Homeಕರ್ನಾಟಕಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

’ಇರುವ ಅತಿ ಹಿಂದುಳಿದ ಜಾತಿಗಳೇ ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜನರಿಗೆ ತೊಂದರೆ ಉಂಟಾಗುತ್ತದೆ’

- Advertisement -
- Advertisement -

ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದು ಮತ್ತು ಈ ಬಗ್ಗೆ ರಚನೆ ಮಾಡಿರುವ ಉನ್ನತ ಮಟ್ಟದ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪಗೆ ಮನವಿ ಸಲ್ಲಿಸಿದೆ.

ಪ್ರಬಲ ಜಾತಿಗಳಿಗೆ ಆಯವ್ಯಯದಲ್ಲಿ ನೀಡಿರುವ ಅನುದಾನದ ರೀತಿಯಲ್ಲಿಯೇ ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಲಾಗಿದೆ. ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದೆ.

ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ನೇತೃತ್ವದ ನಿಯೋಗ ಪ್ರಮುಖರನ್ನು ಭೇಟಿಯಾಗಿ ತನ್ನ ಮನವಿಯನ್ನು ಸಲ್ಲಿಸಿತು.

ಇದನ್ನೂ ಓದಿ: ಮೀಸಲಾತಿ ಬೇಡಿಕೆ ಪರಿಶೀಲಿಸಲು ತ್ರಿಸದಸ್ಯ ಸಮಿತಿ ರಚನೆ- ಬಸವರಾಜ ಬೊಮ್ಮಾಯಿ

’ಪ್ರವರ್ಗ 2(ಎ) ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಇರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿ ಜನರಿಗೆ ತೊಂದರೆ ಉಂಟಾಗುತ್ತದೆ’ ಎಂದು ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್‌ ಮಾತನಾಡಿ, ಪ್ರವರ್ಗ 2(ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ದಗೊಂಡಿರುವ ಜಾತೀವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2(ಎ) ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ’ ಎಂದು ಮನವಿ ಮಾಡಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ನಿಯೋಗದ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಈಗಾಗಲೇ ತಮ್ಮ ಬಜೆಟ್‌ ನಲ್ಲಿ ಘೋಷಣೆ ಮಾಡಿರುವ ಜೊತೆಗೆ ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ನಿಯೋಗ ತಿಳಿಸಿದೆ.

ಮಾಜಿ ಸಭಾಪತಿ ಶ್ರೀ ವಿ. ಆರ್. ಸುದರ್ಶನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರುಗಳಾದ ಡಾ. ಸಿ.ಎಸ್.ದ್ವಾರಕಾನಾಥ್, ಪ್ರೊ. ನರಸಿಂಹಯ್ಯ, ವಿಧಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಕೆ.ಪಿ ನಂಜುಂಡಿ ಉಪಸ್ಥಿತರಿದ್ದರು.


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತಿ ಹಿಂದುಳಿದ ವರ್ಗ ಯಾವುದು ಸ್ವಾಮಿ!!!!!

    ಓದಲು ಹಣವಿಲ್ಲದ ಬ್ರಾಹ್ಮಣ ಹುಡುಗ ಅಲ್ಲ,

    ಹಣವಿಲ್ಲದೆ ಬೆಳೆಗೆ ಬೆಲೆ ಇಲ್ಲದೆ ಸಾಲ ಮಾಡಿ ಸಾಯುತ್ತಿರುವ ಲಿಂಗಾಯತ ರೈತನಲ್ಲ,

    ಕಾರ್ ಬಂಗಲೆ ಕಟ್ಟಿಕೊಂಡಿರುವ, ಎಲ್ಲವನ್ನು ಉಚಿತವಾಗಿ ಪಡೆಯುವ, ಭಾರತೀಯ ಸರ್ಕಾರ ಒದಗಿಸುವ ಪ್ರತಿ ಸೌಲಭ್ಯಕ್ಕೂ ಹಕ್ಕುದಾರರಾಗಿರುವ ಆಆಆ ವ್ಯಕ್ತಿ.. ಹೌದೇ!!!!!!

    ಬಡವನಿಗೆ ಸೌಲಭ್ಯ ದೊರೆಯದಿದ್ದರೂ ಕುಟುಂಬದ ಹಿನ್ನೆಲೆಯಿಂದ ಶ್ರೀಮಂತರಿಗೂ ಸೌಲಭ್ಯ ದೊರೆಯುವ ಭಾರತ…
    ಕೂಳಿಗೆ ಹಣವಿಲ್ಲದವನು ಟ್ಯಾಕ್ಸ್ ಪಾವತಿಸಿ ಆ ಶ್ರೀಮಂತನಿಗೆ ಸಹಾಯ ಮಾಡುವ ಭಾರತ…

    ಧನ್ಯ ಭಾರತ ಮಾತೆ ನೀನೆ ಧನ್ಯ..

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...