Homeಮುಖಪುಟಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಒಂದು ಪ್ರಬಲ ಲೋಕಲ್ ಮುಖವಿಲ್ಲದೇ ಪರದಾಡುತ್ತಿರುವ ಬಿಜೆಪಿ ಕೊನೆಗೂ ‘ಕೋಬ್ರಾ’ ಒಂದನ್ನು ಕ್ಯಾಚ್ ಮಾಡಿದೆ. ‘ನಾನು ಪಕ್ಕಾ ಕೋಬ್ರಾ. ಒಂದ್ಸಲ ಕಚ್ಚಿದರೆ ಅಷ್ಟೇ, ಫಿನಿಷ್’ ಎಂದು ರವಿವಾರ ಬಹಿರಂಗ ವೇದಿಕೆಯಲ್ಲಿ ಹೇಳಿದ ಪುರಾತನ ನಟ ಮಿಥುನ್ ಚಕ್ರವರ್ತಿ ಈಗ ಬಿಜೆಪಿ ಪಾಲಿಗೆ ಸ್ಟಾರ್ ಪ್ರಚಾರಕ ಆಗಲಿದ್ದಾರೆ.

ಬಿಸಿಸಿಐ ಅಧ್ಯಕ್ಷ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಯನ್ನು ಕ್ಯಾಚ್ ಮಾಡಲು ಇನ್ನಿಲ್ಲದ ಪ್ರಯತ್ನ ಮಾಡಿ ಸೋತ ನಂತರ ಕೊನೆಗೂ ಒಂದು ಪುರಾತನ ಕೋಬ್ರಾ ಹಿಡಿದುಕೊಂಡು ಬಿಜೆಪಿ ಶೋ ಮಾಡುತ್ತಿದೆ.

‘ಐ ಯಾಮ್ ಎ ಡಿಸ್ಕೋ ಡ್ಯಾನ್ಸರ್’ ಎಂದು ಬಾಲಿವುಡ್‌ಗೆ ಬಂದ ಮಿಥುನ್ ಚಕ್ರವರ್ತಿ ನಂತರ ಹೊಡಿ-ಬಡಿ ಕಥಾನಕದ ಎರಡನೇ ದರ್ಜೆ ಸಿನಿಮಾಗಳಿಗಷ್ಟೇ ಸಿಮೀತವಾದರು. ಬಂಗಾಲಿ ಭಾಷೆ ಚಿತ್ರವೊಂದರ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಮಿಥುನ್, ಬಾಲಿವುಡ್‌ನಲ್ಲಿ ಚಿರಕಾಲ ನೆನಪಿನಲ್ಲಿಡುವ ನಟನಾಗಿಯೇನೂ ಬೆಳೆಯಲಿಲ್ಲ.

ಹದಿಹರೆಯದಲ್ಲಿ ನಕ್ಸಲಿಸಂ ಪರ ಒಲವು… ನಂತರ ಸಿಪಿಎಂ ನಂಟು… ಆಮೇಲೆ ಟಿಎಂಸಿ ಸ್ನೇಹ. ಟಿಎಂಸಿಯಿಂದ ರಾಜ್ಯಸಭೆ ಸದಸ್ಯರಾದರು. ಆದರೆ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕೇಳಿ ಬಂದ ನಂತರ ಎರಡೇ ವರ್ಷಕ್ಕೆ ರಾಜಿನಾಮೆ ನೀಡಿದರು.

ಈಗ ‘ಕೋಬ್ರಾ’ ಕಮಲ ಮುಡಿಗೇರಿಸಿಕೊಂಡಿದೆ. ‘ಏಕ್ ಛೊಬೊಲೆ ಛೋಬಿ’ (ಒಮ್ಮೆ ಕಚ್ಚಿದರೆ ನೀವ್ ಫೋಟೊ ಅಷ್ಟೇ) ಎಂಬ ಹೊಸ ಡೈಲಾಗ್ ಅನ್ನು ಮಿಥುನ್ ಉದುರಿಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವ್ಯಂಗ್ಯ ಮಾಡಿರುವ ನೆಟ್ಟಿಗರು, ವಿಷ ಕಕ್ಕುವ ಪಾರ್ಟಿಯಲ್ಲಿ ಕೋಬ್ರಾ ಇರುವುದು ತಪ್ಪಲ್ಲ ಬಿಡಿ ಎಂದಿದ್ದಾರೆ.

2016 ರ ಅಸೆಂಬ್ಲಿ ಚುನಾವಣೆಗಳಿಗಿಂತ ಭಿನ್ನವಾಗಿ, ಈ ಬಾರಿ ಬಿಜೆಪಿ ಸಾಧ್ಯವಾದಷ್ಟು ಪ್ರಸಿದ್ಧ ವ್ಯಕ್ತಿಗಳ, ವಿಶೇಷವಾಗಿ ಬಂಗಾಳಿ ಸಿನಿಮಾ ಮಂದಿಯ ಹಿಂದೆ ಬಿದ್ದಿದೆ. ರುದ್ರಾನಿಲ್ ಘೋಷ್, ಯಶ್ ದಾಸ್‌ಗುಪ್ತಾ, ಹಿರಾನ್ ಚಟರ್ಜಿ, ಪಾಯೆಲ್ ಸರ್ಕಾರ್, ಶ್ರಬಂತಿ ಚಟರ್ಜಿಯಿಂದ ರಾಜ್ಯದ ದೂರದರ್ಶನ ಉದ್ಯಮದ ಜನಪ್ರಿಯ ನಟರನ್ನು ಅದು ಸೇರಿಸಿಕೊಂಡಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಾಂಗ್ಲಾದೇಶದ ನಟ ಫಿರ್ದೌಸ್ ಕೂಡ ಟಿಎಂಸಿ ಪರ ಪ್ರಚಾರ ನಡೆಸಿದ್ದರು. ಈಗ ಮಿಥುನ್ ಚಕ್ರವರ್ತಿ ಬಿಜೆಪಿಯ ರ‍್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾರಿ ಜನಸಂದಣಿಯನ್ನು ಪಡೆಯುವ ನಿರೀಕ್ಷೆಯಿದೆ. ಆದರೆ, ಆರಂಭದಲ್ಲೇ ಅವರು ಕೋಬ್ರಾ ತರಹ ವಿಷ ಕಾರು ಮೂಲಕ ಅಡ್ಡ ದಾರಿ ತುಳಿದಂತಿದೆ. ಮಮತಾ ಎದುರು ಕೋಬ್ರಾ ಆಟ ಅಷ್ಟಕ್ಕಷ್ಟೇ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.


ಇದನ್ನೂ ಓದಿ: ರಾಮ ಮಂದಿರಕ್ಕೆ ದೇಣಿಗೆ ನೀಡಲು ನಿರಾಕರಣೆ: ಶಿಕ್ಷಕನನ್ನೇ ಶಾಲೆಯಿಂದ ಹೊರಹಾಕಿದ ಆಡಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಮಾಜದಲ್ಲಿ ಶಾಂತಿ ಹಾಳು ಮಾಡಲು BJP ಗೆ ಇಂತಹ ಕೋಬ್ರಾ ಗಳೇ ಬೇಕಾಗಿರುವುದು…
    ಸಮಾಜ ಘಾತುಕ BJP…

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...