Homeಅಂಕಣಗಳುಪಿಕೆ ಟಾಕೀಸ್: ನಿಗೂಢ ಅಥೆನ್ಸ್‌ನ ಜನಜೀವನವನ್ನು ಚಿತ್ರಿಸಿರುವ ಅದನ್ನು ಅಲೆಗರಿಯಾಗಿಸುವ ಸಿನಿಮಾಗಳು

ಪಿಕೆ ಟಾಕೀಸ್: ನಿಗೂಢ ಅಥೆನ್ಸ್‌ನ ಜನಜೀವನವನ್ನು ಚಿತ್ರಿಸಿರುವ ಅದನ್ನು ಅಲೆಗರಿಯಾಗಿಸುವ ಸಿನಿಮಾಗಳು

- Advertisement -
- Advertisement -

ಪಿಕೆ ಟಾಕೀಸ್ 08/ಜಾಗತಿಕ ಸಿನಿಮಾ/ಗ್ರೀಸ್ ಸಿನಿಮಾ/ ನಿಕೋಸ್ ಪನಯೊಟೊಪೊಲಸ್

ಐಡ್ಲರ್ಸ್ ಆಫ್ ದಿ ಫರ್ಟೈಲ್ ವ್ಯಾಲಿ(1978): ವೃದ್ಧ ತಂದೆ ಮತ್ತು ಮೂವತ್ತೈದು ವರ್ಷಗಳು ದಾಟಿದ ಮೂರು ಗಂಡು ಮಕ್ಕಳಿಗೆ ಪಿತ್ರಾರ್ಜಿತವಾಗಿ ಒಂದು ತೋಟದ ಬಂಗಲೆಯೊಂದಿಗೆ, ಆಕರ್ಷಿಕವಾಗಿರುವ ಮತ್ತು ಕಷ್ಟಪಟ್ಟು ದುಡಿಯುವ ಕೆಲಸದಾಕೆ ಸಿಕ್ಕರೆ? ಎಲ್ಲರೂ ಬಂಗಲೆಯೊಳಗೆ ಸೇರಿಕೊಂಡ ಮೇಲೆ ಮಾಡುವುದಕ್ಕೆ ಮುಂದೇನೆಂದು ತಿಳಿಯದೆ ಗೊತ್ತು ಗುರಿಯಿಲ್ಲದೆ ಹೋದರೆ? ಮನೆಯಿಂದ ಹೊರಗೆ ಹೋಗುವ ಅವಶ್ಯಕತೆಯೇ ಬಾರದಿದ್ದರೆ? ಇದೇ ಸಿನಿಮಾದ ಕಥಾನಕ.

ಬಂಗಲೆಗೆ ಬಂದ ಹೊಸದರಲ್ಲಿ ಸೂಟು ಬೂಟುಗಳನ್ನು ತೊಟ್ಟು, ಕೆಲಸದಾಕೆ ಮಾಡಿದ ವಿವಿಧ ಬಗೆಯ ಅಡುಗೆಗಳನ್ನು ಸವಿಯುತ್ತಾ, ವೈನ್ ಹೀರಿ ಸಂಭ್ರಮಿಸುತ್ತಾ, ಎಲ್ಲರೂ ಸೇರಿ ಹಾಡುತ್ತಾ ಖುಷಿಯಿಂದಿರುತ್ತಾರೆ. ಕ್ರಮೇಣ ತಂದೆ ಕೋಣೆಯಿಂದ ಹೊರಬರುವುದನ್ನು ನಿಲ್ಲಿಸುತ್ತಾನೆ. ದೊಡ್ಡ ಮಗ ಹೊರಗಿನ ಹೆಣ್ಣಿನೊಂದಿಗೆ ಲೈಂಗಿಕ ಸಂಪರ್ಕವಿಟ್ಟುಕೊಂಡಿರುವುದನ್ನು, ಕಿರಿಯ ಮಗ ನೋಡುತ್ತಾನೆ. ದೊಡ್ಡ ಮಗ ತನ್ನ ಗೆಳತಿಯನ್ನು ಮದುವೆಯಾಗುವ ಪ್ರಸ್ತಾಪ ಮಾಡಿದಾಗ ತಮ್ಮ, “ಈ ಮನೆಗೆ ಯಾವುದೇ ಹೆಣ್ಣು ಬಂದರೂ ಅವಳು ಕೆಲಸದಾಕೆಯಂತೆ ದಾಸಿಯಾಗುತ್ತಾಳೆಂದು” ಹೇಳುತ್ತಾನೆ. ಮದುವೆಯಾಗುವ ಯೋಚನೆ ಅಲ್ಲಿಗೆ ಕೊನೆಯಾಗುತ್ತದೆ.

ಮೂವರೂ ಗಂಡುಮಕ್ಕಳು ಕೆಲಸದಾಕೆಯೊಂದಿಗೆ ಗುಟ್ಟಾಗಿ ಲೈಂಗಿಕ ಸಂಪರ್ಕವಿಟ್ಟುಕೊಳ್ಳುತ್ತಾರೆ. ಆದರೆ ಕೆಲಸದಾಕೆ ಮಾತ್ರ ಕಿರಿಯ ಮಗನನ್ನು ಪ್ರೀತಿಸುತ್ತಾಳೆ. ನಡಿಗೆಯ ಕಾರಣಕ್ಕೆ ಮೊದಮೊದಲು ಮನೆ ಸುತ್ತಮುತ್ತ ಸುತ್ತಾಡಿದರೂ, ಕ್ರಮೇಣವಾಗಿ ಮನೆಯಿಂದ ಹೊರಗೆ ಬರುವುದನ್ನೇ ನಿಲ್ಲಿಸಿಬಿಡುತ್ತಾರೆ. ಊಟಕ್ಕಾಗಿ ಮಾತ್ರ ಅತಿ ಕಷ್ಟದಿಂದ ಡೈನಿಂಗ್ ಟೇಬಲ್ಲಿಗೆ ಬರುವಂತಾಗುತ್ತದೆ. ಕೊನೆಗೆ ಊಟ ಮತ್ತು ಮೈಥುನವೂ ಹಾಸಿಗೆಯಲ್ಲೇ ಆಗುವ ಸೋಮಾರಿತನಕ್ಕೆ ಅವರೆಲ್ಲರೂ ತಲುಪುತ್ತಾರೆ.

ಕಿರಿಯ ಮಗ ನಿದ್ದೆ ಮತ್ತು ಸೋಮಾರಿತನದಿಂದ ಹೊರಬರಬೇಕೆಂದು ಎಣಿಸಿ, ಮನೆಯನ್ನು ಬಿಟ್ಟು ಹೋಗಿ ಕೆಲಸ ಹುಡುಕಲು ನಿರ್ಧರಿಸುತ್ತಾನೆ. ಆದರೆ ತಂದೆ ಮತ್ತು ಅಣ್ಣಂದಿರ ಬಲವಂತಕ್ಕೆ ಕಟ್ಟುಬಿದ್ದು ಮನೆಯಲ್ಲೇ ಉಳಿದುಕೊಳ್ಳುತ್ತಾನೆ. ಕೊನೆಗೊಂದು ದಿನ ಕೆಲಸದಾಕೆ ಮತ್ತು ಕಿರಿಯ ಮಗ ಸೂಟ್‌ಕೇಸ್ ಹಿಡಿದು ಮನೆಯಿಂದ ಹೊರನಡೆಯುತ್ತಾರೆ. ತುಸು ದೂರ ನಡೆದ ನಂತರ, ಸುಸ್ತಾಗಿದೆ ಎಂದು ದಾರಿಯಲ್ಲೇ ಮಲಗುವ ದೃಶ್ಯದಲ್ಲಿ ಸಿನಿಮಾ ಮುಗಿಯುತ್ತದೆ.

ಈ ಸಿನಿಮಾ ಅಲ್ಬರ್ಟ್ ಕೊಸ್ರಿನ, “ಲೇಸಿನೆಸ್ ಇನ್ ದಿ ಫರ್ಟೈಲ್ ವ್ಯಾಲಿ” ಎಂಬ ಫ್ರೆಂಚ್ ಕಾದಂಬರಿಯ ದೃಶ್ಯರೂಪ. ಇದನ್ನು ಅಲೆಗರಿಯಾಗಿ ನೋಡಿದರೆ, ಆಧುನಿಕತೆಯ ಜಗತ್ತಿನ ಬದುಕಿನ ಶೈಲಿಯ ಮೇಲಿನ ಟಿಪ್ಪಣಿಯಂತೆ ಕಾಣುತ್ತದೆ. ಮತ್ತೊಂದು ರೀತಿಯಲ್ಲಿ ಹಣ, ಮನೆ, ಊಟ, ಆರೋಗ್ಯ, ಸೆಕ್ಸ್ ಎಲ್ಲವೂ ಮನೆಯಲ್ಲಿಯೇ ಸುಲಭವಾಗಿ ದಕ್ಕಿಬಿಟ್ಟರೆ ಅದು, “ಎಮೋಟಿವೇಷನಲ್ ಸಿಂಡ್ರೋಮ್ ಆಗಿ ಪರಿವರ್ತನೆ ಆಗುವುದನ್ನು ದೃಶ್ಯಗಳಲ್ಲಿ ನೋಡಬಹುದು. ಇನ್ನೊಂದು ರೀತಿಯಲ್ಲಿ ನೋಡುವುದಾದರೆ, ನೂರಕ್ಕೆ ತೊಂಭತ್ತರಷ್ಟು ಜನ ಕನಸ್ಸು ಕಾಣುವಂತೆ, ಶ್ರೀಮಂತಿಕೆ ಸಿಕ್ಕ ನಂತರ ಏನೂ ಮಾಡಲಾಗದೆ ಜಡವಾಗುವುದನ್ನು ಕಟ್ಟಿಕೊಟ್ಟಿದ್ದಾನೆ.

ಹಾಸಿಗೆಯಲ್ಲೊಬ್ಬ ಮಲಗಿರುವಾಗಲೇ ಹಾಸಿಗೆಯ ಹೊದಿಕೆಯನ್ನು ಕೆಲಸದಾಕೆ ಬದಲಾಯಿಸುವ ದೃಶ್ಯ ಸೋಮಾರಿತನದ ಪರಮಾವಧಿಯನ್ನು ನಿರೂಪಿಸುತ್ತದೆ. ಕಿರಿಯ ಮಗ ನಿದ್ದೆಯ ಮಂಪರಿನಲ್ಲೇ ಎದ್ದು ಧೂಳು ತುಂಬಿದ ಪುಸ್ತಕಗಳ ನಡುವಿನಿಂದ, “ಫ್ರೆಂಚ್ ರೆವೆಲ್ಯೂಷನ್” ಪುಸ್ತಕವನ್ನು ಎತ್ತಿ ನೋಡುವಾಗ, ಅಲ್ಲಿನ ದ್ವಂದ್ವತೆ ಕಾಣುತ್ತದೆ. ಕೆಲಸದಾಕೆ ಲೈಟ್ ಹಾಕಿದಾಗ ತೀವ್ರ ಕೋಪದಿಂದ ಅವಳನ್ನು ಬೈಯ್ಯುವ ದೃಶ್ಯ, ಕಷ್ಟಪಟ್ಟು ಕೆಲಸ ಮಾಡಿದ ನೌಕರನನ್ನು ಸೋಮಾರಿ ಮಾಲಿಕ ಸಾಲಗಾರನಂತೆ ರೇಗುವ ಬಗೆಯನ್ನು ನೆನಪಿಸುತ್ತದೆ.

ಹೀಗೆ ಹಲವಾರು ರೀತಿಯಲ್ಲಿ ಈ ಸಿನಿಮಾವನ್ನು ನೋಡಬಹುದಾದರೂ ಇದು ಯಾವುದು ಅಲ್ಲವೇನೋ ಎಂಬಂತೆ ಕೇವಲ ಅಲೆಗರಿಯಾಗಿ ನಿಲ್ಲುವಂತೆ ಸಿನಿಮಾವನ್ನು ಕಟ್ಟಿರುವ ನಿರ್ದೇಶಕನ ಸಾಮರ್ಥ್ಯ ಮತ್ತು ಚಾಣಾಕ್ಷತನ ಮಾತ್ರ ಮನಸ್ಸಿನಲ್ಲಿ ಉಳಿಯುತ್ತದೆ.

ಮಲಯಾಳಂ ನಿರ್ದೇಶಕ ಅಡೂರ್ ಗೋಪಾಲ ಕೃಷ್ಣ ಅವರ ’ಎಲಿಪ್ಪಥಾಯಂ’ನ ಮತ್ತು ಈ ಸಿನಿಮಾದ ಥೀಂ ಮತ್ತು ವಸ್ತುವಿನಲ್ಲಿ ಹೊಂದಾಣಿಕೆಯನ್ನು ಗುರುತಿಸಬಹುದು

ಡೆಲಿವರಿ (2004): ಮುಗ್ಧ ಯುವಕನೊಬ್ಬ ಕೈಯಲ್ಲಿ ಅಥೆನ್ಸ್‌ನ ನಕ್ಷೆಯೊಂದನ್ನು ಹಿಡಿದು ನಗರಕ್ಕೆ ಬರುತ್ತಾನೆ. ನಗರದಲ್ಲಿರುವ ವಿವಿಧ ಬಗೆಯ ಜನಗಳೊಂದಿಗೆ ವ್ಯವಹರಿಸಿದಾಗ ಅವನಲ್ಲಾಗುವ ಬದಲಾವಣೆಗಳು ಮತ್ತು ಉಳಿಯುವ ಅವನ ಮುಗ್ದತೆ ಹಾಗೂ ಅವನ ದುರ್ಬಲ ಸನ್ನಿವೇಶಗಳೇ ಈ ಸಿನಿಮಾ.

2004ನ ಇಸವಿಯಲ್ಲಿ ಅಥೆನ್ಸ್‌ನಲ್ಲಿ ನಡೆದಿರುವ ಒಲಂಪಿಕ್ಸ್ ಕ್ರೀಡಾಕೂಟದ ಸಲುವಾಗಿ ಅಥೆನ್ಸ್‌ನ ವೈಭವ ಮತ್ತು ಅದ್ದೂರಿತನವನ್ನು ಗ್ರೀಸ್ ಸರ್ಕಾರ ಪ್ರಪಂಚಕ್ಕೆ ತೋರಿಸಲು ಅನುವಾಗುತ್ತದೆ. ಇದಕ್ಕೆ ಉತ್ತರವಾಗಿ ನಿಕೋಸ್ ಅಥೆನ್ಸ್‌ನಲ್ಲಿರುವ ಜನಸಾಮಾನ್ಯರ ನೋವಿನ ಬದುಕನ್ನು ಸಿನಿಮಾವಾಗಿ ಚಿತ್ರಿಸಿದ್ದಾರೆ.

ಈ ಯುವಕ ಮೊದಲಿಗೆ ರಸ್ತೆಯಲ್ಲಿ ನಿಂತು ನೀರಿನ ಬಾಟಲ್‌ಗಳನ್ನು ಮಾರುವ ಕೆಲಸಕ್ಕೆ ಸೇರುತ್ತಾನೆ. ಆದರೆ ಅಂಗಡಿ ಹೊಂದಿರುವ ಅಲ್ಬೇನಿಯನ್‌ನಿಂದ ಪಿಜ್ಜಾ ಡೆಲಿವರಿ ಕೆಲಸ ಸಿಗುತ್ತದೆ ಮತ್ತು ಈ ಕೆಲಸವನ್ನು ಅತಿ ಖುಷಿಯಿಂದ ಮಾಡುತ್ತಾನೆ. ಯುವಕ ಡೆಲಿವರಿ ಸಲುವಾಗಿ ನಗರವನ್ನೆಲ್ಲ ಸುತ್ತುತ್ತಿರುವಾಗ ಅವನ ದೃಷ್ಟಿಕೋನದಿಂದಲೇ ಪ್ರೇಕ್ಷಕರು ಅಥೆನ್ಸ್‌ಅನ್ನು ನೋಡುತ್ತಾರೆ.

ಪಿಜ್ಜಾ ಅಂಗಡಿಯಲ್ಲಿ ಕೆಲಸ ಮಾಡುವ ಹೆಣ್ಣನ್ನು ಮೋಹಿಸುತ್ತಾನೆ, ಆದರೆ ಅವಳು ವೈಶ್ಯವಾಟಿಕೆಯಲ್ಲಿ ತೊಡಗಿರುತ್ತಾಳೆ. ಅವಳ ಬದುಕಿನ ಏಳುಬೀಳುಗಳನ್ನು ನಿಭಾಯಿಸಲು ಪ್ರಯತ್ನಿಸಿ ಗೊಂದಲಕ್ಕೀಡಾಗುತ್ತಾನೆ. ಅವಳ ಮೇಲಾಗುವ ದೌರ್ಜನ್ಯವನ್ನು ತಡೆಯುತ್ತಾನೆ. ಡೆಲಿವರಿ ಕೆಲಸದಲ್ಲಿ ಸಿಗುವ ಗಿರಾಕಿಗಳು ಮತ್ತು ಅವರಿರುವ ಮನೆಗಳು ಅಥೇನ್ಸ್‌ನ ಬೇರೆಯದೇ ಕಥೆ ಹೇಳುತ್ತದೆ.

ಅಥೆನ್ಸ್ ವಲಸಿಗರಿಂದ ಕಿಕ್ಕಿರಿದಿದ್ದು, ಚೀನಿಯರು, ಆಫ್ರಿಕನ್ನರು, ಭಾರತೀಯರು, ಮುಸ್ಲಿಂ ದೇಶದವರನ್ನು ಕಾಣಬಹುದು. ಇವರೆಲ್ಲರ ಜೊತೆಗೆ ಗ್ರೀಸ್ ಗ್ರೀಸಿಗರಿಗೆ ಮಾತ್ರ ಎನ್ನುವ ಪ್ರತಿಭಟನಾಕಾರರನ್ನು ನೋಡಬಹುದು. ಸಿನಿಮಾದ ಕೆಲಭಾಗಗಳಲ್ಲಿ ಹಿಂದಿ ಗೀತೆಯೊಂದು ಹಿನ್ನೆಲೆಯಲ್ಲಿ ಕೇಳುವುದು ವಿಶೇಷ.

ಹೀಗೆ ಡೆಲಿವರಿ ಕೆಲಸದಲ್ಲಿ ಬಂದ ಕರೆಯ ಅನ್ವಯ ಹೊರಟಾಗ ಕೆಲವರು ಈ ಯುವಕನ್ನು ಹೊಡೆದು ಅವನ ಸ್ಕೂಟರನ್ನು ಕಿತ್ತುಕೊಂಡು ಹೋಗುತ್ತಾರೆ. ಅಲ್ಲಿಗೆ ಅವನ ಬದುಕು ಮತ್ತೆ ಮೊದಲಿದ್ದ ಹಂತಕ್ಕೇ ಬಂದು ನಿಲ್ಲುತ್ತದೆ. ಆದರೆ ಈ ಬಾರಿ ಅಥೆನ್ಸ್‌ನ ಕ್ರೂರತೆ ಯುವಕನಲ್ಲಿ ಹಾಸುಹೊಕ್ಕಿರುತ್ತದೆ. ಹಸಿವನ್ನು ತಾಳಲಾಗದೆ ನಗರದ ವಿವಿಧ ಬೀದಿಗಳಲ್ಲಿ ಭಿಕ್ಷೆ ಕೇಳಲು ಕೆಲವರು ಬೈಯ್ಯಲು, ಮತ್ತಿತರು ಅವನನ್ನು ನಿರ್ಲಕ್ಷಿಸಲು, ಇವೆಲ್ಲವನ್ನು ತಾಳಲಾಗದೆ ಪಿಸ್ತೂಲಿನಿಂದ ಒಬ್ಬನನ್ನು ಕೊಲ್ಲುತ್ತಾನೆ. ಈ ಸುದ್ದಿ ತಿಳಿದು ಪೊಲೀಸರು ಯುವಕನನ್ನು ನಡುರಸ್ತೆಯಲ್ಲಿ ಗುಂಡಿಕ್ಕಿ ಕೊಲ್ಲುವುದರ ಮೂಲಕ ಸಿನಿಮಾ ಮುಗಿಯುತ್ತದೆ.

ಅಥೆನ್ಸ್ ಬಡತನ, ವಲಸಿಗರ ನೋವು, ಮನೆಯಿಲ್ಲದಿರುವವರು, ಮಾದಕ ವ್ಯಸನಿಗಳು, ಕಳ್ಳತನ, ವ್ಯೆಶ್ಯಾವಾಟಿಕೆ, ಬೀದಿಗಳಲ್ಲಿ ಕ್ರೌರ್ಯ, ಹೀಗೆ ಪ್ರಪಂಚಕ್ಕೆ ಕಾಣದಂತೆ ನಿಗೂಢವಾಗಿಟ್ಟ ಅಥೆನ್ಸ್‌ಅನ್ನು, ಮಾತುಗಳನ್ನೇ ಆಡದ ಯುವಕನ ಪಾತ್ರದ ಮೂಲಕ, ಮೂಕ ಪ್ರೇಕ್ಷಕನ ಅಳಲಿನಂತೆ ನಿರ್ದೇಶಕ ಕಟ್ಟಿಕೊಟ್ಟಿದ್ದಾರೆ.

ನಿಕೋಸ್ ಪನಯೊಟೊಪೊಲಸ್: ಗೊದಾರ್ದ್‌ನ ಪ್ಯಾರಿಸ್ ನೋಡಲು ಎಷ್ಟು ಚೆಂದವೋ ಹಾಗೆಯೇ ನಿಕೋಸ್‌ನ ಅಥೆನ್ಸ್ ಕೂಡ. ಇವರ ಅತಿ ಹೆಚ್ಚಿನ ಸಿನಿಮಾಗಳಲ್ಲಿ ಕಥೆ ನಡೆಯುವುದು ಅಥೆನ್ಸ್ ನಗರದಲ್ಲೇ. ನಗರ ಪ್ರದೇಶದ ಜನಗಳು ಮತ್ತು ಅವರ ಬದುಕುಗಳನ್ನು ನೈಜವಾಗಿ ತೋರಿಸುವುದರಲ್ಲಿ ನಿಕೋಸ್‌ರವರದ್ದು ಎತ್ತಿದ ಕೈ.

ಡೈಯಿಂಗ್ ಇನ್ ಅಥೆನ್ಸ್(2006), ಅಥೆನ್ಸ್ ಇಸ್ತಾನ್‌ಬುಲ್(2008) ಮತ್ತು ದಿ ಫ್ರೂಟ್ ಟ್ರೀಸ್ ಅಫ್ ಅಥೆನ್ಸ್(2010) ಅನ್ನುವ ಸಿನಿಮಾಗಳ ಹೆಸರುಗಳಲ್ಲೇ ಅಥೆನ್ಸ್ ನಗರದ ಹೆಸರು ಇರುವುದನ್ನು ಗಮನಿಸಿದರೆ ಸಾಕು, ನಿಕೋಸ್‌ಗೂ ಮತ್ತು ಅಥೆನ್ಸ್‌ಗೂ ಇರುವ ಸಂಬಂಧದ ಗಾಢತೆಯನ್ನು ತಿಳಿಯಬಹುದು.

ಮೆಲೋಡ್ರಾಮ (1980) ಸಿನಿಮಾದಲ್ಲಿ, ಮುಖ್ಯಪಾತ್ರಧಾರಿಗಳು ಅಥೆನ್ಸ್‌ನ ಬೀದಿಗಳಲ್ಲಿ ನಡೆದುಕೊಂಡು ಹೋಗುವ ದೀರ್ಘವಾದ ಶಾಟ್, ಗೊದಾರ್ದ್ ಸಿನಿಮಾಗಳ ಪ್ಯಾರಿಸ್ ಮತ್ತು ಅವರ ಶೈಲಿಯನ್ನು ನೆನಪಿಸುತ್ತದೆ.

ಸಿನಿಮಾದಲ್ಲಿ ಪಾತ್ರಗಳು ಚಲಿಸಿದಂತೆ ಕ್ಯಾಮರಾ ಚಲಿಸುವುದನ್ನು ಮೋಟಿವೆಟಡ್ ಕ್ಯಾಮರಾ ಮೂವ್‌ಮೆಂಟ್ ಎನ್ನುತ್ತಾರೆ. ಒಬ್ಬ ಲೇಖಕ ಪೆನ್ನನ್ನು ಬಳಸುವಂತೆ ನಿರ್ದೇಶಕ ಕ್ಯಾಮರವನ್ನು ಬಳಸುವುದು ನೋಡಲು ಸೋಜಿಗವೆನಿಸುತ್ತದೆ. ಕ್ಯಾಮರಾವನ್ನು ಚಲಿಸುತ್ತಾ, ಪ್ರೇಕ್ಷಕರಿಗೆ ಸುತ್ತಮುತ್ತಲಿರುವುದನ್ನು ತೋರಿಸುತ್ತಾ, ನಿರ್ದೇಶಕ ನೇರವಾಗಿ ಪ್ರೇಕ್ಷಕನೊಂದಿಗೆ ಸಂವಾದಿಸುವುದು ಅಪರೂಪ.

ನಿಕೋಸ್ ಸಿನಿಮಾಗಳಲ್ಲಿನ ಶಾಟ್‌ಗಳನ್ನು ಗಮನಿಸಿದರೆ ಅದು ವೃತ್ತಾಕಾರದ ಶೈಲಿಯಲ್ಲಿರುತ್ತವೆ. ಅಂದರೆ ಒಂದು ಶಾಟ್ ಪಾತ್ರದ ಕ್ಲೋಸಪ್‌ನಿಂದ ಶುರುವಾದರೆ, ಕಟ್ ಮಾಡದೆ ಪಾತ್ರಗಳನ್ನು ಹಿಂಬಾಲಿಸುತ್ತಾ, ಸಂಭಾಷಣೆಯನ್ನು ಚಿತ್ರಿಸಿ ಮತ್ತೆ ಕ್ಯಾಮರಾ ಅದೇ ಪಾತ್ರದ ಕ್ಲೋಸಪ್‌ಗೆ ಬಂದು ನಿಲ್ಲುವುದು ನಿರ್ದೇಶಕನ ಶೈಲಿಯ ವೈಶಿಷ್ಟತೆಯನ್ನು ತೋರಿಸುತ್ತದೆ. ಹಾಗೆಯೇ ದಿ ಕಲರ್ಸ್ ಆಫ್ ಐರಿಸ್ (1974) ಸಿನಿಮಾದಲ್ಲಿ, ಜಾಹಿರಾತಿನ ಶೂಟಿಂಗ್ ವೇಳೆ ಅಪರಿಚತನೊಬ್ಬ ಸಮುದ್ರಕ್ಕೆ ಹೋಗಿ ಮುಳುಗಿ ಸಾಯುವ ದೃಶ್ಯದಿಂದ ಶುರುವಾಗಿ ಸಿನಿಮಾದ ಕೊನೆಯಲ್ಲಿ ಅದೇ ದೃಶ್ಯವನ್ನು ಚಿತ್ರೀಕರಿಸುವ ಸಲುವಾಗಿ ಮುಖ್ಯಪಾತ್ರಧಾರಿಯೂ ಸಮುದ್ರಕ್ಕೆ ಹೋಗಿ ಸಾಯುವ ದೃಶ್ಯದಿಂದಲೇ ಮುಕ್ತಾಯವಾಗುತ್ತದೆ. ನಿರ್ದೇಶಕನ ವೃತ್ತಾಕಾರದ ಶೈಲಿಯ ಬಳಕೆಯನ್ನು ಇಲ್ಲಿ ಸ್ಪಷ್ಟವಾಗಿ ಕಾಣಬಹುದು.

ಐಡ್ಲರ್ಸ್ ಆಫ್ ದಿ ಫರ್ಟೈಲ್ ವ್ಯಾಲಿ(1978) ಸಿನಿಮಾದಲ್ಲಿ ಕ್ಯಾಮರಾ ಚಲಿಸುವ ಶೈಲಿ ನಿದ್ದೆಗಣ್ಣಿನಿಂದ ಮನೆಯೆಲ್ಲ ಸುತ್ತುತ್ತಾ ಪಾತ್ರಗಳು ಮಲಗಿರುವುದನ್ನು ಚಿತ್ರೀಕರಿಸುವುದು, ಮನೆಯಲ್ಲಿ ಕೆಲಸದಾಕೆ ಮತ್ತು ಪ್ರೇಕ್ಷಕರು ಮಾತ್ರವಿದ್ದಾರೆಂಬ ಅನಿಸಿಕೆ ಉಂಟಾಗಿಸುತ್ತದೆ.

ಇವರ ಸಿನಿಮಾದ ಕಥೆಗಳಲ್ಲಿನ ಮುಖ್ಯಪಾತ್ರಧಾರಿಗಳು ಎಲ್ಲಿಂದಲೋ ಬಂದಿರುತ್ತಾರೆ ಮತ್ತು ಮತ್ತೆಲ್ಲಿಗೋ ಹೋಗುವ ತವಕದಲ್ಲಿರುತ್ತಾರೆ. ಎಲ್ಲಿಂದ ಎಲ್ಲಿಗೆ ಪ್ರಶ್ನೆಗಳು ನಮ್ಮ ಬದುಕಿನ ಇರುವಿಕೆಯ ಪ್ರಶ್ನೆಗಳನ್ನು ಎಬ್ಬಿಸುತ್ತವೆ.


ಇದನ್ನೂ ಓದಿ: ಪಿಕೆ ಟಾಕೀಸ್: LGBT ಸಮುದಾಯದ ನೋವು-ನಲಿವಿನ ಪಯಣವನ್ನು ಹಿಡಿಯುವ ಪಾನೋಸ್‌ನ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...