Homeಕರ್ನಾಟಕಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

- Advertisement -
- Advertisement -

ಎಲೆಮರೆಯಾಗಿ ಕೆಲಸ ಮಾಡಿ ಸಾವಿರಾರು ಜನರು ನೆಮ್ಮದಿಯ, ಗೌರವದ ಬದುಕು ಕಟ್ಟಿಕೊಳ್ಳಲು ಕಾರಣವಾದ ಸಾಮಾಜಿಕ ಹೋರಾಟಗಾರರಲ್ಲಿ ಜಾಗೃತ ಮಹಿಳಾ ಸಂಘಟನೆಯ ಚಿನ್ನಮ್ಮ ಕೂಡ ಒಬ್ಬರು. ತಮ್ಮ ನೋವುಗಳನ್ನು ದಾಟಿ, ಮತ್ತೊಬ್ಬರ ನೋವಿಗೆ ಕಿವಿಯಾಗುವ ಇವರ ಬದುಕು, ಕೆಲಸ ಮತ್ತೊಬ್ಬರಿಗೂ ಸ್ಫೂರ್ತಿದಾಯಕ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರ ಕಿರು ಪರಿಚಯ ಇಲ್ಲಿದೆ.

ರಾಯಚೂರು ಜಿಲ್ಲೆಯಲ್ಲಿ ಕೃಷಿ, ಕೂಲಿಕಾರ, ಬಡ-ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಿನ್ನಮ್ಮ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಂಗುಡ್ಡಿ ಇವರ ಊರು.. ದೇವದಾಸಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥೆ.. ಬಾಲ್ಯ ವಿವಾಹಕ್ಕೆ ಸಿಲುಕಿ ಬಾಲ್ಯವನ್ನು ಕಳೆದುಕೊಂಡವರು ಚಿನ್ನಮ್ಮ. ಬಡತನ, ಜಾತಿ ವ್ಯವಸ್ಥೆಯ ಕಹಿ ಅನುಭವಗಳನ್ನು ಅನುಭವಿಸುತ್ತಾ ಬೆಳೆದವರು. ಅದರಲ್ಲೂ ದಲಿತ ಹೆಣ್ಣು ಮಗಳಾಗಿ ತನ್ನ ಸುತ್ತಲಿನ ಜನರ ನೋವನ್ನು ಕಾಣುತ್ತಾ, ಸಹಿಸುತ್ತಾ ಬೆಳೆದವರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ಜಾತಿ ಕಾರಣಕ್ಕೆ ಪುರುಷನಿಗಿಂತ ಮಹಿಳೆ ಅನುಭವಿಸುವ ಕಷ್ಟ ಕಂಡ ಇವರು ಮಹಿಳೆಯರ ಜೊತೆ ಸೇರಿ ಮಹಿಳಾ ಗುಂಪುಗಳನ್ನು ಕಟ್ಟಿದವರು. ಮನೆಯ ಗಂಡಸರು, ಊರ ಮುಖಂಡರು, ಪುಂಡ ಪೋಕರಿಗಳ ಮಾತಿಗೆ ತಲೆಕೆಡಿಸಿಕೊಳ್ಳದೆ ತನ್ನ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಡಿದವರು.

ಝಾನ್ಸಿ ರಾಣಿ ಮಹಿಳಾ ಸಂಘದ ಮೂಲಕ ತನ್ನ ಊರಿನ ರಸ್ತೆಗಳ ನಿರ್ಮಾಣಕ್ಕೆ ಕೈಹಾಕಿ ಸೈ ಎನಿಕೊಂಡಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ಬೇರೆಯವರ ಮುಂದೆ ನಿಂತು ಹೆಣ್ಣು ಎಂಬ ಕಾರಣಕ್ಕೆ ತಾವು ಅನುಭವಿಸಿದ್ದ ಅವಮಾನಗಳಿಂದ ಹೊರ ಬರಲು, ಗೌರವದ ಬದುಕು ಕಟ್ಟಿಕೊಳ್ಳಲು ಸ್ವಂತ ಉದ್ಯಮ ಸ್ಥಾಪಿಸಲು ನಿರ್ಧರಿಸಿ, ಸಹಾಯ ಬೇಡಿ ಪೋತ್ನಾಳ ಗ್ರಾಮದಲ್ಲಿ ಬೇವಿನ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿದವರು ಚಿನ್ನಮ್ಮ.

ತಮ್ಮ ಸಮುದಾಯದ ಮಹಿಳೆಯರು ಅನಾರೋಗ್ಯದಿಂದ ಆಸ್ಪತ್ರೆಗೆ ಹೋದರೆ, ಆಸ್ಪತ್ರೆಗಳ ವೈದ್ಯರು ಜಾತಿಯ ಕಾರಣಕ್ಕೆ ಮುಟ್ಟಲು ಹಿಂದೆ ಮುಂದೆ ನೋಡುತ್ತಿದ್ದದ್ದನ್ನು ಗಮನಿಸಿದ ಚಿನ್ನಮ್ಮ, ತಾವೇ ಮಹಿಳೆಯರ ಜೊತೆ ಸೇರಿ ಗಿಡಮೂಲಿಕೆ ಔಷಧಿಗಳನ್ನು ನೀಡುವುದನ್ನು ಕಲಿತಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಮಹಿಳೆಯರ ಆರೋಗ್ಯ ಜಾಗೃತಿಗಾಗಿ ಬರಿಗಾಲಲ್ಲಿ ಹಳ್ಳಿ ಹಳ್ಳಿಗೂ ನಡೆದು, ಹೆಣ್ಣು ಮಕ್ಕಳಿಗೆ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಗಿಡಮೂಲಿಕೆ ಔಷಧಿಗಳನ್ನು ಬಳಸುವುದನ್ನು ಹೇಳಿಕೊಟ್ಟಿದ್ದಾರೆ. ಇಂದಿಗೂ ಹೆಣ್ಣು ಮಕ್ಕಳ ಹಲವಾರು ಕಾಯಿಲೆಗಳಿಗೆ ಚಿನ್ನಮ್ಮನ ಬಳಿ ಔಷಧಿಗಳಿವೆ. ನಗರ ಪ್ರದೇಶಗಳಿಂದಲೂ ಇವರ ಬಳಿ ಚಿಕಿತ್ಸೆ ಪಡೆಯಲು ಬರುತ್ತಾರೆ.

ರಾಯಚೂರಿನ ಪೋತ್ನಾಳ ಗ್ರಾಮದಲ್ಲಿ ಬೇವಿನ ಬೀಜದ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿ ನೂರಾರು ಮಹಿಳೆಯರಿಗೆ ಕೆಲಸ ನೀಡಿದ ಚಿನ್ನಮ್ಮನಿಗೆ ದಕ್ಷಿಣ ಭಾರತದ ಯಶಸ್ವಿ ಕಿರು ಉದ್ಯಮಿ ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ಅಂತರಾಷ್ಟ್ರೀಯ ಸಂಸ್ಥೆಗಳಾದ ಸಿಟಿ ಗ್ರೂಪ್, UNDP, UNCDF ಸಂಯುಕ್ತವಾಗಿ ಪ್ರಶಸ್ತಿ ನೀಡಿ ಗೌರವಿಸಿವೆ.

PC: Jagrutha Mahila Sanghatan

ನಿರ್ದಿಷ್ಟವಾಗಿ ದಲಿತ ಮಹಿಳೆಯರನ್ನು ಸಂಘಟಿಸುವಲ್ಲಿನ ನಾಯಕತ್ವಕ್ಕಾಗಿ ಮತ್ತು ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವರು ಮಾಡಿದ ಕಾರ್ಯಕ್ಕಾಗಿ ರಾಷ್ಟ್ರಮಟ್ಟದ ಗೌರವವನ್ನು ನೀಡಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಮಾರ್ಚ್ 21, 2013 ರಂದು ದೆಹಲಿಯಲ್ಲಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ.

ಚಿನ್ನಮ್ಮ ಅವರ ಕೆಲಸವನ್ನು ಗುರುತಿಸಿದ ಕರ್ನಾಟಕ ರಾಜ್ಯ ಸರ್ಕಾರವು 2013 ರ ಮಾರ್ಚ್ 8 ರಂದು ಬೆಂಗಳೂರಿನಲ್ಲಿ ‘ಕಿತ್ತೂರು ಚಿನ್ನಮ್ಮ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಸಕ್ತ ವರ್ಷದ ಸೈರೋಸ್ ಕರ್ನಾಟಕ ಸಂಸ್ಥೆ ನೀಡುವ ಪ್ರಶಸ್ತಿಗೂ ಚಿನ್ನಮ್ಮ ಭಾಜನರಾಗಿದ್ದಾರೆ.

ಕೃಷಿ ಕೂಲಿಕಾರ ಬಡ ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಪೋತ್ನಾಳದ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆಯಾಗಿ, ತನ್ನ ತಾಲೂಕಿನಲ್ಲಿ ಬಡ ಜನರ ಹಕ್ಕುಗಳಿಗಾಗಿ ಹೋರಾಡುತ್ತಾರೆ.

credit: Jagrutha Mahila Sanghatan

ಜನಾಧಿಕಾರ, ತಾಯಿ ಮಗು ಆರೋಗ್ಯದ ಹಕ್ಕೊತ್ತಾಯ, ಉದ್ಯೋಗದ ಹಕ್ಕು (ನರೇಗಾ) ಇವುಗಳ ಅನುಷ್ಠಾನಕ್ಕಾಗಿ ಮಹಿಳೆಯರನ್ನು, ಊರಿನ ಜನರನ್ನು ಒಗ್ಗೂಡಿಸಿ ಪ್ರತಿಭಟಿಸುತ್ತಾರೆ. ದಲಿತ ಬಾಲಕಿ ಅಂಬಿಕಾ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ ಪ್ರಮುಖ ಸಂಘಟನೆ ಜಾಗೃತ ಮಹಿಳಾ ಸಂಘಟನೆಯಾಗಿದೆ. ಮಹಿಳೆಯರ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುತ್ತಿರುವ ಈ ಸಂಘಟನೆಯ ಮುಖ್ಯ ‌ಆಧಾರವಾಗಿ ಮುಂದಿನ ಪೀಳಿಗೆಗೆ ದಾರಿ ದೀಪವಾಗಿದ್ದಾರೆ ಚಿನ್ನಮ್ಮ.


ಇದನ್ನೂ ಓದಿ: ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...