Homeಫ್ಯಾಕ್ಟ್‌ಚೆಕ್ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಪ್ರಧಾನಿ ಮೋದಿ ಅವರು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ತಮ್ಮ ಮೊದಲ ರ‍್ಯಾಲಿಯಲ್ಲಿ ಭಾನುವಾರ ಮಾತನಾಡಿದರು. ಆದರೆ ರ್ಯಾಲಿಗೆ ನಿರೀಕ್ಷಿತ ಸಂಖ್ಯೆಯಲ್ಲಿ ಜನರು ಭಾಗವಹಿಸಿರಲಿಲ್ಲ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾತ್ರ ಭಾರೀ ಜನ ಸೇರಿರುವುದಾಗಿ ಹಲವು ಫೋಟೊಗಳು ಹರಿದಾಡತೊಡಗಿದವು. ಆ ಚಿತ್ರಗಳು ಯಾವುವು ಎಂಬುದನ್ನು ಪರಿಶೀಲಿಸೋಣ.

ಚಿತ್ರ 1

ಈ ಒಂದು ಚಿತ್ರವನ್ನು ಬಿಜೆಪಿ ತಮಿಳುನಾಡು, ಬಿಜೆಪಿ ಪಂಜಾಬ್ ಮತ್ತು ಬಿಜೆಪಿ ಸದಸ್ಯರಾದ ತಾಜಿಂದರ್ ಬಗ್ಗಾ, ಎಸ್‌ಜಿ ಸೂರ್ಯ, ಭನು ಜಲನ್ ಮತ್ತು ಒಪಿ ಮಿಶ್ರಾ ಹಂಚಿಕೊಂಡಿದ್ದಾರೆ.

ಕಳೆದ ವಾರ ಕಾಂಗ್ರೆಸ್, ಸಿಪಿಐ (ಎಂ) ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ ಜಂಟಿ ರ‍್ಯಾಲಿ ನಡೆದಿತ್ತು. ಆಗಲೂ ಹಲವಾರು ಕಾಂಗ್ರೆಸ್ ಬೆಂಬಲಿಗರು ಇದೇ ಚಿತ್ರವನ್ನು ಹಂಚಿಕೊಂಡಿದ್ದಾರೆ ಎಂಬುದು ವಿಶೇಷ.

ಫ್ಯಾಕ್ಟ್-ಚೆಕ್

ಆಲ್ಟ್ ನ್ಯೂಸ್ ನಡೆಸಿದ ರಿವರ್ಸ್ ಇಮೇಜ್ ಹುಡುಕಾಟದ ಪ್ರಕಾರ, ಪ್ರಚಲಿತದಲ್ಲಿ ಬಿಜೆಪಿ ಬಳಸುತ್ತಿರುವ ಈ ಚಿತ್ರವು 2019ರಲ್ಲಿ ಎಡಪಂಥೀಯ ನೇತೃತ್ವದ ರಂಗ ನಡೆಸಿದ ಬೃಹತ್ ರ‍್ಯಾಲಿಯ ಚಿತ್ರವಾಗಿದೆ.

ಈ ಚಿತ್ರವನ್ನು 2019 ರಲ್ಲಿ ಸೋಷಿಯಲ್ ನ್ಯೂಸ್ XYZ ಪ್ರಕಟಿಸಿತು, ಇದು ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಎಡರಂಗ ನೇತೃತ್ವದಲ್ಲಿ ನಡೆದ ರ‍್ಯಾಲಿಯ ಚಿತ್ರ ಎಂಬುದು ಸ್ಪಷ್ಟವಾಗಿದೆ. ಹಾಗೆಯೇ ಶೀರ್ಷಿಕೆಯೊಂದಿಗೆ ಅದು ಪ್ರಕಟಿಸಿದೆ. ಫೆಬ್ರವರಿ 3, 2019ರಂದು ನಡೆದ ಈ ರ‍್ಯಾಲಿಯ ಚಿತ್ರವನ್ನು ಐಎಎನ್‌ಎಸ್ ಪ್ರಕಟಿಸಿದೆ ಎಂದು ವರದಿ ಹೇಳುತ್ತದೆ.

ಚಿತ್ರವು ಭಾರಿ ಜನಸಮೂಹವನ್ನು ತೋರಿಸುತ್ತದೆ, ಇದನ್ನು ಮುಂಭಾಗದ ಎಡ ಪಕ್ಷಗಳ ಕೆಂಪು ಧ್ವಜಗಳಿಂದ ಗುರುತಿಸಲಾಗಿದೆ. ಬಿಜೆಪಿ ಬೆಂಬಲಿಗರು ಟ್ವೀಟ್ ಮಾಡಿದ ಚಿತ್ರವು ಸ್ವಲ್ಪ ಮಸುಕಾದ ಆವೃತ್ತಿಯಾಗಿದ್ದು, ಕೆಂಪು ಬಣ್ಣವನ್ನು ಕೇಸರಿ ಎಂದು ತಪ್ಪಾಗಿ ಗ್ರಹಿಸುವಂತೆ ಮಾಡಲಾಗಿದೆ.

ಚಿತ್ರ 2

ಎರಡನೇ ಚಿತ್ರವನ್ನು ಬಿಜೆಪಿ ಸದಸ್ಯ ಒ.ಪಿ.ಮಿಶ್ರಾ ಅವರು “ಹೌ ಜೋಶ್” ಎಂದು ಉತ್ಸುಕರಿತರಾಗಿ ಹೇಳಿ, ಶೇರ್ ಮಾಡಿದ್ದಾರೆ.

ಫ್ಯಾಕ್ಟ್-ಚೆಕ್

ರಿವರ್ಸ್ ಇಮೇಜ್ ಹುಡುಕಾಟವು ಈ ಚಿತ್ರವು 2014 ರಲ್ಲಿ ಎಡಪಂಥಿಯ ನೇತೃತ್ವದ ಬೃಹತ್ ರ‍್ಯಾಲಿಯನ್ನು ಪ್ರತಿನಿಧಿಸುತ್ತದೆ ಎಂದು ಸಾಬೀತು ಮಾಡಿದೆ.

ಫೇಕ್ ನ್ಯೂಸ್ ಹೆಚ್ಚಳವು ಚುನಾವಣೆಗಳ ಮೊದಲು ಕಂಡುಬರುವುದು ಸಾಮಾನ್ಯ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಇದಕ್ಕೆ ಹೊರತಾಗಿಲ್ಲ. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಪಿಎಂ ಮೋದಿಯವರ ಭಾಷಣಕ್ಕೆ ಹೆಚ್ಚಿನ ಜನಸಮೂಹ ಸೇರದಿರುವುದು ಗಮನಾರ್ಹವಾಗಿದೆ. ಮೂರು ರೈಲು ಬಾಡಿಗೆ ಪಡೆದು ಜನರನ್ನು ತಂದರೂ ಅಲ್ಲಿ ದೊಡ್ಡ ಜನಸಂದಣಿ ಇರಲೇ ಇಲ್ಲ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...