Homeಕರ್ನಾಟಕಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

ಕರ್ನಾಟಕದ ಐಎಎಸ್ ಅಧಿಕಾರಿ ಒರಿಸ್ಸಾದಲ್ಲಿ ಅಮಾನತು : ಮೊಹಮದ್ ಮೊಹ್ಸಿನ್ ಅವರು ಮಾಡಿದ ತಪ್ಪೇನು?

- Advertisement -
- Advertisement -

ಕುಂದಾಪುರದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ತಮ್ಮ ಕೆಲಸ ಶುರು ಮಾಡಿದ ಐಎಎಸ್ ಅಧಿಕಾರಿ ಮೊಹಮದ್ ಮೊಹ್ಸಿನ್, ಇದೀಗ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಸುದ್ದಿ ಒಳ್ಳೆಯದೋ ಕೆಟ್ಟದ್ದೋ ಎನ್ನುವುದು ಓದುಗರು ಯಾವ ನೆಲೆಯಿಂದ ನೋಡುತ್ತಾರೆ ಎಂಬುದರ ಆಧಾರದ ಮೇಲೆ ನಿಂತಿರುತ್ತದೆ. ಏಪ್ರಿಲ್ 17ರಂದು ಒರಿಸ್ಸಾದ ಸಂಭಲ್ಪುರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕೆ ಹೋಗಿದ್ದರು. ಅಲ್ಲಿ ಚುನಾವಣಾ ವೀಕ್ಷಕರಾಗಿ ಮೊಹಮದ್ ಮೊಹ್ಸಿನ್ ಕರ್ತವ್ಯ ನಿರತರಾಗಿದ್ದರು. ಚುನಾವಣೆಯ ಸಂದರ್ಭದಲ್ಲಿ ಆ ರಾಜ್ಯದಿಂದ ಹೊರಗಿನ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ. ಏಕೆಂದರೆ, ಆಯಾ ರಾಜ್ಯದ ಅಧಿಕಾರಿಗಳು ನಂತರದಲ್ಲಿ ರಾಜಕೀಯ ನಾಯಕತ್ವದ ಕೆಳಗೇ ಕೆಲಸ ಮಾಡಬೇಕಾದ್ದರಿಂದ ಪಕ್ಷಪಾತ ಧೋರಣೆ ತೋರುವ ಸಾಧ್ಯತೆ ಇರುತ್ತದೆ. ಅದೇ ರೀತಿ ಮೊಹಮದ್ ಮೊಹ್ಸಿನ್ ಒರಿಸ್ಸಾಕ್ಕೆ ಹೋಗಿದ್ದರು. ಸಂಭಲ್ಪುರಕ್ಕೆ ಬಂದ ಮೋದಿಯವರ ಹೆಲಿಕಾಪ್ಟರ್ ಅನ್ನು ಪರೀಕ್ಷಿಸಲು ಮೊಹ್ಸಿನ್ ಸೂಚಿಸಿದ್ದರು.

ಇದೇ ಅವರು ಮಾಡಿದ ತಪ್ಪು ಎಂದು ಚುನಾವಣಾ ಆಯೋಗವು ಅವರನ್ನು ಅಮಾನತು ಮಾಡಿದೆ. ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ ಯಾರನ್ನು ಬೇಕಾದರೂ ಪರೀಕ್ಷೆ ಮಾಡುವ ಅಧಿಕಾರ ಹೊಂದಿರುತ್ತಾರೆ ಅಲ್ಲವೇ? ಚಿತ್ರದುರ್ಗದಲ್ಲಿ ದೊಡ್ಡದೊಂದು ಪೆಟ್ಟಿಗೆಯನ್ನು ಮೋದಿಯವರ ಹೆಲಿಕಾಪ್ಟರ್ ನಿಂದ ಇಳಿಸಿ ಖಾಸಗಿ ಇನ್ನೋವಾ ಕಾರಿಗೆ ಸಾಗಿಸಿದ ಪ್ರಕರಣದಲ್ಲೂ ಇದು ಚರ್ಚೆಗೆ ಬಂದಿತ್ತು. ಅಲ್ಲಿನ ಎಸ್.ಪಿಯವರು ಸ್ಪಷ್ಟನೆ ನೀಡಿ, ನಮ್ಮದೇನಿದ್ದರೂ ಭದ್ರತೆ ಕೆಲಸ; ಪರೀಕ್ಷೆ ಮಾಡುವುದು ಚುನಾವಣಾಧಿಕಾರಿಗಳಿಗೆ ಬಿಟ್ಟಿದ್ದು ಎಂದಿದ್ದರು. ಆ ನಂತರ ಸದರಿ ಪೆಟ್ಟಿಗೆಯನ್ನು ಚುನಾವಣಾಧಿಕಾರಿಗಳು ಏಕೆ ತಪಾಸಣೆಗೆ ಒಳಪಡಿಸಲಿಲ್ಲ ಎಂಬ ಪ್ರಶ್ನೆ ಗಂಭೀರವಾಗಿ ಎದ್ದಿತ್ತು.

ಚಿತ್ರದುರ್ಗದಲ್ಲಿ ಮೋದಿ ಹೆಲಿಕ್ಯಾಪ್ಟರ್ ನಿಂದ ಟ್ರಂಕ್ ಒಂದನ್ನು ಹೊತ್ತಿ ಓಡುತ್ತಿರುವುದು

ಈಗ ಪ್ರಧಾನಿಯವರ ವಾಹನವನ್ನು ಪರಿಶೀಲಿಸುವ ಕೆಲಸ ಚುನಾವಣೆಗೆ ಸಂಬಂಧಿಸಿದ ಅಧಿಕಾರಿ ಮಾಡಬಹುದೇ ಇಲ್ಲವೇ? ಪ್ರಧಾನಿಯವರದ್ದು ಹೋಗಲಿ, ತನ್ನದ್ದೂ ಮಾಡಬಾರದೆಂದು ಅದೇ ಒರಿಸ್ಸಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜಗಳವಾಡಿದ್ದಾರೆ. ಆ ಜಗಳದ ನಂತರ ಏನಾಯಿತು ಗೊತ್ತಿಲ್ಲ. ಆದರೆ ಮೊಹಮ್ಮದ್ ಮೊಹ್ಸಿನ್ ಅವರನ್ನು ‘ಎಸ್.ಪಿ.ಜಿ ರಕ್ಷಣೆಯಲ್ಲಿರುವವರ ವಾಹನಗಳಿಗೆ ಇಂತಹ ತಪಾಸಣೆಯಿಂದ ವಿನಾಯಿತಿ ಕೊಟ್ಟಿದ್ದರೂ, ಮೊಹ್ಸಿನ್ ಅವರು ತಪಾಸಣೆಗೆ ಆದೇಶ ನೀಡಿದ್ದಾರೆ. ಹಾಗಾಗಿ ತಪಾಸಣೆ ಮಾಡಿದ್ದಾರೆ ಆದ್ದರಿಂದ ಅಮಾನತು ಮಾಡಲಾಗಿದೆ’ ಎಂದು ಆಯೋಗ ಹೇಳಿದೆ.

ಮೊಹಮ್ಮದ್ ಮೊಹ್ಸಿನ್

ಆದರೆ, ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಈ ಕುರಿತು ಯಾವುದೇ ನಿಯಮಗಳಿಲ್ಲ. ಬದಲಿಗೆ ಸರ್ಕಾರೀ ವಾಹನಗಳನ್ನು ಬಳಸುವ ಕುರಿತು ಅಷ್ಟೇ ಹೇಳಲಾಗಿದೆ. ಹೀಗಾಗಿ ‘ಇಲ್ಲದ ನಿಯಮಗಳನ್ನು ಮುಂದಿಟ್ಟು ಇವರನ್ನು ಅಮಾನತು ಮಾಡಲಾಗಿದೆ’ ಎಂದು ಕಾಂಗ್ರೆಸ್ ಸೇರಿದಂತೆ ಹಲವರು ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ಬಿಜೆಪಿ ಕಚೇರಿಯಂತೆ ವರ್ತಿಸುತ್ತಿದೆ ಎಂಬ ಆರೋಪಗಳು ಸಾಕಷ್ಟು ಕೇಳಿಬಂದಿರುವಾಗ ಈ ಅಮಾನತು ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ.

ಕಳೆದ ಸಾರಿ ದೊಡ್ಡ ಸಾಧನೆ ಮಾಡಿದ್ದ ರಾಜ್ಯಗಳಲ್ಲಿ ಅದನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗದು ಎಂಬ ಹಿನ್ನೆಲೆಯಲ್ಲಿ ಒರಿಸ್ಸಾದಂತಹ ಕೆಲವು ರಾಜ್ಯಗಳಲ್ಲಿ ನಷ್ಟವನ್ನು ತುಂಬಿಕೊಳ್ಳುವ ಬಿಜೆಪಿಯ ಯೋಜನೆ ಎಲ್ಲರಿಗೂ ಗೊತ್ತಿದೆ. ಪ್ರಧಾನಿಯವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಕ್ಕೆ ಅಮಾನತು ಮಾಡಿರುವುದು ಮತ್ತು ಧರ್ಮೇಂದ್ರ ಪ್ರಧಾನ್ ವಾಹನದ ತಪಾಸಣೆಗೆ ಬಿಡದೇ ಇರುವುದು ಎರಡೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿಶ್ವಾಸ ಇಲ್ಲದಂತೆ ಮಾಡುತ್ತಿದೆ.

ಮೊಹಮದ್ ಮೊಹ್ಸಿನ್ ಅವರು ವಿಜಾಪುರ ಮತ್ತು ಗದಗದ ಜಿಲ್ಲಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅದಲ್ಲದೇ ಹಲವು ನಿಗಮ ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷವಾಗಿ ಕೇಂದ್ರ ಸರ್ಕಾರವು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ನಿಂತಿರುವುದನ್ನು ಟೀಕಿಸಿರುವ ಕೆಲವು ಪೋಸ್ಟ್.ಗಳು ಕಂಡುಬರುತ್ತವೆ. ಇದರ ಬಗ್ಗೆ ಕೆಲವು ರಾಜಕೀಯ ವಿಶ್ಲೇಷಕರನ್ನು ‘ನಾನುಗೌರಿ ವೆಬ್’ನಿಂದ ಮಾತಾಡಿಸಲಾಯಿತು. ಸ್ವರಾಜ್ ಇಂಡಿಯಾದ ರಾಜಶೇಖರ್ ಅಕ್ಕಿಯವರನ್ನು ಮಾತಾಡಿಸಿದಾಗ, ‘ಅವರು ಸರ್ಕಾರೀ ಅಧಿಕಾರಿಯಾಗಿದ್ದುಕೊಂಡು ಸರ್ಕಾರವನ್ನು ಟೀಕಿಸುತ್ತಿದ್ದಾರಾದರೆ ಅದನ್ನು ನಾನು ತಪ್ಪು ಎನ್ನುತ್ತೇನೆ. ಆದರೆ, ಈಗ ಪ್ರಧಾನಿಯವರ ವಾಹನ ತಪಾಸಣೆಯೇ ತಪ್ಪು ಎನ್ನುವುದು ಮತ್ತು ಅದಕ್ಕಾಗಿ ಅಮಾನತು ಮಾಡುವುದನ್ನೂ ತಪ್ಪು ಎನ್ನುತ್ತೇನೆ. ಎರಡನ್ನೂ ಲಿಂಕ್ ಮಾಡಬಾರದು ‘ ಎನ್ನುತ್ತಾರೆ.

ವಕೀಲ ಮತ್ತು ರಾಜಕೀಯ ವಿಶ್ಲೇಷಕ ಜಗನ್ನಾಥ್ ರಾಮಸ್ವಾಮಿಯವರ ಪ್ರಕಾರ, ‘ಈ ಅಧಿಕಾರಿ ವ್ಯವಸ್ಥೆಯ ಹುಳುಕುಗಳನ್ನು ಪ್ರಶ್ನಿಸುವ ಮನೋಭಾವ ಇದ್ದುದರಿಂದಲೇ ಪ್ರಧಾನಿಯವರ ವಾಹನ ತಪಾಸಣೆಗೂ ಕೈ ಹಾಕಿದ್ದಾರೆ. ಇವತ್ತು ‘ನಾರ್ಮಲ್’ ಎಂದು ಭಾವಿಸಲಾಗುವ ಅಧಿಕಾರಿಗಳು ವ್ಯವಸ್ಥೆಯ ಜೊತೆಗೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡು ಹೋಗುತ್ತಾರೆ, ಅಷ್ಟೇ’ ಎಂಬ ಅನಿಸಿಕೆ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...