Homeಕರ್ನಾಟಕಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

ಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

- Advertisement -
- Advertisement -

ಕುಂದಾಪುರದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ತಮ್ಮ ಕೆಲಸ ಶುರು ಮಾಡಿದ ಐಎಎಸ್ ಅಧಿಕಾರಿ ಮೊಹಮದ್ ಮೊಹ್ಸಿನ್, ಇದೀಗ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಸುದ್ದಿ ಒಳ್ಳೆಯದೋ ಕೆಟ್ಟದ್ದೋ ಎನ್ನುವುದು ಓದುಗರು ಯಾವ ನೆಲೆಯಿಂದ ನೋಡುತ್ತಾರೆ ಎಂಬುದರ ಆಧಾರದ ಮೇಲೆ ನಿಂತಿರುತ್ತದೆ. ಏಪ್ರಿಲ್ 17ರಂದು ಒರಿಸ್ಸಾದ ಸಂಭಲ್ಪುರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕೆ ಹೋಗಿದ್ದರು. ಅಲ್ಲಿ ಚುನಾವಣಾ ವೀಕ್ಷಕರಾಗಿ ಮೊಹಮದ್ ಮೊಹ್ಸಿನ್ ಕರ್ತವ್ಯ ನಿರತರಾಗಿದ್ದರು. ಚುನಾವಣೆಯ ಸಂದರ್ಭದಲ್ಲಿ ಆ ರಾಜ್ಯದಿಂದ ಹೊರಗಿನ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಏಕೆಂದರೆ, ಆಯಾ ರಾಜ್ಯದ ಅಧಿಕಾರಿಗಳು ನಂತರದಲ್ಲಿ ರಾಜಕೀಯ ನಾಯಕತ್ವದ ಕೆಳಗೇ ಕೆಲಸ ಮಾಡಬೇಕಾದ್ದರಿಂದ ಪಕ್ಷಪಾತ ಧೋರಣೆ ತೋರುವ ಸಾಧ್ಯತೆ ಇರುತ್ತದೆ. ಅದೇ ರೀತಿ ಮೊಹಮದ್ ಮೊಹ್ಸಿನ್ ಒರಿಸ್ಸಾಕ್ಕೆ ಹೋಗಿದ್ದರು. ಸಂಭಲ್ಪುರಕ್ಕೆ ಬಂದ ಮೋದಿಯವರ ಹೆಲಿಕಾಪ್ಟರ್ ಅನ್ನು ಪರೀಕ್ಷಿಸಲು ಮೊಹ್ಸಿನ್ ಸೂಚಿಸಿದ್ದರು.

ಇದೇ ಅವರು ಮಾಡಿದ ತಪ್ಪು ಎಂದು ಚುನಾವಣಾ ಆಯೋಗವು ಅವರನ್ನು ಅಮಾನತು ಮಾಡಿದೆ. ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ ಯಾರನ್ನು ಬೇಕಾದರೂ ಪರೀಕ್ಷೆ ಮಾಡುವ ಅಧಿಕಾರ ಹೊಂದಿರುತ್ತಾರೆ ಅಲ್ಲವೇ? ಚಿತ್ರದುರ್ಗದಲ್ಲಿ ದೊಡ್ಡದೊಂದು ಪೆಟ್ಟಿಗೆಯನ್ನು ಮೋದಿಯವರ ಹೆಲಿಕಾಪ್ಟರ್ ನಿಂದ ಇಳಿಸಿ ಖಾಸಗಿ ಇನ್ನೋವಾ ಕಾರಿಗೆ ಸಾಗಿಸಿದ ಪ್ರಕರಣದಲ್ಲೂ ಇದು ಚರ್ಚೆಗೆ ಬಂದಿತ್ತು. ಅಲ್ಲಿನ ಎಸ್.ಪಿಯವರು ಸ್ಪಷ್ಟನೆ ನೀಡಿ, ನಮ್ಮದೇನಿದ್ದರೂ ಭದ್ರತೆ ಕೆಲಸ; ಪರೀಕ್ಷೆ ಮಾಡುವುದು ಚುನಾವಣಾಧಿಕಾರಿಗಳಿಗೆ ಬಿಟ್ಟಿದ್ದು ಎಂದಿದ್ದರು. ಆ ನಂತರ ಸದರಿ ಪೆಟ್ಟಿಗೆಯನ್ನು ಚುನಾವಣಾಧಿಕಾರಿಗಳು ಏಕೆ ತಪಾಸಣೆಗೆ ಒಳಪಡಿಸಲಿಲ್ಲ ಎಂಬ ಪ್ರಶ್ನೆ ಗಂಭೀರವಾಗಿ ಎದ್ದಿತ್ತು.

ಚಿತ್ರದುರ್ಗದಲ್ಲಿ ಮೋದಿ ಹೆಲಿಕ್ಯಾಪ್ಟರ್ ನಿಂದ ಟ್ರಂಕ್ ಒಂದನ್ನು ಹೊತ್ತಿ ಓಡುತ್ತಿರುವುದು

ಈಗ ಪ್ರಧಾನಿಯವರ ವಾಹನವನ್ನು ಪರಿಶೀಲಿಸುವ ಕೆಲಸ ಚುನಾವಣೆಗೆ ಸಂಬಂಧಿಸಿದ ಅಧಿಕಾರಿ ಮಾಡಬಹುದೇ ಇಲ್ಲವೇ? ಪ್ರಧಾನಿಯವರದ್ದು ಹೋಗಲಿ, ತನ್ನದ್ದೂ ಮಾಡಬಾರದೆಂದು ಅದೇ ಒರಿಸ್ಸಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜಗಳವಾಡಿದ್ದಾರೆ. ಆ ಜಗಳದ ನಂತರ ಏನಾಯಿತು ಗೊತ್ತಿಲ್ಲ. ಆದರೆ ಮೊಹಮ್ಮದ್ ಮೊಹ್ಸಿನ್ ಅವರನ್ನು ‘ಎಸ್.ಪಿ.ಜಿ ರಕ್ಷಣೆಯಲ್ಲಿರುವವರ ವಾಹನಗಳಿಗೆ ಇಂತಹ ತಪಾಸಣೆಯಿಂದ ವಿನಾಯಿತಿ ಕೊಟ್ಟಿದ್ದರೂ, ಮೊಹ್ಸಿನ್ ಅವರು ತಪಾಸಣೆಗೆ ಆದೇಶ ನೀಡಿದ್ದಾರೆ. ಹಾಗಾಗಿ ತಪಾಸಣೆ ಮಾಡಿದ್ದಾರೆ ಆದ್ದರಿಂದ ಅಮಾನತು ಮಾಡಲಾಗಿದೆ’ ಎಂದು ಆಯೋಗ ಹೇಳಿದೆ.

ಮೊಹಮ್ಮದ್ ಮೊಹ್ಸಿನ್

ಆದರೆ, ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಈ ಕುರಿತು ಯಾವುದೇ ನಿಯಮಗಳಿಲ್ಲ. ಬದಲಿಗೆ ಸರ್ಕಾರೀ ವಾಹನಗಳನ್ನು ಬಳಸುವ ಕುರಿತು ಅಷ್ಟೇ ಹೇಳಲಾಗಿದೆ. ಹೀಗಾಗಿ ‘ಇಲ್ಲದ ನಿಯಮಗಳನ್ನು ಮುಂದಿಟ್ಟು ಇವರನ್ನು ಅಮಾನತು ಮಾಡಲಾಗಿದೆ’ ಎಂದು ಕಾಂಗ್ರೆಸ್ ಸೇರಿದಂತೆ ಹಲವರು ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ಬಿಜೆಪಿ ಕಚೇರಿಯಂತೆ ವರ್ತಿಸುತ್ತಿದೆ ಎಂಬ ಆರೋಪಗಳು ಸಾಕಷ್ಟು ಕೇಳಿಬಂದಿರುವಾಗ ಈ ಅಮಾನತು ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ.

ಕಳೆದ ಸಾರಿ ದೊಡ್ಡ ಸಾಧನೆ ಮಾಡಿದ್ದ ರಾಜ್ಯಗಳಲ್ಲಿ ಅದನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗದು ಎಂಬ ಹಿನ್ನೆಲೆಯಲ್ಲಿ ಒರಿಸ್ಸಾದಂತಹ ಕೆಲವು ರಾಜ್ಯಗಳಲ್ಲಿ ನಷ್ಟವನ್ನು ತುಂಬಿಕೊಳ್ಳುವ ಬಿಜೆಪಿಯ ಯೋಜನೆ ಎಲ್ಲರಿಗೂ ಗೊತ್ತಿದೆ. ಪ್ರಧಾನಿಯವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಕ್ಕೆ ಅಮಾನತು ಮಾಡಿರುವುದು ಮತ್ತು ಧರ್ಮೇಂದ್ರ ಪ್ರಧಾನ್ ವಾಹನದ ತಪಾಸಣೆಗೆ ಬಿಡದೇ ಇರುವುದು ಎರಡೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿಶ್ವಾಸ ಇಲ್ಲದಂತೆ ಮಾಡುತ್ತಿದೆ.

ಮೊಹಮದ್ ಮೊಹ್ಸಿನ್ ಅವರು ವಿಜಾಪುರ ಮತ್ತು ಗದಗದ ಜಿಲ್ಲಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅದಲ್ಲದೇ ಹಲವು ನಿಗಮ ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷವಾಗಿ ಕೇಂದ್ರ ಸರ್ಕಾರವು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ನಿಂತಿರುವುದನ್ನು ಟೀಕಿಸಿರುವ ಕೆಲವು ಪೋಸ್ಟ್.ಗಳು ಕಂಡುಬರುತ್ತವೆ. ಇದರ ಬಗ್ಗೆ ಕೆಲವು ರಾಜಕೀಯ ವಿಶ್ಲೇಷಕರನ್ನು ‘ನಾನುಗೌರಿ ವೆಬ್’ನಿಂದ ಮಾತಾಡಿಸಲಾಯಿತು. ಸ್ವರಾಜ್ ಇಂಡಿಯಾದ ರಾಜಶೇಖರ್ ಅಕ್ಕಿಯವರನ್ನು ಮಾತಾಡಿಸಿದಾಗ, ‘ಅವರು ಸರ್ಕಾರೀ ಅಧಿಕಾರಿಯಾಗಿದ್ದುಕೊಂಡು ಸರ್ಕಾರವನ್ನು ಟೀಕಿಸುತ್ತಿದ್ದಾರಾದರೆ ಅದನ್ನು ನಾನು ತಪ್ಪು ಎನ್ನುತ್ತೇನೆ. ಆದರೆ, ಈಗ ಪ್ರಧಾನಿಯವರ ವಾಹನ ತಪಾಸಣೆಯೇ ತಪ್ಪು ಎನ್ನುವುದು ಮತ್ತು ಅದಕ್ಕಾಗಿ ಅಮಾನತು ಮಾಡುವುದನ್ನೂ ತಪ್ಪು ಎನ್ನುತ್ತೇನೆ. ಎರಡನ್ನೂ ಲಿಂಕ್ ಮಾಡಬಾರದು ‘ ಎನ್ನುತ್ತಾರೆ.

ವಕೀಲ ಮತ್ತು ರಾಜಕೀಯ ವಿಶ್ಲೇಷಕ ಜಗನ್ನಾಥ್ ರಾಮಸ್ವಾಮಿಯವರ ಪ್ರಕಾರ, ‘ಈ ಅಧಿಕಾರಿ ವ್ಯವಸ್ಥೆಯ ಹುಳುಕುಗಳನ್ನು ಪ್ರಶ್ನಿಸುವ ಮನೋಭಾವ ಇದ್ದುದರಿಂದಲೇ ಪ್ರಧಾನಿಯವರ ವಾಹನ ತಪಾಸಣೆಗೂ ಕೈ ಹಾಕಿದ್ದಾರೆ. ಇವತ್ತು ‘ನಾರ್ಮಲ್’ ಎಂದು ಭಾವಿಸಲಾಗುವ ಅಧಿಕಾರಿಗಳು ವ್ಯವಸ್ಥೆಯ ಜೊತೆಗೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡು ಹೋಗುತ್ತಾರೆ, ಅಷ್ಟೇ’ ಎಂಬ ಅನಿಸಿಕೆ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...