Homeಕರ್ನಾಟಕಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

- Advertisement -
- Advertisement -

| ಪಿ.ಕೆ.ಮಲ್ಲನಗೌಡರ್ |

ಇಲ್ಲಿ ವಿಜಯವಾಣಿ ಮತ್ತು ದಿಗ್ವಿಜಯದ ಮಾಲೀಕ ವಿಜಯ ಸಂಕೇಶ್ವರರು ಬಿಜೆಪಿ ಪಕ್ಷಕ್ಕೆ ಸೇರಿದವರು ಮತ್ತು ಪತ್ರಿಕೆಯೂ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುತ್ತಿದೆ ಎಂಬುದರಲ್ಲಿ ಯಾರಿಗೂ ಸಂದೇಹವಿರಲಿಲ್ಲ. ಆದರೆ ಈಗ ಕಳೆದ ಚುನಾವಣೆ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತೇಲಿ ಬಂದಿದ್ದ ಸುಳ್ಳು ಸುದ್ದಿಯೊಂದನ್ನು ‘ಪ್ರಿಂಟ್’ ಮಾಡುವ ಮೂಲಕ ಸಂಕೇಶ್ವರ್ ತಾವು ಯಾವ ಮಟ್ಟಕ್ಕೆ ಇಳಿಯಬಲ್ಲವರು ಎಂಬುದನ್ನು ಅವರ ಓದುಗರು/ವೀಕ್ಷಕರಿಗೂ ತೋರಿಸಿಯೇ ಬಿಟ್ಟಿದ್ದಾರೆ! ಈ ಹೊತ್ತಲ್ಲೇ ವಿಜಯವಾಣಿಗೆ ಮೋದಿ ಸಂದರ್ಶನ ನೀಡಿದ್ದಾರೆ, ನಿನ್ನೆ (ಏ 18) ಬಾಗಲಕೋಟೆಯಲ್ಲಿ ಮೋದಿ ಲಿಂಗಾಯತ ವಿಷಯವನ್ನು ಎತ್ತಿಕೊಂಡಿದ್ದಾರೆ! ಅಂದರೆ ಎಲ್ಲವೂ ಒಂದು ಯೋಜಿತ ಹುನ್ನಾರದ ಭಾಗವಾಗಿ ನಡೆದಿದೆ. ಈ ಸಾರಿ ಅದು ಶುರುವಾಗಿದ್ದು ವಿಜಯವಾಣಿಯಲ್ಲಿ ಪ್ರಕಟವಾದ ಸುಳ್ಳು ಸುದ್ದಿಯಿಂದ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸಾಕಷ್ಟು ಮುನ್ನಲೆಗೆ ಬಂದಿತ್ತು. ಪ್ರತ್ಯೇಕ ಲಿಂಗಾಯತ/ವೀರಶೈವ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ ಸಂಘ ಪರಿವಾರ, ಈ ಕುರಿತಂತೆ ಹಲವು ಸುಳ್ ಸುದ್ದಿಗಳನ್ನೂ ಹರಡಿತ್ತು.

ಆ ಸಂದರ್ಭದಲ್ಲಿ, ಅಂದಿನ ಜಲಸಂಪನ್ಮೂಲ ಮತ್ತು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲರ ಸಂಸ್ಥೆಯ ಲೆಟರ್‍ಹೆಡ್ ಮತ್ತು ಅವರ ಫೋರ್ಜರಿ ಸಹಿಯಿದ್ದ ಪತ್ರವೊಂದನ್ನು ಕುಖ್ಯಾತ ಫೇಕ್ ಕಂಪನಿ ಪೋಸ್ಟ್‍ಕಾರ್ಡ್ ಸೃಷ್ಟಿಸಿತ್ತು. ಕ್ರಿಶ್ಚಿಯನ್ ಮಿಷಿನರಿಗಳ ಸಹಾಯ ಪಡೆದು, ಲಿಂಗಾಯತ ಧರ್ಮವನ್ನು ಒಡೆಯಲು ಉದ್ದೇಶಿಸಿದ ಎಂ.ಬಿ.ಪಾಟೀಲರು ಈ ಬಗ್ಗೆ ಸೋನಿಯಾ ಗಾಂಧಿ ಜೊತೆ ಪತ್ರ ವ್ಯಹಾರ ಮಾಡಿದ್ದಾರೆ ಎಂದು ತೋರಿಸಲಾಗಿತ್ತು. ಆಗಲೇ ಎಂ.ಬಿ.ಪಾಟೀಲ ಇದನ್ನು ನಿರಾಕರಿಸಿದ್ದರು. ಆದರೆ ಈ ಪುಣ್ಯಾತ್ಮ ಆಗಲೇ ದೂರು ಕೊಡದೇ ಮೂರ್ಖತನ ಮಾಡಿದ್ದರು.

ಈಗ ಅದೇ ಫೇಕ್ ಪತ್ರ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಸಂಕೇಶ್ವರರ ವಿಜಯವಾಣಿ ಪ್ರಿಂಟ್ ಮಾಡಿದ್ದು, ಇದರ ಹಿಂದಿನ ಹುನ್ನಾರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟಿರುವ ಎಂ.ಬಿ.ಪಾಟೀಲರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಆಯೋಗ ವಿಜಯವಾಣಿಯ ಮೇಲೆ ಯಾವ ಕ್ರಮವನ್ನು ತೆಗೆದುಕೊಳ್ಳುತ್ತದೆ ನೋಡಬೇಕು.

ಬೆದರಿಬಿಟ್ಟಿತಾ ಬಿಜೆಪಿ?
ಎರಡನೇ ಹಂತದ ಚುನಾವಣೆಗಳು ನಡೆಯುವ 14 ಕ್ಷೇತ್ರಗಳಲ್ಲಿ ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ. ಈ ಸಲ ಲಿಂಗಾಯತರು ಉಲ್ಟಾ ಹೊಡೆಯುವ ಸೂಚನೆಗಳು ಕಾಣತೊಡಗಿದ ಮೇಲೆ ಬಿಜೆಪಿ ಮತ್ತು ಸಂಘ ಪರಿವಾರ ಬೆದರಿದಂತೆ ಕಾಣುತ್ತಿವೆ. ಅದರ ಪರಿಣಾಮವಾಗಿಯೇ, ಸಂಕೇಶ್ವರರ ಪೇಪರ್ ವರ್ಷದ ಹಿಂದೆ ಪ್ರಕಟವಾದ ಸುಳ್ ಸುದ್ದಿಯನ್ನು ಮುದ್ರಿಸುತ್ತದೆ! ಇದೇ ಸಂದರ್ಭದಲ್ಲಿ, ಕನ್ನಡ ಮಾಧ್ಯಮದಲ್ಲೇ ಪ್ರಥಮ ಎಂದು ಮೋದಿಯ ಸಂದರ್ಶನವನ್ನೂ ಪ್ರಕಟಿಸುತ್ತದೆ. ನಿನ್ನೆ (ಏಪ್ರಿಲ್ 18) ಬಾಗಲಕೋಟೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ, ‘ಕಾಂಗ್ರೆಸ್ ಲಿಂಗಾಯತ ಧರ್ಮವನ್ನು ಒಡೆಯಲು ಹೊರಟಿದೆ’ ಎಂದು ಹೇಳುತ್ತಾ, ಸದರಿ ಪತ್ರವನ್ನೂ ಉಲ್ಲೇಖಿಸುತ್ತಾರೆ.

ಗದುಗಿನ ತೋಂಟಾದಾರ್ಯ ಮಠದಲ್ಲಿ ಹಿಂದಿನ ಸಿದ್ದಲಿಂಗ ಸ್ವಾಮಿಗಳು ಜಾತ್ರೆಯ ಉತ್ಸುವಾರಿ ಸಮಿತಿಗೆ ಮುಸ್ಲಿಂರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಿದಾಗ ಇದೇ ಗದುಗಿನವರಾದ ವಿಜಯ್ ಸಂಕೇಶ್ವರ್‍ರವರು ಮಠದಲ್ಲೇ ಸ್ವಾಮೀಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ದಿವಂಗತ ಸಿದ್ಧಲಿಂಗ ಸ್ವಾಮಿಗಳು ಸಂಕೆಶ್ವರರಿಗೆ ಲೆಫ್ಟ್ ರೈಟ್ ತೆಗೆದುಕೊಂಡು ಬೆವರಿಳಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಒಟ್ಟಿನಲ್ಲಿ ಫೇಕ್‍ನ್ಯೂಸ್ ಎಂಬುದು ಕೇವಲ ಸೋಷಿಯಲ್ ಮೀಡಿಯಾ ಅಥವಾ ಟಿವಿ ಚಾನೆಲ್‍ಗಳಿಗೆ ಸೀಮಿತವಲ್ಲ ಎಂಬುದನ್ನು ‘ನಮ್ಮಲ್ಲೇ ಮೊದಲು’ ಎಂದು ಬಿತ್ತರಿಸಿದ ಖ್ಯಾತಿ ವಿಜಯ್ ಸಂಕೇಶ್ವರರ ವಿಜಯವಾಣಿಗೇ ಸಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...