Homeಕರ್ನಾಟಕಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

- Advertisement -
- Advertisement -

ಎಲೆಮರೆಯಾಗಿ ಕೆಲಸ ಮಾಡಿ ಸಾವಿರಾರು ಜನರು ನೆಮ್ಮದಿಯ, ಗೌರವದ ಬದುಕು ಕಟ್ಟಿಕೊಳ್ಳಲು ಕಾರಣವಾದ ಸಾಮಾಜಿಕ ಹೋರಾಟಗಾರರಲ್ಲಿ ಜಾಗೃತ ಮಹಿಳಾ ಸಂಘಟನೆಯ ಚಿನ್ನಮ್ಮ ಕೂಡ ಒಬ್ಬರು. ತಮ್ಮ ನೋವುಗಳನ್ನು ದಾಟಿ, ಮತ್ತೊಬ್ಬರ ನೋವಿಗೆ ಕಿವಿಯಾಗುವ ಇವರ ಬದುಕು, ಕೆಲಸ ಮತ್ತೊಬ್ಬರಿಗೂ ಸ್ಫೂರ್ತಿದಾಯಕ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರ ಕಿರು ಪರಿಚಯ ಇಲ್ಲಿದೆ.

ರಾಯಚೂರು ಜಿಲ್ಲೆಯಲ್ಲಿ ಕೃಷಿ, ಕೂಲಿಕಾರ, ಬಡ-ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಿನ್ನಮ್ಮ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಂಗುಡ್ಡಿ ಇವರ ಊರು.. ದೇವದಾಸಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥೆ.. ಬಾಲ್ಯ ವಿವಾಹಕ್ಕೆ ಸಿಲುಕಿ ಬಾಲ್ಯವನ್ನು ಕಳೆದುಕೊಂಡವರು ಚಿನ್ನಮ್ಮ. ಬಡತನ, ಜಾತಿ ವ್ಯವಸ್ಥೆಯ ಕಹಿ ಅನುಭವಗಳನ್ನು ಅನುಭವಿಸುತ್ತಾ ಬೆಳೆದವರು. ಅದರಲ್ಲೂ ದಲಿತ ಹೆಣ್ಣು ಮಗಳಾಗಿ ತನ್ನ ಸುತ್ತಲಿನ ಜನರ ನೋವನ್ನು ಕಾಣುತ್ತಾ, ಸಹಿಸುತ್ತಾ ಬೆಳೆದವರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ಜಾತಿ ಕಾರಣಕ್ಕೆ ಪುರುಷನಿಗಿಂತ ಮಹಿಳೆ ಅನುಭವಿಸುವ ಕಷ್ಟ ಕಂಡ ಇವರು ಮಹಿಳೆಯರ ಜೊತೆ ಸೇರಿ ಮಹಿಳಾ ಗುಂಪುಗಳನ್ನು ಕಟ್ಟಿದವರು. ಮನೆಯ ಗಂಡಸರು, ಊರ ಮುಖಂಡರು, ಪುಂಡ ಪೋಕರಿಗಳ ಮಾತಿಗೆ ತಲೆಕೆಡಿಸಿಕೊಳ್ಳದೆ ತನ್ನ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಡಿದವರು.

ಝಾನ್ಸಿ ರಾಣಿ ಮಹಿಳಾ ಸಂಘದ ಮೂಲಕ ತನ್ನ ಊರಿನ ರಸ್ತೆಗಳ ನಿರ್ಮಾಣಕ್ಕೆ ಕೈಹಾಕಿ ಸೈ ಎನಿಕೊಂಡಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ಬೇರೆಯವರ ಮುಂದೆ ನಿಂತು ಹೆಣ್ಣು ಎಂಬ ಕಾರಣಕ್ಕೆ ತಾವು ಅನುಭವಿಸಿದ್ದ ಅವಮಾನಗಳಿಂದ ಹೊರ ಬರಲು, ಗೌರವದ ಬದುಕು ಕಟ್ಟಿಕೊಳ್ಳಲು ಸ್ವಂತ ಉದ್ಯಮ ಸ್ಥಾಪಿಸಲು ನಿರ್ಧರಿಸಿ, ಸಹಾಯ ಬೇಡಿ ಪೋತ್ನಾಳ ಗ್ರಾಮದಲ್ಲಿ ಬೇವಿನ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿದವರು ಚಿನ್ನಮ್ಮ.

ತಮ್ಮ ಸಮುದಾಯದ ಮಹಿಳೆಯರು ಅನಾರೋಗ್ಯದಿಂದ ಆಸ್ಪತ್ರೆಗೆ ಹೋದರೆ, ಆಸ್ಪತ್ರೆಗಳ ವೈದ್ಯರು ಜಾತಿಯ ಕಾರಣಕ್ಕೆ ಮುಟ್ಟಲು ಹಿಂದೆ ಮುಂದೆ ನೋಡುತ್ತಿದ್ದದ್ದನ್ನು ಗಮನಿಸಿದ ಚಿನ್ನಮ್ಮ, ತಾವೇ ಮಹಿಳೆಯರ ಜೊತೆ ಸೇರಿ ಗಿಡಮೂಲಿಕೆ ಔಷಧಿಗಳನ್ನು ನೀಡುವುದನ್ನು ಕಲಿತಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಮಹಿಳೆಯರ ಆರೋಗ್ಯ ಜಾಗೃತಿಗಾಗಿ ಬರಿಗಾಲಲ್ಲಿ ಹಳ್ಳಿ ಹಳ್ಳಿಗೂ ನಡೆದು, ಹೆಣ್ಣು ಮಕ್ಕಳಿಗೆ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಗಿಡಮೂಲಿಕೆ ಔಷಧಿಗಳನ್ನು ಬಳಸುವುದನ್ನು ಹೇಳಿಕೊಟ್ಟಿದ್ದಾರೆ. ಇಂದಿಗೂ ಹೆಣ್ಣು ಮಕ್ಕಳ ಹಲವಾರು ಕಾಯಿಲೆಗಳಿಗೆ ಚಿನ್ನಮ್ಮನ ಬಳಿ ಔಷಧಿಗಳಿವೆ. ನಗರ ಪ್ರದೇಶಗಳಿಂದಲೂ ಇವರ ಬಳಿ ಚಿಕಿತ್ಸೆ ಪಡೆಯಲು ಬರುತ್ತಾರೆ.

ರಾಯಚೂರಿನ ಪೋತ್ನಾಳ ಗ್ರಾಮದಲ್ಲಿ ಬೇವಿನ ಬೀಜದ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿ ನೂರಾರು ಮಹಿಳೆಯರಿಗೆ ಕೆಲಸ ನೀಡಿದ ಚಿನ್ನಮ್ಮನಿಗೆ ದಕ್ಷಿಣ ಭಾರತದ ಯಶಸ್ವಿ ಕಿರು ಉದ್ಯಮಿ ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ಅಂತರಾಷ್ಟ್ರೀಯ ಸಂಸ್ಥೆಗಳಾದ ಸಿಟಿ ಗ್ರೂಪ್, UNDP, UNCDF ಸಂಯುಕ್ತವಾಗಿ ಪ್ರಶಸ್ತಿ ನೀಡಿ ಗೌರವಿಸಿವೆ.

PC: Jagrutha Mahila Sanghatan

ನಿರ್ದಿಷ್ಟವಾಗಿ ದಲಿತ ಮಹಿಳೆಯರನ್ನು ಸಂಘಟಿಸುವಲ್ಲಿನ ನಾಯಕತ್ವಕ್ಕಾಗಿ ಮತ್ತು ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವರು ಮಾಡಿದ ಕಾರ್ಯಕ್ಕಾಗಿ ರಾಷ್ಟ್ರಮಟ್ಟದ ಗೌರವವನ್ನು ನೀಡಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಮಾರ್ಚ್ 21, 2013 ರಂದು ದೆಹಲಿಯಲ್ಲಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ.

ಚಿನ್ನಮ್ಮ ಅವರ ಕೆಲಸವನ್ನು ಗುರುತಿಸಿದ ಕರ್ನಾಟಕ ರಾಜ್ಯ ಸರ್ಕಾರವು 2013 ರ ಮಾರ್ಚ್ 8 ರಂದು ಬೆಂಗಳೂರಿನಲ್ಲಿ ‘ಕಿತ್ತೂರು ಚಿನ್ನಮ್ಮ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಸಕ್ತ ವರ್ಷದ ಸೈರೋಸ್ ಕರ್ನಾಟಕ ಸಂಸ್ಥೆ ನೀಡುವ ಪ್ರಶಸ್ತಿಗೂ ಚಿನ್ನಮ್ಮ ಭಾಜನರಾಗಿದ್ದಾರೆ.

ಕೃಷಿ ಕೂಲಿಕಾರ ಬಡ ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಪೋತ್ನಾಳದ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆಯಾಗಿ, ತನ್ನ ತಾಲೂಕಿನಲ್ಲಿ ಬಡ ಜನರ ಹಕ್ಕುಗಳಿಗಾಗಿ ಹೋರಾಡುತ್ತಾರೆ.

credit: Jagrutha Mahila Sanghatan

ಜನಾಧಿಕಾರ, ತಾಯಿ ಮಗು ಆರೋಗ್ಯದ ಹಕ್ಕೊತ್ತಾಯ, ಉದ್ಯೋಗದ ಹಕ್ಕು (ನರೇಗಾ) ಇವುಗಳ ಅನುಷ್ಠಾನಕ್ಕಾಗಿ ಮಹಿಳೆಯರನ್ನು, ಊರಿನ ಜನರನ್ನು ಒಗ್ಗೂಡಿಸಿ ಪ್ರತಿಭಟಿಸುತ್ತಾರೆ. ದಲಿತ ಬಾಲಕಿ ಅಂಬಿಕಾ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ ಪ್ರಮುಖ ಸಂಘಟನೆ ಜಾಗೃತ ಮಹಿಳಾ ಸಂಘಟನೆಯಾಗಿದೆ. ಮಹಿಳೆಯರ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುತ್ತಿರುವ ಈ ಸಂಘಟನೆಯ ಮುಖ್ಯ ‌ಆಧಾರವಾಗಿ ಮುಂದಿನ ಪೀಳಿಗೆಗೆ ದಾರಿ ದೀಪವಾಗಿದ್ದಾರೆ ಚಿನ್ನಮ್ಮ.


ಇದನ್ನೂ ಓದಿ: ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...