Homeಮುಖಪುಟನಮಗೆ ಮಹಿಳೆಯರ ಬಗ್ಗೆ ಹೆಚ್ಚು ಗೌರವವಿದೆ: ವಿವಾದಾತ್ಮಕ ಹೇಳಿಕೆಯ ನಂತರ ಸ್ಪಷ್ಟನೆ ನೀಡಿದ ಸುಪ್ರೀಂ

ನಮಗೆ ಮಹಿಳೆಯರ ಬಗ್ಗೆ ಹೆಚ್ಚು ಗೌರವವಿದೆ: ವಿವಾದಾತ್ಮಕ ಹೇಳಿಕೆಯ ನಂತರ ಸ್ಪಷ್ಟನೆ ನೀಡಿದ ಸುಪ್ರೀಂ

- Advertisement -
- Advertisement -

“ನಮಗೆ ಮಹಿಳೆಯರ ಬಗ್ಗೆ ಹೆಚ್ಚು ಗೌರವವಿದೆ” ಎಂದು ಸಿಜೆಐ ಎ ಎಸ್‌ ಬೋಬಡೆ ನೇತೃತ್ವದ ಸುಪ್ರೀಂ ಕೋರ್ಟ್‌ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಇತ್ತೀಚೆಗೆ ಅತ್ಯಾಚಾರ ಸಂತ್ರಸ್ತೆಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಸ್ ಎ ಬೋಬಡೆ, “ಕಳೆದ ವಾರ ಅತ್ಯಾಚಾರ ಪ್ರಕರಣವೊಂದರ ವಿಚಾರಣೆ ವೇಳೆ ನಾನು ಆಡಿದ ಮಾತುಗಳು ಮಹಿಳೆಯರಿಗೆ ಅಗೌರವ ಸೂಚಿಸುತ್ತಿರುವ ರೀತಿಯಲ್ಲಿದೆ ಎಂದು ಸಂಪೂರ್ಣವಾಗಿ ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ನಾವು ಆತನಿಗೆ (ಅತ್ಯಾಚಾರ ಆರೋಪಿಗೆ) ವಿವಾಹವಾಗಲು ಹೇಳಿಲ್ಲ. ನೀನು ಮದುವೆಯಾಗುತ್ತೀಯ? ಎಂದು ಕೇಳಿದೆವು. ʼಮದುವೆಯಾಗು’ ಎಂದು ಹೇಳಿಲ್ಲ” ಎಂದು ಸಿಜೆಐ ಬೋಬಡೆ ಹೇಳಿದರು. ಈ ಸಂಸ್ಥೆಗೆ ಅದರಲ್ಲೂ ಪ್ರಮುಖವಾಗಿ ಈ ಪೀಠ ಮಹಿಳೆಯರ ಬಗ್ಗೆ ಅತ್ಯುನ್ನತ ಗೌರವ ಹೊಂದಿದೆ” ಎಂದೂ ಅವರು ಹೇಳಿದರು.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿಯಲ್ಲಿ ತಂತ್ರಜ್ಞನಾಗಿ ಕಾರ್ಯನಿರ್ವಹಿಸುತ್ತಿರುವ ಮೋಹಿತ್ ಸುಭಾಷ್ ಚೌವಾಣ್ ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್, “ಆಕೆಯನ್ನು ಮದುವೆಯಾಗುತ್ತೀರಾ..? ನೀವು ಮದುವೆಯಾಗುವುದಾದರೆ ನಾವು ಸಹಾಯ ಮಾಡಬಲ್ಲೆವು. ಇಲ್ಲದೇ ಇದ್ದರೆ ನೀವು ನೌಕರಿ ಕಳೆದುಕೊಂಡು ಜೈಲಿಗೆ ಹೋಗಬೇಕಾಗುತ್ತದೆ. ನೀವು ಬಾಲಕಿಗೆ ಆಮಿಷವೊಡ್ಡಿ ಅತ್ಯಾಚಾರವೆಸಗಿದ್ದೀರ. ನಾನು ಬಲವಂತ ಪಡಿಸುವುದಿಲ್ಲ” ಎಂದು ಹೇಳಿತ್ತು.

ಮೋಹಿತ್ ಸುಭಾಷ್ ಚೌವಾಣ್ ಮೇಲೆ ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪವಿದ್ದು, ಆತನ ಮೇಲೆ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾನೂನಿನಡಿಯಲ್ಲಿ ದೂರು ದಾಖಲಾಗಿದೆ.

ಆದರೆ ಅತ್ಯಾಚಾರಕ್ಕೆ ವಿವಾಹವೇ ಪರಿಹಾರ ಎಂದು ಸುಪ್ರೀಂ ಕೋರ್ಟ್ ತೀರ್ಮಾನಿಸಲು ಹೊರಟಂತಿದೆ ಎಂಬ ಅಭಿಪ್ರಾಯದೊಂದಿಗೆ ವ್ಯಾಪಕ ಟೀಕೆಗಳು ಹರಿದು ಬಂದಿದ್ದವು.

ಸಂತ್ರಸ್ತೆಗೆ 18 ವರ್ಷ ಪೂರೈಸಿದ ನಂತರ ಆಕೆಯನ್ನು ವಿವಾಹವಾಗುವುದಾಗಿ ಆರೋಪಿ ಒಪ್ಪಿರುವ ಕುರಿತ ದಾಖಲೆಗಳ ಆಧಾರದಲ್ಲಿ ಸುಪ್ರೀಂ ಕೋರ್ಟ್ ಹಾಗೆ ಪ್ರಶ್ನಿಸಿತ್ತು ಎಂದು ಕೋರ್ಟ್ ಅಧಿಕಾರಿಗಳು ನಂತರ ಸ್ಪಷ್ಟೀಕರಣ ನೀಡಿದ್ದರು.

ಇದನ್ನೂ ಓದಿ: ಹಳತು ವಿವೇಕ: ಅಧಿಕಾರ ಸ್ಥಾನದಿಂದ ದರ್ಪ ತೋರಿಸುವವರ ವಿರುದ್ಧ ಕೂಡಲೇ ಪ್ರತಿಭಟಿಸುತ್ತಿದ್ದ ಲಂಕೇಶ್ ಪತ್ರಿಕೆ: ಪ್ರೊ. ಎಸ್. ಚಂದ್ರಶೇಖರ್

ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು, ಪ್ರಖ್ಯಾತ ನಾಗರಿಕರು, ಬುದ್ಧಿಜೀವಿಗಳು, ಬರಹಗಾರರು ಮತ್ತು ಕಲಾವಿದರು ಮುಖ್ಯ ನ್ಯಾಯಾಧೀಶರಿಗೆ ಕ್ಷಮೆಯಾಚಿಸಬೇಕು ಮತ್ತು ಟೀಕೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಮುಕ್ತ ಪತ್ರ ಬರೆದಿದ್ದಾರೆ.

ಇನ್ನು ವಕೀಲರ ಸಂಘಟನೆಯಾದ ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಷನ್ ಫಾರ್‌ ಜಸ್ಟಿಸ್ (AILAJ) ಕೂಡ ನ್ಯಾಯಮೂರ್ತಿಗಳ ನಡೆಯನ್ನು ಖಂಡಿಸಿದ್ದು, ನ್ಯಾಯಾಲಯದ ಘನತೆ ಉಳಿಸಿರಿ ಎಂದಿದ್ದಾರೆ.

2015ರ ಮಧ್ಯಪ್ರದೇಶ ವರ್ಸಸ್ ಮದನ್‌ಲಾಲ್ (7 SCC 681) ಪ್ರಕರಣವನ್ನು ಉಲ್ಲೇಖಿಸಿರುವ ಸಂಘವು “ಅತ್ಯಾಚಾರ ಅಥವಾ ಅತ್ಯಾಚಾರದ ಪ್ರಯತ್ನದಲ್ಲಿ, ಯಾವುದೇ ಸಂದರ್ಭದಲ್ಲೂ ರಾಜಿ ಮಾಡಿಕೊಳ್ಳುವ ಕಲ್ಪನೆಯನ್ನು ನಿಜವಾಗಿಯೂ ಯೋಚಿಸಲಾಗುವುದಿಲ್ಲ” ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಮತ್ತೆ ನೆನಪಿಸಿದೆ. ನ್ಯಾಯಾಲಯಗಳು ಸಂಪೂರ್ಣವಾಗಿ ಉಳಿಯಬೇಕು ಎಂದು ನಾವು ಒತ್ತು ನೀಡುತ್ತೇವೆ” ಎಂದಿದೆ.

“ಸಿಜೆಐ ಹೇಳಿಕೆಗಳು ಸಮಾನತೆಯ ಸಾಂವಿಧಾನಿಕ ಖಾತರಿಗೆ ಧಕ್ಕೆ ತರುವಂತಿದೆ. ಮಹಿಳೆಯರನ್ನು ಕಡಿಮೆ ನಾಗರಿಕರ ಸ್ಥಾನಮಾನಕ್ಕೆ ಇಳಿಸಿದೆ. ಇದು ಮಹಿಳೆಯ ಹಕ್ಕಿನ ಸಮಗ್ರ ಉಲ್ಲಂಘನೆಯಾಗಿದೆ. ನಾವು ಸಮಾಜವಾಗಿ, ಅದರ ರೂಪಗಳು ಮತ್ತು ಅನ್ಯಾಯದ ಪ್ರಶ್ನೆಗಳಿಗೆ ಉತ್ತರ ಹುಡುಕಬೇಕು. ನಾವು ಅದನ್ನು ಮಾಡದಿದ್ದಲ್ಲಿ, ನಾವು ಸಮಾಜದ ಅನ್ಯಾಯಗಳಿಗೆ ಕಾರಣವಾಗುತ್ತೇವೆ. ಈ ಹೇಳಿಕೆಗಳಿಂದ, ಸುಪ್ರೀಂ ಕೋರ್ಟ್ ಈ ನಿಖರವಾದ ಅಪಾಯವನ್ನು ಎದುರಿಸುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...