Homeಮುಖಪುಟಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

ಆರೋಪಿ ಸ್ವಪ್ನಾ ಸುರೇಶ್ ಅವರ ರಕ್ಷಣಾತ್ಮಕ ವಿವರಗಳಿಗೆ ನಿಯೋಜಿಸಲಾದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕೆಲವು ಆಶ್ಚರ್ಯಕರ ಹೇಳಿಕೆಗಳನ್ನು ನೀಡಿದ್ದಾರೆ

- Advertisement -
- Advertisement -

ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಯ ಮೇಲೆ ಒತ್ತಡ ಹೇರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆರೋಪಿ ಸ್ವಪ್ನಾ ಸುರೇಶ್ ಗೆ “ಸಿಎಂ ಪಿಣರಾಯಿ ವಿಜಯನ್” ಹೆಸರನ್ನು ಉಲ್ಲೇಖಿಸುವಂತೆ ಒತ್ತಡ ಹೇರಲಾಗಿತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿದ್ದು, ಈ ನಡುವೆ ಚಿನ್ನ ಕಳ್ಳಸಾಗಣೆ ಪ್ರಕರಣವು ಪ್ರತಿ ಪಕ್ಷಗಳಿಗೆ ಪ್ರಮುಖ ವಿಷಯವಾಗಿ ಮಾರ್ಪಟ್ಟಿದೆ.

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿ ಸ್ವಪ್ನಾ ಸುರೇಶ್ ಕೇರಳ ಸಿಎಂ ಪಿಣರಾಯಿ ವಿಜಯನ್ ರನ್ನು ಹೆಸರಿಸಿದ್ದಾರೆ ಎಂದು ಈ ತಿಂಗಳ ಆರಂಭದಲ್ಲಿ ತೆರಿಗೆ ಇಲಾಖೆ ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿತ್ತು. ಈ ಆರೋಪಕ್ಕೆ ಪ್ರತಿಯಾಗಿ ಪಿಣರಾಯಿ ವಿಜಯನ್, ಕೇಂದ್ರ ತನಿಖಾ ಸಂಸ್ಥೆಗಳು ‘ಸ್ವಯಂಪ್ರೇರಣೆಯಿಂದ’ ಚುನಾವಣಾ ಪ್ರಚಾರವನ್ನು ಕೈಗೆತ್ತಿಕೊಂಡಿವೆ ಎಂದು ವ್ಯಂಗ್ಯವಾಡಿದ್ದರು.

ಸ್ವಪ್ನಾ ಸುರೇಶ್ ಅವರ ರಕ್ಷಣಾತ್ಮಕ ವಿವರಗಳಿಗೆ ನಿಯೋಜಿಸಲಾದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕೆಲವು ಆಶ್ಚರ್ಯಕರ ಹೇಳಿಕೆಗಳನ್ನು ನೀಡಿದ್ದಾರೆ. ವಿಚಾರಣೆಯ ವೇಳೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಹೆಸರಿಸಲು ಸ್ವಪ್ನಾ ಸುರೇಶ್ ಅವರನ್ನು ‘ಇಡಿ’ಯು ಬಲವಂತವಾಗಿ ಒತ್ತಾಯಿಸಿತ್ತು ಎಂದು ಕೈಬರಹದ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

ಅಧಿಕಾರಿಗಳ ಪ್ರಕಾರ, ಆಡಿಯೋ ಕ್ಲಿಪ್‌ನ ಮೂಲದ ಕುರಿತಾದ ತನಿಖೆಗೆ ಸಂಬಂಧಿಸಿದಂತೆ ಪೊಲೀಸ್ ಬೆಂಗಾವಲು ಅಧಿಕಾರಿಯ ಹೇಳಿಕೆಯನ್ನು ದಾಖಲಿಸಲಾಗಿದೆ. ಇದರಲ್ಲಿ ಸ್ವಪ್ನಾ ಸುರೇಶ್ ಅವರು ಪಿಣರಾಯಿ ವಿಜಯನ್ ಅವರ ಹೆಸರನ್ನು ಉಲ್ಲೇಖಿಸಲು ಒತ್ತಾಯಿಸುವ ಕುರಿತಾದಂತೆ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ.

ಆದರೆ, ಉದ್ದೇಶಿತ ಆಡಿಯೊ ಕ್ಲಿಪ್‌ನಲ್ಲಿ ಸ್ವಪ್ನಾ ಸುರೇಶ್ ಯಾರೊಂದಿಗೆ ಮಾತನಾಡುತ್ತಿದ್ದಾರೆ ಎಂಬುದು ಆಕೆಗೆ ತಿಳಿದಿಲ್ಲ ಎಂದು ಪೊಲೀಸ್ ಬೆಂಗಾವಲು ಅಧಿಕಾರಿಯೋರ್ವರು ಹೇಳಿಕೆ ನೀಡಿದ್ದಾಗಿ ವರದಿ ತಿಳಿಸಿದೆ.

ಈ ಹಿಂದೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆದೇಶದ ಮೇರೆಗೆ ಸ್ವಪ್ನಾ ಸುರೇಶ್ ಅವರ ಚಿನ್ನ ಕಳ್ಳಸಾಗಣೆ ನಡೆದಿದೆ ಎಂಬ ಆರೋಪಕ್ಕೆ, ಪ್ರಕರಣವನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA) ಅಡಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯು ಈ ಹೇಳಿಕೆಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿತ್ತು.

2020 ರ ಜುಲೈ 5 ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಟರ್ಮಿನಲ್‌ನಲ್ಲಿ ಯುಎಇಯಿಂದ ಬಂದ ರಾಜತಾಂತ್ರಿಕ ಸಾಮಾನು ಸರಂಜಾಮುಗಳಿಂದ 14.82 ಕೋಟಿ ರೂ.ಗಳ 30 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಯಿತು.

ಈ ಪ್ರಕರಣದ ತನಿಖೆಗಾಗಿ ಆರಂಭದಲ್ಲಿ ಸರಿತ್ ಪಿಎಸ್, ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರನ್ನು ಬಂಧಿಸಲಾಗಿತ್ತು. ಇಲ್ಲಿಯವರೆಗೆ ಈ ಪ್ರಕರಣದಲ್ಲಿ ಎನ್‌ಐಎಯು 21 ಜನರನ್ನು ಬಂಧಿಸಿದೆ. ಕಳೆದ ಅಕ್ಟೋಬರ್‌ನಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಬಂಧಿಸಿದ್ದ ಸ್ವಪ್ನಾ ಅವರನ್ನು ದೀರ್ಘವಾಗಿ ವಿಚಾರಣೆ ನಡೆಸಲಾಗಿದೆ.


ಇದನ್ನೂ ಓದಿ: ಮಹಿಳಾ ದಿನಾಚರಣೆಯ ದಿನವೇ ಪೊದೆಯಲ್ಲಿ ಪತ್ತೆಯಾದ ನವಜಾತ ಹೆಣ್ಣುಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...