Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

ಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

- Advertisement -
- Advertisement -

| ನೀಲಗಾರ |

ಯಾವುದೇ ಚುನಾವಣೆಯ ಫಲಿತಾಂಶ ಬರುವ ಮುಂಚೆ ಎರಡು ಗುಂಪುಗಳಿಗೆ ಅದರ ವಾಸನೆ ಹತ್ತಿರುತ್ತದೆ ಎನ್ನಲಾಗುತ್ತದೆ. ಒಂದು ಉದ್ಯಮಿಗಳ ಗುಂಪು. ಇನ್ನೊಂದು ಅಧಿಕಾರಿಗಳ ಗುಂಪು. ಆದರೆ, ನರೇಂದ್ರ ಮೋದಿಯವರು ಮತ್ತು ಅವರ ತಂಡ ಹುಟ್ಟಿಸಿರುವ ಭೀತಿಯ ವಾತಾವರಣದಲ್ಲಿ ಯಾವುದೇ ಅಧಿಕಾರಿ ಅಥವಾ ಉದ್ದಿಮೆಪತಿ ಅವರ ವಿರುದ್ಧ ಮಾತನಾಡುವ ಪರಿಸ್ಥಿತಿ ಇಲ್ಲ.

ಸಮಾಜದಲ್ಲಿ ಸಾಮಾನ್ಯವಾಗಿ ನಿರ್ಭೀತಿಯಿಂದ ಮಾತಾಡುವ ಸಾಹಿತಿಗಳು, ಕಲಾವಿದರೇ ಹೆದರಿ ನಡುಗುವಂತಹ ವಾತಾವರಣ ಇದೆ. ಧಾಬೋಲ್ಕರ್, ಪಾನ್ಸರೆ, ಕಲಬುರ್ಗಿ, ಗೌರಿ ಲಂಕೇಶ್, ಜಸ್ಟೀಸ್ ಲೋಯಾರೂ ಸೇರಿದಂತೆ ಹಲವು ಕೊಲೆಗಳು ಸಮಾಜದಲ್ಲಿ ಒಂದು ನಿರ್ದಿಷ್ಟ ಸಂದೇಶವನ್ನು ರವಾನಿಸಿವೆ.

ಹೀಗಿರುವಾಗ ಉದ್ದಿಮೆಪತಿಗಳು ಮತ್ತು ಅಧಿಕಾರಿಗಳು ಮಾತನಾಡುವುದು ಕಷ್ಟಸಾಧ್ಯವೇ ಸರಿ.

ಇಂತಹ ಪರಿಸ್ಥಿತಿಯಲ್ಲಿ ದೇಶದ ನಂ.1 ಶ್ರೀಮಂತ ಮುಖೇಶ್ ಅಂಬಾನಿಯು ದಕ್ಷಿಣ ಮುಂಬೈನ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದೇವ್ರಾ ಪರವಾಗಿ ಬ್ಯಾಟಿಂಗ್ ಮಾಡಿರುವುದು ಏನನ್ನು ತೋರಿಸುತ್ತದೆ ಎಂಬ ಕುತೂಹಲ ಮೂಡಿದೆ. ಮುಖೇಶ್ ಅಂಬಾನಿಯ ಜಿಯೋ ಲಾಂಚ್ ಮಾಡಿದಾಗ, ಸ್ವತಃ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನೇ ಬಳಸಿಕೊಂಡಿದ್ದರು. ಅಷ್ಟಲ್ಲದೇ ಮುಖೇಶ್ ಅಂಬಾನಿ ಕಳೆದ 2014ರ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ದೊಡ್ಡ ಪ್ರಮಾಣದಲ್ಲಿ ಹಣಕಾಸನ್ನು ಒದಗಿಸಿಕೊಟ್ಟಿದ್ದರು ಎಂಬ ಆರೋಪವಿದೆ.

ಮೋದಿ ಸರ್ಕಾರವನ್ನು ‘ಅಂಬಾನಿ, ಅದಾನಿಗಳ ಸರ್ಕಾರ’ ಎಂದು ಕರೆಯುವುದು ಒಂದು ನುಡಿಗಟ್ಟಾಗಿ ಹೋಗಿದೆ. ರಫೇಲ್ ಡೀಲ್.ಅನ್ನು ಮೋದಿ ಸರ್ಕಾರ ಎಲ್ಲಾ ನಿಯಮಗಳನ್ನೂ ಉಲ್ಲಂಘಿಸಿ ದಯಪಾಲಿಸಿದ್ದು ಅನಿಲ್ ಅಂಬಾನಿಗೆ. ಅಂದರೆ ಇದೇ ಮುಖೇಶ್ ಅಂಬಾನಿಯ ಸ್ವಂತ ಸಹೋದರನಿಗೆ. ಅದನ್ನು ರಾಹುಲ್ ಗಾಂಧಿಯವರು ತಮ್ಮ ಯಾವ ಚುನಾವಣಾ ಭಾಷಣದಲ್ಲೂ ಉಲ್ಲೇಖಿಸದೇ ಬಿಟ್ಟಿಲ್ಲ.

ಹೀಗಿದ್ದರೂ, ಮುಖೇಶ್ ಅಂಬಾನಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಮಾತಾಡಿರುವುದು ಏಕೆ? ಮಿಲಿಂದ್ ದೇವ್ರಾ ಮೊದಲಿಗೆ ಮು.ಅಂಬಾನಿಯ ವಿಡಿಯೋವನ್ನು ಟ್ವೀಟ್ ಮಾಡಿ, ಬೆಂಬಲವನ್ನು ಸಾದರಪಡಿಸಿದ್ದರು.

ಇದನ್ನು ಎರಡು ರೀತಿಯಲ್ಲಿ ಅರ್ಥ ಮಾಡಿಕೊಳ್ಳಬಹುದು.

ಒಂದು, ಮೇಲೆ ಹೇಳಿದಂತೆ ಮೋದಿಯೇತರ ಸರ್ಕಾರ ಕೇಂದ್ರದಲ್ಲಿ ಬರಬಹುದು ಎಂಬ ವಾಸನೆ ಅಂಬಾನಿಗೆ ಹತ್ತಿದೆ. ಕೆಲವು ಕೋಟಿಗಳನ್ನು ಖರ್ಚು ಮಾಡಿದರೆ, ದೇಶಾದ್ಯಂತ ಇರುವ ಮತದಾರರ ಮನದಿಂಗಿತವನ್ನು ಸರ್ವೇ ಮಾಡಿಕೊಡುವ ಏಜೆನ್ಸಿಗಳಿವೆ. ದೇಶದ ನಂ.1 ಕಾರ್ಪೋರೇಟ್ ಸಂಸ್ಥೆಯು ತನಗಿಷ್ಟ ಬಂದ ಹಾಗೆ ಮತದಾರರ ಒಲವನ್ನು ತಿರುಚಲು ಅಥವಾ ಗಾಳಿ ಬಂದ ಕಡೆಗೆ ತಿರುಗಿಕೊಳ್ಳಲು ಇಂತಹ ಸರ್ವೇ ಮಾಡಿಸಿರಲ್ಲ ಎಂದು ನಂಬಲಾಗದು. ಹಾಗಾಗಿ ಮುಖೇಶ್ ಅಂಬಾನಿಗೆ ಸಣ್ಣ ಮೊತ್ತವಾಗಿರಬಹುದಾದ ಕೆಲವು ಕೋಟಿಗಳನ್ನು ಖರ್ಚು ಮಾಡಿ ತಿಳಿದುಕೊಂಡಿರಬಹುದಾದ, ಗಾಳಿಯ ದಿಕ್ಕಿನ ಅನುಸಾರ ಈ ಬಹಿರಂಗ ಬೆಂಬಲ ಇರಬಹುದು.

ಎರಡು, ಮಿಲಿಂದ್ ದೇವ್ರಾ ಕುಟುಂಬ ಮತ್ತು ಅಂಬಾನಿ ಕುಟುಂಬದ ಸಂಬಂಧ ಬಹಳ ಹಳೆಯದು. ಮುಂಬೈನ ಮೇಯರ್ ಸಹಾ ಆಗಿದ್ದ ಮುರಳಿ ಮನೋಹರ್ ದೇವ್ರಾ ಈ ಅಂಬಾನಿಯ ಅಪ್ಪ ಧೀರೂಬಾಯಿ ಅಂಬಾನಿಯ ಸ್ನೇಹಿತರಾಗಿದ್ದರು. ಸೀನಿಯರ್ ದೇವ್ರಾ ತೀರಿಕೊಂಡಾಗ ಅಂಬಾನಿಯ  ಇಡೀ ಕುಟುಂಬವಲ್ಲದೇ ಸೋನಿಯಾಗಾಂಧಿಯವರ ಇಡೀ ಕುಟುಂಬವೂ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿತ್ತು. ಆ ರೀತಿಯಲ್ಲಿ ದೇವ್ರಾ ಕುಟುಂಬವು 10, ಜನಪತ್ (ಸೋನಿಯಾ ನಿವಾಸ) ಮತ್ತು ಮುಂಬೈ ಉದ್ದಿಮೆದಾರರ ನಡುವಿನ ಕೊಂಡಿಯಾಗಿ ಕೆಲಸ ಮಾಡುತ್ತದೆ.

ಮುರಳೀ ದೇವ್ರಾ 2006ರಿಂದ 2011ರವರೆಗೆ ಸತತ ಐದು ವರ್ಷಗಳ ಕಾಲ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಕೃಷ್ಣಾ ಗೋದಾವರಿ ಕಣಿವೆಯ ತೈಲ –ಅನಿಲ ನಿಕ್ಷೇಪಗಳು ಅಂಬಾನಿಯ ಪಾಲಿಗೆ ಹೋಗುವ ಪ್ರಕ್ರಿಯೆ ನಡೆದಿತ್ತು.

ಇವೆಲ್ಲದರ ಭಾಗವಾಗಿ ಮಿಲಿಂದ್ ಗೆ ನೀಡುತ್ತಿರುವ ಬೆಂಬಲ ಸುದೀರ್ಘ ಕಾಲದ ಕೌಟುಂಬಿಕ ಬಾಂಧವ್ಯದ ಕಾರಣಕ್ಕೆ ಎಂದು ಹೇಳಬಹುದಾಗಿದ್ದರೂ, ಅದನ್ನು ಬಹಿರಂಗವಾಗಿ ಹೇಳುವ ಅಗತ್ಯವಿರಲಿಲ್ಲ. ಬದಲಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದರೆ, ಇದೇ ಮಿಲಿಂದ್ ಸರ್ಕಾರದ ಜೊತೆ ಕೊಂಡಿಯಾಗಿ ಕಾರ್ಯನಿರ್ವಹಿಸಲಿ ಎಂಬ ಮುಂದಾಲೋಚನೆಯೂ ಅಂಬಾನಿಯದ್ದಿರಬಹುದು.

ಯಾರು ಅಧಿಕಾರಕ್ಕೆ ಬಂದರೂ, ಅಂಬಾನಿಗೆ ಏನೂ ಧಕ್ಕೆಯಾಗದಂತೆ ಇಂತಹ ಹಲವು ಏರ್ಪಾಡುಗಳಿರಲು ಸಾಧ್ಯ. ಆದರೆ, ‘ಮೋದಿಯು ಆ 15-20 ಉದ್ದಿಮೆಪತಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಪದೇ ಪದೇ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿಯು ಮುಖೇಶ್ ಅಂಬಾನಿಯ ಪರವಾಗಿ ಇರುತ್ತಾರಾ ಎಂಬ ಪ್ರಶ್ನೆಗೆ ಭವಿಷ್ಯವಷ್ಟೇ ಉತ್ತರ ನೀಡಬಲ್ಲುದು.

ಅದೇ ಸಂದರ್ಭದಲ್ಲಿ ಮಿಲಿಂದ್ ದೇವ್ರಾನಂತಹ ವ್ಯಕ್ತಿಗಳು ಹೇಗೆ ರಾಜಕಾರಣ ಮತ್ತು ಉದ್ದಿಮೆಪತಿಗಳ ನಡುವಿನ ಕೊಂಡಿಯಾಗಿ ಎಲ್ಲಾ ಕಾಲದಲ್ಲೂ ಚಲಾವಣೆಯಲ್ಲಿರುತ್ತಾರೆಂಬುದನ್ನೂ ಈ ಬೆಳವಣಿಗೆ ತೋರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...