Homeಮುಖಪುಟವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ - ಬಂಧನ!

ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

- Advertisement -
- Advertisement -

ಪ್ಯಾರಿಸ್‌ನಿಂದ ನವದೆಹಲಿಗೆ ಹೋಗುವ ಮಾರ್ಗದಲ್ಲಿ ಏರ್ ಫ್ರಾನ್ಸ್ ವಿಮಾನವೊಂದು ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾದ ಘಟನೆ ನಡೆದಿದೆ. ಇದಕ್ಕೆ ಕಾರಣವಾದದ್ದು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದ ಭಾರತೀಯ ಪ್ರಯಾಣಿಕರೊಬ್ಬರ ಅಶಿಸ್ತು ಮತ್ತು ಪ್ರಯಾಣಿಕರಿಗೆ ಬೆದರಿಕೆ ಒಡ್ಡುವ ವರ್ತನೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರಯಾಣಿಕನ ಹೆಸರನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ತಕ್ಷಣ ತುರ್ತು ನಿಲುಗಡೆ ಮಾಡಿ ವ್ಯಕ್ತಿಯನ್ನು ವಿಮಾನದಿಂದ ಇಳಿಸಲಾಗಿದೆ. ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ನಡೆದದ್ದು ಏನು…?

ಬಲ್ಗೇರಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯಾಗಿದ್ದ ಇವಾಯಿಲೊ ಏಂಜೆಲೋವ್ ಅವರನ್ನು ಉಲ್ಲೆಖಿಸಿರುವ ರಾಯಿಟರ್ಸ್, ’ವಿಮಾನ ಟೇಕ್-ಆಫ್ ಆದ ಕೂಡಲೇ  ಬಂಧಿತ ವ್ಯಕ್ತಿ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದನು. ಇತರ ಪ್ರಯಾಣಿಕರೊಂದಿಗೆ ಜಗಳವಾಡಿದ್ದಾರೆ. ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ,  ಹಲವಾರು ಸಲ ಕಾಕ್ ಪಿಟ್ ಬಾಗಿಲನ್ನು ಹೊಡೆಯಲು ಆರಂಭಿಸಿದ್ದರು’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ವಿಮಾನದಲ್ಲಿದ್ದ ಸಿಖ್ ಪ್ಯಾಸೆಂಜರ್‌ಗಳನ್ನು ಬೊಟ್ಟು ಮಾಡಿ ಮೋದಿ ಮೋದಿ ಎಂದು ಜೋರಾಗಿ ಕಿರುಚಾಡತೊಡಗಿದ್ದಾರೆ,  ಸಿಖ್ ಯುವಕರು ಪ್ರತಿಕ್ರಿಯಿಸಿದಾಗ ಅವರನ್ನು ಬೈಯುತ್ತಾ ಜಗಳಕ್ಕೆ ನಿಂತಿದ್ದಾರೆ. ವಿಮಾನದ ಪರಿಚಾರಕರು ಮತ್ತು ಸಹಯಾತ್ರಿಕರು ಕೂಡಾ ವಿರೋಧಿಸಿದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸಹ ಪ್ರಯಾಣಿಕರ ಗುರುತಿನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ವಿಡಿಯೋದಲ್ಲಿ ಕೇಳಬಹುದು, “ಯೇಸು ಇನ್ನು ಹೊರಡಬೇಕಾಗುತ್ತದೆ” ಮತ್ತು “ಉಡ್ತಾ ಪಂಜಾಬ್”, ಜೈ ಹಿಂದ್, ಮೋದಿ ಎಂದು ಜೋರು ಜೋರಾಗಿ ಕೂಗುತ್ತಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

’ಉಡ್ತಾ ಪಂಜಾಬ್’ ಹೆಸರಿನ ಬಾಲಿವುಡ್ ಚಲನಚಿತ್ರವೊಂದರಲ್ಲಿ ಪಂಜಾಬ್‌ನಲ್ಲಿ ಡ್ರಗ್ಸ್ ಸರಬರಾಜು, ಬಳಕೆ ಬಗ್ಗೆ ಅತಿರೇಕದ ವಿಚಾರಗಳನ್ನು ತೋರಿಸಲಾಗಿತ್ತು.

“ಮೋದಿ, ನನ್ನ ಸಹೋದರ ಮೋದಿ … ಮೋದಿ, ಮೋದಿ,” ಎಂದು ಆ ವ್ಯಕ್ತಿ ಹೇಳುತ್ತಾರೆ. “ಮೋದಿ ಕರೆ ಮಾಡುತ್ತಿದ್ದಾರೆ, ಇಲ್ಲಿಗೆ ಬನ್ನಿ” ಎಂಬ ಅಸಂಬದ್ಧ ಮಾತುಗಳನ್ನು ಆಡುತ್ತಾ, ಕಿರುಚುತ್ತಾ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾರೆ. ವಿಮಾನ ಸಿಬ್ಬಂದಿ ತಡೆಯಲು ಬಂದರೆ ಅವರ ಮೇಲೂ ಹಲ್ಲೆ ಮಾಡಿದ್ದಾನೆ. ಕೆಲವು ಸೆಕೆಂಡುಗಳ ನಂತರ, ತನ್ನ ಸುತ್ತಲಿನವರನ್ನು ನಿಂದಿಸುತ್ತಾ ಬೆದರಿಕೆ ಹಾಕಿದ್ದಾನೆ.

ಆರೋಪಿಯ ವರ್ತನೆಗೆ ಯಾವುದೇ ಸಮಂಜಸವಾದ ವಿವರಣೆಯಿಲ್ಲ, ನಾವು ಅವರ ಕಾರ್ಯಗಳು ಮತ್ತು ಉದ್ದೇಶಗಳನ್ನು ತನಿಖೆ ಮಾಡುತ್ತಿದ್ದೇವೆ” ಎಂದು ತನಿಖಾ ಸಂಸ್ಥೆ ಅಧಿಕಾರಿ ಇವಾಯಿಲೊ ಏಂಜೆಲೋವ್ ಹೇಳಿದ್ದಾರೆ.

ಸದ್ಯ ಈ ವ್ಯಕ್ತಿಗೆ ನ್ಯಾಯಾಲಯದಿಂದ ನೇಮಕಗೊಂಡ ರಕ್ಷಣಾ ವಕೀಲ ಮತ್ತು ಇಂಟರ್ಪ್ರಿಟರ್ ನೀಡಲಾಗಿದೆ. ಅವರ ಅಶಿಸ್ತಿನ ವರ್ತನೆಯ ಬಗ್ಗೆ ಬಲ್ಗೇರಿಯಾದ ಭಾರತದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋ ಹಂಚಿಕೊಂಡಿರುವ ನೆಟ್ಟಿಗರು ಭಾರತದ ಮರ್ಯಾದೆ ತೆಗೆದಿದ್ದಾನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೆ ಕೆಲವರು ಶೇಮ್ ಶೇಮ್ ಎಂದಿದ್ದಾರೆ. ಇನ್ನೊಬ್ಬರು ಪ್ರಧಾನಿ ಮೋದಿಯವರನ್ನು ಟ್ಯಾಗ್ ಮಾಡಿ ಶುಭಾಶಯಗಳು ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ದೇವಸ್ಥಾನದ ಕಾಣಿಕ ಡಬ್ಬಿ ಕಳವು: ಬಜರಂಗದಳ ಸಂಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...