Homeಮುಖಪುಟವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ - ಬಂಧನ!

ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

- Advertisement -
- Advertisement -

ಪ್ಯಾರಿಸ್‌ನಿಂದ ನವದೆಹಲಿಗೆ ಹೋಗುವ ಮಾರ್ಗದಲ್ಲಿ ಏರ್ ಫ್ರಾನ್ಸ್ ವಿಮಾನವೊಂದು ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾದ ಘಟನೆ ನಡೆದಿದೆ. ಇದಕ್ಕೆ ಕಾರಣವಾದದ್ದು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದ ಭಾರತೀಯ ಪ್ರಯಾಣಿಕರೊಬ್ಬರ ಅಶಿಸ್ತು ಮತ್ತು ಪ್ರಯಾಣಿಕರಿಗೆ ಬೆದರಿಕೆ ಒಡ್ಡುವ ವರ್ತನೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರಯಾಣಿಕನ ಹೆಸರನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ತಕ್ಷಣ ತುರ್ತು ನಿಲುಗಡೆ ಮಾಡಿ ವ್ಯಕ್ತಿಯನ್ನು ವಿಮಾನದಿಂದ ಇಳಿಸಲಾಗಿದೆ. ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ನಡೆದದ್ದು ಏನು…?

ಬಲ್ಗೇರಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯಾಗಿದ್ದ ಇವಾಯಿಲೊ ಏಂಜೆಲೋವ್ ಅವರನ್ನು ಉಲ್ಲೆಖಿಸಿರುವ ರಾಯಿಟರ್ಸ್, ’ವಿಮಾನ ಟೇಕ್-ಆಫ್ ಆದ ಕೂಡಲೇ  ಬಂಧಿತ ವ್ಯಕ್ತಿ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದನು. ಇತರ ಪ್ರಯಾಣಿಕರೊಂದಿಗೆ ಜಗಳವಾಡಿದ್ದಾರೆ. ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ,  ಹಲವಾರು ಸಲ ಕಾಕ್ ಪಿಟ್ ಬಾಗಿಲನ್ನು ಹೊಡೆಯಲು ಆರಂಭಿಸಿದ್ದರು’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ವಿಮಾನದಲ್ಲಿದ್ದ ಸಿಖ್ ಪ್ಯಾಸೆಂಜರ್‌ಗಳನ್ನು ಬೊಟ್ಟು ಮಾಡಿ ಮೋದಿ ಮೋದಿ ಎಂದು ಜೋರಾಗಿ ಕಿರುಚಾಡತೊಡಗಿದ್ದಾರೆ,  ಸಿಖ್ ಯುವಕರು ಪ್ರತಿಕ್ರಿಯಿಸಿದಾಗ ಅವರನ್ನು ಬೈಯುತ್ತಾ ಜಗಳಕ್ಕೆ ನಿಂತಿದ್ದಾರೆ. ವಿಮಾನದ ಪರಿಚಾರಕರು ಮತ್ತು ಸಹಯಾತ್ರಿಕರು ಕೂಡಾ ವಿರೋಧಿಸಿದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸಹ ಪ್ರಯಾಣಿಕರ ಗುರುತಿನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ವಿಡಿಯೋದಲ್ಲಿ ಕೇಳಬಹುದು, “ಯೇಸು ಇನ್ನು ಹೊರಡಬೇಕಾಗುತ್ತದೆ” ಮತ್ತು “ಉಡ್ತಾ ಪಂಜಾಬ್”, ಜೈ ಹಿಂದ್, ಮೋದಿ ಎಂದು ಜೋರು ಜೋರಾಗಿ ಕೂಗುತ್ತಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

’ಉಡ್ತಾ ಪಂಜಾಬ್’ ಹೆಸರಿನ ಬಾಲಿವುಡ್ ಚಲನಚಿತ್ರವೊಂದರಲ್ಲಿ ಪಂಜಾಬ್‌ನಲ್ಲಿ ಡ್ರಗ್ಸ್ ಸರಬರಾಜು, ಬಳಕೆ ಬಗ್ಗೆ ಅತಿರೇಕದ ವಿಚಾರಗಳನ್ನು ತೋರಿಸಲಾಗಿತ್ತು.

“ಮೋದಿ, ನನ್ನ ಸಹೋದರ ಮೋದಿ … ಮೋದಿ, ಮೋದಿ,” ಎಂದು ಆ ವ್ಯಕ್ತಿ ಹೇಳುತ್ತಾರೆ. “ಮೋದಿ ಕರೆ ಮಾಡುತ್ತಿದ್ದಾರೆ, ಇಲ್ಲಿಗೆ ಬನ್ನಿ” ಎಂಬ ಅಸಂಬದ್ಧ ಮಾತುಗಳನ್ನು ಆಡುತ್ತಾ, ಕಿರುಚುತ್ತಾ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾರೆ. ವಿಮಾನ ಸಿಬ್ಬಂದಿ ತಡೆಯಲು ಬಂದರೆ ಅವರ ಮೇಲೂ ಹಲ್ಲೆ ಮಾಡಿದ್ದಾನೆ. ಕೆಲವು ಸೆಕೆಂಡುಗಳ ನಂತರ, ತನ್ನ ಸುತ್ತಲಿನವರನ್ನು ನಿಂದಿಸುತ್ತಾ ಬೆದರಿಕೆ ಹಾಕಿದ್ದಾನೆ.

ಆರೋಪಿಯ ವರ್ತನೆಗೆ ಯಾವುದೇ ಸಮಂಜಸವಾದ ವಿವರಣೆಯಿಲ್ಲ, ನಾವು ಅವರ ಕಾರ್ಯಗಳು ಮತ್ತು ಉದ್ದೇಶಗಳನ್ನು ತನಿಖೆ ಮಾಡುತ್ತಿದ್ದೇವೆ” ಎಂದು ತನಿಖಾ ಸಂಸ್ಥೆ ಅಧಿಕಾರಿ ಇವಾಯಿಲೊ ಏಂಜೆಲೋವ್ ಹೇಳಿದ್ದಾರೆ.

ಸದ್ಯ ಈ ವ್ಯಕ್ತಿಗೆ ನ್ಯಾಯಾಲಯದಿಂದ ನೇಮಕಗೊಂಡ ರಕ್ಷಣಾ ವಕೀಲ ಮತ್ತು ಇಂಟರ್ಪ್ರಿಟರ್ ನೀಡಲಾಗಿದೆ. ಅವರ ಅಶಿಸ್ತಿನ ವರ್ತನೆಯ ಬಗ್ಗೆ ಬಲ್ಗೇರಿಯಾದ ಭಾರತದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋ ಹಂಚಿಕೊಂಡಿರುವ ನೆಟ್ಟಿಗರು ಭಾರತದ ಮರ್ಯಾದೆ ತೆಗೆದಿದ್ದಾನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೆ ಕೆಲವರು ಶೇಮ್ ಶೇಮ್ ಎಂದಿದ್ದಾರೆ. ಇನ್ನೊಬ್ಬರು ಪ್ರಧಾನಿ ಮೋದಿಯವರನ್ನು ಟ್ಯಾಗ್ ಮಾಡಿ ಶುಭಾಶಯಗಳು ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ದೇವಸ್ಥಾನದ ಕಾಣಿಕ ಡಬ್ಬಿ ಕಳವು: ಬಜರಂಗದಳ ಸಂಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...