Homeಮುಖಪುಟವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ - ಬಂಧನ!

ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

- Advertisement -
- Advertisement -

ಪ್ಯಾರಿಸ್‌ನಿಂದ ನವದೆಹಲಿಗೆ ಹೋಗುವ ಮಾರ್ಗದಲ್ಲಿ ಏರ್ ಫ್ರಾನ್ಸ್ ವಿಮಾನವೊಂದು ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾದ ಘಟನೆ ನಡೆದಿದೆ. ಇದಕ್ಕೆ ಕಾರಣವಾದದ್ದು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದ ಭಾರತೀಯ ಪ್ರಯಾಣಿಕರೊಬ್ಬರ ಅಶಿಸ್ತು ಮತ್ತು ಪ್ರಯಾಣಿಕರಿಗೆ ಬೆದರಿಕೆ ಒಡ್ಡುವ ವರ್ತನೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರಯಾಣಿಕನ ಹೆಸರನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ತಕ್ಷಣ ತುರ್ತು ನಿಲುಗಡೆ ಮಾಡಿ ವ್ಯಕ್ತಿಯನ್ನು ವಿಮಾನದಿಂದ ಇಳಿಸಲಾಗಿದೆ. ಆತನ ಮೇಲೆ ವಿಮಾನ ಸುರಕ್ಷತೆಗೆ ಅಪಾಯ ಉಂಟುಮಾಡಿದ ಪ್ರಕರಣ ದಾಖಲಾಗಿದೆ. ಅಪರಾಧ ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ನಡೆದದ್ದು ಏನು…?

ಬಲ್ಗೇರಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯಾಗಿದ್ದ ಇವಾಯಿಲೊ ಏಂಜೆಲೋವ್ ಅವರನ್ನು ಉಲ್ಲೆಖಿಸಿರುವ ರಾಯಿಟರ್ಸ್, ’ವಿಮಾನ ಟೇಕ್-ಆಫ್ ಆದ ಕೂಡಲೇ  ಬಂಧಿತ ವ್ಯಕ್ತಿ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದನು. ಇತರ ಪ್ರಯಾಣಿಕರೊಂದಿಗೆ ಜಗಳವಾಡಿದ್ದಾರೆ. ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ,  ಹಲವಾರು ಸಲ ಕಾಕ್ ಪಿಟ್ ಬಾಗಿಲನ್ನು ಹೊಡೆಯಲು ಆರಂಭಿಸಿದ್ದರು’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ವಿಮಾನದಲ್ಲಿದ್ದ ಸಿಖ್ ಪ್ಯಾಸೆಂಜರ್‌ಗಳನ್ನು ಬೊಟ್ಟು ಮಾಡಿ ಮೋದಿ ಮೋದಿ ಎಂದು ಜೋರಾಗಿ ಕಿರುಚಾಡತೊಡಗಿದ್ದಾರೆ,  ಸಿಖ್ ಯುವಕರು ಪ್ರತಿಕ್ರಿಯಿಸಿದಾಗ ಅವರನ್ನು ಬೈಯುತ್ತಾ ಜಗಳಕ್ಕೆ ನಿಂತಿದ್ದಾರೆ. ವಿಮಾನದ ಪರಿಚಾರಕರು ಮತ್ತು ಸಹಯಾತ್ರಿಕರು ಕೂಡಾ ವಿರೋಧಿಸಿದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸಹ ಪ್ರಯಾಣಿಕರ ಗುರುತಿನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ವಿಡಿಯೋದಲ್ಲಿ ಕೇಳಬಹುದು, “ಯೇಸು ಇನ್ನು ಹೊರಡಬೇಕಾಗುತ್ತದೆ” ಮತ್ತು “ಉಡ್ತಾ ಪಂಜಾಬ್”, ಜೈ ಹಿಂದ್, ಮೋದಿ ಎಂದು ಜೋರು ಜೋರಾಗಿ ಕೂಗುತ್ತಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ: ಪಿಣರಾಯಿ ವಿಜಯನ್ ಹೆಸರನ್ನು ಉಲ್ಲೇಖಿಸುವಂತೆ ಆರೋಪಿಗೆ ಒತ್ತಡ!

’ಉಡ್ತಾ ಪಂಜಾಬ್’ ಹೆಸರಿನ ಬಾಲಿವುಡ್ ಚಲನಚಿತ್ರವೊಂದರಲ್ಲಿ ಪಂಜಾಬ್‌ನಲ್ಲಿ ಡ್ರಗ್ಸ್ ಸರಬರಾಜು, ಬಳಕೆ ಬಗ್ಗೆ ಅತಿರೇಕದ ವಿಚಾರಗಳನ್ನು ತೋರಿಸಲಾಗಿತ್ತು.

“ಮೋದಿ, ನನ್ನ ಸಹೋದರ ಮೋದಿ … ಮೋದಿ, ಮೋದಿ,” ಎಂದು ಆ ವ್ಯಕ್ತಿ ಹೇಳುತ್ತಾರೆ. “ಮೋದಿ ಕರೆ ಮಾಡುತ್ತಿದ್ದಾರೆ, ಇಲ್ಲಿಗೆ ಬನ್ನಿ” ಎಂಬ ಅಸಂಬದ್ಧ ಮಾತುಗಳನ್ನು ಆಡುತ್ತಾ, ಕಿರುಚುತ್ತಾ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾರೆ. ವಿಮಾನ ಸಿಬ್ಬಂದಿ ತಡೆಯಲು ಬಂದರೆ ಅವರ ಮೇಲೂ ಹಲ್ಲೆ ಮಾಡಿದ್ದಾನೆ. ಕೆಲವು ಸೆಕೆಂಡುಗಳ ನಂತರ, ತನ್ನ ಸುತ್ತಲಿನವರನ್ನು ನಿಂದಿಸುತ್ತಾ ಬೆದರಿಕೆ ಹಾಕಿದ್ದಾನೆ.

ಆರೋಪಿಯ ವರ್ತನೆಗೆ ಯಾವುದೇ ಸಮಂಜಸವಾದ ವಿವರಣೆಯಿಲ್ಲ, ನಾವು ಅವರ ಕಾರ್ಯಗಳು ಮತ್ತು ಉದ್ದೇಶಗಳನ್ನು ತನಿಖೆ ಮಾಡುತ್ತಿದ್ದೇವೆ” ಎಂದು ತನಿಖಾ ಸಂಸ್ಥೆ ಅಧಿಕಾರಿ ಇವಾಯಿಲೊ ಏಂಜೆಲೋವ್ ಹೇಳಿದ್ದಾರೆ.

ಸದ್ಯ ಈ ವ್ಯಕ್ತಿಗೆ ನ್ಯಾಯಾಲಯದಿಂದ ನೇಮಕಗೊಂಡ ರಕ್ಷಣಾ ವಕೀಲ ಮತ್ತು ಇಂಟರ್ಪ್ರಿಟರ್ ನೀಡಲಾಗಿದೆ. ಅವರ ಅಶಿಸ್ತಿನ ವರ್ತನೆಯ ಬಗ್ಗೆ ಬಲ್ಗೇರಿಯಾದ ಭಾರತದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋ ಹಂಚಿಕೊಂಡಿರುವ ನೆಟ್ಟಿಗರು ಭಾರತದ ಮರ್ಯಾದೆ ತೆಗೆದಿದ್ದಾನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೆ ಕೆಲವರು ಶೇಮ್ ಶೇಮ್ ಎಂದಿದ್ದಾರೆ. ಇನ್ನೊಬ್ಬರು ಪ್ರಧಾನಿ ಮೋದಿಯವರನ್ನು ಟ್ಯಾಗ್ ಮಾಡಿ ಶುಭಾಶಯಗಳು ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ದೇವಸ್ಥಾನದ ಕಾಣಿಕ ಡಬ್ಬಿ ಕಳವು: ಬಜರಂಗದಳ ಸಂಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...