Homeಕರ್ನಾಟಕಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

- Advertisement -
- Advertisement -

ಎಲೆಮರೆಯಾಗಿ ಕೆಲಸ ಮಾಡಿ ಸಾವಿರಾರು ಜನರು ನೆಮ್ಮದಿಯ, ಗೌರವದ ಬದುಕು ಕಟ್ಟಿಕೊಳ್ಳಲು ಕಾರಣವಾದ ಸಾಮಾಜಿಕ ಹೋರಾಟಗಾರರಲ್ಲಿ ಜಾಗೃತ ಮಹಿಳಾ ಸಂಘಟನೆಯ ಚಿನ್ನಮ್ಮ ಕೂಡ ಒಬ್ಬರು. ತಮ್ಮ ನೋವುಗಳನ್ನು ದಾಟಿ, ಮತ್ತೊಬ್ಬರ ನೋವಿಗೆ ಕಿವಿಯಾಗುವ ಇವರ ಬದುಕು, ಕೆಲಸ ಮತ್ತೊಬ್ಬರಿಗೂ ಸ್ಫೂರ್ತಿದಾಯಕ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರ ಕಿರು ಪರಿಚಯ ಇಲ್ಲಿದೆ.

ರಾಯಚೂರು ಜಿಲ್ಲೆಯಲ್ಲಿ ಕೃಷಿ, ಕೂಲಿಕಾರ, ಬಡ-ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಿನ್ನಮ್ಮ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಂಗುಡ್ಡಿ ಇವರ ಊರು.. ದೇವದಾಸಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥೆ.. ಬಾಲ್ಯ ವಿವಾಹಕ್ಕೆ ಸಿಲುಕಿ ಬಾಲ್ಯವನ್ನು ಕಳೆದುಕೊಂಡವರು ಚಿನ್ನಮ್ಮ. ಬಡತನ, ಜಾತಿ ವ್ಯವಸ್ಥೆಯ ಕಹಿ ಅನುಭವಗಳನ್ನು ಅನುಭವಿಸುತ್ತಾ ಬೆಳೆದವರು. ಅದರಲ್ಲೂ ದಲಿತ ಹೆಣ್ಣು ಮಗಳಾಗಿ ತನ್ನ ಸುತ್ತಲಿನ ಜನರ ನೋವನ್ನು ಕಾಣುತ್ತಾ, ಸಹಿಸುತ್ತಾ ಬೆಳೆದವರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ಜಾತಿ ಕಾರಣಕ್ಕೆ ಪುರುಷನಿಗಿಂತ ಮಹಿಳೆ ಅನುಭವಿಸುವ ಕಷ್ಟ ಕಂಡ ಇವರು ಮಹಿಳೆಯರ ಜೊತೆ ಸೇರಿ ಮಹಿಳಾ ಗುಂಪುಗಳನ್ನು ಕಟ್ಟಿದವರು. ಮನೆಯ ಗಂಡಸರು, ಊರ ಮುಖಂಡರು, ಪುಂಡ ಪೋಕರಿಗಳ ಮಾತಿಗೆ ತಲೆಕೆಡಿಸಿಕೊಳ್ಳದೆ ತನ್ನ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಡಿದವರು.

ಝಾನ್ಸಿ ರಾಣಿ ಮಹಿಳಾ ಸಂಘದ ಮೂಲಕ ತನ್ನ ಊರಿನ ರಸ್ತೆಗಳ ನಿರ್ಮಾಣಕ್ಕೆ ಕೈಹಾಕಿ ಸೈ ಎನಿಕೊಂಡಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ಬೇರೆಯವರ ಮುಂದೆ ನಿಂತು ಹೆಣ್ಣು ಎಂಬ ಕಾರಣಕ್ಕೆ ತಾವು ಅನುಭವಿಸಿದ್ದ ಅವಮಾನಗಳಿಂದ ಹೊರ ಬರಲು, ಗೌರವದ ಬದುಕು ಕಟ್ಟಿಕೊಳ್ಳಲು ಸ್ವಂತ ಉದ್ಯಮ ಸ್ಥಾಪಿಸಲು ನಿರ್ಧರಿಸಿ, ಸಹಾಯ ಬೇಡಿ ಪೋತ್ನಾಳ ಗ್ರಾಮದಲ್ಲಿ ಬೇವಿನ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿದವರು ಚಿನ್ನಮ್ಮ.

ತಮ್ಮ ಸಮುದಾಯದ ಮಹಿಳೆಯರು ಅನಾರೋಗ್ಯದಿಂದ ಆಸ್ಪತ್ರೆಗೆ ಹೋದರೆ, ಆಸ್ಪತ್ರೆಗಳ ವೈದ್ಯರು ಜಾತಿಯ ಕಾರಣಕ್ಕೆ ಮುಟ್ಟಲು ಹಿಂದೆ ಮುಂದೆ ನೋಡುತ್ತಿದ್ದದ್ದನ್ನು ಗಮನಿಸಿದ ಚಿನ್ನಮ್ಮ, ತಾವೇ ಮಹಿಳೆಯರ ಜೊತೆ ಸೇರಿ ಗಿಡಮೂಲಿಕೆ ಔಷಧಿಗಳನ್ನು ನೀಡುವುದನ್ನು ಕಲಿತಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಮಹಿಳೆಯರ ಆರೋಗ್ಯ ಜಾಗೃತಿಗಾಗಿ ಬರಿಗಾಲಲ್ಲಿ ಹಳ್ಳಿ ಹಳ್ಳಿಗೂ ನಡೆದು, ಹೆಣ್ಣು ಮಕ್ಕಳಿಗೆ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಗಿಡಮೂಲಿಕೆ ಔಷಧಿಗಳನ್ನು ಬಳಸುವುದನ್ನು ಹೇಳಿಕೊಟ್ಟಿದ್ದಾರೆ. ಇಂದಿಗೂ ಹೆಣ್ಣು ಮಕ್ಕಳ ಹಲವಾರು ಕಾಯಿಲೆಗಳಿಗೆ ಚಿನ್ನಮ್ಮನ ಬಳಿ ಔಷಧಿಗಳಿವೆ. ನಗರ ಪ್ರದೇಶಗಳಿಂದಲೂ ಇವರ ಬಳಿ ಚಿಕಿತ್ಸೆ ಪಡೆಯಲು ಬರುತ್ತಾರೆ.

ರಾಯಚೂರಿನ ಪೋತ್ನಾಳ ಗ್ರಾಮದಲ್ಲಿ ಬೇವಿನ ಬೀಜದ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿ ನೂರಾರು ಮಹಿಳೆಯರಿಗೆ ಕೆಲಸ ನೀಡಿದ ಚಿನ್ನಮ್ಮನಿಗೆ ದಕ್ಷಿಣ ಭಾರತದ ಯಶಸ್ವಿ ಕಿರು ಉದ್ಯಮಿ ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ಅಂತರಾಷ್ಟ್ರೀಯ ಸಂಸ್ಥೆಗಳಾದ ಸಿಟಿ ಗ್ರೂಪ್, UNDP, UNCDF ಸಂಯುಕ್ತವಾಗಿ ಪ್ರಶಸ್ತಿ ನೀಡಿ ಗೌರವಿಸಿವೆ.

PC: Jagrutha Mahila Sanghatan

ನಿರ್ದಿಷ್ಟವಾಗಿ ದಲಿತ ಮಹಿಳೆಯರನ್ನು ಸಂಘಟಿಸುವಲ್ಲಿನ ನಾಯಕತ್ವಕ್ಕಾಗಿ ಮತ್ತು ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವರು ಮಾಡಿದ ಕಾರ್ಯಕ್ಕಾಗಿ ರಾಷ್ಟ್ರಮಟ್ಟದ ಗೌರವವನ್ನು ನೀಡಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಮಾರ್ಚ್ 21, 2013 ರಂದು ದೆಹಲಿಯಲ್ಲಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ.

ಚಿನ್ನಮ್ಮ ಅವರ ಕೆಲಸವನ್ನು ಗುರುತಿಸಿದ ಕರ್ನಾಟಕ ರಾಜ್ಯ ಸರ್ಕಾರವು 2013 ರ ಮಾರ್ಚ್ 8 ರಂದು ಬೆಂಗಳೂರಿನಲ್ಲಿ ‘ಕಿತ್ತೂರು ಚಿನ್ನಮ್ಮ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಸಕ್ತ ವರ್ಷದ ಸೈರೋಸ್ ಕರ್ನಾಟಕ ಸಂಸ್ಥೆ ನೀಡುವ ಪ್ರಶಸ್ತಿಗೂ ಚಿನ್ನಮ್ಮ ಭಾಜನರಾಗಿದ್ದಾರೆ.

ಕೃಷಿ ಕೂಲಿಕಾರ ಬಡ ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಪೋತ್ನಾಳದ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆಯಾಗಿ, ತನ್ನ ತಾಲೂಕಿನಲ್ಲಿ ಬಡ ಜನರ ಹಕ್ಕುಗಳಿಗಾಗಿ ಹೋರಾಡುತ್ತಾರೆ.

credit: Jagrutha Mahila Sanghatan

ಜನಾಧಿಕಾರ, ತಾಯಿ ಮಗು ಆರೋಗ್ಯದ ಹಕ್ಕೊತ್ತಾಯ, ಉದ್ಯೋಗದ ಹಕ್ಕು (ನರೇಗಾ) ಇವುಗಳ ಅನುಷ್ಠಾನಕ್ಕಾಗಿ ಮಹಿಳೆಯರನ್ನು, ಊರಿನ ಜನರನ್ನು ಒಗ್ಗೂಡಿಸಿ ಪ್ರತಿಭಟಿಸುತ್ತಾರೆ. ದಲಿತ ಬಾಲಕಿ ಅಂಬಿಕಾ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ ಪ್ರಮುಖ ಸಂಘಟನೆ ಜಾಗೃತ ಮಹಿಳಾ ಸಂಘಟನೆಯಾಗಿದೆ. ಮಹಿಳೆಯರ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುತ್ತಿರುವ ಈ ಸಂಘಟನೆಯ ಮುಖ್ಯ ‌ಆಧಾರವಾಗಿ ಮುಂದಿನ ಪೀಳಿಗೆಗೆ ದಾರಿ ದೀಪವಾಗಿದ್ದಾರೆ ಚಿನ್ನಮ್ಮ.


ಇದನ್ನೂ ಓದಿ: ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...