Homeಮುಖಪುಟಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

ಆರೋಪಿ ಸ್ವಪ್ನಾ ಸುರೇಶ್ ಅವರ ರಕ್ಷಣಾತ್ಮಕ ವಿವರಗಳಿಗೆ ನಿಯೋಜಿಸಲಾದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕೆಲವು ಆಶ್ಚರ್ಯಕರ ಹೇಳಿಕೆಗಳನ್ನು ನೀಡಿದ್ದಾರೆ

- Advertisement -
- Advertisement -

ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಯ ಮೇಲೆ ಒತ್ತಡ ಹೇರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆರೋಪಿ ಸ್ವಪ್ನಾ ಸುರೇಶ್ ಗೆ “ಸಿಎಂ ಪಿಣರಾಯಿ ವಿಜಯನ್” ಹೆಸರನ್ನು ಉಲ್ಲೇಖಿಸುವಂತೆ ಒತ್ತಡ ಹೇರಲಾಗಿತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿದ್ದು, ಈ ನಡುವೆ ಚಿನ್ನ ಕಳ್ಳಸಾಗಣೆ ಪ್ರಕರಣವು ಪ್ರತಿ ಪಕ್ಷಗಳಿಗೆ ಪ್ರಮುಖ ವಿಷಯವಾಗಿ ಮಾರ್ಪಟ್ಟಿದೆ.

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿ ಸ್ವಪ್ನಾ ಸುರೇಶ್ ಕೇರಳ ಸಿಎಂ ಪಿಣರಾಯಿ ವಿಜಯನ್ ರನ್ನು ಹೆಸರಿಸಿದ್ದಾರೆ ಎಂದು ಈ ತಿಂಗಳ ಆರಂಭದಲ್ಲಿ ತೆರಿಗೆ ಇಲಾಖೆ ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿತ್ತು. ಈ ಆರೋಪಕ್ಕೆ ಪ್ರತಿಯಾಗಿ ಪಿಣರಾಯಿ ವಿಜಯನ್, ಕೇಂದ್ರ ತನಿಖಾ ಸಂಸ್ಥೆಗಳು ‘ಸ್ವಯಂಪ್ರೇರಣೆಯಿಂದ’ ಚುನಾವಣಾ ಪ್ರಚಾರವನ್ನು ಕೈಗೆತ್ತಿಕೊಂಡಿವೆ ಎಂದು ವ್ಯಂಗ್ಯವಾಡಿದ್ದರು.

ಸ್ವಪ್ನಾ ಸುರೇಶ್ ಅವರ ರಕ್ಷಣಾತ್ಮಕ ವಿವರಗಳಿಗೆ ನಿಯೋಜಿಸಲಾದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕೆಲವು ಆಶ್ಚರ್ಯಕರ ಹೇಳಿಕೆಗಳನ್ನು ನೀಡಿದ್ದಾರೆ. ವಿಚಾರಣೆಯ ವೇಳೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಹೆಸರಿಸಲು ಸ್ವಪ್ನಾ ಸುರೇಶ್ ಅವರನ್ನು ‘ಇಡಿ’ಯು ಬಲವಂತವಾಗಿ ಒತ್ತಾಯಿಸಿತ್ತು ಎಂದು ಕೈಬರಹದ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

ಅಧಿಕಾರಿಗಳ ಪ್ರಕಾರ, ಆಡಿಯೋ ಕ್ಲಿಪ್‌ನ ಮೂಲದ ಕುರಿತಾದ ತನಿಖೆಗೆ ಸಂಬಂಧಿಸಿದಂತೆ ಪೊಲೀಸ್ ಬೆಂಗಾವಲು ಅಧಿಕಾರಿಯ ಹೇಳಿಕೆಯನ್ನು ದಾಖಲಿಸಲಾಗಿದೆ. ಇದರಲ್ಲಿ ಸ್ವಪ್ನಾ ಸುರೇಶ್ ಅವರು ಪಿಣರಾಯಿ ವಿಜಯನ್ ಅವರ ಹೆಸರನ್ನು ಉಲ್ಲೇಖಿಸಲು ಒತ್ತಾಯಿಸುವ ಕುರಿತಾದಂತೆ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ.

ಆದರೆ, ಉದ್ದೇಶಿತ ಆಡಿಯೊ ಕ್ಲಿಪ್‌ನಲ್ಲಿ ಸ್ವಪ್ನಾ ಸುರೇಶ್ ಯಾರೊಂದಿಗೆ ಮಾತನಾಡುತ್ತಿದ್ದಾರೆ ಎಂಬುದು ಆಕೆಗೆ ತಿಳಿದಿಲ್ಲ ಎಂದು ಪೊಲೀಸ್ ಬೆಂಗಾವಲು ಅಧಿಕಾರಿಯೋರ್ವರು ಹೇಳಿಕೆ ನೀಡಿದ್ದಾಗಿ ವರದಿ ತಿಳಿಸಿದೆ.

ಈ ಹಿಂದೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆದೇಶದ ಮೇರೆಗೆ ಸ್ವಪ್ನಾ ಸುರೇಶ್ ಅವರ ಚಿನ್ನ ಕಳ್ಳಸಾಗಣೆ ನಡೆದಿದೆ ಎಂಬ ಆರೋಪಕ್ಕೆ, ಪ್ರಕರಣವನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA) ಅಡಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯು ಈ ಹೇಳಿಕೆಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿತ್ತು.

2020 ರ ಜುಲೈ 5 ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಟರ್ಮಿನಲ್‌ನಲ್ಲಿ ಯುಎಇಯಿಂದ ಬಂದ ರಾಜತಾಂತ್ರಿಕ ಸಾಮಾನು ಸರಂಜಾಮುಗಳಿಂದ 14.82 ಕೋಟಿ ರೂ.ಗಳ 30 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಯಿತು.

ಈ ಪ್ರಕರಣದ ತನಿಖೆಗಾಗಿ ಆರಂಭದಲ್ಲಿ ಸರಿತ್ ಪಿಎಸ್, ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರನ್ನು ಬಂಧಿಸಲಾಗಿತ್ತು. ಇಲ್ಲಿಯವರೆಗೆ ಈ ಪ್ರಕರಣದಲ್ಲಿ ಎನ್‌ಐಎಯು 21 ಜನರನ್ನು ಬಂಧಿಸಿದೆ. ಕಳೆದ ಅಕ್ಟೋಬರ್‌ನಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಬಂಧಿಸಿದ್ದ ಸ್ವಪ್ನಾ ಅವರನ್ನು ದೀರ್ಘವಾಗಿ ವಿಚಾರಣೆ ನಡೆಸಲಾಗಿದೆ.


ಇದನ್ನೂ ಓದಿ: ಮಹಿಳಾ ದಿನಾಚರಣೆಯ ದಿನವೇ ಪೊದೆಯಲ್ಲಿ ಪತ್ತೆಯಾದ ನವಜಾತ ಹೆಣ್ಣುಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...