಪುಣ್ಯಾತ್ಮ ಆಗಲೇ ದೂರು ಕೊಡದೇ ಮೂರ್ಖತನ ಮಾಡಿದ್ದರು.

ಈಗ ಅದೇ ಫೇಕ್ ಪತ್ರ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಸಂಕೇಶ್ವರರ ವಿಜಯವಾಣಿ ಪ್ರಿಂಟ್ ಮಾಡಿದ್ದು, ಇದರ ಹಿಂದಿನ ಹುನ್ನಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟಿರುವ ಎಂ.ಬಿ.ಪಾಟೀಲರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಆಯೋಗ ವಿಜಯವಾಣಿಯ ಮೇಲೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತದೆ ನೋಡಬೇಕು.

ಬೆದರಿಬಿಟ್ಟಿತಾ ಬಿಜೆಪಿ?
ಎರಡನೇ ಹಂತದ ಚುನಾವಣೆಗಳು ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ. ಈ ಸಲ ಲಿಂಗಾಯತರು ಉಲ್ಟಾ ಹೊಡೆಯುವ ಸೂಚನೆಗಳು ಕಾಣತೊಡಗಿದ ಮೇಲೆ ಬಿಜೆಪಿ ಮತ್ತು ಸಂಘ ಪರಿವಾರ ಬೆದರಿದಂತೆ ಕಾಣುತ್ತಿವೆ. ಅದರ ಪರಿಣಾಮವಾಗಿಯೇ, ಸಂಕೇಶ್ವರರ ಪೇಪರ್ ವರ್ಷದ ಹಿಂದೆ ಪ್ರಕಟವಾದ ಸುಳ್ ಸುದ್ದಿಯನ್ನು ಮುದ್ರಿಸುತ್ತದೆ! ಇದೇ ಸಂದರ್ಭದಲ್ಲಿ, ಕನ್ನಡ ಮಾಧ್ಯಮದಲ್ಲೇ ಪ್ರಥಮ ಎಂದು ಮೋದಿಯ ಸಂದರ್ಶನವನ್ನೂ ಪ್ರಕಟಿಸುತ್ತದೆ. ನಿನ್ನೆ (ಏಪ್ರಿಲ್ 18) ಬಾಗಲಕೋಟೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ, ‘ಕಾಂಗ್ರೆಸ್ ಲಿಂಗಾಯತ ಧರ್ಮವನ್ನು ಒಡೆಯಲು ಹೊರಟಿದೆ’ ಎಂದು ಹೇಳುತ್ತಾ, ಸದರಿ ಪತ್ರವನ್ನೂ ಉಲ್ಲೇಖಿಸುತ್ತಾರೆ.

ಗದುಗಿನ ತೋಂಟಾದಾರ್ಯ ಮಠದಲ್ಲಿ ಹಿಂದಿನ ಸಿದ್ದಲಿಂಗ ಸ್ವಾಮಿಗಳು ಜಾತ್ರೆಯ ಉತ್ಸುವಾರಿ ಸಮಿತಿಗೆ ಮುಸ್ಲಿಂರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಿದಾಗ ಇದೇ ಗದುಗಿನವರಾದ ವಿಜಯ್ ಸಂಕೇಶ್ವರ್‍ರವರು ಮಠದಲ್ಲೇ ಸ್ವಾಮೀಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ದಿವಂಗತ ಸಿದ್ಧಲಿಂಗ ಸ್ವಾಮಿಗಳು ಸಂಕೆಶ್ವರರಿಗೆ ಲೆಫ್ಟ್ ರೈಟ್ ತೆಗೆದುಕೊಂಡು ಬೆವರಿಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಒಟ್ಟಿನಲ್ಲಿ ಫೇಕ್‍ನ್ಯೂಸ್ ಎಂಬುದು ಕೇವಲ ಸೋಷಿಯಲ್ ಮೀಡಿಯಾ ಅಥವಾ ಟಿವಿ ಚಾನೆಲ್‍ಗಳಿಗೆ ಸೀಮಿತವಲ್ಲ ಎಂಬುದನ್ನು ‘ನಮ್ಮಲ್ಲೇ ಮೊದಲು’ ಎಂದು ಬಿತ್ತರಿಸಿದ ಖ್ಯಾತಿ ವಿಜಯ್ ಸಂಕೇಶ್ವರರ ವಿಜಯವಾಣಿಗೇ ಸಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...