Homeಕರ್ನಾಟಕಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ

- Advertisement -
- Advertisement -

“ಬೆಂಗಳೂರನ್ನು ಸ್ವಚ್ಛವಾಗಿಡಲು ನಾವು ಮಹಿಳಾ ಪೌರ ಕಾರ್ಮಿಕರು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಕೆಲಸ ಮಾಡುತ್ತೇವೆ. ಆದರೆ ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ. ಇದರಿಂದ ಹತ್ತಾರು ಮಹಿಳಾ ಕಾರ್ಮಿಕರಿಗೆ ಅಲರ್ಜಿ ಸೇರಿದಂತೆ ಕಿಡ್ನಿ ತೊಂದರೆಗಳಾಗಿವೆ” ಎಂದು 25 ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಆಂಜನಮ್ಮ ಎಂಬುವವರು ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ.

“ನಾನು ಕಳೆದ 25 ವರ್ಷಗಳಿಂದ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 39ರಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಪತಿ ಕೂಡ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕೇವಲ 500 ರೂ. ವೇತನ ಇದ್ದಾಗಿನಿಂದಲೂ ನಾವು ಈ ಕೆಲಸ ಮಾಡುತ್ತಿದ್ದೇವೆ. ಆದರೆ ನಮ್ಮ ಉದ್ಯೋಗ ಇನ್ನೂ ಖಾಯಂ ಆಗಿಲ್ಲ. ಈ ಕುರಿತು ನಾವು ಪ್ರತಿಭಾರಿಯೂ ಹೋರಾಟ ಮಾಡುತ್ತಲೆ ಇದ್ದೇವೆ. ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ” ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಅನಾರೋಗ್ಯದಂತಹ ತುರ್ತು ಸಂದರ್ಭಗಳಲ್ಲಿಯೂ ಸಹ ಮಹಿಳೆಯರಿಗೆ ಯಾವುದೇ ರಜೆಗಳು ಇರುವುದಿಲ್ಲ. ನಾವು ಮಾಸಿಕ ಋತುಚಕ್ರಕ್ಕೆ ಒಳಗಾದಾಗ ಇನ್ನಿಲ್ಲದ ಸಂಕಷ್ಟಗಳನ್ನು ಎದುರಿಸಬೇಕಾಗಿದೆ. ಕೆಲವು ದಿನಗಳ ಕಾಲ ಪಾಲಿಕೆಯೆ ನಮಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿತ್ತು. ಆದರೆ ಆ ಊಟದಲ್ಲಿ ಹುಳಗಳು ಕಂಡಬಂದಿದ್ದವು. ಬೇಕಾಬಿಟ್ಟಿ ಅಡಿಗೆ ಮಾಡಿ ತಂದುಕೊಡುತ್ತಿದ್ದರು. ಈಗ ಅದನ್ನೂ ನಿಲ್ಲಿಸಲಾಗಿದೆ ಎಂದು ಹೇಳಿದರು.

ನಮಗೆ ಈಗ ಕೇವಲ 12 ಸಾವಿರ ವೇತನ ನೀಡುತ್ತಿದ್ದಾರೆ. ನಮಗೆ ನ್ಯಾಯಯುತವಾದ ಯಾವುದೇ ಸೌಲಭ್ಯಗಳನ್ನೂ ನೀಡುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿದ್ದೇವೆ. ಅದರಿಂದ ವೇತನವೇನೋ ಸ್ವಲ್ಪ ಹೆಚ್ಚಾಯಿತು ಎನ್ನುವುದನ್ನು ಬಿಟ್ಟರೆ ಉಳಿದ ಬೇಡಿಕೆಗಳೆಲ್ಲಾ ಹಾಗೇ ಉಳಿದಿವೆ ಎಂದು ಹೇಳಿದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ 8 ಹಂತದ ಮತದಾನ: ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ

ಎಷ್ಟೋ ಜನರನ್ನು ಈಗಾಗಲೇ ಕೆಲಸದಿಂದ ತೆಗೆದುಹಾಕಲಾಗಿದೆ. ಅವರ ಹುದ್ದೆ ಖಾಯಂ ಆಗಿಲ್ಲವಾದ್ದರಿಂದ ಉದ್ಯೋಗ ಕಳೆದುಕೊಂಡವರೆಲ್ಲರೂ ಈಗ ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗದಿಂದ ವಜಾಗೊಳಿಸಿದ ಸಂದರ್ಭದಲ್ಲಿ ಕಾರ್ಮಿಕರಿಗೆ ನೀಡುತ್ತೇವೆ ಎನ್ನಲಾಗಿದ್ದ 10 ಲಕ್ಷ ಹಣವನ್ನೂ ನೀಡಿಲ್ಲ. ಈ ಕಡೆ ಉದ್ಯೋಗವೂ ಖಾಯಂ ಆಗಿಲ್ಲ. ನಾವು ಏನು ಮಾಡಬೇಕು? ಬಯೋ ಮೆಟ್ರಿಕ್ ಬಂದಿದ್ದರಿಂದ ಪ್ರತಿ ತಿಂಗಳೂ 7-8 ನೇ ತಾರೀಖಿನಂದು ವೇತನ ಬರುತ್ತಿದೆ ಅಷ್ಟೆ. ಆದರೆ ಕೇವಲ 12 ಸಾವಿರ ವೇತನದಲ್ಲಿ ನಮ್ಮ ಮನೆ, ಮಕ್ಕಳ ಶಿಕ್ಷಣ, ಆರೋಗ್ಯ ಮುಂತಾದ ಎಲ್ಲವನ್ನೂ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ನಮಗೆ ಕನಿಷ್ಠ 21 ಸಾವಿರ ವೇತನ ಖಾತ್ರಿಗೊಳಿಸಿ ಎಂದು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೆಲಸದಿಂದ ವಜಾಗೊಂಡವರನ್ನು ಅವರ ಮಕ್ಕಳೂ ನೋಡಿಕೊಳ್ಳುತ್ತಿಲ್ಲ. ಏಕೆಂದರೆ ಕೊರೊನಾ ಕಾರಣದಿಂದ ಅವರ ಮಕ್ಕಳೂ ಸಹ ಉದ್ಯೋಗ ಕಳೆದುಕೊಂಡಿದ್ದಾರೆ. ಅದೂ ಅಲ್ಲದೇ ಅವರೂ ಹೆಚ್ಚಿನ ಶಿಕ್ಷಣ ಪಡೆದುಕೊಂಡಿಲ್ಲ. ಇನ್ನು ಈ ಕಾಲದಲ್ಲಿ ಯಾವ ಮಕ್ಕಳು ತಮ್ಮ ತಂದೆ-ತಾಯಿಯನ್ನು ನೋಡಿಕೊಳ್ಳುತ್ತಾರೆ. ಹಾಗಾಗಿ ಕೆಲಸದಿಂದ ವಜಾಗೊಂಡವರೆಲ್ಲರೂ ವಾಸ್ತವದಲ್ಲಿ ಬೀದಿಯಲ್ಲಿದ್ದಾರೆ ಎಂದು ವಿವರಿಸಿದರು.

“ನಾವು ಜೀವನ ಸಾಗಿಸುವುದೇ ಕಷ್ಟವಾಗಿದೆ. ನಮಗೆ ಜೀವನದಲ್ಲಿ ಏನೂ ಸಿಕ್ಕಿಲ್ಲ. ಈಗ ನಾವು ಸಂಪೂರ್ಣ ಸೋತಿದ್ದೇವೆ. ನಮ್ಮ ಆರೋಗ್ಯವನ್ನೂ ಕಳೆದುಕೊಂಡಿದ್ದೇವೆ. ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ ಮತ್ತು ಜೀವನವನ್ನು ಮುಡಿಪಾಗಿಟ್ಟಿದ್ದೇವೆ ಎಂಬುದನ್ನು ನಮ್ಮ ಮೇಲಧಿಕಾರಿಗಳು ಅರಿತುಕೊಳ್ಳಬೇಕು. ಈ ಸಮಾಜಕ್ಕಾಗಿ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರ ಗುರುತಿಸಬೇಕು. ನಮ್ಮ ಹಕ್ಕುಗಳನ್ನು ಕಾಪಾಡಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...