Homeಮುಖಪುಟಪ್ರೀತಿಸುತ್ತಿದ್ದ ಯುವತಿ ಮತ್ತು ಆಕೆಯ ತಾಯಿಯನ್ನು ಹತ್ಯೆ ಮಾಡಿದ ಯುವಕ

ಪ್ರೀತಿಸುತ್ತಿದ್ದ ಯುವತಿ ಮತ್ತು ಆಕೆಯ ತಾಯಿಯನ್ನು ಹತ್ಯೆ ಮಾಡಿದ ಯುವಕ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾದ ಜರಾರ್ ಪಟ್ಟಣದಲ್ಲಿ ಹುಚ್ಚು ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ಯುವತಿ ಮತ್ತು ಆಕೆಯ ತಾಯಿಯನ್ನು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಯನ್ನು ಬಂಧಿಸಲು ಪೊಲೀಸರು 5 ತಂಡಗಳನ್ನು ರಚಿಸಿದ್ದಾರೆ.

ಮೃತರನ್ನು ಶಾರದಾ ದೇವಿ (50) ಮತ್ತು ಕಾಮಿನಿ (19) ಎಂದು ಗುರುತಿಸಲಾಗಿದೆ. ಜರಾರ್ ಪಟ್ಟಣದ ನಿವಾಸಿ ಶಾರದಾ ತನ್ನ ಮಗಳೊಂದಿಗೆ ಭಾನುವಾರ ರಾತ್ರಿ ತಮ್ಮ ಮನೆಯಲ್ಲಿ ಮಲಗಿದ್ದರು. ತಡರಾತ್ರಿ ತಮ್ಮದೆ ಗ್ರಾಮದ ನಿವಾಸಿ ಗೋವಿಂದ್ ಎಂಬುವವರು ಮನೆಗೆ ಬಂದು, ಮಲಗಿದ್ದ ಶಾರದಾ ದೇವಿ ಮತ್ತು ಕಾಮಿನಿ ಮೇಲೆ ಚಾಕುವಿನಿಂದ ಮುಖ ಮತ್ತು ಕುತ್ತಿಗೆಗೆ ದಾಳಿ ಮಾಡಿದ್ದಾನೆ.

ಇಬ್ಬರು ಮಲಗಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಮಯದಲ್ಲಿ, ಇಬ್ಬರ ಕೂಗು ಕೇಳಿ ಓಡಿ ಬಂದ ಹಿರಿಯ ಮಗ ರಾಹುಲ್ ಮತ್ತು ಅವರ ಪತ್ನಿ ಮೇಲೂ ಆರೋಪಿ ಗೋವಿಂದ್ ದಾಳಿ ಮಾಡಿ, ಪರಾರಿಯಾಗಿದ್ದಾನೆ. ಯುವತಿಯ ಅತ್ತಿಗೆಗೂ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ  ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ಮನೆಯಲ್ಲಿ ಕೂಗು ಕೇಳಿ, ಇತರ ಗ್ರಾಮಸ್ಥರು ಸೇರುತ್ತಿರುವುದನ್ನು ನೋಡಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಾಯಿ ಮತ್ತು ಮಗಳ ಜೋಡಿ ಕೊಲೆ ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಗ್ರಾಮಸ್ಥರ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಗೋವಿಂದ್, ಸಂತ್ರಸ್ತ ಕುಟುಂಬದ ನೆರೆ ಮನೆಯವನಾಗಿದ್ದಾನೆ. ಆತ 19 ವರ್ಷದ ಕಾಮಿನಿಯನ್ನು ಪ್ರೀತಿಸುತ್ತಿದ್ದು, ಆಕೆಯನ್ನು ಮದುವೆಯಾಗಲು ಬಯಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

UP Teen Killed By Man Who Wanted To Marry Her, Mother Also Murdered: Cops
PC:NDTV

ಜೋಡಿ ಕೊಲೆಯ ಮಾಹಿತಿ ಬಂದ ಕೂಡಲೇ ಸ್ಥಳದಲ್ಲೇ ಎಡಿಜಿ /ಐಜಿ ಆಗ್ರಾ ರೇಂಜ್ ಎ. ಸತೀಶ್ ಗಣೇಶ್, ಎಸ್‌ಎಸ್‌ಪಿ ಆಗ್ರಾ ಬಬ್ಲು ಕುಮಾರ್, ಎಸ್‌ಪಿ ಪೂರ್ವ ಅಶೋಕ್ ವೆಂಕಟ್ ಸೇರಿದಂತೆ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿತು. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲು ಪ್ರಾರಂಭಿಸಿದ್ದಾರೆ.

ಅದೇ ಸಮಯದಲ್ಲಿ, ವಿಧಿವಿಜ್ಞಾನ ಮತ್ತು ಶ್ವಾನ ದಳದ ತಂಡವು ಸ್ಥಳಕ್ಕೆ ತಲುಪಿ ಸಾಕ್ಷ್ಯಗಳನ್ನು ಸಂಗ್ರಹಿಸಿತು. ಪೊಲೀಸರು ಇಬ್ಬರ ಶವಗಳನ್ನು ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿ ಗೋವಿಂದ್‌ನನ್ನು ಬಂಧಿಸಲು 5 ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಆರೋಪಿ ಗೋವಿಂದ್ ಯುವತಿ ಕಾಮಿನಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಇಬ್ಬರ ಗೆಳತನದಿಂದ ಎರಡು ಕುಟುಂಬಗಳ ನಡುವೆ ಜಗಳ ನಡೆಯುತ್ತಿತ್ತು. ಆರೋಪಿ ಪ್ರೀತಿಸುತ್ತಿದ್ದ ಕಾಮಿನಿ ಎರಡು ವಾರಗಳ ಹಿಂದೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಈ ವಿಷಯದಿಂದ ಕೋಪಗೊಂಡಿದ್ದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.


ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...