Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

ಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

- Advertisement -
- Advertisement -

| ನೀಲಗಾರ |

ಯಾವುದೇ ಚುನಾವಣೆಯ ಫಲಿತಾಂಶ ಬರುವ ಮುಂಚೆ ಎರಡು ಗುಂಪುಗಳಿಗೆ ಅದರ ವಾಸನೆ ಹತ್ತಿರುತ್ತದೆ ಎನ್ನಲಾಗುತ್ತದೆ. ಒಂದು ಉದ್ಯಮಿಗಳ ಗುಂಪು. ಇನ್ನೊಂದು ಅಧಿಕಾರಿಗಳ ಗುಂಪು. ಆದರೆ, ನರೇಂದ್ರ ಮೋದಿಯವರು ಮತ್ತು ಅವರ ತಂಡ ಹುಟ್ಟಿಸಿರುವ ಭೀತಿಯ ವಾತಾವರಣದಲ್ಲಿ ಯಾವುದೇ ಅಧಿಕಾರಿ ಅಥವಾ ಉದ್ದಿಮೆಪತಿ ಅವರ ವಿರುದ್ಧ ಮಾತನಾಡುವ ಪರಿಸ್ಥಿತಿ ಇಲ್ಲ.

ಸಮಾಜದಲ್ಲಿ ಸಾಮಾನ್ಯವಾಗಿ ನಿರ್ಭೀತಿಯಿಂದ ಮಾತಾಡುವ ಸಾಹಿತಿಗಳು, ಕಲಾವಿದರೇ ಹೆದರಿ ನಡುಗುವಂತಹ ವಾತಾವರಣ ಇದೆ. ಧಾಬೋಲ್ಕರ್, ಪಾನ್ಸರೆ, ಕಲಬುರ್ಗಿ, ಗೌರಿ ಲಂಕೇಶ್, ಜಸ್ಟೀಸ್ ಲೋಯಾರೂ ಸೇರಿದಂತೆ ಹಲವು ಕೊಲೆಗಳು ಸಮಾಜದಲ್ಲಿ ಒಂದು ನಿರ್ದಿಷ್ಟ ಸಂದೇಶವನ್ನು ರವಾನಿಸಿವೆ.

ಹೀಗಿರುವಾಗ ಉದ್ದಿಮೆಪತಿಗಳು ಮತ್ತು ಅಧಿಕಾರಿಗಳು ಮಾತನಾಡುವುದು ಕಷ್ಟಸಾಧ್ಯವೇ ಸರಿ.

ಇಂತಹ ಪರಿಸ್ಥಿತಿಯಲ್ಲಿ ದೇಶದ ನಂ.1 ಶ್ರೀಮಂತ ಮುಖೇಶ್ ಅಂಬಾನಿಯು ದಕ್ಷಿಣ ಮುಂಬೈನ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದೇವ್ರಾ ಪರವಾಗಿ ಬ್ಯಾಟಿಂಗ್ ಮಾಡಿರುವುದು ಏನನ್ನು ತೋರಿಸುತ್ತದೆ ಎಂಬ ಕುತೂಹಲ ಮೂಡಿದೆ. ಮುಖೇಶ್ ಅಂಬಾನಿಯ ಜಿಯೋ ಲಾಂಚ್ ಮಾಡಿದಾಗ, ಸ್ವತಃ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನೇ ಬಳಸಿಕೊಂಡಿದ್ದರು. ಅಷ್ಟಲ್ಲದೇ ಮುಖೇಶ್ ಅಂಬಾನಿ ಕಳೆದ 2014ರ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ದೊಡ್ಡ ಪ್ರಮಾಣದಲ್ಲಿ ಹಣಕಾಸನ್ನು ಒದಗಿಸಿಕೊಟ್ಟಿದ್ದರು ಎಂಬ ಆರೋಪವಿದೆ.

ಮೋದಿ ಸರ್ಕಾರವನ್ನು ‘ಅಂಬಾನಿ, ಅದಾನಿಗಳ ಸರ್ಕಾರ’ ಎಂದು ಕರೆಯುವುದು ಒಂದು ನುಡಿಗಟ್ಟಾಗಿ ಹೋಗಿದೆ. ರಫೇಲ್ ಡೀಲ್.ಅನ್ನು ಮೋದಿ ಸರ್ಕಾರ ಎಲ್ಲಾ ನಿಯಮಗಳನ್ನೂ ಉಲ್ಲಂಘಿಸಿ ದಯಪಾಲಿಸಿದ್ದು ಅನಿಲ್ ಅಂಬಾನಿಗೆ. ಅಂದರೆ ಇದೇ ಮುಖೇಶ್ ಅಂಬಾನಿಯ ಸ್ವಂತ ಸಹೋದರನಿಗೆ. ಅದನ್ನು ರಾಹುಲ್ ಗಾಂಧಿಯವರು ತಮ್ಮ ಯಾವ ಚುನಾವಣಾ ಭಾಷಣದಲ್ಲೂ ಉಲ್ಲೇಖಿಸದೇ ಬಿಟ್ಟಿಲ್ಲ.

ಹೀಗಿದ್ದರೂ, ಮುಖೇಶ್ ಅಂಬಾನಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಮಾತಾಡಿರುವುದು ಏಕೆ? ಮಿಲಿಂದ್ ದೇವ್ರಾ ಮೊದಲಿಗೆ ಮು.ಅಂಬಾನಿಯ ವಿಡಿಯೋವನ್ನು ಟ್ವೀಟ್ ಮಾಡಿ, ಬೆಂಬಲವನ್ನು ಸಾದರಪಡಿಸಿದ್ದರು.

ಇದನ್ನು ಎರಡು ರೀತಿಯಲ್ಲಿ ಅರ್ಥ ಮಾಡಿಕೊಳ್ಳಬಹುದು.

ಒಂದು, ಮೇಲೆ ಹೇಳಿದಂತೆ ಮೋದಿಯೇತರ ಸರ್ಕಾರ ಕೇಂದ್ರದಲ್ಲಿ ಬರಬಹುದು ಎಂಬ ವಾಸನೆ ಅಂಬಾನಿಗೆ ಹತ್ತಿದೆ. ಕೆಲವು ಕೋಟಿಗಳನ್ನು ಖರ್ಚು ಮಾಡಿದರೆ, ದೇಶಾದ್ಯಂತ ಇರುವ ಮತದಾರರ ಮನದಿಂಗಿತವನ್ನು ಸರ್ವೇ ಮಾಡಿಕೊಡುವ ಏಜೆನ್ಸಿಗಳಿವೆ. ದೇಶದ ನಂ.1 ಕಾರ್ಪೋರೇಟ್ ಸಂಸ್ಥೆಯು ತನಗಿಷ್ಟ ಬಂದ ಹಾಗೆ ಮತದಾರರ ಒಲವನ್ನು ತಿರುಚಲು ಅಥವಾ ಗಾಳಿ ಬಂದ ಕಡೆಗೆ ತಿರುಗಿಕೊಳ್ಳಲು ಇಂತಹ ಸರ್ವೇ ಮಾಡಿಸಿರಲ್ಲ ಎಂದು ನಂಬಲಾಗದು. ಹಾಗಾಗಿ ಮುಖೇಶ್ ಅಂಬಾನಿಗೆ ಸಣ್ಣ ಮೊತ್ತವಾಗಿರಬಹುದಾದ ಕೆಲವು ಕೋಟಿಗಳನ್ನು ಖರ್ಚು ಮಾಡಿ ತಿಳಿದುಕೊಂಡಿರಬಹುದಾದ, ಗಾಳಿಯ ದಿಕ್ಕಿನ ಅನುಸಾರ ಈ ಬಹಿರಂಗ ಬೆಂಬಲ ಇರಬಹುದು.

ಎರಡು, ಮಿಲಿಂದ್ ದೇವ್ರಾ ಕುಟುಂಬ ಮತ್ತು ಅಂಬಾನಿ ಕುಟುಂಬದ ಸಂಬಂಧ ಬಹಳ ಹಳೆಯದು. ಮುಂಬೈನ ಮೇಯರ್ ಸಹಾ ಆಗಿದ್ದ ಮುರಳಿ ಮನೋಹರ್ ದೇವ್ರಾ ಈ ಅಂಬಾನಿಯ ಅಪ್ಪ ಧೀರೂಬಾಯಿ ಅಂಬಾನಿಯ ಸ್ನೇಹಿತರಾಗಿದ್ದರು. ಸೀನಿಯರ್ ದೇವ್ರಾ ತೀರಿಕೊಂಡಾಗ ಅಂಬಾನಿಯ  ಇಡೀ ಕುಟುಂಬವಲ್ಲದೇ ಸೋನಿಯಾಗಾಂಧಿಯವರ ಇಡೀ ಕುಟುಂಬವೂ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿತ್ತು. ಆ ರೀತಿಯಲ್ಲಿ ದೇವ್ರಾ ಕುಟುಂಬವು 10, ಜನಪತ್ (ಸೋನಿಯಾ ನಿವಾಸ) ಮತ್ತು ಮುಂಬೈ ಉದ್ದಿಮೆದಾರರ ನಡುವಿನ ಕೊಂಡಿಯಾಗಿ ಕೆಲಸ ಮಾಡುತ್ತದೆ.

ಮುರಳೀ ದೇವ್ರಾ 2006ರಿಂದ 2011ರವರೆಗೆ ಸತತ ಐದು ವರ್ಷಗಳ ಕಾಲ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಕೃಷ್ಣಾ ಗೋದಾವರಿ ಕಣಿವೆಯ ತೈಲ –ಅನಿಲ ನಿಕ್ಷೇಪಗಳು ಅಂಬಾನಿಯ ಪಾಲಿಗೆ ಹೋಗುವ ಪ್ರಕ್ರಿಯೆ ನಡೆದಿತ್ತು.

ಇವೆಲ್ಲದರ ಭಾಗವಾಗಿ ಮಿಲಿಂದ್ ಗೆ ನೀಡುತ್ತಿರುವ ಬೆಂಬಲ ಸುದೀರ್ಘ ಕಾಲದ ಕೌಟುಂಬಿಕ ಬಾಂಧವ್ಯದ ಕಾರಣಕ್ಕೆ ಎಂದು ಹೇಳಬಹುದಾಗಿದ್ದರೂ, ಅದನ್ನು ಬಹಿರಂಗವಾಗಿ ಹೇಳುವ ಅಗತ್ಯವಿರಲಿಲ್ಲ. ಬದಲಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದರೆ, ಇದೇ ಮಿಲಿಂದ್ ಸರ್ಕಾರದ ಜೊತೆ ಕೊಂಡಿಯಾಗಿ ಕಾರ್ಯನಿರ್ವಹಿಸಲಿ ಎಂಬ ಮುಂದಾಲೋಚನೆಯೂ ಅಂಬಾನಿಯದ್ದಿರಬಹುದು.

ಯಾರು ಅಧಿಕಾರಕ್ಕೆ ಬಂದರೂ, ಅಂಬಾನಿಗೆ ಏನೂ ಧಕ್ಕೆಯಾಗದಂತೆ ಇಂತಹ ಹಲವು ಏರ್ಪಾಡುಗಳಿರಲು ಸಾಧ್ಯ. ಆದರೆ, ‘ಮೋದಿಯು ಆ 15-20 ಉದ್ದಿಮೆಪತಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಪದೇ ಪದೇ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿಯು ಮುಖೇಶ್ ಅಂಬಾನಿಯ ಪರವಾಗಿ ಇರುತ್ತಾರಾ ಎಂಬ ಪ್ರಶ್ನೆಗೆ ಭವಿಷ್ಯವಷ್ಟೇ ಉತ್ತರ ನೀಡಬಲ್ಲುದು.

ಅದೇ ಸಂದರ್ಭದಲ್ಲಿ ಮಿಲಿಂದ್ ದೇವ್ರಾನಂತಹ ವ್ಯಕ್ತಿಗಳು ಹೇಗೆ ರಾಜಕಾರಣ ಮತ್ತು ಉದ್ದಿಮೆಪತಿಗಳ ನಡುವಿನ ಕೊಂಡಿಯಾಗಿ ಎಲ್ಲಾ ಕಾಲದಲ್ಲೂ ಚಲಾವಣೆಯಲ್ಲಿರುತ್ತಾರೆಂಬುದನ್ನೂ ಈ ಬೆಳವಣಿಗೆ ತೋರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...